Breaking News

Monthly Archives: ಫೆಬ್ರವರಿ 2021

ಸಿದ್ದು ಅಹಿಂದ ಆಟ ನಡೆಯಲ್ಲ : ಎಂ.ಪಿ.ರೇಣು ಕಾಚಾರ್ಯ

ಬೆಂಗಳೂರು,ಫೆ.17- ಬಿಜೆಪಿಯಲ್ಲಿ ಎಲ್ಲಾ ಸಮುದಾಯಗಳಿಗೆ ಆದ್ಯತೆ ನೀಡಿರುವುದರಿಂದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಹಿಂದ ಅಥವಾ ಅಹಿಂದ ಯಾವುದೂ ನಡೆಯುವುದಿಲ್ಲ ಎಂದು ರಾಜ್ಯದ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣು ಕಾಚಾರ್ಯ ಟಾಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ತತ್ವದಡಿ ಪ್ರಧಾನಿ ನರೇಂದ್ರಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರು ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‍ನ ಅಹಿಂದ ನಾಟಕವನ್ನು ಜನರು ನಂಬುವುದಿಲ್ಲ. ರಾಜ್ಯದ ಜನತೆ …

Read More »

ತಂಬಾಕು ಮಾರಾಟಕ್ಕೂ ಕಡ್ಡಾಯ ಪರವಾನಿಗಿ ನೀಡಿ

ಬೆಂಗಳೂರು, ಫೆ.17- ರಾಜ್ಯದಲ್ಲಿ ತರಕಾರಿ, ಹಾಲು ಮಾರಾಟ ಮಳಿಗೆ ಮತ್ತು ಬೇಕರಿಯಂತಹ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳು ಸಿಗುತ್ತಿರುವುದು ಆತಂಕಕಾರಿಯಾಗಿದೆ ಎಂದು ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಕಡ್ಡಾಯವಾಗಿ ಪರವಾನಗಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ ಅವರು, ಮದ್ಯದ ಅಂಗಡಿಗಳಿಗೆ ಪರವಾನಗಿ ಇರುವಂತೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡ್ಡಾಯ ಪರವಾನಗಿ …

Read More »

ಪ್ರತಿಭಟನೆ; ಬಾಂಬೆ ಹೈಕೋರ್ಟ್​ ನ್ಯಾಯಾಧೀಶೆಗೆ ಕಾಂಡೋಮ್ ರವಾನೆ!

ಅಹಮದಾಬಾದ್, ಫೆಬ್ರವರಿ 17; ಬಾಂಬೆ ಹೈಕೋರ್ಟ್​ ನ್ಯಾಯಾಧೀಶೆ ಪುಷ್ಪಾ ಗಣದೇವಾಲಾ ಅವರಿಗೆ 150 ಕಾಂಡೋಮ್‌ಗಳನ್ನು ಕಳಿಸುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಲಾಗಿದೆ. ಪೋಕ್ಸೋ ಕಾಯ್ದೆಯ ಅಡಿ ನ್ಯಾಯಾಧೀಶೆ ನೀಡಿರುವ ಆದೇಶಗಳ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಅಹಮದಾಬಾದ್ ಮೂಲದ ದೇವಶ್ರೀ ತ್ರಿವೇದಿ ಎಂಬುವವರು ನ್ಯಾಯಾಧೀಶರ 12 ವಿಳಾಸಗಳಿಗೆ ಕಾಂಡೋಮ್‌ಗಳನ್ನು ಕಳಿಸಿರುವುದಾಗಿ ಹೇಳಿದ್ದಾರೆ. ರಾಜಕೀಯ ವಿಶ್ಲೇಷಕರಾದ ಮಹಿಳೆ ನ್ಯಾಯಾಧೀಶರು ಇತ್ತೀಚೆಗೆ ನೀಡಿರುವ ತೀರ್ಪುಗಳಿಗೆ ಪ್ರತಿಭಟನೆಯಾಗಿ ಕಾಂಡೋಮ್ ಕಳಿಸಿದ್ದಾಗಿ ಹೇಳಿದ್ದಾರೆ. ಇತ್ತೀಚಿನ ತೀರ್ಪುಗಳಿಂದ ಅಪ್ರಾಪ್ತ …

