Breaking News
Home / 2021 / ಮಾರ್ಚ್ / 08 (page 5)

Daily Archives: ಮಾರ್ಚ್ 8, 2021

ದೇಶದಲ್ಲಿ ಅತ್ತಿ ಕಲುಷಿತ ಪ್ರದೇಶಗಳ ಪಟ್ಟಿಯಲ್ಲಿ ದೆಹಲಿಗೆ ಮೊದಲ ಸ್ಥಾನ

ನವದೆಹಲಿ : ಪ್ರಪಂಚದಾದ್ಯಂತ ದಿನೇದಿನೇ ಕಲುಷಿತ ಹಾಗೂ ಮಾಲಿನ್ಯಗೊಂಡ ಪರಿಸರ ಹೆಚ್ಚಾಗುತ್ತಿದ್ದು, ಭಾರತದಲ್ಲಿಯೂ ಹಲವಾರು ನಗರಗಳಲ್ಲಿ ಇದು ಕಂಡುಬಂದಿದೆ. ಅಂತಹ ನಗರಗಳ ಪಟ್ಟಿಗೆ ಸೇರುವ ಭಾರತದ ಮೂರು ನಗರಗಳೆಂದರೆ ದೆಹಲಿ, ಯುಪಿ ಹಾಗೂ ಒಡಿಶಾ. ದೇಶದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 112 ಪ್ರದೇಶಗಳನ್ನು ಅತ್ಯಂತ ಕಲುಷಿತ ಪ್ರದೇಶಗಳೆಂದು ಗುರುತಿಸಲಾಗಿದ್ದು, ಅದರಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಮೊದಲ ಸ್ಥಾನ ಪಡೆದಿದ್ದು , ಯುಪಿ , ಒಡಿಶಾ ನಂತರದ ಸ್ಥಾನದಲ್ಲಿವೆ. ಅಂತೆಯೇ, …

Read More »

ವಿದ್ಯಾರ್ಥಿನಿ ಸಾವು; ಗರಗಪಳ್ಳಿಯಲ್ಲಿ ಪ್ರತಿಭಟನೆ

ಚಿಂಚೋಳಿ: ಕಲಬುರಗಿ ನಗರದ ಚಂದ್ರಕಾಂತ ಪಾಟೀಲ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಲ್ಲಿಕಾ ಹಣಮಂತರಾಯ ಹುಲಿ (17) ವಸತಿ ನಿಲಯದ ಮೇಲಿಂದ ಬಿದ್ದು ಮೃತಪಟ್ಟ ಘಟನೆಯನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ಗರಗಪಳ್ಳಿ ಗ್ರಾಮಸ್ಥರು ಚಿಂಚೋಳಿ-ತಾಂಡೂರ ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಕಳೆದ ಮಾರ್ಚ್‌ 4ರಂದು ವಿದ್ಯಾರ್ಥಿನಿ ವಸತಿ ನಿಲಯದ ಕಟ್ಟಡದ ಮೇಲಿಂದ ಬಿದ್ದಿದ್ದಳು. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಹೆದ್ರಾಬಾದ್‌ಗೆ …

Read More »

“ಲಂಚ ಕೇಳುವ ಅಧಿಕಾರಿಗಳಿಗೆ ಬಿದಿರು ಕೋಲಿನಿಂದ ತಲೆಮೇಲೆ ಬಾರಿಸಿ”

ಬೆಗುಸರಾಯ್, ಮಾ.7- ಲಂಚ ಕೇಳುವ ಅಧಿಕಾರಿಗಳಿಗೆ ಬಿದಿರು ಕೋಲಿನಿಂದ ಅವರ ತಲೆಗೆ ಬಾರಿಸಿ ನಿಮ್ಮ ಕೆಲಸ ಕಾರ್ಯ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಬೆಗುಸರಾಯ್ ಲೋಕಸಭಾ ಕ್ಷೇತ್ರದ ಜನರಿಗೆ ಕರೆ ನೀಡಿದ್ದಾರೆ. ಕೋದವಂಡಪುರ್‍ನಲ್ಲಿ ಆಯೋಜಿಸಲಾಗಿದ್ದ ಕೃಷಿ ಇಲಾಖೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿಯ ಫೈರ್ ಬ್ರಾಂಡ್ ಮಿನಿಸ್ಟರ್ ಎಂದೇ ಹೆಸರಾಗಿರುವ ಗಿರಿರಾಜ್ ಅವರು ನಿಮ್ಮ ಕೆಲಸ ಮಾಡಿಕೊಡಲು ಲಂಚ ಕೇಳುವ ಅಧಿಕಾರಿಗಳಿಗೆ ಯಾವುದೇ ಮುಲಾಜಿಲ್ಲದೆ ಬಿದಿರು …

Read More »

ಉಡುಪಿ ಪೇಜಾವರ ಮಠದಲ್ಲಿ ಬೆಂಕಿ ಅವಘಡ

ಉಡುಪಿ : ಉಡುಪಿಯ ಪೇಜಾವರ ಮಠದಲ್ಲಿ ಎಸಿಯ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಈ ಸಂದರ್ಭದಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ. ಈ ಅಗ್ನಿ ಅನಾಹುತ ವೇಳೆ ಪೇಜಾವರ ಶ್ರೀಗಳು ಮಠದಲ್ಲಿರಲಿಲ್ಲ . ಅಷ್ಟೇ ಅಲ್ಲದೆ, ಅವಘಡದಿಂದ ಮಠದ ಪೀಠೋಪಕರಣಗಳಿಗೆ ಹಾನಿಯಾಗಿಲ್ಲ ಎಂದೂ ತಿಳಿದುಬಂದಿದೆ . ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉಡುಪಿ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More »