Breaking News

Daily Archives: ಫೆಬ್ರವರಿ 25, 2021

ಡಿಜಿಟಲ್ ಮಾಧ್ಯಮ, ಸಾಮಾಜಿಕ ಜಾಲತಾಣ, ಒಟಿಟಿ ಗಳಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಹೊಸದಿಲ್ಲಿ: ಸಾಮಾಜಿಕ ಜಾಲತಾಣಗಳು, ಒಟಿಟಿ ಪ್ಲಾಟ್ ಫಾರ್ಮ್, ಡಿಜಿಟಲ್ ಮಾಧ್ಯಮಗಳಿಗೆ ಗುರುವಾರ ಸರ್ಕಾರ ಹೊಸ ಮಾರ್ಗಸೂಚಿಯೊಂದನ್ನು ಪ್ರಕಟಿಸಿದೆ. ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿಗಳನ್ನು ಹಂಚಿಕೊಂಡರು. ಹೊಸ ಮಾರ್ಗಸೂಚಿಗಳು ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಸಮೂಹ ಸಂವಹನ ಮಾಧ್ಯಮಗಳ ವಿಷಯದ ಮೇಲೆ ನಿಗಾ ಇಡುತ್ತವೆ ಎಂದರು. ದೇಶದಲ್ಲಿ ಸಾಮಾಜಿಕ ಮಾಧ್ಯಮಗಳ ದುರುಪಯೋಗವನ್ನು ಎತ್ತಿ ತೋರಿಸಿದ ಸಚಿವರು ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಮಾಧ್ಯಮ ವೇದಿಕೆಗಳು …

Read More »

ವಿಡಿಯೋ ವೈರಲ್; ಗೋವಾದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ

ಪಣಜಿ, ಫೆಬ್ರವರಿ 25: ಗೋವಾದಲ್ಲಿ ಪದೇ ಪದೇ ಕನ್ನಡಿಗರ ಮೇಲೆ ದಬ್ಬಾಳಿಕೆ ಮುಂದುವರಿಯುತ್ತಲೇ ಇದೆ. ಪ್ರವಾಸಕ್ಕೆಂದು ತೆರಳಿದ್ದ ಕನ್ನಡಿಗರು ಬಯಲಲ್ಲಿ ಅಡುಗೆ ತಯಾರಿಸಿದ್ದಕ್ಕಾಗಿ ಅವರ ಮೇಲೆ ಗೋವಾ ಪುಂಡರು ಅವಾಚ್ಯ ಶಬ್ದಗಳಿಂದ ನಿಂದಿಸಿ‌, ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಯುವಕರ ತಂಡ ಗೋವಾಕ್ಕೆ ಪ್ರವಾಸಕ್ಕೆ ತೆರಳಿತ್ತು. ಈ ವೇಳೆ ಒಂದು ಬಯಲಲ್ಲಿ ಚಿಕ್ಕ ಗ್ಯಾಸ್ ಸಿಲಿಂಡರ್ ಇಟ್ಟುಕೊಂಡು ಅಡುಗೆ ಮಾಡಿಕೊಳ್ಳುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಕೆಲ ಗೋವಾದ …

Read More »

ಇಂಧನ ಬೆಲೆ ಏರಿಕೆ ಖಂಡಿಸಿ ಎಲೆಕ್ಟ್ರಿಕ್ ಸ್ಕೂಟರ್ ಏರಿದ ದೀದಿ

ಕೋಲ್ಕತ್ತಾ,ಫೆ.25- ಕೇಂದ್ರ ಸರ್ಕಾರದ ಇಂಧನ ಬೆಲೆ ಏರಿಕೆ ಖಂಡಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಸ್ಕೂಟರ್‍ನಲ್ಲಿ ಸಂಚರಿಸುತ್ತಾ ವಿನೂತನವಾಗಿ ಪ್ರತಿಭಟನೆ ನಡೆಸಿದರು. ದೇಶದಲ್ಲಿ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ರಾಜ್ಯ ಕಾರ್ಯದರ್ಶಿ ನಬಣ್ಣಾ ಅವರೊಂದಿಗೆ ಮುಖ್ಯಮಂತ್ರಿಯವರು ಸ್ಕೂಟರ್‍ನಲ್ಲಿ ಕುಳಿತಿದ್ದರು. ಇದರ ವಿಡಿಯೋ ಈಗ ವೈರಲ್ ಆಗಿದ್ದು, ಸಿಎಂ ಬ್ಯಾನರ್ಜಿ ಅವರು, ಹೆಲ್ಮೆಟ್ ಧರಿಸಿ, ಪೆಟ್ರೋಲ್ ಬೆಲೆ ಏರಿಕೆಯ ಖಂಡಿಸಿದರು. ಪ್ರದರ್ಶನ ಫಲಕವನ್ನು ಕುತ್ತಿಗೆಗೆ ಹಾಕಿಕೊಂಡು …

