Daily Archives: ಮಾರ್ಚ್ 5, 2021

‘ನನಗೆ ಯಾವ ನಿಂಬೆಹಣ್ಣೂ ಬೇಡ- ತಂದೆ ತಾಯಿ ಆಶೀರ್ವಾದ ಸಾಕು’- ಸಚಿವ ರೇವಣ್ಣ

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ತಾವು ಕಾರಣ ಅನ್ನೋ ಆರೋಪಕ್ಕೆ ಇಂದು ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಕೊಟ್ಟಿರುವ ಕೆಲಸವನ್ನು ನಾನು ಮಾಡ್ತಿದ್ದೇನೆ ಹೊರತು ಬೇರೆ ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಅಂತ ಹೇಳಿದರು. ಅಲ್ಲದೆ ತಮ್ಮ ಮೇಲೆ ದೈವ ಹಾಗೂ ತಂದೆ ತಾಯಿ ಆಶೀರ್ವಾದ ಇದೆ ಹೀಗಾಗಿ ನನಗೆ ಯಾವ ನಿಂಬೆಹಣ್ಣೂ ಬೇಡ ಅಂತ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ರೇವಣ್ಣ, ತಮ್ಮ ಮೇಲೆ ವಿನಾಃಕಾರಣ …

Read More »

ಜೆಡಿಎಸ್ ಸೇರುವುದಾಗಿ ಹೇಳಿಯೇ ಇಲ್ಲ: ಸಿ.ಎಂ. ಇಬ್ರಾಹಿಂ ಯು ಟರ್ನ್!

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡರಾದ ಸಿ.ಎಂ. ಇಬ್ರಾಹಿಂ ಅವರು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ ನಾನು ಜೆಡಿಎಸ್ ಸೇರುವುದಾಗಿ ಹೇಳಿಲ್ಲ ಎಂದು ಯು ಟರ್ನ್ ಹೊಡೆದಿದ್ದಾರೆ. “ಕುಮಾರಸ್ವಾಮಿ, ದೇವೆಗೌಡರ ಜೊತೆ ಚೆನ್ನಾಗಿದ್ದೇನೆ ಅದೆ ರೀತಿ ಬಿಜೆಪಿ ಪಕ್ಷದ ನಾಯಕರು ನನ್ನ ಸಹ ಜೊತೆ ಚೆನ್ನಾಗಿದ್ದಾರೆ” ಎಂದು ಹೇಳಿದರು. ಜೆಡಿಎಸ್ ಸೇರುವ ಸುದ್ದಿಯ ಬೆನ್ನಲ್ಲೇ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು …

Read More »

ನನಗೆ ಯುವತಿ ಪರಿಚಯವೇ ಇಲ್ಲ, ಯಾವುದೇ ಸಂಪರ್ಕವೂ ಇಲ್ಲ – ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ

ಬೆಂಗಳೂರು : ನನಗೆ ಯುವತಿ ಪರಿಚಯವೇ ಇಲ್ಲ, ಯಾವುದೇ ಸಂಪರ್ಕವೂ ಇಲ್ಲ. ನನಗೆ ಸಂತ್ರಸ್ತ ಯುವತಿಯ ಕುಟುಂಬದ ಸದಸ್ಯರೊಬ್ಬರು ಪರಿಚಯ. ಅವರೇ ನನಗೆ ಸಿಡಿ ಕೊಟ್ಟಿದ್ದಾಗಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ತಿಳಿಸಿದ್ದಾರೆ.   ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಸಂಬಂಧ ಇಂದು ವಿಚಾರಣೆಗೆ ದೂರುದಾರ ದಿನೇಶ್ ಕಲ್ಲಳ್ಳಿ ಹಾಜರಾದರು. ಇಂತಹ ಅವರನ್ನು ಡಿಸಿಪಿ ಅನುಚೇತ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಸತತ 4 ಗಂಟೆಗಳ …

Read More »

ಸಾರಿಗೆ ಸಂಸ್ಥೆಗೆ 4 ಸಾವಿರ ಕೋಟಿ ರೂಪಾಯಿಗಿಂತ ಹೆಚ್ಚು ನಷ್ಟ: ಡಿಸಿಎಂ ಲಕ್ಷ್ಮಣ್ ಸವದಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಸಾರಿಗೆ ಸಂಸ್ಥೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, 4 ಸಾವಿರ ಕೋಟಿ ರೂ ಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿಧಾನಪರಿಷತ್ ನಲ್ಲಿಂದು ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ನ ಕೆ.ಟಿ ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ 4 ಸಾರಿಗೆ ನಿಗಮಗಳಿಗೆ 4 ಸಾವಿರ ಕೋಟಿಗೂ ಅಧಿಕ ನಷ್ಟವಾಗಿದೆ. ಈ ಪೈಕಿ 2,980 ಕೋಟಿ ರೂ. ನಿವ್ವಳ ಆದಾಯವೇ …

Read More »

