Breaking News
Home / 2021 / ಮಾರ್ಚ್ / 04 (page 2)

Daily Archives: ಮಾರ್ಚ್ 4, 2021

2020-21ನೇ ಸಾಲಿನಲ್ಲಿ ಪೆಟ್ರೋಲ್-ಡೀಸೆಲ್ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ ಬಂದ ಹಣವೆಷ್ಟು ಗೊತ್ತೇ..?

ಬೆಂಗಳೂರು, ಮಾ.4-ಪೆಟ್ರೋಲ್, ಡೀಸೆಲ್ ಮೇಲೆ ವಿಸಲಾಗುತ್ತಿರುವ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನ ಜನವರಿ ಅಂತ್ಯಕ್ಕೆ 12,432.27 ಕೋಟಿ ರೂ.ಗಳ ತೆರಿಗೆ ಸಂಗ್ರಹವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್‍ಕೆ.ರಾಥೋಡ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಸಭಾನಾಯಕ ಹಾಗೂ ಸಚಿವ ಕೋಟಾ ಶ್ರೀನಿವಾಸಪೂಜಾರಿ ಅವರು, ದಕ್ಷಿಣ ಭಾರತ ರಾಜ್ಯಗಳ ಪೈಕಿ ಕೇರಳ ಹೊರತು ಪಡಿಸಿ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ …

Read More »

ತಾಜ್‍ಮಹಲ್‍ಗೆ ಬಾಂಬ್ ಬೆದರಿಕೆ ಕರೆ..!

ನವದೆಹಲಿ/ಆಗ್ರಾ, ಮಾ.4 (ಪಿಟಿಐ)- ವಿಶ್ವ ಪ್ರಸಿದ್ಧ ತಾಜ್‍ಮಹಲ್ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಿಕ ಕರೆಗೆ ಹೆದರಿ, ಮುನ್ನೆಚ್ಚರಿಕೆ ಕ್ರಮವಾಗಿ ಸಂಕೀರ್ಣವನ್ನು ಖಾಲಿ ಮಾಡಲಾಗಿದೆ.ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬರು ಉತ್ತರ ಪ್ರದೇಶದ ಪೊಲೀಸರ ತುರ್ತು ಪ್ರತಿಕ್ರಿಯೆ ಸಂಖ್ಯೆ 112ಕ್ಕೆ ಕರೆ ಮಾಡಿ, ಸ್ಮಾರಕದೊಳಗೆ ಬಾಂಬ್ ಇಡಲಾಗಿದೆ ಎಂದು ಹೇಳಿದರು. ಪೊಲೀಸರು ಮುಂಜಾಗ್ರತಾ ಕ್ರಮವಾಗಿ ತಕ್ಷಣ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‍ಎಫ್) ಸಿಬ್ಬಂದಿಗೆ ತಿಳಿಸಿದರು. ಕೇಂದ್ರ ಪುರಾತತ್ವ …

Read More »

ರಾಜಕಾರಣಿಗಳ ಚಾರಿತ್ರ್ಯ ಹರಣ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು: ಶಾಸಕ ರಾಜುಗೌಡ!

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಹಿಂದಿರುವ ವ್ಯಕ್ತಿಯ ಬಗ್ಗೆ ಸತ್ಯಾಂಶ ಹೊರ ಬರಲು ಸಿಬಿಐ ತನಿಖೆಯಾಗಬೇಕು. ಈ ಸಿಡಿ ಬಿಡುಗಡೆ ಮಾಡಲು ಯಾರು ಕೋಟ್ಯಾಂತರ ರೂಪಾಯಿ ಬಂಡವಾಳ ಹಾಕಿದ್ದಾರೆ ಎನ್ನುವ ವಿಚಾರದ ಬಗ್ಗೆಯೂ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ರಾಜುಗೌಡ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ, ಸದ್ಯ ಬಿಡುಗಡೆಯಾಗಿರುವ ವಿಡಿಯೋ ರಷ್ಯಾದಿಂದ ಅಪ್ ಲೋಡ್ ಆಗಿದೆ. ಅಲ್ಲಿಂದ ವಿಡಿಯೋವನ್ನು ಅಪ್ ಲೋಡ್ ಮಾಡಲು ಯಾರೋ ದೊಡ್ಡವರೇ …

Read More »

ಅಧಿವೇಶನದಲ್ಲಿ ಒನ್ ನೇಷನ್ ಒನ್ ಎಲೆಕ್ಷನ್ ಚರ್ಚೆ ಪ್ರಸ್ತಾಪ: ಡಿಕೆ ಶಿವಕುಮಾರ್ ಆಕ್ರೋಶ

ಬೆಂಗಳೂರು(ಮಾ. 04): ಈಗ ಒನ್ ನೇಷನ್ ಒನ್ ಎಲೆಕ್ಷನ್ ಅಂತಿದ್ದಾರೆ. ಇದನ್ನ ಯಾರ ಒತ್ತಡದ ಮೇಲೆ ತಂದಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯ ನಂತರ ಮಾತನಾಡಿ, ಒನ್ ನೇಷನ್ ಒನ್ ಎಲೆಕ್ಷನ್ ಬಗ್ಗೆ ಚರ್ಚೆಯಿದೆ. ಇದನ್ನ ಚರ್ಚೆಗೆ ಯಾರು ಅವಕಾಶ ಕೊಟ್ಟಿದ್ದು? ಕೇಂದ್ರ ಸರ್ಕಾರವೇನಾದ್ರೂ ಇದನ್ನ ಮಾಡಿ ಎಂದಿದ್ಯಾ? ಇವತ್ತು ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. ಇವುಗಳ …

