Breaking News
Home / 2021 / ಮಾರ್ಚ್ / 03 (page 2)

Daily Archives: ಮಾರ್ಚ್ 3, 2021

ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಇಬ್ರಾಹಿಂ ಮಾತುಕತೆ!

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಇಬ್ರಾಹಿಂ ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ದಿಢೀರ್ ಆಗಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಇಬ್ರಾಹಿಂ ಮಾತುಕತೆ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದ ಸಿಎಂ ಇಬ್ರಾಹಿಂ ಮೈತ್ರಿ ಸರ್ಕಾರದ …

Read More »

ಬೆಳಗಾವಿ ಝೂದಲ್ಲಿ ಸಿಂಹ ,ಶೀಘ್ರವೇ ಮೃಗಾಲಯದಲ್ಲಿ ಹುಲಿ ಸಫಾರಿ : ಸತೀಶ್ ಜಾರಕಿಹೊಳಿ

ಬೆಳಗಾವಿ – : ರಾಣಿ ಚನ್ನಮ್ಮ ಕಿರು ಮೃಗಾಲಯ ಉತ್ತರ ಕರ್ನಾಟಕದ ಹೆಮ್ಮೆಯಾಗಿದೆ. ಅದರ ಅಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಯಮಕನಮರಡಿ ಶಾಸಕರಾದ ಸತೀಶ್ ಜಾರಕಿಹೊಳಿ ತಿಳಿಸಿದರು. ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಮಂಗಳವಾರ (ಮಾ.೦೨) ಭೇಟಿ ನೀಡಿ ಮಾಧ್ಯಮಗೋಷ್ಠಿ ನಡೆಸಿದರು.   ಈಗಾಗಲೇ ಮೃಗಾಲಯಕ್ಕೆ 3 ಸಿಂಹಗಳು ಆಗಮಿಸಿವೆ. ಮುಂಬರುವ ದಿನಗಳಲ್ಲಿ ಹುಲಿ,ಚಿರತೆ, ಕರಡಿ ಮುಂತಾದ ಪ್ರಾಣಿಗಳನ್ನು ಕರೆತರುವ ಯೋಜನೆ ಇದ್ದು, ಅವುಗಳಿಗೆ …

Read More »

ರೈತ ನಾಶವಾದರೆ ದೇಶವೂ ನಾಶ: ನೀರಾವರಿ ತಜ್ಞ ಪ್ರೊ.ಸಿ. ನರಸಿಂಹಪ್ಪ

ದಾವಣಗೆರೆ: ರೈತರು ನಾವು ಬೆಳೆದ ಬೆಳೆಗೆ ಸರಿಯಾದ ಬೆಲೆ ನೀಡಿ ಎಂದು ಕೇಳಬೇಕಿತ್ತು. ಆದರೆ ಅದನ್ನು ಕೇಳದೆ ಕನಿಷ್ಠ ಇಷ್ಟು ಸಿಗದೇ ಹೋದರೆ ಕೃಷಿಕರಾಗಿಯೂ ಉಳಿಯುವುದಿಲ್ಲ. ಹಾಗಾಗಿ ಕನಿಷ್ಠ ಬೆಂಬಲ ಬೆಲೆಯನ್ನಾದರೂ ನೀಡಿ ಎಂದು ರೈತರು ಕೇಳುತ್ತಿದ್ದಾರೆ. ರೈತ ನಾಶವಾದರೆ ದೇಶ ನಾಶವಾಗುತ್ತದೆ. ರೈತತನವನ್ನು ಕಳೆದುಕೊಂಡರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಕೃಷಿ ಮತ್ತು ನೀರಾವರಿ ತಜ್ಞ ಪ್ರೊ.ಸಿ. ನರಸಿಂಹಪ್ಪ ಎಚ್ಚರಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಗಳವಾರ ನಡೆದ ‘ನೂತನ …

Read More »