ಸ್ಯಾಟಲೈಟ್ ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಆದ್ಯತೆ :ಸಾರಿಗೆ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು : ರಾಜ್ಯದ ಬಸ್ ನಿಲ್ದಾಣಗಳಲ್ಲಿ ಮಹಿಳಾ ವಿಶ್ರಾಂತಿ ಗೃಹ ನಿರ್ಮಾಣ ಮತ್ತು ಸ್ಯಾಟಲೈಟ್ ಬಸ್ ನಿಲ್ದಾಣ ಸ್ಥಾಪನೆಗೆ ರಾಜ್ಯ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು. ವಿಧಾನಪರಿಷತ್​​ನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಶ್ರೀಕಂಠೇಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ 165 ಬಸ್ ನಿಲ್ದಾಣಗಳ ಪೈಕಿ 66 ನಿಲ್ದಾಣಗಳಲ್ಲಿ ಮಹಿಳಾ ವಿಶ್ರಾಂತಿ ಕೊಠಡಿ ಇಲ್ಲ. ಅಲ್ಲಿ ಆದಷ್ಟು ಬೇಗ ವಿಶ್ರಾಂತಿ ಗೃಹ ನಿರ್ಮಿಸಲಾಗುತ್ತದೆ ಎಂದರು. …

Read More »

ಡ್ರಗ್ಸ್​ ಪ್ರಕರಣ: ಬಿಗ್​ಬಾಸ್​​ ಸ್ಪರ್ಧಿ ಮಸ್ತಾನ್​ ಮನೆ ಮೇಲೆ ದಾಳಿ, ವಶಕ್ಕೆ

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರಲ್ಲಿ ಡ್ರಗ್ಸ್ ಪಾರ್ಟಿ‌ ಆಯೋಜಿಸಿ‌ ಉದ್ಯಮಿಗಳಿಬ್ಬರು ಸಿಕ್ಕಿಬಿದ್ದ ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ‌ ಬಿಗ್‌ಬಾಸ್ ರಿಯಾಲಿಟಿ ಶೋ ಸ್ಪರ್ಧಿ‌ ಮಸ್ತಾನ್ ಚಂದ್ರ ಮನೆ ಮೇಲೆ‌ ಪೊಲೀಸರು ಶುಕ್ರವಾರ ದಾಳಿ ಮಾಡಿದ್ದಾರೆ. ಬಾಣಸವಾಡಿ ಉಪವಿಭಾಗದ ಎಸಿಪಿ ನಿಂಗಪ್ಪ ಸಕ್ರಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸಂಜಯನಗರದಲ್ಲಿರುವ ಮನೆಯಲ್ಲಿ ಪರಿಶೀಲನೆ ನಡೆಸಿದ ಬಳಿಕ ಮಸ್ತಾನ್​ ಅವರನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆಗೆ ಕರೆದೊಯ್ದಿದ್ದಾರೆ. ಇತ್ತೀಚೆಗಷ್ಟೇ ಪ್ರಕರಣದಲ್ಲಿ ನೈಜೀರಿಯಾ ಪ್ರಜೆಯೊಬ್ಬನನ್ನು …

Read More »

ಶೀ‍ಘ್ರದಲ್ಲೇ ಕಡಿಮೆ ದರದ ‘ಜಿಯೋ’ ಲ್ಯಾಪ್ ಟಾಪ್ ಮಾರುಕಟ್ಟೆಗೆ ಲಗ್ಗೆ..!

ಟೆಲಿಕಾಂ ಮಾರುಕಟ್ಟೆಯಲ್ಲಿ ಪಾರುಪತ್ಯೆ ಮೆರೆದಿರುವ ರಿಲಯನ್ಸ್ ಜಿಯೋ ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ಕೋಟ್ಯಂತರ ಭಾರತೀಯರಿಗೆ ಕಡಿಮೆ ದರದ ಲ್ಯಾಪ್‍ಟಾಪ್ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. 2018ರಲ್ಲಿಯೇ ‘ಜಿಯೋ ಬುಕ್’ ಹೆಸರಿನ ಲ್ಯಾಪ್‍ಟಾಪ್ ಸಿದ್ಧಪಡಿಸಲು ಯೋಜನೆ ರೂಪಿಸಲಾಗಿತ್ತು. ಈ ವಿನೂತನ ಪ್ರಯೋಗಕ್ಕೆ 2019ರಲ್ಲಿ ಚಾಲನೆ ನೀಡಲಾಗಿತ್ತು. ಇದೀಗ ಅತೀ ಕಡಿಮೆ ದರದ ಲಾಪ್ ಟಾಪ್ ಜನರ ಕೈ ಸೇರುವ ಕಾಲ ಸನ್ನಿಹಿತವಾಗಿದೆ. ಸಿಮ್ ಕಾರ್ಡ್ ಸಪೋರ್ಟ್ : ಪ್ರಸ್ತುತ ಮಾರುಕಟ್ಟೆಯಲ್ಲಿರುವ …

Read More »