Read More »

ಟೂಲ್‌ಕಿಟ್‌ ಪ್ರಕರಣ: ನಿಕಿತಾಗೆ ಜಾಮೀನು

ಮುಂಬೈ: ಟೂಲ್‌ಕಿಟ್‌ ಪ್ರಕರಣದ ಆರೋಪಿ, ಮುಂಬೈನ ವಕೀಲೆ ಮತ್ತು ಪರಿಸರ ಕಾರ್ಯಕರ್ತೆ ನಿಕಿತಾ ಜೇಕಬ್‌ ಅವರಿಗೆ ಬಾಂಬೆ ಹೈಕೋರ್ಟ್‌ ಬುಧವಾರ ಮೂರು ವಾರಗಳ ತಾತ್ಕಾಲಿಕ ನಿರೀಕ್ಷಣಾ ಜಾಮೀನು ನೀಡಿದೆ. ನಿಕಿತಾ ವಿರುದ್ಧ ದೆಹಲಿ ಪೊಲೀಸರು ಜಾಮೀನುರಹಿತ ವಾರಂಟ್‌ ಪಡೆದುಕೊಂಡಿದ್ದಾರೆ. ಬಂಧನದಿಂದ ರಕ್ಷಣೆ ಪಡೆಯಲು ದೆಹಲಿಯ ನ್ಯಾಯಾಲಯಕ್ಕೆ ಹೋಗುವುದಕ್ಕಾಗಿ ಜಾಮೀನು ಮಂಜೂರು ಮಾಡಲಾಗಿದೆ. ಇನ್ನೊಬ್ಬ ಆರೋಪಿ ಶಾಂತನು ಮುಲುಕ್‌ ಅವರಿಗೆ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್‌ ಪೀಠವು ಮಂಗಳವಾರವೇ ಜಾಮೀನು ನೀಡಿದೆ. ಈ …

Read More »

ಸ್ವತಂತ್ರ ನಂತರ ಮೊದಲ ಬಾರಿಗೆ ಮಹಿಳೆಯೊಬ್ಬಳಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ನವದೆಹಲಿ: ಭಾರತ ಸ್ವತಂತ್ರ ಕಂಡ ದಿನದಿಂದ ಇದುವರೆಗೂ ಕೆಲವೇ ಕೆಲವು ಮಂದಿಯನ್ನು ಗಲ್ಲಿಗೇರಿಸಿದ್ದು, ಇದೇ ಮೊದಲ ಬಾರಿಗೆ ಮಹಿಳೆಯೊಬ್ಬಳಿಗೆ ಕಲ್ಲು ಶಿಕ್ಷೆ ವಿಧಿಸಿ ಹೊಸ ಚರಿತ್ರೆಯನ್ನು ಬರೆಯುತ್ತದೆ. ಏಪ್ರಿಲ್ 2008ರಲ್ಲಿ ಶಬ್ನಮ್ ತನ್ನ ಪ್ರೇಮಿ ಜೊತೆ ಸೇರಿ ಕುಟುಂಬಸ್ಥರ ಹತ್ಯೆ ಮಾಡಿದ್ದಳು. ಕುಟುಂಬಸ್ಥರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಳು. ಶಬ್ನಮ್ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ರಾಷ್ಟ್ರಪತಿ ಕೂಡ ಕ್ಷಮಾಪಣಾ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಭಾರತ ಸ್ವಾತಂತ್ರಗೊಂಡ ಮೇಲೆ ಇದೇ …

Read More »

‘ಸಲಗ’ ಟ್ಯಾಟೂ ಹಾಕಿಸಿಕೊಂಡು ದುನಿಯಾ ವಿಜಯ್ ಅಭಿಮಾನಿ

ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಸಲಗ’ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ದುನಿಯಾ ವಿಜಯ್ ಅಭಿಮಾನಿಗಳು ಸಲಗ ಹೆಸರಿನ ಟ್ಯಾಟೂ ಹಾಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಒಬ್ಬರು ಕೈ ಮೇಲೆ ಟ್ಯಾಟೂ ಹಾಕಿಸಿದರೆ ಇನ್ನೊಬ್ಬರು ಎದೆ ಮೇಲೆ ಹಾಕಿಸಿಕೊಂಡು ತಮ್ಮ ಅಭಿಮಾನ ತೋರಿಸಿದ್ದಾರೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ ಸೇರಿದಂತೆ ಡಾಲಿ ಧನಂಜಯ್ ಹಾಗೂ ಸಂಜನಾ ಆನಂದ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಕೆ.ಪಿ. ಶ್ರೀಕಾಂತ್ ಈ ಚಿತ್ರವನ್ನು ನಿರ್ಮಾಣ …