Read More »

ಸದನದಲ್ಲಿ ‘ಶರ್ಚ್ ಬಿಚ್ಚಿ’ ಪ್ರತಿಭಟನೆ ನಡೆಸಿದ ‘ಶಾಸಕ ಬಿ.ಕೆ.ಸಂಗಮೇಶ್’ 1 ವಾರ ಸದನದಿಂದ ಸಸ್ಪೆಂಡ್

ಬೆಂಗಳೂರು : ಒಂದು ದೇಶ, ಒಂದೇ ಚುನಾವಣೆ ಚರ್ಚೆ ಸಂಬಂಧ ಶರ್ಚ್ ಬಿಚ್ಚಿ ಸದನದಲ್ಲಿ ಪ್ರತಿಭಟನೆ ನಡೆಸಿದಂತ ಭದ್ರಾವತಿಯ ಶಾಸಕ ಸಂಗಮೇಶ್ ಅವರನ್ನು ಸ್ಪೀಕರ್ ರಮೇಶ್ ಕುಮಾರ್ ಒಂದು ವಾರ ಸದನದಿಂದ ಅಮಾನತುಗೊಳಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಿಸಿದ್ದಾರೆ.   ವಿಧಾನಸಭೆಯಲ್ಲಿ ಇಂದು ಒಂದು ರಾಷ್ಟ್ರ ಒಂದು ಚುನಾವಣೆ ಕುರಿತಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಷಣ ಮುಗಿಸಿ ಸದಸ್ಯರೆಲ್ಲರೂ ತಮ್ಮ ತಮ್ಮ ಆಸನಗಳಿಗೆ ಹಿಂತಿರುಗಬೇಕೆಂದು ಮನವಿ ಮಾಡಿದರು. …

Read More »

ಕೋವಿಡ್ ಲಸಿಕೆ ಪಡೆಯಲು ಸಕಾರಾತ್ಮಕ ಸ್ಪಂದನೆ; ಮಾರ್ಚ್ ಅಂತ್ಯದವರೆಗೂ ಸ್ಲಾಟ್ ಗಳು ಫಿಕ್ಸ್!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 60 ವರ್ಷ ಮೇಲಿನವರು, ಬೇರೆ ಕಾಯಿಲೆ ಹೊಂದಿರುವ 45ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಮುಂದುವರೆದಿದೆ. ಕೋವಿಡ್ ಲಸಿಕೆ ಪಡೆಯಲು ಜನರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಹೌದು.. ಕೋವಿನ್ ಪೋರ್ಟಲ್‌ನಲ್ಲಿ ಲಕ್ಷಾಂತರ ಮಂದಿ ಕೋವಿಡ್ ಲಸಿಕೆಗಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದು, ಪರಿಣಾಮ ಮಾರ್ಚ್ ಅಂತ್ಯದ ವರೆಗೂ ಸ್ಲಾಟ್ ಗಳು ಬುಕ್ ಆಗಿವೆ. ಏಪ್ರಿಲ್ ನಲ್ಲಷ್ಟೇ ಸ್ಲಾಟ್ ಗಳು ಖಾಲಿ ಇವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. …

Read More »

ಪಡಿತರ ಚೀಟಿ ಹೊಂದಿರುವವರಿಗೆ ʼನೆಮ್ಮದಿʼ ಸುದ್ದಿ: ವಿತರಣೆಯಲ್ಲಿ ವ್ಯತ್ಯಯವಾದರೆ ಈ ಸಂಖ್ಯೆಗೆ ಕರೆ ಮಾಡಿ

ಪಡಿತರ ಚೀಟಿ ಅನ್ನೋದು ಸರ್ಕಾರ ನೀಡಿರುವ ಸವಲತ್ತುಗಳಲ್ಲಿ ಒಂದಾಗಿದ್ದು, ಇದನ್ನ ಬಳಸಿ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತ ಇಲ್ಲವೇ ಕನಿಷ್ಟ ದರಕ್ಕೆ ದಿನಸಿ ಸಾಮಗ್ರಿಗಳನ್ನ ಪಡೀತಾರೆ. ಆದರೆ ನ್ಯಾಯಬೆಲೆ ಅಂಗಡಿಗಳಲ್ಲಿ ದಿನಸಿ ವಿತರಣೆ ವಿಚಾರವಾಗಿ ಸಾಕಷ್ಟು ದೂರುಗಳು ಕೇಳಿ ಬರ್ತಿದೆ. ಫಲಾನುಭವಿಗಳಿಗೆ ಸರಿಯಾದ ಪ್ರಮಾಣ ಆಹಾರ ಧಾನ್ಯಗಳನ್ನ ವಿತರಿಸಲಾಗ್ತಿಲ್ಲ ಎಂಬ ಆರೋಪವೂ ಕೆಲವು ಕಡೆ ಕೇಳಿ ಬಂದಿದೆ. ಒಂದು ವೇಳೆ ನೀವು ಕೂಡ ಇಂತಹದ್ದೇ ಯಾವುದಾದರೊಂದು ಸಮಸ್ಯೆಯನ್ನ ಎದುರಿಸ್ತಾ ಇದ್ದರೆ …

