Breaking News

Daily Archives: ಮಾರ್ಚ್ 7, 2021

ದ್ವಾರಕೀಶ್ ಮನೆ 10 ಕೋಟಿಗೆ ಮಾರಾಟ: ಖರೀದಿಸಿದ ನಟ ಯಾರು ಗೊತ್ತಾ?

ಮತ್ತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನಟ, ನಿರ್ಮಾಪಕ ದ್ವಾರಕೀಶ್ ಬೆಂಗಳೂರಿನಲ್ಲಿನ ತಮ್ಮ ಮನೆಯನ್ನು ಮಾರಾಟ ಮಾಡಿದ್ದು, ನಟ, ನಿರ್ದೇಶಕ ರಿಷಭ್ ಶೆಟ್ಟಿ ಈ ಮನೆಯನ್ನು 10 ಕೋಟಿ ರೂ.ಗೆ ಖರೀದಿಸಿದ್ದಾರೆ. ಎಚ್ ಎಸ್ ಆರ್ ಲೇಔಟ್ ನ ತಮ್ಮ ಮನೆಯನ್ನು ದ್ವಾರಕೀಶ್ 10.5 ಕೋಟಿ ರೂ.ಗೆ ಮಾರಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ದ್ವಾರಕೀಶ್‌ ನಿರ್ಮಾಣದಲ್ಲಿ ಬಿಡುಗಡೆ ಆದ ಆಯುಷ್ಮಾನ್‌ಭವ ಚಿತ್ರ ದೊಡ್ಡ ಯಶಸ್ಸು ಕಾಣದ ಹಿನ್ನೆಲೆಯಲ್ಲಿ ದ್ವಾರಕೀಶ್‌ ಪುತ್ರ ಯೋಗಿ ಸಾಲದ …

Read More »

ಟೇಪ್ ನಲ್ಲಿರುವ ಮಹಿಳೆ ಆರ್ ಟಿ ನಗರದಲ್ಲಿರುವ ಮಹಿಳೆಯರ ವಸತಿ ಗೃಹದಲ್ಲಿದ್ದಳು: ಆದರೆ ಆಕೆ ಈಗ ಎಲ್ಲಿದ್ದಾಳೆ..?

ಬೆಂಗಳೂರು: ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ ಮಹಿಳೆ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸರು ಶೋಧ ನಡೆಸಿದ್ದಾರೆ. ಆದರೆ ಆ ಮಹಿಳೆಯ ಬಗ್ಗೆ ವಿವರಣೆ ಕೇಳಲು ಪೊಲೀಸರು ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ, ಆದರೆ ಅವರು ಯಾವುದೇ ಮಾಹಿತಿ ನೀಡಲಿಲ್ಲ. ಇದು ಯಾಕೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಇವರ ನಾಯಕನ ಜೊತೆಗಿನ ದೂರವಾಣಿ ಕರೆಗಳು, ಕಾಲ್ ರೆಕಾರ್ಡ್ ಮುಂತಾದವುಗಳ ಆಧಾರದ ಮೇಲೆ, ಸೆಕ್ಸ್ ಟೇಪ್ ನಲ್ಲಿರುವ ಮಹಿಳೆ …

Read More »

ಧ್ರುವ ಸರ್ಜಾ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ

ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದ್ಯ ಪೊಗರು ಸಿನಿಮಾದ ಸಕ್ಸಸ್ ನ ಸಂಭ್ರಮದಲ್ಲಿದ್ದಾರೆ. ಇತ್ತೀಚಿಗಷ್ಟೆ ಪೊಗರು ಸಿನಿಮಾ ರಿಲೀಸ್ ಆಗಿದ್ದು ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು ಮೂರ್ನಾಲ್ಕು ವರ್ಷಗಳಿಂದ ಪೊಗರು ಸಿನಿಮಾದಲ್ಲಿ ಬ್ಯುಸಿಯಾಗಿದ್ದ ಧ್ರುವ ಉದ್ದ ಕೂದಲು ಮತ್ತು ಗಡ್ಡ ಬಿಟ್ಟ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಚಿತ್ರೀಕರಣ ಮುಗಿಯುತ್ತಿದ್ದಂತೆ ಧ್ರುವ ಕೂದಲಿಗೆ ಕತ್ತರಿ ಹಾಕುವ ಮೂಲಕ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಧ್ರುವ …

Read More »

ಯುವರತ್ನ ಕ್ರೇಜ್: ‘ಇದು ಜಸ್ಟ್ ಬಿಗಿನಿಂಗ್, ಮುಂದೆ ನೀವೇ ನೋಡ್ತಿರಲ್ಲ’