Read More »

ಇಂದು ಐಪಿಎಲ್‌ ಮಿನಿ ಹರಾಜು; 61 ಸ್ಥಾನಕ್ಕೆ 292 ಕ್ರಿಕೆಟಿಗರ ರೇಸ್‌

ಚೆನ್ನೈ: ಬಹು ನಿರೀಕ್ಷೆಯ 14ನೇ ಐಪಿಎಲ್‌ ಪಂದ್ಯಾವಳಿಗಾಗಿ ಗುರುವಾರ ಚೆನ್ನೈಯಲ್ಲಿ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಇಲ್ಲಿನ “ಐಟಿಸಿ ಗ್ರ್ಯಾಂಡ್‌ ಚೋಳ ಹೊಟೇಲ್‌’ನಲ್ಲಿ ಅಪರಾಹ್ನ ಮೂರರಿಂದ ಹರಾಜು ಆರಂಭವಾಗಲಿದ್ದು, ನೇರ ಪ್ರಸಾರ ಸ್ಟಾರ್‌ ಸ್ಪೋರ್ಟ್ಸ್ ನಲ್ಲಿರಲಿದೆ. ಎಲ್ಲ ತಂಡಗಳು ತಮ್ಮ ಸೀಮಿತ ಮೊತ್ತದ ಚೌಕಟ್ಟಿನಲ್ಲಿ ಸ್ಟಾರ್‌ ಆಟಗಾರರನ್ನು ಖರೀದಿಸಲು ಪೈಪೋಟಿಗೆ ಇಳಿಯಲಿವೆ. 8 ಫ್ರಾಂಚೈಸಿಗಳಿಗೆ ಒಟ್ಟು 61 ಆಟಗಾರರ ಅಗತ್ಯವಿದೆ. ರೇಸ್‌ನಲ್ಲಿರುವವರು 292 ಮಂದಿ. ಇದರಲ್ಲಿ ಭಾರತದ 164, …

Read More »

ವರ್ಷಾಂತ್ಯಕ್ಕೆ ಮುಕ್ತ ಮಾರುಕಟ್ಟೆಯಲ್ಲಿ ಕೋವಿಡ್-19 ಲಸಿಕೆ ಲಭ್ಯ

ಕೋವಿಡ್-19 ಲಸಿಕೆ ಕಾರ್ಯಕ್ರಮ ಮೊದಲ ಹಂತ ಚಾಲ್ತಿಯಲ್ಲಿರುವಂತೆಯೇ ದೇಶಾದ್ಯಂತ ಈ ಲಸಿಕೆಯು ವ್ಯಾಪಕವಾಗಿ ಯಾವಾಗ ಲಭ್ಯವಾಗಲಿದೆ ಎಂಬ ಪ್ರಶ್ನೆಗಳು ಉದ್ಭವವಾಗತೊಡಗಿವೆ. ವರ್ಷಾಂತ್ಯ ಅಥವಾ ಅದಕ್ಕೂ ಮುನ್ನವೆ ಈ ಲಸಿಕೆಗಳು ಮುಕ್ತ ಮಾರುಕಟ್ಟೆಯಲ್ಲಿ ಲಭ್ಯವಿರಲಿವೆ ಎಂದು ಏಮ್ಸಕ್‌ ನಿರ್ದೇಶಕ ರಣದೀಪ್ ಗುಲೇರಿಯಾ ತಿಳಿಸಿದ್ದಾರೆ. ಬುಧವಾರ ಕೋವಿಡ್‌-19ನ ಎರಡನೇ ಡೋಸ್ ಹಾಕಿಸಿಕೊಂಡ ಗುಲೇರಿಯಾ, “ಮೊದಲ ಹಂತದ ಲಸಿಕಾ ಕಾರ್ಯಕ್ರಮದಲ್ಲಿ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ 50 ವರ್ಷ ದಾಟಿದ ಅಶಕ್ತ ಜನರಿಗೆ ಲಸಿಕೆ …

