Breaking News
Home / 2021 / ಮಾರ್ಚ್ / 05 (page 2)

Daily Archives: ಮಾರ್ಚ್ 5, 2021

ಕೊರೊನಾ ತಂದಿಟ್ಟ ಸಂಕಷ್ಟ: ಮರದ ಕೆಳಗೆ ಬದುಕು ಕಂಡುಕೊಂಡ ಮಹಿಳೆ

ಸಿದ್ದಾಪುರ: ಅಪ್ಪ, ಅಮ್ಮ, ಪತಿ, ಕುಟುಂಬದ ಯಾರೂ ಇಲ್ಲ. ತಾನು ಓದದೇ ಇದ್ದರೂ, ತನ್ನ ಮಕ್ಕಳನ್ನು ಓದಿಸಬೇಕೆಂಬ ಛಲದಿಂದ ಜೀವನ ಸಾಗಿಸುತ್ತಿದ್ದ ಮಹಿಳೆಗೆ ಕೊರೊನಾ ಸಂಕಷ್ಟ ತಂದೊಡ್ಡಿದ್ದು, ಇದೀಗ ಗುಡಿಸಲಿನಲ್ಲಿ ವಾಸ ಮಾಡುವ ಸ್ಥಿತಿ ಬಂದಿದೆ. ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯಿತಿ ಸಮೀಪದ ತಟ್ಟಳ್ಳಿ ಹಾಡಿಯ ನಿವಾಸಿ ಸುನಿತ ಮದುವೆಯಾದ ಕೆಲವೇ ವರ್ಷಗಳಲ್ಲಿ ತನ್ನ ಪತಿಯನ್ನು ಕಳೆದುಕೊಂಡಿದ್ದರು. ಕುಟುಂಬವೂ ಸುನಿತಾರನ್ನು ಕೈಬಿಟ್ಟಾಗ ಅವರಿಗೆ ದಿಕ್ಕು ತೋಚದಾಗಿತ್ತು. ಮುದ್ದಾದ ಇಬ್ಬರು …

Read More »

ಕೋವಿಡ್ ಲಸಿಕೆ ಉಚಿತವಾಗಿ ವಿತರಿಸಿ: ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ‘ಕೋವಿಡ್ ಲಸಿಕೆ ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಬೇಕು’ ಎಂದು ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ದೇಶದಾದ್ಯಂತ ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿದೆ. ಆದರೆ ಜನಸಾಮಾನ್ಯರಿಗೆ ವಾಕ್ಸಿನ್ ದರ ನಿಗದಿ ಮಾಡಲಾಗಿದೆ. ವ್ಯಾಕ್ಸಿನ್‌ಗೆ ಹಣ ಪಡೆಯದೆ ಉಚಿತವಾಗಿ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ‘ಕೋವಿಡ್‌ನಿಂದ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಲಸಿಕೆ ನಿರೀಕ್ಷೆ ಹುಟ್ಟಿಸಿದೆ. ಆದರೆ, ಲಸಿಕೆ ವಿತರಣೆ ಅಭಿಯಾನ ನಿಧಾನಗತಿಯಲ್ಲಿ …

Read More »

ಸದ್ದಿಲ್ಲದೆ ಸೆಟ್ಟೇರಿದ ಶಿವಣ್ಣನ ‘ಭಜರಂಗಿ-2’..!

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಚಿತ್ರ ಇದೀಗ ಸೆಟ್ಟೇರಿದೆ. ಇಂದು ಚಿತ್ರದ ಮುಹೂರ್ತ ನೆರವೇರಿದ್ದು ಶೂಟಿಂಗ್ ಭರದಿಂದ ಸಾಗಲಿದೆ. ಯಡಿಯೂರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಶಿವಣ್ಣ ಮುಂದಿನ ಚಿತ್ರ ಭಜರಂಗಿ-2 ಮುಹೂರ್ತ ನೆರವೇರಿತು. ಭಜರಂಗಿ, ವಜ್ರಕಾಯ ನಂತರ ಮತ್ತೆ ಹರ್ಷ- ಶಿವಣ್ಣ ಜೋಡಿ ಒಂದಾಗಿದೆ. ಹರ್ಷ ನಿರ್ದೇಶನದ ಈ ಎರಡೂ ಚಿತ್ರಗಳು ಸೂಪರ್ ಹಿಟ್ ಆಗಿತ್ತು, ಇನ್ನು ಇದೀಗ ಸೆಟ್ಟೇರಿರೋ ಭಜರಂಗಿ-2 ಕೂಡ ಇವುಗಳಂತೆಯೇ …

Read More »

