Daily Archives: ಮಾರ್ಚ್ 14, 2021

ಪಕ್ಕಾ ಸಸ್ಯಾಹಾರಿ ಮಹಿಳೆಯೊಬ್ಬರಿಗೆ ಚಿಕನ್​ ಪಿಜ್ಜಾ ಪಾರ್ಸೆಲ್​ ಕಳುಹಿಸಿ ಇದೀಗ ಒಂದು ಕೋಟಿ ರೂಪಾಯಿ ಪರಿಹಾರವನ್ನು ಪಿಜ್ಜಾ ಕಂಪೆನಿ ತಲೆ ಮೇಲೆ ಹಾಕಿಕೊಂಡಿದೆ.

ಗಾಜಿಯಾಬಾದ್ (ಉತ್ತರ ಪ್ರದೇಶ): ಪಕ್ಕಾ ಸಸ್ಯಾಹಾರಿ ಮಹಿಳೆಯೊಬ್ಬರಿಗೆ ಚಿಕನ್​ ಪಿಜ್ಜಾ ಪಾರ್ಸೆಲ್​ ಕಳುಹಿಸಿ ಇದೀಗ ಒಂದು ಕೋಟಿ ರೂಪಾಯಿ ಪರಿಹಾರವನ್ನು ಪಿಜ್ಜಾ ಕಂಪೆನಿ ತಲೆ ಮೇಲೆ ಹಾಕಿಕೊಂಡಿದೆ. ಮನೆಗೆ ಬಂದ ಪಾರ್ಸೆಲ್​ ನೋಡಿ ವೆಜ್​ ಪಿಜ್ಜಾ ಬಂತೆಂದು ತಿಳಿದು ಚಿಕನ್​ ತಿಂದ ಮಹಿಳೆ ಗರಂ ಆಗಿದ್ದು, ಪಿಜ್ಜಾ ಕಂಪೆನಿ ವಿರುದ್ಧ ಒಂದು ಕೋಟಿ ರೂಪಾಯಿ ಪರಿಹಾರಕ್ಕೆ ದಾವೆ ಹೂಡಿದ್ದಾರೆ. ಅಷ್ಟೊಂದು ಪರಿಹಾರವನ್ನು ನೀಡಲು ಕೋರ್ಟ್​ ಆದೇಶ ಮಾಡದೇ ಹೋದರೂ, ಪಿಜ್ಜಾ …

Read More »

ಬೆಂಗಳೂರಿನಿಂದ ಹೊರಟ ಐಷಾರಾಮಿ ಗೋಲ್ಡನ್ ಚಾರಿಯಟ್ ರೈಲು

ಬೆಂಗಳೂರು, ಮಾರ್ಚ್ 14; ಐಷಾರಾಮಿ ಪ್ರವಾಸಿ ರೈಲು ಗೋಲ್ಡನ್ ಚಾರಿಯಟ್ ಬೆಂಗಳೂರು ನಗರದಿಂದ ಸಂಚಾರ ಆರಂಭಿಸಿದೆ. ಐಆರ್‌ಸಿಟಿಸಿ ರೈಲು ನಿರ್ವಹಣೆ ಮಾಡುವ ಜವಾಬ್ದಾರಿ ಹೊತ್ತಿದ್ದು, ಮೊದಲ ಬಾರಿಗೆ ಸಂಚಾರವನ್ನು ಪ್ರಾರಂಭಿಸಲಾಗಿದೆ. ಭಾನುವಾರ ಯಶವಂತಪುರ ರೈಲು ನಿಲ್ದಾಣದಿಂದ ಗೋಲ್ಡನ್ ಚಾರಿಯಟ್ ರೈಲು ಸಂಚಾರ ಆರಂಭವಾಯಿತು. ‘ಪ್ರೈಡ್ ಆಫ್ ಕರ್ನಾಟಕ’ ಪ್ಯಾಕೇಜ್ ಪ್ರವಾಸಕ್ಕೆ ಇಂದು ಚಾಲನೆ ನೀಡಲಾಗಿದೆ.   ರೈಲು ನಿಲ್ದಾಣದಲ್ಲಿ ಗೋಲ್ಡನ್ ಚಾರಿಯಟ್ ರೈಲು ಸಿಬ್ಬಂದಿಗಳು ಪ್ರವಾಸಿಗರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬೇಸಿಗೆ …

Read More »

ಶಾಕಿಂಗ್‌ ನ್ಯೂಸ್‌ : ಬೆಳಗಾವಿಯಲ್ಲಿ ಒಂದೇ ಕುಟುಂಬದ 19 ಮಂದಿಗೆ ಕರೋನ ಸೊಂಕು.!

