Breaking News
Home / 2021 / ಫೆಬ್ರವರಿ (page 2)

Monthly Archives: ಫೆಬ್ರವರಿ 2021

ಹೆವಿ ಬ್ಯಾಡ್ಜ್ ಡಿಎಲ್ ರಿನಿವಲ್​ಗೆ ಹರಸಾಹಸ: ಸಾರಿಗೆ ಇಲಾಖೆ ಹೊಸ ನಿಯಮದಿಂದ ಚಾಲಕರಿಗೆ ಸಂಕಷ್ಟ

ಕರೊನಾ ನಂತರ ವಾಹನ ಚಾಲಕರು ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಲೇ ಬಂದಿದ್ದಾರೆ. ಒಂದು ಕಡೆ ಕೆಲಸ ಇಲ್ಲ, ಮತ್ತೊಂದೆಡೆ ಬದುಕಿನ ಬವಣೆ. ಈ ನಡುವೆ ಡ್ರೖೆವಿಂಗ್ ಲೈಸೆನ್ಸ್ ಪರವಾನಗಿ ನವೀಕರಿಸಲು ದೂರದ ಬೆಂಗಳೂರು ಇಲ್ಲವೇ ಧಾರವಾಡಕ್ಕೆ ಹೋಗಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರುವ ಚಾಲಕರು ಈ ಹಿಂದೆ ಆಯಾ ಜಿಲ್ಲೆ ಇಲ್ಲವೇ ವಿಭಾಗೀಯ ಕೇಂದ್ರದಲ್ಲಿರುವ ಸಾರಿಗೆ ಇಲಾಖೆ ಕಚೇರಿಯಲ್ಲಿ ಚಾಲನಾ ಪರವಾನಗಿ ನವೀಕರಣ ಮಾಡಿಕೊಡಲಾಗುತ್ತಿತ್ತು. ಆದರೆ …

Read More »

ಪೊಲೀಸ್‌ ಠಾಣೆ ಬಳಿ ತುಕ್ಕು ಹಿಡಿಯುತ್ತಿವೆ ವಾಹನಗಳು

ಸುರತ್ಕಲ್: ಹಲವು ದಿನ, ತಿಂಗಳು, ವರ್ಷ ಕಳೆದರೂ ಮಾಲಕ ಬರುತ್ತಾನೋ ಇಲ್ಲವೋ. ಇನ್ನೊಬ್ಬರ ಕೈ ಸೇರಬೇಕಾ ಅಥವಾ ಹೀಗೆ ನಿಂತಲ್ಲಿಯೇ ಅವಶೇಷವಾಗಬೇಕಾ? ಸುರತ್ಕಲ್‌, ಪಣಂಬೂರು, ಕಾವೂರು ಪೊಲೀಸ್‌ ಠಾಣೆಗಳ ಮುಂದೆ, ಪಕ್ಕ ಇಲ್ಲವೇ ಠಾಣೆಗೆ ಸಮೀಪದಲ್ಲೇ ಮಾಲಕನ ಬರುವಿಕೆಗಾಗಿ ಕಾಯುತ್ತಿರುವ ನಾನಾ ರೀತಿಯ ವಾಹನಗಳ ವ್ಯಥೆಯಿದು. ಅಪಘಾತ, ಕಳ್ಳತನ, ರಸ್ತೆ ನಿಯಮ ಉಲ್ಲಂಘನೆ ಹೀಗೆ ವಿವಿಧ ಕಾರಣಗಳಿಂದ ಪೊಲೀಸರು ವಶಪಡಿಸಿಕೊಂಡ ದ್ವಿಚಕ್ರ ವಾಹನ, ಕಾರು, ಲಾರಿ, ದೋಣಿ ಇತ್ಯಾದಿಗಳು ಪೊಲೀಸ್‌ …

Read More »

ಸಿಹಿ ಕೊಟ್ಟು ಶುಭ ಕೋರಿದ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು. ಕೆಎಂಎಫ್ ಅಧ್ಯಕ್ಷ ಹಾಗೂ ಗೋಕಾಕ ತಾಲುಕಿನ‌ ಅರಭಾವಿ‌‌ ವಿಧಾನಸಭಾ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ನಿಮಿತ್ತ ಶುಭ ಕೋರಿದರು. ಕೆಎಂಎಫ್ನ ‌ಸಿಹಿ ಪದಾರ್ಥಗಳನ್ನು ತಿನ್ನಿಸುವ ಮೂಲಕ ಬಾಲಚಂದ್ರ ಜಾರಕಿಜೊಳಿ ಅವರು ಸಿಎಂ ಯಡಿಯೂರಪ್ಪ ಅವರಿಗೆ ಶತಾಯುಷಿ ಆಗಲೆಂದು ಹಾರೈಸಿದರು.