Read More »

ತಾಯಿಗೆ ಮಗಳು ಹೊಸ ಸೀರೆ ಕೊಡಿಸಬೇಕು ಎನ್ನುವ ವದಂತಿ ಹಬ್ಬಿದ್ದು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ.

ಬಳ್ಳಾರಿ : ಗಣಿನಾಡು ಬಳ್ಳಾರಿಯಲ್ಲಿ ವದಂತಿಯೊಂದು ಹಬ್ಬಿದ್ದು, ತಾಯಿಗೆ ಮಗಳು ಹೊಸ ಸೀರೆ ಕೊಡಿಸಬೇಕು ಎನ್ನುವ ವದಂತಿ ಹಬ್ಬಿದ್ದು, ಮಹಿಳೆಯರು ತಾಯಿಗೆ ಸೀರೆ ಕೊಡಲು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ.   ಹೌದು, ಬಳ್ಳಾರಿ ಜಿಲ್ಲೆಯ ಗ್ರಾಮೀಣಾ ಭಾಗದಲ್ಲಿ ತಾಯಿಗೆ ಮಗಳು ಸೀರೆ ಕೊಡಿಸಬೇಕು. ಸೀರೆ ಕೊಡದಿದ್ದರೆ ಕೇಡಾಗುತ್ತದೆ ಎಂಬ ವದಂತಿ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳು ತಮ್ಮ ತಾಯಿಗೆ ಸೀರೆ ಖರೀದಿಸಲು ಮುಗಿಬಿದ್ದಿದ್ದಾರೆ. ಬಳ್ಳಾರಿಯ ಸೀರೆ ಅಂಗಡಿಗಳಲ್ಲಿ ಈಗ ಎಲ್ಲಿ ನೋಡಿದರೂ …

Read More »

ಒಂದೇ ಓವರ್ ನಲ್ಲಿ 6,6,6,6,6.6: ಯುವಿ ದಾಖಲೆ ಸರಿಗಟ್ಟಿದ ಪೊಲಾರ್ಡ್

ಯಂಟಿಗುವಾ : ವೆಸ್ಟ್ ಇಂಡೀಸ್ ನ ನಾಯಕ ಕೀರನ್ ಪೊಲಾರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಂದು ಓವರ್ ನಲ್ಲಿ 6 ಸಿಕ್ಸರ್ ಬಾರಿಸಿದ ಮೂರನೇ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಂಟಿಗುವಾದ ಕೂಲಿಡ್ಜ್ ಕ್ರಿಕೆಟ್ ಮೈದಾನದಲ್ಲಿ ಶ್ರೀಲಂಕಾದ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾದ ಅಕಿಲಾ ಧನಂಜಯ ಅವರ ಒವರ್ ನಲ್ಲಿ 6ಸಿಕ್ಸರ್ ಸಿಡಿಸುವ ಮೂಲಕ ಪೊಲಾರ್ಡ್ ಈ ಸಾಧನೆ ಮಾಡಿದ್ದಾರೆ. *6 Sixes in an …

Read More »

ರಮೇಶ್‌ ಜಾರಕಿಹೊಳಿ ರಾಜೀನಾಮೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ :ಸತೀಶ್‌ ಜಾರಕಿಹೊಳಿ, ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣರಾಗಿದ್ದ ರಮೇಶ್‌ ಜಾರಕಿಹೊಳಿ ರಾಜೀನಾಮೆಯಿಂದ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ ಇದೆ. ಸರಕಾರದಲ್ಲಿರುವ ವಲಸಿಗ ಸಚಿವರ ವೇಗಕ್ಕೆ ಬಿಜೆಪಿಯಲ್ಲಿಯೇ ಬ್ರೇಕ್‌ ಹಾಕುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಈ ಪ್ರಕರಣದಲ್ಲಿ ಇಕ್ಕಟ್ಟಿಗೆ ಸಿಲುಕುವಂತಾಗಿದ್ದು, ಜಾರಕಿಹೊಳಿ ಕುಟುಂಬಕ್ಕೆ ಪರ್ಯಾಯ ಅಧಿಕಾರ ಕಲ್ಪಿಸದಿದ್ದರೆ ಸರಕಾರ ಅಲುಗಾಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ವಲಸಿಗರ ನಾಯಕತ್ವ ವಹಿಸಿಕೊಂಡಿದ್ದ ಜಾರಕಿಹೊಳಿ ರಾಜ್ಯ ಬಿಜೆಪಿಯಲ್ಲಿ …

Read More »