ಬೆಳಗಾವಿ : ಒಂದೇ ಕುಟುಂಬದ 19 ಮಂದಿಗೆ ಕರೋನ ಸೊಂಕು ಕಂಡು ಬಂದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ, ರಾಯಭಾಗ ತಾಲೂಕಿನ ಸೌಂದತ್ತಿ ಗ್ರಾಮದ ಒಂದೇ ಕುಟುಂಬದ 19 ಮಂದಿಗೆ ಕರೋನ ಸೊಂಕು ಈಡಾಗಿದ್ದಾರೆ ಎನ್ನಲಾಗಿದ್ದು, ಮಹಾರಾಷ್ಟ್ರದಲ್ಲಿ ನಡೆದ ಸಂಬಂಧರಿಕರ ಕಾರ್ಯಕ್ರಮವೊಂದರಲ್ಲಿ ಈ ಕುಟಂಬ ಭಾಗವಹಿಸಿ ವಾಪಸ್ಸು ತಮ್ಮೂರಿಗೆ ಬಂದಿತ್ತು, ಈ ವೇಳೆ ಅವರಿಗೆ ಕರೋನ ಟೆಸ್ಟ್‌ ಮಾಡಿಸಲಾಗಿದೆ. ನಿನ್ನೆ ಕುಟಂಬದ ಐವರಿಗೆ ಕರೋನ ಸೊಂಕು ಇರೋದು ದೃಡಪಟ್ಟಿದ್ದು, ಇಂದು …

Read More »

ಯುವತಿಯ ಮೊದಲ ವಿಡಿಯೋದಲ್ಲಿ ಬೀದರ್ ಭಾಷೆ ಇದೆ. ನಿನ್ನೆ ಬಿಡುಗಡೆಯಾದ ವಿಡಿಯೋದಲ್ಲಿ ಸುಪೀರಿಯರ್ ಕನ್ನಡ ಭಾಷೆ ಇದೆ.: ಪ್ರಕರಣ ಪಕ್ಕಾ ಪ್ಲಾನ್ ಯತ್ನಾಳ್

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ರಾಜಕೀಯವಾಗಿ ಮುಗಿಸುವ ನಿಟ್ಟಿನಲ್ಲಿ ವ್ಯವಸ್ಥಿತ ಸಂಚು ನಡೆದಿದೆ. ಸಿಡಿ ಪ್ರಕರಣದ ಮೂಲಕ ಅವರನ್ನು ಹಣಿಸಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಉನ್ನತ ನಾಯಕರಿದ್ದಾರೆ. ಈ ಇಬ್ಬರು ನಾಯಕರಿಂದಲೇ ಸಿಡಿ ಷಡ್ಯಂತ್ರ ನಡೆದಿದೆ. ಇನ್ನು ಯುವತಿಯ ಮೊದಲ ವಿಡಿಯೋದಲ್ಲಿ ಬೀದರ್ ಭಾಷೆ ಇದೆ. ನಿನ್ನೆ ಬಿಡುಗಡೆಯಾದ ವಿಡಿಯೋದಲ್ಲಿ …

Read More »

