Breaking News
Home / 2021 / ಮಾರ್ಚ್ / 02 (page 3)

Daily Archives: ಮಾರ್ಚ್ 2, 2021

ಶೌರ್ಯ ಪ್ರಶಸ್ತಿ ಪುರಸ್ಕೃತರ ಗೌರವಧನ ಹೆಚ್ಚಳ : ಸಿಎಂ ಘೋಷಣೆ

ಬೆಂಗಳೂರು,ಮಾ.2- ಪರಮ ವೀರಚಕ್ರ, ಅಶೋಕಚಕ್ರ ಸೇರಿದಂತೆ ಶೌರ್ಯ ಪ್ರಶಸ್ತಿ ಪುರಸ್ಕೃತರಿಗೆ ನೀಡಲಾಗುವ ಗೌರವಧನವನ್ನು ಹೆಚ್ಚಳ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದರು. 1971ರಲ್ಲಿ ನಡೆದ ಭಾರತ-ಪಾಕಿಸ್ತಾನ ಯುದ್ಧದಲ್ಲಿ ದೇಶ ವಿಜಯಗಳಿಸಿದ ಸ್ಮರಣಾರ್ಥ ಇಂದು ವಿಧಾನಸೌಧ ಮುಂಭಾಗ ಆಯೋಜಿಸಿದ್ದ 50ನೇ ಸ್ವರ್ಣಿಂ ವಿಜಯ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪರಮವೀರ ಚಕ್ರ, ಅಶೋಕ ಚಕ್ರ ಪ್ರಶಸ್ತಿ ಪುರಸ್ಕøತರಿಗೆ ನೀಡಲಾಗುತ್ತಿದ್ದ 25 ಲಕ್ಷ ರೂ.ಗಳಿಂದ ಒಂದು ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ …

Read More »

15 ದಿನದಲ್ಲಿ ಹುಲಿ, ಚಿರತೆ ಸಾಫಾರಿಗೂ ಅವಕಾಶ: ಶಾಸಕ ಸತೀಶ ಜಾರಕಿಹೊಳಿ

  ಬೆಳಗಾವಿ: ಮೂರು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ  ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಿಂದ  ಪ್ರವಾಸೋದ್ಯಮ ಇಲಾಖೆ ಮಹತ್ವ ಬರಲಿದೆ   ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮೈಸೂರು ಮಾದರಿಯಲ್ಲಿ ಬೆಳಗಾವಿಯ ಮೃಗಾಲಯಕ್ಕೆ ಒತ್ತು ನೀಡಲಾಗುವುದು. ಇದರಿಂದ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ ಸಂಪರ್ಕಕೊಂಡಿಯಾಗಲಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಜನತೆ ಮೈಸೂರಿಗೆ …

Read More »

ಸಿಇಟಿಗೆ ಪಠ್ಯಕಡಿತ, ನೀಟ್‌ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್‌, ಕೃಷಿ ವಿಜ್ಞಾನ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಶೇ.70ರಷ್ಟು ಪಠ್ಯಕ್ರಮದ ಆಧಾರದಲ್ಲೇ ನಡೆಯಲಿದೆ. ಆದರೆ ನೀಟ್‌ ಬರೆದು ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್‌ಗಳಿಗೆ ಸೇರಬೇಕೆಂದಿರುವ ವಿದ್ಯಾರ್ಥಿಗಳು ಶತ ಪ್ರತಿಶತ ಪಠ್ಯವನ್ನು ಅಧ್ಯಯನ ಮಾಡಬೇಕಾಗಿದೆ. ರಾಜ್ಯ ಸರಕಾರ ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ ಪಿಯುಸಿಗೆ ಶೇ. 30ರಷ್ಟು ಪಠ್ಯ ಕಡಿತ ಮಾಡಿದ್ದರೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ನಡೆಸುವ ರಾಷ್ಟ್ರೀಯ ಅರ್ಹತೆ …

Read More »

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ

ಮಂಗಳೂರು,ಮಾ.01(ಹಿ.ಸ): ನಗರ ದ ಹೊರ ವಲಯದ ಸುರತ್ಕಲ್ ನಲ್ಲಿ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿದ ಮಂಗಳೂರು ಪೊಲೀಸರು ಬೆಂಗಳೂರಿನ ಯುವತಿಯನ್ನು ರಕ್ಷಿಸಿದ್ದಾರೆ. ಈ ಯುವತಿಯನ್ನು ಇಟ್ಟುಕೊಂಡು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ. ಮಂಗಳೂರು ತಾಲೂಕು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ BASF ಫ್ಯಾಕ್ಟರಿಯ ಎದುರುಗಡೆಯ ಫೆರಾವೊ ಕಾಂಪ್ಲೇಕ್ಸ್ ನಲ್ಲಿರುವ ಫೆರಾವೊ ಲಾಡ್ಜಿಂಗ್ & ಬೋರ್ಡಿಂಗ್ …

Read More »