Read More »

ಮಾ.2ರಂದು ಅಂಗನವಾಡಿ ಕಾರ್ಯಕರ್ತರಿಂದ ‘ವಿಧಾನಸೌಧ ಚಲೋ

ಬೆಂಗಳೂರು, ಫೆ. 27: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸರಕಾರದ ‘ಸಿ’ ಮತ್ತು ‘ಡಿ’ ಗ್ರೂಪ್ ನೌಕರರೆಂದು ಪರಿಗಣಿಸಬೇಕು. ಇಲಾಖೆಯು ಈ ವೃಂದಗಳ ನೌಕರರಿಗೆ ನೀಡುವ ಎಲ್ಲ ಶಾಸನಬದ್ಧ ಸೌಕರ್ಯಗಳನ್ನು ನೀಡಬೇಕೆಂದು ಆಗ್ರಹಿಸಿ ಮಾ.2ರಂದು ಎಐಯುಟಿಯುಸಿ ‘ವಿಧಾನಸೌಧ ಚಲೋ’ ಹಮ್ಮಿಕೊಂಡಿದೆ. ಸರಕಾರಿ ನೌಕರರಿಗೆ ಸರಿಸಮನಾಗಿ ಮಾಸಿಕ ವೇತನ ಮತ್ತಿತರ ಸೌಕರ್ಯಗಳನ್ನು ನೀಡಬೇಕು ಅಥವಾ ಕಾರ್ಯಕರ್ತೆಯರಿಗೆ 25 ಸಾವಿರ ರೂ.ಹಾಗೂ ಸಹಾಯಕಿಯರಿಗೆ 21 ಸಾವಿರ ರೂ.ಮಾಸಿಕ ವೇತನ ನೀಡಬೇಕು. ಸೇವಾ ಹಿರಿತನ …

Read More »

ವಿಧಾನಪರಿಷತ್ತಿನಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯನಿರ್ವಹಿಸದಿರುವುದಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ನೂತನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯನಿರ್ವಹಿಸದಿರುವುದಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ನೂತನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು, ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ. ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ಈ ಕುರಿತು ಪತ್ರ ಬರೆದಿರುವ ಹೊರಟ್ಟಿಯವರು, ಸಚಿವಾಲಯದಲ್ಲಿ ಅಳವಡಿಸಲಾಗಿರುವ ಹಲವು ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅವುಗಳನ್ನು ಉದ್ದೇಶಪೂರ್ವಕವಾಗಿ ಕೆಲವರು ಹಾಳು ಮಾಡುತ್ತಿರುವ ದೂರುಗಳು ಬರುತ್ತಿವೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. ವಿಧಾನಪರಿಷತ್ ಕಟ್ಟಡದಲ್ಲಿ ಒಟ್ಟಾರೆ 36 …

Read More »

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ನಿರ್ದೇಶಕ ಸನತ ಜಾರಕಿಹೊಳಿ.

ಗೋಕಾಕ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಕಲ್ಪನಾ ಹೇಳಿದರು. ಶನಿವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಯೋಜನಾ ಘಟಕದಿಂದ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮಾನವನ ಬದುಕಿನಲ್ಲಿ ವಿಜ್ಞಾನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಸಂಶೋಧಕರಾಗಿ ದೇಶಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು …

Read More »

ಲೈಂಗಿಕ ಕಿರುಕುಳ ಪ್ರಕರಣವನ್ನು ಮುಚ್ಚಿಡಲು ಅವಕಾಶ ನೀಡಲಾಗದು: ಸುಪ್ರೀಂಕೋರ್ಟ್

ನವದೆಹಲಿ: ‘ಲೈಂಗಿಕ ಕಿರುಕುಳದ ಪ್ರಕರಣಗಳನ್ನು ಯಾವುದೇ ರೀತಿಯಲ್ಲೂ ಮುಚ್ಚಿಡಲು ಸಾಧ್ಯವಾಗದು’ ಎಂದು ಜಿಲ್ಲಾ ನಿವೃತ್ತ ನ್ಯಾಯಾಧೀಶರ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್ ಜಾರಿಗೊಳಿಸಿರುವ ಆಂತರಿಕ ಇಲಾಖಾ ತನಿಖೆಯನ್ನು ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ನೀಡಿದೆ. ಮಧ್ಯಪ್ರದೇಶದ ನಿವೃತ್ತ ನ್ಯಾಯಾಧೀಶ ಶಂಭೂ ಸಿಂಗ್ ರಘುವಂಶಿ ಅವರು ಕಿರಿಯ ಮಹಿಳಾ ನ್ಯಾಯಾಂಗ ಅಧಿಕಾರಿಯೊಬ್ಬರಿಗೆ ವ್ಯಾಟ್ಸ್‌ಆಯಪ್‌ನಲ್ಲಿ ಅನುಚಿತವಾದ ಸಂದೇಶಗಳನ್ನು ಕಳುಹಿಸಿದ್ದರು. ಈ ಸಂಬಂಧ ಅಧಿಕಾರಿಯು ದೂರು ಸಲ್ಲಿಸಿದ್ದು, …

Read More »

ಮಾರ್ಚ್​ 8 ರಂದು ಬಿಡುಗಡೆಯಾಗಲಿದೆ 108MP ಕ್ಯಾಮೆರಾದ Realme 8 Series ಸ್ಮಾರ್ಟ್​ಫೋನ್​?