ಡಿಕೆಶಿ ಅವರೇ ಸಿಡಿ ಕೇಸ್ ನಲ್ಲಿ ಸಿಲುಕಿಸಿಕೊಂಡ್ರಾ..? ‘ಮಹಾನ್ ನಾಯಕ’ನ H.D.K ಹೊಸ ಬಾಂಬ್

ಮೈಸೂರು: ‘ಅನುಭವಿ ರಾಜಕಾರಣಿ ಡಿ.ಕೆ. ಶಿವಕುಮಾರ್ ಸಿಡಿ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲಾಗ್ತಿದೆ ಎಂದು ಏಕೆ ಹೇಳಿದ್ದಾರೋ ಗೊತ್ತಿಲ್ಲ.’ ಹೀಗೆಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ನನಗಿಂತ ಪ್ರಬುದ್ಧ ರಾಜಕಾರಣಿ. ದುಡುಕಿ ಯಾಕೆ ಈ ರೀತಿ ಅವರು ತಮ್ಮ ಹೆಸರನ್ನು ಹೇಳಿಕೊಂಡಿದ್ದಾರೆಯೋ ಗೊತ್ತಿಲ್ಲ. ರಾಜ್ಯದಲ್ಲಿ ಮಹಾನ್ ನಾಯಕರು ಬಹಳ ಜನ ಇದ್ದಾರೆ. ಇವರೇ ಮಹಾನಾಯಕ ಎಂದು ಏಕೆ ಅಂದುಕೊಂಡಿದ್ದಾರೆ. ಬಿಜೆಪಿ ಒಳಗೊಬ್ಬ ಮಹಾನಾಯಕರು ಬೆಳೆಯುತ್ತಿದ್ದಾರೆ ಎಂದು ಹೇಳಿದ್ದಾರೆ. …

Read More »

ಸೆಕ್ಸ್ ಸಿಡಿ ಪ್ರಕರಣ: ಮನೆಯ ಬಾಗಿಲಿಗೆ ಅಂಟಿಸಿದ ನೋಟಿಸ್..!

ವಿಜಯಪುರ: ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೀಡಿರುವ ನೋಟಿಸ್ ಅನ್ನು ಸಂತ್ರಸ್ತೆಯ ತಾಯಿಯ ತವರು ಮನೆಯ ಬಾಗಿಲಿಗೆ ಅಂಟಿಸಿದ್ದಾರೆ. ದಿನೇಶ್ ಕಲ್ಲಹಳ್ಳಿ ದಾಖಲಿಸಿದ್ದ ದೂರಿನ ವಿಚಾರಣೆ ಚಾಲ್ತಿಯಲಿದ್ದು, ಈ ಬಗ್ಗೆ ನಿಮ್ಮ ಹೇಳಿಕೆ ಪಡೆಯಬೇಕಾಗಿರುವುದರಿಂದ ನೋಟಿಸ್ ನೋಡಿದ ಕೂಡಲೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿರುವ ಪೊಲೀಸ್ ಅಧಿಕಾರಿ ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಸೂಚಿಸಲಾಗಿದೆ. ಮನೆಗೆ …

Read More »

ಆ ಯುವತಿ ವಿಡಿಯೋದಲ್ಲಿ ಹೇಳಿಕೆ ನೀಡಿದ್ರೆ ಸಾಲದು; ಸತೀಶ್ ಜಾರಕಿಹೊಳಿ

ಬೆಳಗಾವಿ : ಆ ಯುವತಿ ವಿಡಿಯೋದಲ್ಲಿ ಹೇಳಿಕೆ ನೀಡಿದರೆ ಸಾಲದು, ಅಧಿಕೃತವಾಗಿ ಮುಂದೆ ಬಂದು ತನಗಾದ ಅನ್ಯಾಯದ ಬಗ್ಗೆ ಹೇಳಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿಡಿ ಪ್ರಕರಣದ ಕುರಿತು ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಗೆ ಮುಂದೆ ಬಂದು ಹೇಳಿದ್ದಾರೋ ಹಾಗೆಯೇ ಆ ಯುವತಿ ಕೂಡ ಮುಂದೆ ಬಂದು ತನಗಾದ ಅನ್ಯಾಯದ ಬಗ್ಗೆ ಹೇಳಿಕೊಳ್ಳಬೇಕು ಆಗ ಮಾತ್ರ …

Read More »

