Breaking News
Home / 2021 / ಮಾರ್ಚ್ / 08 (page 3)

Daily Archives: ಮಾರ್ಚ್ 8, 2021

Karnataka Budget 2021 | ಎಲ್ಲ ಜಿಲ್ಲೆಗಳಲ್ಲಿ ಗೋಶಾಲೆ: ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ಗೋ ಸಂಪತ್ತಿನ ರಕ್ಷಣೆಗಾಗಿ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ‘ದೇಶೀಯ ಪಶು ಸಂಪತ್ತಿನ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ದೇಶೀಯ ಗೋ ಸಂಪತ್ತಿನ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ತರಬೇತಿ ನೀಡಲು ಹೆಸರಘಟ್ಟದಲ್ಲಿ ಥೀಮ್ ಪಾರ್ಕ್ ಸ್ಥಾಪನೆ ಮಾಡಲಾಗುವುದು’ ಎಂದು ತಿಳಿಸಿದ್ದಾರೆ. ನಂದಿ ದುರ್ಗ ಮೇಕೆ ತಳಿಗಳನ್ನು ಅಭಿವೃದ್ಧಿಪಡಿಸಿ ಉತ್ಕೃಷ್ಟ ದರ್ಜೆಯ …

Read More »

Karnataka Budget 2021| ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ: 500 ಕೋಟಿ ಅನುದಾನ

ಬೆಂಗಳೂರು: ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. 2021-22ನೇ ಸಾಲಿನ ಅಯವ್ಯಯವನ್ನು ಸೋಮವಾರ ಮಂಡಿಸಿದ ಮುಖ್ಯಮಂತ್ರಿ ಈ ವಿಚಾರ ಘೋಷಣೆ ಮಾಡಿದರು. ‘ಲಿಂಗಾಯತ ಅಭಿವೃದ್ಧಿ ನಿಗಮವನ್ನು ಈಗಾಗಲೇ ಘೋಷಣೆ ಮಾಡಿ ₹500 ಅನುದಾನವನ್ನೂ ನಿಗದಿ ಮಾಡಲಾಗಿದೆ. ಅದರಂತೆಯೇ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ಸ್ಥಾಪಿಸಲಾಗುತ್ತಿದೆ. ಅದಕ್ಕಾಗಿ ₹500 ಕೋಟಿ ನೀಡಲಾಗುತ್ತಿದೆ,’ ಎಂದು ಘೋಷಿಸಿದರು. ಮುಖ್ಯಮಂತ್ರಿ ಈ ಘೋಷಣೆ ಮಾಡುತ್ತಲೇ ವಿಧಾನಸಭೆ ಸದಸ್ಯರು ಮೇಜು …

Read More »

ಮದ್ಯಪ್ರಿಯರಿಗೆ ಗುಡ್ ನ್ಯೂಸ್, ವಾಹನ ಸವಾರರಿಗೆ ನಿರಾಸೆ!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2021ನೇ ಸಾಲಿನ ಬಜೆಟ್ ನಲ್ಲಿ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದರೆ, ವಾಹನ ಸವಾರರಿಗೆ ನಿರಾಸೆ ಮೂಡಿಸಿದ್ದಾರೆ. ಸೋಮವಾರ ಬಜೆಟ್ ಮಂಡಿಸಿದ ಅಬಕಾರಿ ಸುಂಕ ಏರಿಕೆ ಮಾಡದೇ ಇರುವ ಪ್ರಸ್ತಾಪವನ್ನು ಮುಂದಿಟ್ಟರು. ಅಲ್ಲದೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದೇ ಇರುವುದಾಗಿ ಘೋಷಿಸಿದರು. ಕೊರೊನಾ ವೈರಸ್ ಮತ್ತು ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ಜನತೆಗೆ ರಾಜ್ಯ ಬಜೆಟ್ ನಲ್ಲಿ ನಿರಾಸೆ …

Read More »

ಅಪಾರ್ಟ್‍ಮೆಂಟ್‍ ಖರೀದಿಸುವವರಿಗೆ ಬಜೆಟ್ ನಲ್ಲಿ ಗುಡ್ ನ್ಯೂಸ್..!

