Breaking News

Daily Archives: ಫೆಬ್ರವರಿ 25, 2021

2 ದಿನ ಫಾರ್ಮ್ ಹೌಸ್ ನಲ್ಲಿರಿಸಿ ಯುವತಿ ಮೇಲೆ ಅತ್ಯಾಚಾರ :ಬಿಜೆಪಿ ನಾಯಕ ಸೇರಿ ನಾಲ್ವರು ಅರೆಸ್ಟ್

ಮಧ್ಯಪ್ರದೇಶ : ಶಾಲಾ ಶಿಕ್ಷಕ ಹಾಗೂ ಸ್ಥಳೀಯ ಬಿಜೆಪಿ ನಾಯಕ ಸೇರಿ ನಾಲ್ವರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.20 ವರ್ಷದ ಯುವತಿಯನ್ನು 2 ದಿನ ಫಾರ್ಮ್​ ಹೌಸ್​ನಲ್ಲಿರಿಸಿ ನಾಲ್ವರು ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಫೆ. 18ರಂದು ಈ ಘಟನೆ ನಡೆದಿದ್ದು, ದಿನಸಿ ಸಾಮಾನುಗಳನ್ನು ತರಲು ಯುವತಿ ಹೋಗಿದ್ದಳು. ಈ ವೇಳೆ ಅಡ್ಡಗಟ್ಟಿದ ಕಾಮುಕರು ಆಕೆಯನ್ನು ಫಾರ್ಮ್​ …

Read More »

ಐತಿಹಾಸಿಕ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವ ರದ್ದು;

ವಿಜಯನಗರ: ಜಿಲ್ಲೆಯ ಕೊಟ್ಟೂರಿನ ಐತಿಹಾಸಿಕ ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವ ರದ್ದು ಮಾಡಲು ನಿರ್ಧರಿಸಲಾಗಿದ್ದು, ಮಾ.7ರಂದು ನೆರವೇರಬೇಕಿದ್ದ ರಥೋತ್ಸವ ನಡೆಯುತ್ತಿಲ್ಲ. ಪ್ರತಿ ವರ್ಷವೂ ಲಕ್ಷಾಂತರ ಭಕ್ತರು ರಥೋತ್ಸವಕ್ಕೆ ಆಗಮಿಸುತ್ತಾರೆ. ಆದರೆ ಈ ಸಲ ಕರೊನಾ ಕರಿನೆರಳಿನ ಹಿನ್ನೆಲೆಯಲ್ಲಿ ರಥೋತ್ಸವ ರದ್ದು ಮಾಡಲಾಗಿದ್ದು, ಹೊರಗಿನ ಭಕ್ತರಿಗೂ ಪ್ರವೇಶ ನಿಷೇಧಿಸಲಾಗಿದೆ. ಬರೀ ಪೂಜಾ-ಕೈಂಕರ್ಯಗಳಿಗೆ ಮಾತ್ರ ಅವಕಾಶ ಕಲ್ಪಿಸಲು ಇಂದಿನ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ್, …

Read More »

10 ರೂಪಾಯಿ ನೋಟು ಎಸೆದು 92 ಸಾವಿರ ಹಣ ದೋಚಿದ ಖದೀಮ! ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ

ಬೆಂಗಳೂರು: ಸಿಟಿ ಮಾರುಕಟ್ಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಚಾಲಕನ ಗಮನ ಬೇರೆಡೆ ಸೆಳೆದು ಕಾರಿನ ಹಿಂಬದಿ ಸೀಟಿನಲ್ಲಿ ಇರಿಸಿದ್ದ 92 ಸಾವಿರ ರೂ. ಮೌಲ್ಯದ ಬ್ಯಾಗ್​ ಅನ್ನು ಖದೀಮ ಹೊತ್ತೊಯ್ದಿದ್ದಾನೆ. ಶಾಂತಿನಗರದ ನಿವಾಸಿ ಉದ್ಯಮಿ ಸುನೀಲ್​ ನೀಡಿದ ದೂರಿನ ಆಧಾರದ ಮೇರೆಗೆ ಸಿಟಿ ಮಾರುಕಟ್ಟೆ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಫೆ.18ರಂದು ಸುನೀಲ್​ ತಮ್ಮ ಕಾರು ಚಾಲಕ ಸೀಬಾ ಅಲ್ಡರ್​ ಜತೆ ಬಿವಿಕೆ ಐಯ್ಯಂಗಾರ್​ ರಸ್ತೆಗೆ ಬಂದು ಎಸ್​ಜೆಪಿ …

Read More »

ಅಭಿಮಾನಿಗಳ ವರ್ತನೆಗೆ ಕ್ಷಮೆ ಕೋರಿದ ‘ಡಿ ಬಾಸ್​’