ಮಾರ್ಚ್ 15ರಿಂದ ಮಾರ್ಚ್ 30ರವರೆಗೆ ರಜೆ ಘೋಷಿಸಲಾಗಿದೆ ಎಂಬ ಸುತ್ತೋಲೆ ಹರಿದಾಡುತ್ತಿದೆ. ಆದರೆ ಇದೊಂದು ನಕಲಿ ಸುತ್ತೋಲೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕಾಲೇಜುಗಳಿಗೆ ಮಾರ್ಚ್ 15ರಿಂದ ಮಾರ್ಚ್ 30ರವರೆಗೆ ರಜೆ ಘೋಷಿಸಲಾಗಿದೆ ಎಂಬ ಸುತ್ತೋಲೆ ಹರಿದಾಡುತ್ತಿದೆ. ಆದರೆ ಇದೊಂದು ನಕಲಿ ಸುತ್ತೋಲೆಯಾಗಿದ್ದು, ರಜೆ ಘೋಷಣೆ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಯಾರೋ ಕಿಡಿಗೇಡಿಗಳು ಸರ್ಕಾರದ ಆದೇಶ ಪ್ರತಿಯನ್ನು ನಕಲಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ಮುಂಜಾಗೃತಾ ಕ್ರಮವಾಗಿ ಎಲ್ಲಾ ಸರ್ಕಾರಿ ಹಾಗೂ …

Read More »

ಲವರ್​ ಜತೆ ಮದುವೆಗೆ ಸಿದ್ಧಳಾಗಿದ್ದ ಸಿಡಿ ಲೇಡಿ: ಉತ್ತರ ಕರ್ನಾಟಕದ ಇಂಜಿನಿಯರಿಂಗ್​ ಯುವತಿಯ ಸ್ಟೋರಿ ಇದು.

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿಯ ಸಿ.ಡಿ ಕೇಸ್​ ಕ್ಷಣಕ್ಷಣಕ್ಕೂ ಕುತೂಹಲದ ತಿರುವು ಪಡೆದುಕೊಳ್ಳುತ್ತಿದೆ. ಇದಾಗಲೇ ಕೆಲವರನ್ನು ವಿಶೇಷ ತನಿಖಾ ತಂಡದ (ಎಸ್​ಐಟಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, ಇನ್ನು ಕೆಲವರಿಗಾಗಿ ಜಾಲ ಬೀಸಿದ್ದಾರೆ. ಈ ನಡುವೆಯೇ ಸಿ.ಡಿಯಲ್ಲಿ ಇರುವ ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿಗೂ ತನಿಖಾಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದಾರೆ. ಘಟನೆಯ ನಂತರದ ಬೆಳವಣಿಗೆಗಳ ಬಳಿಕ ಕಾಣೆಯಾಗಿದ್ದ ಯುವತಿ, ಕೊನೆಗೂ ಸಿಕ್ಕಿದ್ದು, ಆಕೆಯನ್ನು ವಿಚಾರಣೆ ಮಾಡುವ ಸಲುವಾಗಿ ನೋಟಿಸ್​ ಜಾರಿಗೊಳಿಸಲಾಗಿದೆ. …

Read More »

ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಆರೋಪಿಗಳು ಪ್ಲಾನ್ ಮಾಡಿದ್ದರೆಂಬ ವಿಷಯ ಇದೀಗ ಬಹಿರಂಗವಾಗಿದೆ.

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಸುದ್ದಿಗಳು ಹೊರಬರುತ್ತಲೇ ಇದೆ. ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಆರೋಪಿಗಳು ಪ್ಲಾನ್ ಮಾಡಿದ್ದರೆಂಬ ವಿಷಯ ಇದೀಗ ಬಹಿರಂಗವಾಗಿದೆ. ಸಿಡಿ ಪ್ರಕರಣದ ಕಿಂಗ್ ಪಿನ್ ಪತ್ರಕರ್ತ, ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನ ನಡೆಸಲು ಯೋಜನೆ ರೂಪಿಸಿದ್ದ. ಡೀಲ್ ದುಡ್ಡಲ್ಲಿ ಜಾತ್ರೆ ನಡೆಸಲು ಕೂಡ ಸಿದ್ಧತೆ ನಡೆಸಿದ್ದ ಎನ್ನಲಾಗಿದೆ.   ಮಹಿಂದ್ರಾ ಕಂಪನಿಯ ಎರಡು ಕಾರ್ ಖರೀದಿಸಲು ಮುಂದಾಗಿದ್ದ ಆತ …

Read More »