ಬೆಂಗಳೂರು, ಮಾ.8- ರಿಯಲ್ ಎಸ್ಟೇಟ್ ಉದ್ಯಮವನ್ನು ಪ್ರೋತ್ಸಾಹಿಸುವ ಸಲುವಾಗಿ ಅಪಾರ್ಟ್‍ಮೆಂಟ್‍ಗಳ ಮೊದಲ ನೋಂದಣಿಗೆ ಮುದ್ರಾಂಕ ಶುಲ್ಕವನ್ನು ಶೇ.5ರಿಂದ 3ಕ್ಕೆ ಕಡಿಮೆ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮಧ್ಯಮವರ್ಗ ಕೈಗೆಟುಕುವ ಮನೆಗಳನ್ನು ಖರೀದಿಸಲು ಪ್ರೋತ್ಸಾಹಿಸುವ ಸಲುವಾಗಿ 35ರಿಂದ 45 ಲಕ್ಷಮೌಲ್ಯದೊಳಗಿನ ಅಪಾರ್ಟ್‍ಮೆಂಟ್‍ಗಳ ಖರೀದಿಯ ಮುದ್ರಾಂಕ ಶುಲ್ಕವನ್ನು ಕಡಿಮೆ ಮಾಡಲಾಗಿದೆ. ಕಳೆದ ವರ್ಷ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 12,665 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆಯ ಗುರಿ ನಿಗದಿಪಡಿಸಲಾಗಿತ್ತು. ಫೆಬ್ರವರಿ ಅಂತ್ಯಕ್ಕೆ 9014 …

Read More »

ಹೊಸ ತೆರಿಗೆ ಇಲ್ಲ, ಪೆಟ್ರೋಲ್ ತೆರಿಗೆ ಕಡಿತವೂ ಇಲ್ಲ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದ ಸಂಕಷ್ಟಕ್ಕೀಡಾಗಿರುವ ಜನತೆಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ವರ್ಷ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬಜೆಟ್‌ ಮಂಡನೆ ವೇಳೆ ಈ ವಿಚಾರ ಬಹಿರಂಗಪಡಿಸಿರುವ ಅವರು, ‘ಕೋವಿಡ್‌ನಿಂದಾಗಿ ಜನ ಈಗಾಗಲೇ ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗೆ ಮತ್ತಷ್ಟು ತೆರಿಗೆ ಹೊರೆ ವಿಧಿಸುವುದಿಲ್ಲ ಎಂದು ತಿಳಿಸಿದರು. ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸುತ್ತಿರುವ ಮಾರಾಟ ತೆರಿಗೆಯು ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲೇ …

Read More »

ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ:BSY

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. * ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ * ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ದಿದರದಲ್ಲಿ 2 ಕೋಟಿ ರೂ.ಸಾಲ * ಹಪ್ಪಳ, ಉಪ್ಪಿನಕಾಯಿ ತಯಾರಿಕೆಗೆ ಆನ್ ಲೈನ್ ನಲ್ಲಿ ಮಾರುಕಟ್ಟೆ ಒದಗಿಸಲು ಕ್ರಮ * ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗಾಗಿ ರಿಯಾಯಿತಿ ಪಾಸ್ …

Read More »

ಬಜೆಟ್ ಪ್ರಮುಖಾಂಶಗಳು:ಮಹದಾಯಿ ಯೋಜನೆಗೆ 1677 ಕೋಟಿ

ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸಿದವರಿಗೆ ಧನ್ಯವಾದ ಹೇಳಿದರು. ಡಿವಿಜಿಯವರ ಮಂಕುತಿಮ್ಮನ ಕಗ್ಗದ ಕಲ್ಲಾಗು ಬೆಟ್ಟದಡಿ ಮನದಿ ಮಲ್ಲಿಗೆಯಾಗು… ಸಾಲುಗಳನ್ನು ಸ್ಮರಿಸುತ್ತಾ ಆಯವ್ಯಯ ಮಂಡನೆ ಮಾಡಿದರು. ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಆರ್ಥಿಕ ವರ್ಷ ಮೊದಲ ಮೂರು ತಿಂಗಳು ರಾಜಸ್ವ ಸಂಗ್ರಹ ಇಳಿಕೆಯಾಗಿದೆ. ಆದರೆ ಈಗ ರಾಜ್ಯದಲ್ಲಿ ಅಹಾರ ಉತ್ಪಾದನೆಯಲ್ಲಿ ನೂತನ ದಾಖಲೆ ನಿರ್ಮಿಸಿರುವುದು ಸಂತಸದ ಸಂಗತಿ ಎಂದರು. ಕೊರೊನಾ …

Read More »