Read More »

ಮನೆಗೆ ಬೆಂಕಿ ಹಚ್ಚಿ ಇಬ್ಬರನ್ನು ಸುಟ್ಟು ಕೊಂಡಿದ್ದ ಮೂವರ ಬಂಧನ

ಅಥಣಿ – ನೀರಿನ ಪಾಳಿಗಾಗಿ ಜಗಳವಾಡಿ, ಮನೆಗೆ ಬೆಂಕಿ ಹಚ್ಚಿ ಇಬ್ಬರನ್ನು ಸುಟ್ಟು ಕೊಂಡಿದ್ದ ಮೂವರನ್ನು ಬಂಧಿಸಲಾಗಿದೆ. ಶಂಕರ ಸದಾಶಿವ ಮಾದರ, ಸದಾಶಿವ ಸಿದ್ರಾಮ ಮಾದರ,  ಸುನೀಲ ಸದಾಶಿವ ಮಾದರ (ಸಾ|| ಎಲ್ಲರೂ ಕೊಕಟನೂರ) ಬಂಧಿತರು.  ಮಹಾದೇವ ಸಿದ್ರಾಮ ಮಾದರ (ವಯಾ 51 ವರ್ಷ ಸಾ|| ಕೊಕಟನೂರ) ಇವನು ಹಾಗೂ  ಸದಾಶಿವ ಸಿದ್ರಾಮ ಮಾದರ (ಸಾ|| ಕೊಕಟನೂರ) ಇವರಿಬ್ಬರೂ ಖಾಸ ಅಣ್ಣತಮ್ಮಂದಿರು. ಇವರ ತಂದೆ ಸಿದ್ರಾಮ ರಾಮಪ್ಪ ಮಾದರ ಇವರ …

Read More »

ವ್ಯಾಪಾರದಲ್ಲಿ ಬಂದ ಹಣವನ್ನೆಲ್ಲ ಪೆಟ್ಟಿಗೆಯಲ್ಲಿ ತುಂಬಿಟ್ಟ ಪರಿಣಾಮ ಲಕ್ಷಾಂತರ ರೂಪಾಯಿ ಗೆದ್ದಲು ಹಿಡಿದು ಹಾಳಾಗಿರುವ ಘಟನೆ

ಹೈದರಾಬಾದ್: ವ್ಯಾಪಾರದಲ್ಲಿ ಬಂದ ಹಣವನ್ನೆಲ್ಲ ಬ್ಯಾಂಕ್ ನಲ್ಲಿ ಠೇವಣಿಯಿಡದೇ ಪೆಟ್ಟಿಗೆಯಲ್ಲಿ ತುಂಬಿಟ್ಟ ಪರಿಣಾಮ ಲಕ್ಷಾಂತರ ರೂಪಾಯಿ ಗೆದ್ದಲು ಹಿಡಿದು ಹಾಳಾಗಿರುವ ಘಟನೆ ಹೈದರಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮೈಲಾವರಂ ನಿವಾಸಿ ಬಿಜ್ಲಿ ಚಾಮಲಯ್ಯ ಹಂದಿ ವ್ಯಾಪಾರಿಯಾಗಿದ್ದು, ತಾವು ದುಡಿದ ಹಣವನ್ನೆಲ್ಲ ಬ್ಯಾಂಕ್ ನಲ್ಲಿಡದೇ ಶೇಖರಿಸಿ ಪೆಟ್ಟಿಗೆಯಲ್ಲಿ ತುಂಬಿಟ್ಟಿದ್ದಾರೆ. ಹಣ ಸುರಕ್ಷಿತವಾಗಿದೆಯೇ ಎಂಬುದನ್ನೂ ನೋಡಿಲ್ಲ. ವರ್ಷದ ಬಳಿಕ ಪೆಟ್ಟಿಗೆ ತೆಗೆದು ನೋಡಿದಾಗ ಇದೀಗ ಹಣ ಗೆದ್ದಲು ತಿಂದು ನಾಶವಾಗಿದೆ. ಇದರಿಂದ ಬೇಜಾರಾದ …

Read More »