ಪೆಟ್ರೋಲ್-ಡೀಸೆಲ್‌ನಿಂದ ರಾಜ್ಯಕ್ಕೆ ₹12,342 ಕೋಟಿ ತೆರಿಗೆ

ಬೆಂಗಳೂರು: ‘ಡೀಸೆಲ್‌ ಮತ್ತು ಪೆಟ್ರೋಲ್‌ನಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನಲ್ಲಿ ಜನವರಿ ಅಂತ್ಯಕ್ಕೆ ₹12,432 ಕೋಟಿ ತೆರಿಗೆ ಬಂದಿದೆ’ ಎಂದು ರಾಜ್ಯ ಸರ್ಕಾರ ಹೇಳಿದೆ. ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್‌ನ ಪ್ರಕಾಶ್‌ ರಾಠೋಡ್‌ ಪ್ರಶ್ನೆ ಕೇಳಿದ್ದರು. ‘ದಕ್ಷಿಣದ ರಾಜ್ಯಗಳಿಗೆ ಹೋಲಿಸಿದಾಗ ಕೇರಳ ಬಿಟ್ಟು ಪೆಟ್ರೋಲ್‌, ಡೀಸೆಲ್‌ ಬೆಲೆ ನಮ್ಮ ರಾಜ್ಯದಲ್ಲಿಯೇ ಕಡಿಮೆ ಇದೆ. ಆದರೆ, ಈ ಮೂಲದಿಂದ ಕೇಂದ್ರ ಸರ್ಕಾರಕ್ಕೆ ಎಷ್ಟು ತೆರಿಗೆ ಬಂದಿದೆ ಎಂಬ ಮಾಹಿತಿ ಇಲ್ಲ’ ಎಂದು ಸಭಾ ನಾಯಕ …

Read More »

ಅಣ್ಣನ ಸಿಡಿ ಬಗ್ಗೆ ಮೌನ ಮುರಿದ ಸಹೋದರ ಲಖನ್ ಜಾರಕಿಹೊಳಿ ಹೇಳಿದ್ದೇನು?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೋರ್ಟ್​ ಆಚೆಗೆ ಸರಿ -ತಪ್ಪುಗಳ ವಾದ ಪ್ರತಿವಾದ ನಡೆದಿದ್ದು, ವಿರೋಧ ಪಕ್ಷಗಳಿಂದ ಸಿಡಿ ಪ್ರಕರಣಕ್ಕೆ ವಿರೋಧ ವ್ಯಕ್ತವಾದರೆ, ರಮೇಶ್ ಬೆಂಬಲಿಗರು ಇದು ನಕಲಿ ಎಂದು ರಸ್ತೆಗಿಳಿದಿದ್ದಾರೆ. ಇದೆಲ್ಲಾ ಒಂದು ತೂಕವಾದರೆ ರಮೇಶ್ ಜಾರಕಿಹೊಳಿ ಸಹೋದರರು ರಮೇಶ್ ಬೆನ್ನಿಗೆ ನಿಂತಿದ್ದಾರೆ ಎನ್ನುವುದು ವಿಶೇಷ. ರಮೇಶಣ್ಣ ಇದರಿಂದ ಗೆದ್ದು ಬರುತ್ತಾರೆ ಇದು ರಾಜಕೀಯ ಷಡ್ಯಂತ್ರ. ರಮೇಶ್​ರನ್ನು ರಾಜಕೀಯವಾಗಿ ಮುಗಿಸಲು ಈ …

Read More »

ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್‌ ನಡೆದಿದೆ:.ಕುಮಾರಸ್ವಾಮಿ ಆರೋಪ

ಮೈಸೂರು: ‘ನನಗೆ ಲಭಿಸಿರುವ ಮಾಹಿತಿ ಪ್ರಕಾರ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್‌ ನಡೆದಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು. ‘ಈ ಪ್ರಕರಣದ ಹಿಂದೆ ದೊಡ್ಡವರ ಕೈವಾಡವಿದೆ. ಸಂತ್ರಸ್ತೆ ಎಲ್ಲಿದ್ದಾಳೆ ಎಂಬುದನ್ನು ಹುಡುಕುವ ಬದಲು, ದೂರು ನೀಡಿದ ದಿನೇಶ್‌ ಕಲ್ಲಹಳ್ಳಿಯನ್ನು ಬಂಧಿಸಬೇಕು. ಇನ್ನಷ್ಟು ಸಿ.ಡಿಗಳಿವೆ ಎಂದು ಹೇಳುವ ಆತನನ್ನು ವಿಚಾರಣೆಗೆ ಒಳಪಡಿಸಿದರೆ ಇಡೀ ಪ್ರಕರಣದ ಸತ್ಯಾಂಶ ಹೊರಬರಲಿದೆ’ ಎಂದು ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮದವರಿಗೆ …

Read More »

ಎಸ್​ಟಿ ಸಮುದಾಯದಿಂದ ‘ನಾಟಕ ಬಿಡಿ, ಮೀಸಲಾತಿ ಕೊಡಿ’ ಅಭಿಯಾನ; ಕೊಟ್ಟ ಮಾತು ಉಳಿಸಿಕೊಳ್ಳುವಂತೆ ಸಿಎಂಗೆ ಆಗ್ರಹ