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ಏಪ್ರಿಲ್ 1 ರಂದು ಬಿಡುಗಡೆಯಾಗುತ್ತಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ. ಯುವರತ್ನನ ಎಂಟ್ರಿಗೆ ನಾಲ್ಕು ವಾರ ಮಾತ್ರ ಬಾಕಿಯಿದ್ದು, ಅಪ್ಪು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಯುವರತ್ನ ಸದ್ಯದಲ್ಲೇ ಪ್ರಿ-ರಿಲೀಸ್ ಕಾರ್ಯಕ್ರಮ ಆಯೋಜನೆಯಾಗುತ್ತಿದೆ.   ರಿಲೀಸ್‌ಗೆ ಒಂದು ತಿಂಗಳ ಮುಂಚೆಯೇ ಅಭಿಮಾನಿಗಳು ಜಾತ್ರೆ …

Read More »

ಅಕ್ರಮ‌ ಚೀಟಿ ವ್ಯವಹಾರ ನಡೆಸಿ ಒಂದೂವರೆ ಕೋಟಿ ರೂ. ಗುಳುಂ ಮಾಡಿದ ಖತರ್ನಾಕ್ ದಂಪತಿ ಅರೆಸ್ಟ್

ನೆಲಮಂಗಲ(ಮಾ.07): ಬದುಕು ಕಟ್ಟಿಕೊಳ್ಳಲು ದೂರದೂರುಗಳಿಂದ ಬೆಂಗಳೂರಿಗೆ ಬಂದಿದ್ದವರು, ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿ ತಿಂಗಳಾದ್ರೆ ಮನೆ ಬಾಡಿಗೆ, ರೇಷನ್, ಮಕ್ಕಳ‌ ಸ್ಕೂಲ್​ ಫೀಸ್ ಎಲ್ಲಾ ಖರ್ಚು ಕಳೆದು ಉಳಿತಾಯಕ್ಕಾಗಿ ಚಾಚೂ ತಪ್ಪದೆ ಚೀಟಿ ಕಟ್ಟುತ್ತಿದ್ದರು. ಚೀಟಿ ಹಣ ಸಿಗುತ್ತೆ, ಇನ್ನೇನು ನಮ್ಮ ಬದುಕು ಹಸನಾಗುತ್ತೆ ಅಂತ ನಿಟ್ಟುಸಿರು ಬಿಡುವಷ್ಟರಲ್ಲಿ ಬದುಕು ಬೀದಿಗೆ ಬಂದು ನಿಂತಿದೆ. ಚೀಟಿಂಗ್ ದಂಪತಿ ಅರೆಸ್ಟ್: ದಿನಪೂರ್ತಿ ಗಾರ್ಮೆಂಟ್ಸ್‌ನಲ್ಲಿ‌ ಕೆಲಸ ಮಾಡುವ ಮಹಿಳೆಯರು ಸಂಜೆಯಾದ್ರೆ ಚೀಟಿ ವ್ಯವಹಾರ ಮಾಡುತ್ತಿದ್ದವರ …

Read More »

ಪಡೆದ ಸಾಲ ತೀರಿಸಲು ಆಗದ ಹಿನ್ನೆಲೆಯಲ್ಲಿ ಹೆತ್ತವರು ಹೆತ್ತ ಮಗುವನ್ನು ವೈದ್ಯ ದಂಪತಿಗೆ ಮಾರಾಟ

ಪಡೆದ ಸಾಲ ತೀರಿಸಲು ಆಗದ ಹಿನ್ನೆಲೆಯಲ್ಲಿ ಹೆತ್ತವರು ಹೆತ್ತ ಮಗುವನ್ನು ವೈದ್ಯ ದಂಪತಿಗೆ ಮಾರಾಟ ಮಾಡಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ರೂಪಾ ಮತ್ತು ಮೈನುದ್ದೀನ ದಂಪತಿ ತಮ್ಮ ಗಂಡು ಮಗುವನ್ನು ಸಾಲದ ಬದಲಾಗಿ ಭಾರತಿ ವಾಲ್ಮೀಕಿ ಅವರಿಗೆ ಮಾರಾಟ ಮಾಡಿದ್ದಾರೆ. ಆದರೆ ಇವರು ಉಡುಪಿ ಮೂಲದ ವೈದ್ಯ ದಂಪತಿಗೆ ಮಗು ಮಾರಾಟ ಮಾಡಿದ್ದು, ಈ ಘಟನೆಯ ಹಿಂದೆ ಮಗು ಮಾರಾಟ ಜಾಲದ ಕೈವಾಡ ಇರುವ ಶಂಕೆ ಇದೆ. ಭಾರತಿ …

Read More »