Read More »

ಮೋದಿʼ ಸ್ಟೇಡಿಯಂ ಪೆವಿಲಿಯನ್​ಗೆ ಅದಾನಿ, ಅಂಬಾನಿ ಹೆಸರಿಟ್ಟಿರುವುದರ ಹಿಂದಿದೆ ಈ ಕಾರಣ

ಗುಜರಾತ್​ನಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ನರೇಂದ್ರ ಮೋದಿ ಸ್ಟೇಡಿಯಂನ್ನು ಉದ್ಘಾಟನೆ ಮಾಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹೊಸ ವಿವಾದದ ಅಲೆಯೇ ಹುಟ್ಟಿಕೊಂಡಿದೆ. ಸರ್ದಾರ್​ ವಲ್ಲಭಬಾಯ್​ ಪಟೇಲ್​ರ ಹೆಸರಲ್ಲಿದ್ದ ಈ ಸ್ಟೇಡಿಯಂಗೆ ಮರುನಾಮಕರಣದ ಅಗತ್ಯವಿತ್ತೇ ಎಂದು ವಿಪಕ್ಷಗಳು ಕೆಂಡ ಕಾರ್ತಿವೆ . ಈ ವಿವಾದ ಇನ್ನೂ ಸುದ್ದಿಯಲ್ಲಿ ಇರುವಾಗಲೇ ಇದೀಗ ಅದಾನಿ ಹಾಗೂ ಅಂಬಾನಿ ಹೆಸರು ಕೂಡ ಈ ಮೈದಾನದ ವಿವಾದದ ಜೊತೆ ಥಳುಕು ಹಾಕಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಅಂದರೆ …

Read More »

ತಮಿಳುನಾಡು: ಪರೀಕ್ಷೆ ಇಲ್ಲದೆ 9, 10, 11ನೇ ತರಗತಿ ವಿದ್ಯಾರ್ಥಿಗಳು ಪಾಸ್, ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60ಕ್ಕೆ ಏರಿಕೆ

ಚೆನ್ನೈ: ತಮಿಳುನಾಡು ಸರ್ಕಾರ 2020-21ನೇ ಸಾಲಿನ 9, 10 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಮುಂದಿನ ತರಗತಿಗೆ ತೇರ್ಗಡೆ ಮಾಡಿದ್ದು, ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷಕ್ಕೆ ಹೆಚ್ಚಿಸಿದೆ. 2020-21ನೇ ಸಾಲಿನ 9, 10 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಪಾಸ್ ಮಾಡಲಾಗಿದ್ದು, ಇದರ ಅನುಷ್ಠಾನದ ಬಗ್ಗೆ ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ …

Read More »

ಸರ್ಕಾರ ಭರವಸೆ ನೀಡಿದ್ದ ಒಂದೇ ಒಂದು ಬೇಡಿಕೆಯನ್ನು ಈವರೆಗೂ ಈಡೇರಿಸಿಲ್ಲ; ಸಾರಿಗೆ ನೌಕರರ ಒಕ್ಕೂಟ

ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳು ಈಡೇರಿಸಿಲ್ಲ. 14 ಡಿಸೆಂಬರ್ 2020 ರಿಂದ ಈವರೆಗೂ ಬೇಡಿಕೆ ಈಡೇರಿಲ್ಲ. 75 ದಿನ ಕಳೆದರೂ ಸರ್ಕಾರ ಸಾರಿಗೆ ನೌಕರರ ಒಂದೇ ಒಂದು ಬೇಡಿಕೆ ಈಡೇರಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಸಾರಿಗೆ ನೌಕರರ ಒಕ್ಕೂಟದಿಂದ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು, ಕಳೆದ ಡಿಸೆಂಬರ್​ನಲ್ಲಿ ಸಾರಿಗೆ ನೌಕರರು ನಡೆಸಿದ ಧರಣಿ ವೇಳೆ ಸರ್ಕಾರ ನೌಕರರ ಬೇಡಿಕೆ ಹೊರತುಪಡಿಸಿ …

Read More »

