Breaking News

Daily Archives: ಮಾರ್ಚ್ 12, 2021

ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಸ್ವಾಗತಾರ್ಹ. ಆದರೆ, ಯಾವುದೇ ಪ್ರಕರಣದಲ್ಲಾಗಲಿ ಎಸ್ಐಟಿ ವರದಿಯನ್ನಷ್ಟೇ ನೀಡುತ್ತದೆ. ಎಫ್ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ : ಸತೀಶ ಜಾರಕಿಹೊಳಿ

ಬೆಳಗಾವಿ: “ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಸ್ವಾಗತಾರ್ಹ. ಆದರೆ, ಯಾವುದೇ ಪ್ರಕರಣದಲ್ಲಾಗಲಿ ಎಸ್ಐಟಿ ವರದಿಯನ್ನಷ್ಟೇ ನೀಡುತ್ತದೆ. ಎಫ್ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ ನೀಡಲು ಸಾಧ್ಯ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಸ್ಐಟಿ ರಚನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೇರಿದಂತೆ ಕೆಲವು ಮುಖಂಡರು ವ್ಯಕ್ತಪಡಿಸಿರುವ ಅಭಿಪ್ರಾಯ ಸರಿ ಇದೆ” ಎಂದರು. “ಸಿಡಿ ಪ್ರಕರಣದಿಂದ ಜಾರಕಿಹೊಳಿ …

Read More »

ಆದಷ್ಟು ಬೇಗ ರಮೇಶ್ ಆರೋಪ ಮುಕ್ತರಾಗಿ ಹೊರ ಬರುತ್ತಾರೆ: ಮುರುಗೇಶ ನಿರಾಣಿ

ಧಾರವಾಡ : ರಮೇಶ್ ಜಾರಕಿಹೊಳಿ ಕುರಿತ ರಾಸಲೀಲೆ ವಿಡಿಯೋ ನಕಲಿ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ತನಿಖೆಗೂ ಸಹ ಸರ್ಕಾರ ಸೂಚಿಸಿದೆ. ಆದಷ್ಟು ಬೇಗ ರಮೇಶ್ ಆರೋಪ ಮುಕ್ತರಾಗಿ ಹೊರ ಬರುತ್ತಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆಗೆ ತನ್ನದೇ ಆದ ರೀತಿ, ನಿಯಮಗಳಿರುತ್ತವೆ ಆ ಪ್ರಕಾರ ತನಿಖೆ ನಡೆಸುತ್ತದೆ. ರಮೇಶ್ ಅವರು …

Read More »

ಸಿಡಿ ಪ್ರಕರಣ ಸಿಬಿಐ ತನಿಖೆ ಆಗಬೇಕಿತ್ತು : ಯತ್ನಾಳ್

ವಿಜಯಪುರ : ಜಾರಕಿಹೊಳಿ ಸಿಡಿ ಹಗರಣವನ್ನು ಎಸ್ ಐ ಟಿ ಬದಲಾಗಿ ಸಿಬಿಐ ತನಿಖೆಗೆ ವಹಿಸಬೇಕತ್ತು. ಸಿಬಿಐ ಸಂಸ್ಥೆ ಮೂಲಕ ತನಿಖೆ ನಡೆಸಿದ್ದರೆ ಅಧಿಕಾರಿಗಳ ಮೇಲೆ ಪ್ರಭಾವ ಬೀರಲಾಗುತ್ತಿರಲಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಂತ್ರಿಗಳಾಗಲು ಕೆಲವರು ಸಿನಿಮಾ ತಾರೆಯರನ್ನು ದೆಹಲಿಗೆ ಕರೆದೊಯ್ದಿದ್ದರು. ಅಂಥವರೆಲ್ಲ ಈಗ ಸಚಿವರಾಗಿದ್ದಾರೆ‌. ಹೀಗಾಗಿ ಇಡೀ ಸಿಡಿ ಹಗರಣದ ಸಮಗ್ರ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕು …

Read More »

ಪುಣೆಯಲ್ಲಿ ಮಾರ್ಚ್ 21 ರವರೆಗೆ ಶಾಲೆ ಬಂದ್ : ಮಹಾರಾಷ್ಟ್ರ ಸರ್ಕಾರ

ಪುಣೆ : ಕೊರೋನಾ ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ಹಲವೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ಪುಣೆಯಲ್ಲಿ ಮಾರ್ಚ್ 21 ರವರೆಗೆ ಶಾಲೆ ಬಂದ್ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿದೆ . ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೊರೋನಾ ಅಬ್ಬರ ತಡೆಯುವ ನಿಟ್ಟಿನಲ್ಲಿ ಶಾಲೆ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ . ಮುಂದಿನ ಪರಿಸ್ಥಿತಿಯನ್ನ ಅವಲೋಕಿಸಿ ಶಾಲೆಗಳನ್ನ ಪುನರಾಂಭಿಸಬೇಕೆ ಅಥವಾ ಬಂದ್ …

Read More »

ಸಿಡಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಖಡಕ್ ಅಧಿಕಾರಿಗಳನ್ನು ಹೊಂದಿರುವ ತಂಡ ರಚನೆ