ರಿಯಲ್​ಮಿ ಸಂಸ್ಥೆ Realme 8 ಸಿರೀಸ್​​ ಹೆಸರಿನ ಸ್ಮಾರ್ಟ್​ಫೋನನ್ನು ಸಿದ್ಧಪಡಿಸುತ್ತಿದೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೂತನ ಸ್ಮಾರ್ಟ್​ಫೋನ್​ ಮಾರುಕಟ್ಟೆಗೆ ಬರುವ ಲಕ್ಷಣ ಕಾಣುತ್ತಿದೆ. ಅದಕ್ಕೆ ಅನುಗುಣವಾಗಿ ಕಂಪೆನಿಯ ಸಿಇಒ ತಮ್ಮ ಟ್ವಿಟ್ಟರ್​​ ಖಾತೆಯಲ್ಲಿ ಮುಂಬರುವ ಸ್ಮಾರ್ಟ್​ಫೋನ್​ 108 ಮೆಗಾಫಿಕ್ಸೆಲ್​ ಕ್ಯಾಮೆರಾ ಮೂಲಕ ಬರಲಿದೆ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ಸ್ಮಾರ್ಟ್​ಫೋನ್​ ಪ್ರಿಯರಲ್ಲಿ ನೂತನ ಫೋನಿನ ಬಗ್ಗೆ ಕುತೂಹಲ ಹೆಚ್ಚಾಗಿದೆ. ಕಳೆದ ವರ್ಷ ಸೆಪ್ಟೆಂಬರ್​ ತಿಂಗಳಿನಲ್ಲಿ ರಿಯಲ್​ಮಿ 7 ಸಿರೀಸ್​ ಸ್ಮಾರ್ಟ್​ಫೋನ್​ ಮಾರುಕಟ್ಟೆಗೆ …

Read More »

ಜಲ್ಲಿಕಟ್ಟು ಕ್ರೀಡೆ ವೇಳೆ ಸಂಭವಿಸಿದ ದುರಂತ: ನಾಲ್ವರ ಸಾವು

ಚೆನ್ನೈ : ತಮಿಳುನಾಡಿನ ಜನಪದ ಕ್ರೀಡೆಯಾಗಿರುವ ಜಲ್ಲಿಕಟ್ಟು ಸ್ಪರ್ಧೆ ವೇಳೆ ದುರಂತ ಸಂಭವಿಸಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ವೇಳೆ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅಜಿತ್ , ಮಾರುತು , ಸೇತು ಮತ್ತು ಮಹೇಶ್ ಎನ್ನುವವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ . ಇನ್ನು …

Read More »

ಚನ್ನಪಟ್ಟಣದ ಆಟಿಕೆಗಳು ಪ್ರಪಂಚದಾದ್ಯಂತ ಎಲ್ಲಾ ಮಕ್ಕಳ ಮೊಗದಲ್ಲೂ ನಗು ತರಿಸಬೇಕು: ಪ್ರಧಾನಿ ಮೋದಿ

ನವದೆಹಲಿ : ನಮ್ಮ ಸಂಸ್ಕೃತಿಯ ಪ್ರತಿರೂಪದಂತಿರುವ ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಆಟಿಕೆ ಕ್ಲಸ್ಟರ್ ನಮ್ಮ ದೇಶಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ . ಶನಿವಾರ ದೆಹಲಿಯಲ್ಲಿ ವರ್ಚುವಲ್ ಕಾನ್ಸರೆನ್ಸ್ ಮೂಲಕ ಆಟಿಕೆ ಮೇಳಕ್ಕೆ ಚಾಲನೆ ನೀಡಿ, ಚನ್ನಪಟ್ಟಣದ ಆಟಿಕೆ ತಯಾರಕರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಅವರು,ಚನ್ನಪಟ್ಟಣದ ಬೊಂಬೆಯನ್ನು ವಿಶ್ವಮಟ್ಟದಲ್ಲಿ ಪ್ರಸಿದ್ಧಿಗೆ ತರಲು ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು. ಆಟಿಕೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದು …

Read More »