ಹಣ ನೀಡದಕ್ಕಾಗಿ ಸ್ಕೆಚ್:ಮುಬಾರಕ್ ಬೆಳಗಾವಿ ಜೈಲು ಪಾಲಾಗುತ್ತಾನೆ

ನೆಲಮಂಗಲ (ಫೆಬ್ರವರಿ 28): ಒಂದು ಕಾಲದಲ್ಲಿ ಬಾಯ್ ಬಾಯ್ ಅಂತಿದ್ದ ಇಬ್ಬರು ಸ್ನೇಹಿತರ ನಡುವೆ ಶುರುವಾಯಿತು ವೈಮನಸ್ಸು ಶುರುವಾಗಿ ದ್ವೇಷ ಕಟ್ಟಿಕೊಂಡು ಮಚ್ಚು ಮಸಿಯುತ್ತಿದ್ದಾರೆ, ಕೊಲೆ ಪ್ರಕರಣದ ಅಪರಾದಿ ಗ್ರಾಮ ಪಂಚಾಯ್ತಿ ಸದಸ್ಯನ ಹತ್ಯೆಗೆ ಜೈಲಿನಲ್ಲಿದ್ದುಕೊಂಡು ಸಂಚು ರೂಪಿಸಿದ್ದಾನೆ. ಪ್ಲಾನ್ ಎಲ್ಲಾ ರೆಡಿಯಾಗಿ ಇನ್ನೇನು ಅಂದುಕೊಂಡಂತೆ ಮುಗಿಸಬೇಕು ಎನ್ನೋವಷ್ಟರಲ್ಲಿ ಕೂದಲೆಳೆ ಅಂತರದಲ್ಲಿ ಸ್ಕೆಚ್ ಮಿಸ್ ಆಗಿ ಹೋಯ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಣೇಗೌಡಣಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ …

Read More »

ಎಸ್‌ಎಸ್‌ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ವ್ಯತ್ಯಾಸವಿಲ್ಲ: ಸಚಿವ ಎಸ್ . ಸುರೇಶ್ ಕುಮಾರ್

ಧಾರವಾಡ : ಜೂನ್ 21 ರಿಂದ ಜುಲೈ 5 ರವರೆಗೆ ಎಸ್‌ಎಸ್‌ ಎಲ್ ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ . ಸುರೇಶ್ ಕುಮಾರ್ ಈಗಾಗಲೇ ತಿಳಿಸಿದ್ದರು. ಇದೀಗ ಮತ್ತೆ ಅದರ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ಒಂದು ತಿಂಗಳ ಹಿಂದೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು . ವೇಳಾಪಟ್ಟಿಗೆ ಯಾರಿಂದಲೂ ಆಕ್ಷೇಪಣೆ ಬಂದಿಲ್ಲ . ಹೀಗಾಗಿ ಜೂನ್ 21 ರಿಂದ ಪರೀಕ್ಷೆ ನಡೆಯುತ್ತದೆ …

Read More »

ತೈಲ ದರವನ್ನು ಜಿಎಸ್‍ಟಿ ವ್ಯಾಪ್ತಿಗೆ ಸೇರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ ರಾಜ್ಯ ಸರ್ಕಾರಗಳು ಒಪ್ಪುತ್ತಿಲ್ಲ: ಪ್ರಹ್ಲಾದ್ ಜೋಶಿ

ಜಿಲ್ಲೆಯ ಪ್ರಸಿದ್ಧ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಪ್ರಲ್ಹಾದ ಜೋಶಿ ಭೇಟಿ ನೀಡಿ ನಂತರ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಪರಿವಾರ ದೇವಸ್ಥಾನಕ್ಕೆ ಸಮೇತ ಭೇಟಿ ನೀಡಿದ ಸಚಿವರು 2019 ಚುನಾವಣೆ ನಂತರ ದೇವರ ದರ್ಶನಕ್ಕೆ ಬಂದಿರಲಿಲ್ಲ. ಹಾಗಾಗಿ ಈಗ ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದೇನೆ ಎಂದರು. ಜಿಲ್ಲೆಯ ಪ್ರಸಿದ್ಧ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಪ್ರಲ್ಹಾದ ಜೋಶಿ ಭೇಟಿ ನೀಡಿ ನಂತರ ಮಾತನಾಡಿದರು. ಪರಿವಾರ ದೇವಸ್ಥಾನಕ್ಕೆ ಸಮೇತ ಭೇಟಿ ನೀಡಿದ …

Read More »

ವೀಲಿಂಗ್ ಮಾಡಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ

ಚಾಮರಾಜನಗರ: ವೀಲಿಂಗ್ ಮಾಡಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರದ ಬಳಿ ನಿನ್ನೆ ನಡೆದಿದೆ. ಚಾಮರಾಜನಗರದ ಗಾಳಿಪುರ ಬಡಾವಣೆಯ ನಿವಾಸಿ 26 ವರ್ಷದ ತಯ್ಯಿಬ್ ಸಾವನ್ನಪ್ಪಿದ ಯುವಕನಾಗಿದ್ದು, ವೀಲಿಂಗ್ ಮಾಡುತ್ತಿದ್ದಾಗ ಕೆಳಕ್ಕೆ ಬಿದ್ದು ತಯ್ಯಿಬ್ ಸ್ಥಳದಲ್ಲೇ ಸಾವನ್ನಪ್ಪಿದ್ದ. ಇನ್ನು ಬೈಕ್​​ನಲ್ಲಿದ್ದ ಮತ್ತೊಬ್ಬ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭಿಸಿದೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ. …

Read More »