ಬೆಂಗಳೂರು, ಮಾರ್ಚ್‌ 12: ಬೆಳಗಾವಿ ಸಾಹುಕಾರ್ ರಮೇಶ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಖಡಕ್ ಅಧಿಕಾರಿಗಳನ್ನು ಹೊಂದಿರುವ ತಂಡ ರಚನೆಯಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಅವರ ಮಾರ್ಗದರ್ಶನದಲ್ಲಿ ಸಿಡಿ ಪ್ರಕರಣದ ತನಿಖೆ ನಡೆಸಲಿದ್ದಾರೆ. ಇನ್ನೂ ಕೇವಲ ತನಿಖೆ ನಡೆಸಿ ವರದಿ ಸಲ್ಲಿಸುವ ವಿಚಾರವಾಗಿ ಈ ತಂಡವನ್ನು ರಚನೆ ಮಾಡಲಾಗಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಆದೇಶದ ಹಿನ್ನೆಲೆಯಲ್ಲಿ ಇದೀಗ ಪೂರ್ಣ ಪ್ರಮಾಣದ …

Read More »

ಕೊಲ್ಹಾಪುರದಲ್ಲಿ ಕನ್ನಡ ನಾಮಫಲಕಗಳಿಗೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದ ಪ್ರಕರಣಕ್ಕೆ ಕರವೇ ಕಾರ್ಯಕರ್ತರ ತಿರುಗೇಟು

ಬೆಳಗಾವಿ: ಕೊಲ್ಹಾಪುರದಲ್ಲಿ ಕನ್ನಡ ನಾಮಫಲಕಗಳಿಗೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದ ಪ್ರಕರಣಕ್ಕೆ ಕರವೇ ಕಾರ್ಯಕರ್ತರು ತಿರುಗೇಟು ನೀಡಿದ್ದು, ಬೆಳಗಾವಿಯಲ್ಲಿ ಮರಾಠಿ ನಾಮಫಲಕಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಹೊರವಲಯದ ಗಾಂವಕರಿ ಹೋಟೆಲ್, ಡಾಬಾ, ಅಂಗಡಿ ಮುಂಗಟ್ಟುಗಳ ಮೇಲೆ ಹಾಕಿದ್ದ ಮರಾಠಿ ನಾಮಫಲಕಗಳಿಗೆ ಮಸಿ ಬಳಿದು, ಕೆಲ ನಾಮಫಲಕಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಶಿವಸೇನೆ ನಾಯಕನ ವಿರುದ್ಧ …

Read More »

ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಬಹುದೇ? ಸುಧಾಕರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ, ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ಅಂತಹ ಪರಿಸ್ಥಿತಿ ಬಾರದಿರಲಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ಆ ಪರಿಸ್ಥಿತಿ ಬಾರದಂತೆ ಸಿಎಂ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ. ಜಿಲ್ಲಾಡಳಿತಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಹೆಚ್ಚಿನ ಲಸಿಕೆ …

Read More »

ಬಿಎಸ್ ವೈ ಮುಕ್ತ ಬಿಜೆಪಿ ಸಿದ್ಧತೆ ಜೋರಾಗಿದೆ: ಕಾಂಗ್ರೆಸ್

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಗುರುವಾರ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ಪದವಿ ಮುಂದಿರುವ ಉಪ ಹೋಗಿ ಆದಷ್ಟು ಬೇಗ ಮುಖ್ಯಮಂತ್ರಿಯಾಗಲಿ ಎಂಬ ಅಭಿಲಾಷೆ ವ್ಯಕ್ತಪಡಿಸಿದ್ದರು. ಈ ಹೇಳಿಕೆಯನ್ನೇ ದಾಳವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್, ಬಿಎಸ್ ಯಡಿಯೂರಪ್ಪ ಮುಕ್ತ ಬಿಜೆಪಿ ಸಿದ್ಧತೆ ಜೋರಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ …

Read More »

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಐವರು ಎಸ್ ಐಟಿ ವಶಕ್ಕೆ!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡ(ಎಸ್‌ಐಟಿ) ಶಂಕಿತ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಗೆ ಸಿಡಿ ನೀಡಿದ ಆರೋಪದಡಿ ಓರ್ವ ಯುವಕನನ್ನು ಸಿಐಡಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಎಸ್.ಐ.ಟಿ ಮೂಲಗಳು ತಿಳಿಸಿವೆ. ಐವರ ಕಾಲ್ ರೆಕಾರ್ಡ್ ಆಧಾರದ ಮೇಲೆ ಬೆಂಗಳೂರಿನ ಯಶವಂತಪುರದ ಓರ್ವ, ಚಾಮರಾಜಪೇಟೆಯಲ್ಲಿ ಒಬ್ಬ, ವಿಜಯನಗರದಲ್ಲಿ …

Read More »

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಮೊದಲ ದಿನವೇ ನಾಲ್ವರು ಆರೋಪಿಗಳನ್ನು ವಶಕ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಮೊದಲ ದಿನವೇ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ. ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಯುವಕರು ಹಾಗೂ ಓರ್ವ ಯುವತಿ ಸೇರಿದಂತೆ ಒಟ್ಟು ನಾಲ್ವರನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ವಿಜಯನಗರ ಹಾಗೂ ಚಾಮರಾಜಪೇಟೆಯಲ್ಲಿ ರೂಂ ಮಾಡಿಕೊಂಡಿದ್ದ ಇಬ್ಬರು ಯುವಕರು ಹಾಗೂ ಚಿಕ್ಕಮಗಳೂರಿನ …

Read More »