ಬೆಂಗಳೂರು(ಮಾ.5): ಪರಿಶಿಷ್ಟ ಪಂಗಡಕ್ಕೆ ಶೇ. 7.5 ಮೀಸಲಾತಿ ಘೋಷಣೆ ಮಾಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲಿ ಎಂದು ವಾಲ್ಮೀಕಿ ಸಮುದಾಯದ ಒಕ್ಕೂಟ ಅಭಿಯಾನ ಆರಂಭಿಸಿದೆ. ಸರ್ಕಾರ ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಆ ವರದಿ ಅನುಷ್ಠಾನಕ್ಕಾಗಿ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರವೇ ಸಂಪುಟ ಉಪಸಮಿತಿ ರಚಿಸಿತ್ತು. ಇದರಿಂದಾಗಿ ಮಾರ್ಚ್ 9ರೊಳಗೆ ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿ ಘೋಷಣೆ ಮಾಡುವುದಾಗಿ ಸ್ವತಃ …

Read More »

ಪಂಚಮಸಾಲಿ ಮೀಸಲಾತಿ ಹೋರಾಟ : ಸಮಾಜದ ಶಾಸಕರು ಸದನದ ಬಾವಿಗಿಳಿದು ಹೋರಾಟ ಮಾಡುವಂತೆ ಸ್ವಾಮೀಜಿ ಕರೆ

ಬೆಂಗಳೂರು : ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ಸಮಾಜದ ಶಾಸಕರು ಸದನದ ಬಾವಿಗಿಳಿದು ಹೋರಾಟ ಮಾಡುವಂತೆ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿಗಳು, ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಸಂಬಂಧಿಸಿದಂತೆ ಬಿಜೆಪಿ ಶಾಸಕ ಯತ್ನಾಳ್ ಗೆ ಸಮಾಜದ 22 ಶಾಸಕಕರು ಬೆಂಬಲ ನೀಡಬೇಕು. ಇಲ್ಲದಿದ್ದರೆ ನಾಳೆ ಸಮಾಜದ 22 ಶಾಸಕರನ್ನು ಜನರು ನಿರ್ಲಕ್ಷ್ಯ ಮಾಡುತ್ತಾರೆ.   …

Read More »

ತ್ರಿಸದಸ್ಯ ಸಮಿತಿ ರಚನೆ ಸ್ವಾಗತಾರ್ಹ: ತೋಂಟದ ಶ್ರೀ

ಗದಗ: ಹಿಂದುಳಿದ ಜನರಿಗೆ ಅವಕಾಶ ಕಲ್ಪಿಸುವ ಕೆಲಸವೇ ಸರ್ಕಾರದ ಮೂಲ ಉದ್ದೇಶ ಆಗಿರಬೇಕು ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯಪಟ್ಟರು. ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ವಿವಿಧ ಸಮುದಾಯಗಳು ಮೀಸಲಾತಿಯಲ್ಲಿ ಹೆಚ್ಚಿನ ಪಾಲು ಪಡೆಯಲು, ಪ್ರವರ್ಗಗಳಲ್ಲಿ ಬದಲಾವಣೆ ಮತ್ತು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಇಟ್ಟಿರುವ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಿದ್ದು ಸ್ವಾಗತಾರ್ಹ. ಸರ್ಕಾರ ಈ ಕೆಲಸವನ್ನು ನಾಲ್ಕು …

Read More »

ಮತ್ತೂಂದು ಸ್ಪೇಸ್‌ ಎಕ್ಸ್‌ ರಾಕೆಟ್‌ ಸ್ಫೋಟ

ಕ್ಯಾಲಿಫೋರ್ನಿಯಾ: ಅಮೆರಿಕದ ಪ್ರಸಿದ್ಧ ರಾಕೆಟ್‌ ನಿರ್ಮಾಣ ಸಂಸ್ಥೆ ಸ್ಪೇಸ್‌ ಎಕ್ಸ್‌ನ ಸ್ಟಾರ್‌ಶಿಪ್‌ ಪರೀಕ್ಷಾ ಮಾದರಿಯ ರಾಕೆಟ್‌, ಅತ್ಯುನ್ನತ ಎತ್ತರದ ಪರೀಕ್ಷಾ ಹಾರಾಟ ಮುಗಿಸಿ, ಲ್ಯಾಂಡ್‌ ಆಗುವ ವೇಳೆ ಸ್ಫೋಟಗೊಂಡಿದೆ. ಮುಂದಿನ ಪೀಳಿಗೆಯ ವಾಹನವಾದ “ಎಸ್‌ಎನ್‌- 10′ ರಾಕೆಟ್‌, ಟೆಕ್ಸಾಸ್‌ನ ಬೊಕಾ ಚಿಕಾ ಎಂಬಲ್ಲಿ ಸುರಕ್ಷಿತವಾಗಿಯೇ ಇಳಿದಿತ್ತು. ಆದರೆ ಕಾಂಕ್ರೀಟ್‌ ಲ್ಯಾಂಡಿಂಗ್‌ ಪ್ಯಾಡ್‌ ಮೇಲೆ ಇಳಿದ ಎಂಟೇ ನಿಮಿಷಗಳಲ್ಲಿ ಸ್ಫೋಟದಿಂದ ಛಿದ್ರವಾಗಿದೆ. ರ್ಯಾಪ್ಟರ್‌ ಎಂಜಿನ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದೇ ಸ್ಫೋಟಕ್ಕೆ ಕಾರಣ ಎಂದು …

Read More »