ಸಿಗ್ನಲ್ ಜಂಪ್ ಮಾಡಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬರು ಟ್ರಾಫಿಕ್ ಪೊಲೀಸ್ ಕೊರಳ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಗ್ನಲ್ ಜಂಪ್ ಮಾಡಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬರು ಟ್ರಾಫಿಕ್ ಪೊಲೀಸ್ ಕೊರಳ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಸಂಚಾರಿ ಎಸ್ ಎಸ್ ಐ ಬಸವಯ್ಯ ಎಂಬುವವರ ಮೇಲೆ ಉತ್ತರ ಪ್ರದೇಶ ಮೂಲದ ಮಹಿಳೆ ಹಲ್ಲೆ ನಡೆಸಿದ್ದು, ಮಹಿಳೆ ಅಪೂರ್ವಿ ವಿರುದ್ಧ ದೂರು ದಾಖಲಾಗಿದೆ. ಮೈಸೂರು ಬ್ಯಾಂಕ್ ಮಾರ್ಗವಾಗಿ ಆಗಮಿಸಿದ ಅಪೂರ್ವಿ, ಸಿಗ್ನಲ್ ಜಂಪ್ ಮಾಡಿ ಮುಂದೆ …

Read More »

ಪ್ರಸ್ತುತ ನಾವು ಧರ್ಮಸಂಕಟದಲ್ಲಿ ಇದ್ದೇವೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ದಿನೇ ದಿನೇ ಹೆಚ್ಚುತ್ತಲೇ ಇರುವ ತೈಲಗಳ ಬೆಲೆ ಕುರಿತು ದೇಶಾದ್ಯಂತ ಹಲವಾರು ಚರ್ಚೆಗಳು ಹಾಗೂ ವಿರೋಧಗಳು ವ್ಯಕ್ತವಾಗಿದ್ದು, ಇದೀಗ ಈ ಬಗ್ಗೆ ಮಾತನಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ಈ ವಿಷಯದಲ್ಲಿ ನಾವು ಧರ್ಮ ಸಂಕಟಕ್ಕೆ ಸಿಲುಕಿದ್ದೇವೆ’ ಎಂದು ಹೇಳಿದ್ದರು. ತೈಲ ಬೆಲೆ ಇಳಿಕೆ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮತ್ತೆ ಮಾತನಾಡಿರುವ ಸೀತಾರಾಮನ್ ಅವರು, ‘ಬೆಲೆ ಇಳಿಕೆ ವಿಚಾರದಲ್ಲಿ ಕೆಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಮುಕ್ತ ಚರ್ಚೆ …

Read More »

ಖ್ಯಾತ ನಟನ ಸೇರ್ಪಡೆಯಿಂದ ಹೈವೋಲ್ಟೇಜ್ ಬಂಗಾಳದಲ್ಲಿ ಬಿಜೆಪಿಗೆ ಹೆಚ್ಚಿದ ಬಲ

ಕೋಲ್ಕತ್ತಾ : ಇಂದು ಕೊಲ್ಕತ್ತಾದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯಲ್ಲಿ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ( 70 ) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷಕ್ಕೆ ಸೇರಿದ್ದು, ರಾಲಿಯಲ್ಲಿ ಬಿಜೆಪಿ ಪಕ್ಷದ ಧ್ವಜ ಹಾರಿಸುವ ಮೂಲಕ ತಮ್ಮ ಸೇರ್ಪಡೆಯನ್ನು ಸ್ಪಷ್ಟವಾಗಿ ಘೋಷಿಸುತ್ತಾರೆ. ಈ ಹಿಂದೆ ಸಿಪಿಎಂಗೆ ಆಪ್ತರಾಗಿದ್ದ ಮಿಥುನ್ , ಕೆಲಕಾಲ ಟಿಎಂಸಿ ಸಂಸದರಾಗಿ ಶಾರದಾ ಚಿಟ್‌ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ …

Read More »

ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆದ ಕಾರಣ ತಿಳಿದಿಲ್ಲ;: H.D.K.

ಕೋಲಾರ: ದಿನೇಶ್ ಕಲ್ಲಹಳ್ಳಿ ಯಾವ ಕಾರಣಕ್ಕಾಗಿ ದೂರು ಹಿಂಪಡೆದಿದ್ದಾರೆ ಎಂಬ ವಿಚಾರ ತಿಳಿದಿಲ್ಲ ಎಂದು ಕೋಲಾರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಸರ್ಕಾರಕ್ಕೆ ಜವಾಬ್ದಾರಿ ಇದೆ. ಸರ್ಕಾರವೇ ಈ ಪ್ರಕರಣದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬಹುದು. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಸಹ್ಯಕರ ಘಟನೆಗಳು‌ ನಡೆಯುತ್ತಿವೆ. ಸರ್ಕಾರವು ಗೌರವ‌ ಉಳಿಸಿಕೊಳ್ಳುವ‌ ನಿಟ್ಟಿನಲ್ಲಿ ಜನತೆಗೆ ವಿಶ್ವಾಸ ಮೂಡಿಸುವ‌ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. …

Read More »