ಪಾಲಿಕೆ ಎದುರು ಭಗವಾ ಧ್ವಜ ಹಾರಿಸಲು ಯತ್ನ,ಎಂಈಎಸ್ ಕಾರ್ಯಕರ್ತೆಯರ ವಶಕ್ಕೆ

ಬೆಳಗಾವಿ- ಮಹಾನಗರ ಪಾಲಿಕೆಯ ಎದರು ಭಗವಾ ಧ್ವಜ ಹಾರಿಸಲು ಯತ್ನಿಸಿದ ಐವರು ಮಹಿಳಾ ಕಾರ್ಯಕರ್ತೆಯರನ್ನು ಪೋಲೀಸರು ವಶಕ್ಕೆ ಪಡೆದಿದಿದ್ದಾರೆ.     ಬೆಳಗಾವಿ ಮಹಾನಗರ ಪಾಲಿಕೆಯ ಎದರು ಕನ್ನಡಿಗರು ಕನ್ನಡ ಧ್ವಜ ಹಾರಿಸಿದ್ದನ್ನು ವಿರೋಧಿಸಿ,ಎಂಈಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿರುವಾಗ,ಇನ್ನೊಂದೆಡೆ ಮಹಿಳಾ ಕಾರ್ಯಕರ್ತೆಯರು ಪಾಲಿಕೆ ಎದರು ಭಗವಾ ಧ್ವಜ ಹಾರಿಸುವ ವಿಫಲ ಯತ್ನ ನಡೆಸಿದ್ದಾರೆ. ಸುಮಾರು ಐದು ಜನ ಮಹಿಳಾ ಕಾರ್ಯಕರ್ತೆ ಯರು …

Read More »

ಬಿಲ್ಲವರ ಸಮಾಜದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಸಮಾರಂಭ …

ಬೆಳಗಾವಿ: ಬಡಮಕ್ಕಳಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಸನ್ಮಾನ ಹಾಗೂ ಉನ್ನತ ಮಟ್ಟಕ್ಕೆ ಪ್ರೋತ್ಸಾಹ ನೀಡುತ್ತಿರುವ ಬಿಲ್ಲವರ ಸಮಾಜದ ಕಾರ್ಯ ಮೆಚ್ಚುಂವತದ್ದು, ಮಕ್ಕಳಿಗೆ ಶಿಕ್ಷಣ ಪ್ರಮುಖವಾಗಿದೆ. ಏಕಾಗ್ರತೆಯಿಂದ ಓದಿನತ್ತ ಗಮನ ಹರಿಸಿ ಸಮಾಜಮುಖಿ ಕಾರ್ಯಗಳನ್ನು ಮಾಡಬೇಕೆಂದು ಧಾರವಾಡ ೨ ನೇ ಜಿಲ್ಲಾ ಸತ್ರ ನ್ಯಾಯಾಧೀಶೆ ಪಂಚಾಕ್ಷರಿ ಎಮ್.ಸುವರ್ಣ ಹೇಳಿದರು. ಇಲ್ಲಿನ ಶಹಾಪುರ ವಿಜಯಲಕ್ಷ್ಮಿ ಸಭಾ ಭವನದಲ್ಲಿ ರವಿವಾರ ೭ ರಂದು ಬಿಲ್ಲವರ ಅಸೋಸಿಯೇಶನ್ ಸಂಘದಿಂದ ಆಯೋಜಿಸಿದ ಬಿಲ್ಲವರ ಸಂಘದ …

Read More »

ಪ್ರಿಯ ಸಹೋದರಿ..ನಿನ್ನ ನಡೆ ದೃಢವಾಗಿರಲಿ-ನುಡಿ ಸ್ಪಷ್ಟವಾಗಿರಲಿ

ಮಹಿಳೆಯ ಸ್ಥಿತಿಗತಿಯಲ್ಲಿ ಸುಧಾರಣೆಯಾಗಬೇಕಾದರೆ ಬದಲಾಗಬೇಕಾಗಿರುವುದು ತಲೆತಲಾಂತರಗಳಿಂದಲೂ ನಡೆದುಬಂದಿರುವಂತಹ ಆಚಾರ- ವಿಚಾರಗಳಲ್ಲಿ. ಇದನ್ನು ಬದಲಾವಣೆ ಮಾಡಬೇಕಾದರೆ ಬಹುಶಃ ಅದರಲ್ಲಿ ಮಹಿಳೆಯ ಪಾತ್ರವೇ ಹೆಚ್ಚಿರುತ್ತದೆ. ತಮ್ಮ ಮಕ್ಕಳಲ್ಲಿ ಉತ್ತಮ ಆಚಾರ-ವಿಚಾರಗಳನ್ನು ಮೈಗೂಡಿಸುವ ಕೆಲಸ ಮಹಿಳೆಯರೇ ನಿರ್ವಹಿಸುತ್ತಾರೆ ಮತ್ತು ಅದರಲ್ಲಿ ಅವರೇ ಹೆಚ್ಚು ಸಮರ್ಥರು ಎಂದಾದ ಮೇಲೆ ಬದಲಾವಣೆಯ ಹರಿಕಾರರೂ ಅವರೇ ಆಗಬಲ್ಲರು. ಮಹಿಳಾ ಸಮಾನತೆ, ಮಹಿಳಾ ವಾದ, ಮಹಿಳಾ ಸಶಕ್ತೀಕರಣ ಎಂಬ ಚರ್ಚೆಗಳು ಇಂದು ನಿನ್ನೆಯದಲ್ಲ. ಗೌತಮ ಬುದ್ಧ, ಬಸವಣ್ಣನವರ ಕಾಲದಿಂದಲೂ ಈ …

Read More »