ವಿಚಾರಣೆ ಮುಗಿಸಿ ಹೊರಬಂದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ 4 ಗಂಟೆ ವಿಚಾರಣೆ ಮುಗಿಸಿ ಠಾಣೆಯಿಂದ ಹೊರ ಬಂದಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಂದ ದಿನೇಶ್ ಕಲ್ಲಹಳ್ಳಿ ವಿಚಾರಣೆ ಮುಕ್ತಾಯವಾಗಿದ್ದು ಹೊರಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಬಳಿ ಲಭ್ಯವಿರುವ ಮಾಹಿತಿಯನ್ನು ನೀಡಿದ್ದೇನೆ. ತನಿಖೆಗೆ ಬೇಕಾದ ಮಾಹಿತಿಯನ್ನು ನೀಡಿದ್ದೇನೆ. ಮುಚ್ಚಿದ ಲಕೋಟೆಯಲ್ಲಿ ಇದ್ದ ಸಿಡಿಯನ್ನು ನೀಡಿದ್ದೇನೆ. ಉಳಿದಂತೆ ಯಾವುದೇ ವಿಚಾರ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ ಎಂದು …

Read More »

ರಮೇಶ್ ಜಾರಕಿಹೊಳಿಯವರಿಂದ ತೆರವಾದ ಸ್ಥಾನವನ್ನ ಅವರ ಕುಟುಂಬಸ್ಥರಿಗೆ ಕೊಡಬೇಕು,: ಮಹೇಶ್ ಕುಮಟಳ್ಳಿ

ಬೆಂಗಳೂರು : ರಮೇಶ್ ಜಾರಕಿಹೊಳಿ ದೈವ ಭಕ್ತರು, ಆದ್ರೆ ಯಾಕೆ ಹೀಗೆ ಆಗಿದೆ ಗೊತ್ತಾಗ್ತಿಲ್ಲ ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿಕೆ ನೀಡಿದ್ದಾರೆ. ವಿಡಿಯೋದಲ್ಲಿನ ದೃಶ್ಯಾವಳಿಗಳನ್ನ ನೋಡಿದ್ರೆ ಎಲ್ಲೂ ಬಲತ್ಕಾರದ ರೀತಿ ಗೊತ್ತಾಗ್ತಿಲ್ಲ. ಇದು ಪ್ರೀ ಪ್ಲಾನ್ ಅನ್ನೋದು ಗೊತ್ತಾಗ್ತಿದೆ. ಸಿಡಿ ಫೇಕ್ ಆಗಿರಲಿ ಅಥವಾ ಅವರಿಬ್ಬರು ಪ್ರಬುದ್ಧರಿದ್ದು ನಡೆದಿದ್ದೇ ಇರಲಿ, ಅದು ಸ್ವಯಂ ಪ್ರೇರಣೆ ಅನ್ನೋದನ್ನ ನಾವೂ ಗಮನಿಸಿದ್ದೇವೆ. ಹೀಗಾಗಿ ಇದು ಹನಿಟ್ರ್ಯಾಪ್ ಎಂದು ಹೇಳಿದ್ದಾರೆ. ಇನ್ನು ರಮೇಶ್ …

Read More »

ಪ್ರಧಾನಿ ಮೋದಿ ದುರ್ಯೋಧನನಂತೆ’- ಪ್ರಿಯಾಂಕಾ ಗಾಂಧಿ ಟೀಕೆ

ಹರಿಯಾಣ :ಲೋಕಸಭೆ ಚುನಾವಣೆಗೆ ಇನ್ನೇನು ತೆರೆ ಬೀಳಲಿದೆ. ಆದ್ರೆ ಈ ಮಧ್ಯೆ ರಾಜಕೀಯ ನಾಯಕರು ತಮ್ಮ ನಾಲಿಗೆ ಮೇಲಿನ ಹಿಡಿತ ಕಳೆದುಕೊಳ್ತಿದ್ದಾರೆ. ಹರಿಯಾಣದ ಅಂಬಾಲಾದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡ್ತಿದ್ದ ವೇಳೆ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಯನ್ನ ದುರ್ಯೋಧನನಿಗೆ ಹೋಲಿಸಿದ್ದಾರೆ. ಭಾರತದ ನೆಲದಲ್ಲಿ ಅಹಂಕಾರದಿಂದ ನಡೆದುಕೊಳ್ಳೋ ವ್ಯಕ್ತಿಗಳಿಗೆ ಶಿಕ್ಷೆಯಾಗಿದೆ. ಮಹಾಭಾರತದಲ್ಲಿ ಅಹಂಕಾರದಿಂದ ನಡೆದುಕೊಂಡ ದುರ್ಯೋಧನ. ಆತ ಕೃಷ್ಣ ಸಂಧಾನಕ್ಕೆ ಬಂದರೂ ಒಪ್ಪಲಿಲ್ಲ, ಹೀಗಾಗಿ ನಾಶವಾಗಿ ಹೋದ. ಹೀಗೆ ಮೋದಿ …

Read More »