ಬೆಂಗಳೂರು: ಅಭಿಮಾನಿಗಳ ವರ್ತನೆಗೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಕ್ಷಮೆ ಕೇಳಿದ್ದು, ನವರಸ ನಾಯಕ ಜಗ್ಗೇಶ್​ ಮತ್ತು ಡಿ ಬಾಸ್​ ಅಭಿಮಾನಿಗಳ ವಿವಾದ ಸುಖಾಂತ್ಯ ಕಂಡಿದೆ. ಜಗ್ಗೇಶ್ ಅವ್ರು ಹಿರಿಯರು. ಅವರೇ ಮುಂದಿರಲಿ. ಅವರ ಮೇಲೆ ಅಭಿಮಾನಿಗಳು ಮುತ್ತಿಗೆ ಹಾಕಿರೋದು ನನಗೆ ಗೊತ್ತಿರಲಿಲ್ಲ. ಅದು ಹೇಗೆ ಶುರುವಾಯ್ತು ಎಂಬುದೂ ನನಗೆ ಗೊತ್ತಿಲ್ಲ ಎಂದ ದರ್ಶನ್, ನನ್ನ ಫ್ಯಾನ್ಸ್ ನಿಂದ ನಿಮಗೆ ನೋವಾಗಿದೆ. ಅವರ ಪರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ದರ್ಶನ್ …

Read More »

ಪೊಗರು ಸಿನಿಮಾ ವಿವಾದ ಸುಖಾಂತ್ಯದ ಬಳಿಕ ಲಿಖಿತ ರೂಪದಲ್ಲಿ ಕ್ಷಮೆ ಕೇಳಿದ ಧ್ರುವ ಸರ್ಜಾ

ಬೆಂಗಳೂರು: ‘ಪೊಗರು’ ಸಿನಿಮಾ ವಿವಾದ ಸುಖಾಂತ್ಯದ ಬಳಿಕ ನಟ ಧ್ರುವ ಸರ್ಜಾ, ಲಿಖಿತ ರೂಪದಲ್ಲಿ ಬ್ರಾಹ್ಮಣ ಸಮುದಾಯದ ಬಳಿ ಕ್ಷಮೆ ಕೇಳಿದ್ದಾರೆ. ‘ನಮ್ಮ ಇಡೀ ಕುಟುಂಬ ಹನುಮ ಭಕ್ತರು. ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ಧತಿಯನ್ನು ಆಚರಿಸುತ್ತಾ ಗೌರವಿಸುತ್ತಾ ಬದುಕುತ್ತಿದ್ದೇವೆ. ತಾತನವರ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿಯೇ ಬದುಕಿದ್ದೇವೆ. ಕಲೆಯೇ ಧರ್ಮ. ನಾವು ಎಲ್ಲ ಧರ್ಮಗಳನ್ನು ಗೌರವಿಸಿದ್ದೇವೆ. ಚಿತ್ರದ ಕಥೆ, ಪಾತ್ರಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ಎನ್ನುವಂತಹ …

Read More »

ರಾತ್ರೋರಾತ್ರಿ ಕಾರ್ಯಾಚರಣೆ, ಬಿಜೆಪಿ ಮುಖಂಡ ನಾಗರಾಜ್ ಸೇರಿ ಇಬ್ಬರು ಅರೆಸ್ಟ್

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ಕ್ವಾರಿ ಮಾಲೀಕ ನಾಗರಾಜ್ ನನ್ನು ಬಂಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ಪ್ರಮುಖ ಆರೋಪಿ ನಾಗರಾಜ್ ನನ್ನು ಬಂಧಿಸಿದ್ದಾರೆ. ನಿನ್ನೆ ನಾಲ್ವರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಯಾಗಿರುವ ಭ್ರಮರವಾಸಿನಿ ಕ್ರಷರ್ಸ್ ಮಾಲೀಕ ಜಿ.ಎಸ್. ನಾಗರಾಜ್ ಹಾಗೂ ಸ್ಪೋಟಕ ಸರಬರಾಜು ಮಾಡಿದ ಮತ್ತೋರ್ವ ಆರೋಪಿ ಗಣೇಶ್ ಎಂಬುವನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಸ್ಫೋಟ ಪ್ರಕರಣದ ನಂತರ ಆರೋಪಿಗಳು …

Read More »

10ನೇ ತರಗತಿ ಪಾಸಾದವರಿಗೆ Reserve Bank Of India ನಲ್ಲಿ ಉದ್ಯೋಗಾವಕಾಶ

ನವದೆಹಲಿ: RBI Vaccancies – ಭಾರತೀಯ ರಿಸರ್ವ್ ಬ್ಯಾಂಕ್ (RBI)ನಲ್ಲಿ ಉದ್ಯೋಗ (RBI Vacancies Latest News) ಮಾಡಲು ಬಯಸುವವರಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. RBI ಖಾಲಿ ಇರುವ ಆಫೀಸ್ ಅಟೆಂಡೆಂಟ್ಸ್ ಹುದ್ದೆಗಳ ಭರ್ತಿಗಾಗಿ (RBI Office Attendant Recruitment 2021) ಅಧಿಕೃತ ಅಧಿಸೂಚನೆ ಜಾರಿಗೊಳಿಸಿದೆ. ಅರ್ಜಿ ಪ್ರಕ್ರಿಯೆಯನ್ನು RBI ತನ್ನ ಅಧಿಕೃತ ವೆಬ್‌ಸೈಟ್ rbi.org.in ನಲ್ಲಿ 24 ಫೆಬ್ರವರಿ 2021 ರಿಂದ ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು …

Read More »

Alert : ‘FDA ಸ್ಪರ್ಧಾತ್ಮಕ ಪರೀಕ್ಷೆ’ ಬರೆಯುತ್ತಿರುವ ‘ಅಭ್ಯರ್ಥಿ’ಗಳಿಗೆ ‘ಬಹುಮುಖ್ಯ ಸೂಚನೆ’ಗಳು ಹೀಗಿದೆ ನೋಡಿ, ತಪ್ಪದೇ ಪಾಲಿಸಿ

ಬೆಂಗಳೂರು : ಫೆಬ್ರವರಿ 28ರ, ಭಾನುವಾರದಂದು ಈಗಾಗಲೇ ಮುಂದೂಡಿಕೆಯಾಗಿದ್ದಂತ ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಇಂತಹ ಪರೀಕ್ಷೆಗೆ ಹಳೆಯ ಪ್ರವೇಶ ಪತ್ರ ರದ್ದು ಪಡಿಸಲಾಗಿದ್ದು, ಹೊಸ ಪ್ರವೇಶ ಪತ್ರ ಡೌನ್ ಲೋಡ್ ಗೆ ಕೆಪಿಎಸ್ಸಿ ಅನುಮತಿಸಿದೆ. ಇದೇ ಸಂದರ್ಭದಲ್ಲಿ ಪರೀಕ್ಷೆಗೆ ಹಾಜರಾಗುತ್ತಿರುವಂತ ಅಭ್ಯರ್ಥಿಗಳು ಪಾಲಿಸಬೇಕಾದಂತ ಸೂಚನೆಗಳನ್ನು ಕರ್ನಾಟಕ ಲೋಕಸೇವಾ ಆಯೋಗವು ತಿಳಿಸಿದೆ. ಅಂತಹ ಅಭ್ಯರ್ಥಿಗಳ ಸೂಚನೆಗಳು ಈ ಕೆಳಗಿನಂತಿವೆ. ಎಫ್.ಡಿ.ಎ …

Read More »

UPSC’ ಕೊನೆಯ ಅವಕಾಶದ ಅಭ್ಯರ್ಥಿಗಳಿಗೆ ಸುಪ್ರೀಂಕೋರ್ಟ್ ನಿಂದ ಬಿಗ್ ಶಾಕ್!

ನವದೆಹಲಿ: 2020ರ ಅಕ್ಟೋಬರ್ʼನಲ್ಲಿ ಕೊನೆಯ ಪ್ರಯತ್ನ ನಡೆಸಿದ ಅಭ್ಯರ್ಥಿಗಳಿಗೆ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಯುಪಿಎಸ್ ಸಿ ಪರೀಕ್ಷೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಲು ಆಗದ ಕೊನೆಯ ಅವಕಾಶದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ. ಸಿವಿಲ್ ಸರ್ವೀಸ್ ಎಕ್ಸಾಮಿನೇಷನ್ 2020ರಲ್ಲಿ ಕೊನೆಯ ಪ್ರಯತ್ನ ಮಾಡಿದ್ದ ಅರ್ಜಿದಾರರು, ಕೋವಿಡ್-19 …

Read More »

ಕ್ಷೇತ್ರದ ಸುಮಾರು ಪ್ರತಿಶತ ೯೦ ರಷ್ಟು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಅಹವಾಲುಗಳನ್ನು ಸ್ವೀಕರಿಸಿದ್ದೇನೆ: ಅಣ್ಣಾಸಾಹೇಬ ಜೊಲ್ಲೆ

ಚಿಕ್ಕೋಡಿ – ಚಿಕ್ಕೋಡಿ ಲೋಕಸಭೆ ಸದಸ್ಯರಾಗಿ ಆಯ್ಕೆಯಾದ ಬಳಿಕ ಕ್ಷೇತ್ರದ ಸುಮಾರು ಪ್ರತಿಶತ ೯೦ ರಷ್ಟು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಅಹವಾಲುಗಳನ್ನು ಸ್ವೀಕರಿಸಿದ್ದೇನೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಸ್ತೆ ಸುಧಾರಣೆ, ಸಮುದಾಯ ಭವನಗಳ ನಿರ್ಮಾಣ, ಶುದ್ದ ಕುಡಿಯುವ ನೀರಿನ ಘಟಕ, ನೂತನ ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ಪ.ಜಾತಿ.ಪ.ಪಂ ವಸಾಹತುಗಳಲ್ಲಿ ಚರಂಡಿ ಸಿಸಿ ರಸ್ತೆ ಸೇರಿದಂತೆ …

Read More »