ಬಿಎಂಟಿಸಿ ಟಿಕೆಟ್ ದರ ಏರಿಕೆ ಸುಳಿವು ನೀಡಿದ ಸಚಿವ ಲಕ್ಷಣ ಸವದಿ

ಬೆಂಗಳೂರು (ಫೆ. 25): ಕೋವಿಡ್​ನಿಂದಾಗಿ ಬಿಎಂಟಿಸಿ ​ ನಷ್ಟ ಅನುಭವಿಸುತ್ತಿದ್ದು, ಟಿಕೆಟ್​ ದರ ಏರಿಕೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಚಿಂತನೆ ನಡೆಸಲಾಗಿದ್ದು,  ದರ ಏರಿಕೆ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳೇ ನಿರ್ಧರಿಸಲಿದ್ದಾರೆ ಎಂದು ಸಾರಿಗೆ ಸಚಿವರಾಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಮೂಲಕ ಈ ಬಾರಿ ಬಜೆಟ್​ನಲ್ಲಿ ಬಿಎಂಟಿಸಿ ದರ ಏರಿಕೆ ಪ್ರಸ್ತಾಪ ಮುಂದಿಡುವ ಸುಳಿವು ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳ ಹಿಂದೆ ಕೆಎಸ್​ಆರ್​ಟಿಸಿ …

Read More »

ಪಂಚಮಸಾಲಿ ಮೀಸಲಾತಿ ಕುರಿತು ಸಂಜೆ ದುಂಡುಮೇಜಿನ ಸಭೆ

ಬೆಂಗಳೂರು,ಫೆ.25- ಶತಾಯಗತಾಯ ಲಿಂಗಾಯಿತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲೇಬೇಕೆಂಬ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಇಂದು ಸಂಜೆ ಮಹತ್ವದ ದುಂಡುಮೇಜಿನ ಸಭೆ ನಡೆಯಲಿದೆ. ಈ ಸಭೆಗೆ ಸಚಿವರು, ಶಾಸಕರು, ಸಮಾಜದ ಮುಖಂಡರು ಸೇರಿದಂತೆ ಅನೇಕರನ್ನು ಕೂಡಲಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿಗಳೇ ಖುದ್ದು ಆಹ್ವಾನಿಸಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮಾಜಿ ಶಾಸಕ ಹಾಗೂ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಮಹತ್ವದ …

Read More »

ಕ್ರಿಕೆಟ್ ಬೆಟ್ಟಿಂಗ್ ಗೃಹ ಮಂತ್ರಿ‌ ಕಿವಿಗೂ ಬಿತ್ತು

ಬೆಳಗಾವಿ. ಕ್ರಿಕೆಟ್ ಬೆಟ್ಟಿಂಗ್ ಅಷ್ಟೇ ಅಲ್ಲ ಹವಾಲಾ ಮತ್ತಿತರ ದಂಧೆಗಳಿಗೆ ಕಡಿವಾಣ ಹಾಕಲು ಪೊಲೀಸರು ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಈ ದಂಗೆಯನ್ನು ಮಟ್ಟ ಹಾಕಲು ಕೇವಲ ಜಿಲ್ಲಾ ಪೊಲೀಸರು‌ ಅಷ್ಟೇ  ಅಲ್ಲ ಬೆಳಗಾವಿ ನಗರ ಪೊಲೀಸರು ತಯಾರಾಗಿ ಕುಳಿತಿದ್ದಾರೆ. ಗಮನಿಸಬೇಕಾದ  ಸಂಗತಿ ಎಂದರೆ, ಬೆಟ್ಟಿಂಗ್ ದಂಧೆ ಸಮಗ್ರ ಮಾಹಿತಿ ಈಗ  ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಿವಿಗೂ ಬಿದ್ದಿದೆ. ಹೀಗಾಗಿ  ಈ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದರಲ್ಲಿ ಎರಡು …

Read More »

ಬಸ್ ನಲ್ಲಿ ಯುವತಿಯ ಮೈಮುಟ್ಟಿ ಕಿರುಕುಳ ಆರೋಪ.. ಠಾಣೆಯ ಮುಂಭಾಗದಲ್ಲಿ ಬಸ್​!

ಉಪ್ಪಿನಂಗಡಿ, ಫೆಬ್ರವರಿ 24: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಮೈಮುಟ್ಟಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಸ್ ಚಾಲಕ ಮತ್ತು ನಿರ್ವಾಹಕ ಸೇರಿ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಡೆದಿದೆ. ಪೊಲೀಸರ ವಶದಲ್ಲಿರುವ ಯುವಕನನ್ನು ಚಿಕ್ಕಮಗಳೂರು ನಿವಾಸಿ ಮೊಹಮ್ಮದ್ ಸೈಫುಲ್ಲಾ ಎಂದು ಗುರುತಿಸಲಾಗಿದ್ದು. ಆರೋಪಿಯು ಮಂಗಳವಾರ ಬೆಳಗ್ಗೆ ಧರ್ಮಸ್ಥಳದಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದಾಗ ಕೆಎಸ್​ಆರ್​ಟಿಸಿಯ ಬಸ್​ನಲ್ಲಿ ವಿದ್ಯಾರ್ಥಿನಿಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿಯು ಬಸ್ ಚಾಲಕ, ನಿರ್ವಾಹಕರಲ್ಲಿ ಈ ವಿಚಾರ …

Read More »