Breaking News
Home / 2021 / ಮಾರ್ಚ್ / 14 (page 3)

Daily Archives: ಮಾರ್ಚ್ 14, 2021

ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಒಲವು ತಮ್ಮದಾಗಿದೆ : ಬಸವರಾಜ ಹೊರಟ್ಟಿ

ಹುಬ್ಬಳ್ಳಿ : ಎರಡು ಕಡೆ ವಿಧಾನಮಂಡಲ ಅಧಿವೇಶನ ನಡೆಸುತ್ತಿರುವ ನಿಟ್ಟಿನಲ್ಲಿ ಈ ಕುರಿತು ಸ್ಪೀಕರ್ ಅವರೊಂದಿಗೆ ಚರ್ಚಿಸುವುದಾಗಿ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಹಾಗೂ ಸ್ಪೀಕರ್ ಅಧಿಕಾರಿಗಳೊಂದಿಗೆ ತೆರಳಿ ಮಾಹಿತಿ ಪಡೆಯುವ ಚಿಂತನೆ ತಮ್ಮದಾಗಿದೆ. ಈ ಕುರಿತು ಸ್ಪೀಕರ್ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಒಲವು ತಮ್ಮದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವುದಾಗಿ ನುಡಿದರು. ಬೆಳಗಾವಿಗೆ ಕಚೇರಿಗಳ …

Read More »

ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸುದ್ದಿ ಸುಳ್ಳು : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು : ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕಲಿಯುತ್ತಿರುವ ಒಂದರಿಂದ ಆರನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ‌ ಬೇಸಿಗೆ ರಜೆ ಘೋಷಣೆ, ಪರೀಕ್ಷೆ ಇಲ್ಲದೇ‌ ಮುಂದಿನ ತರಗತಿಗೆ ಪಾಸ್ ಎಂಬ ಸುದ್ದಿ ದೃಶ್ಯ‌ಮಾಧ್ಯಮದ ಚಾನೆಲ್ ಒಂದರಲ್ಲಿ ಬಿತ್ತರವಾಗಿದ್ದು ಇದು ಸತ್ಯಕ್ಕೆ‌ ದೂರವಾದ ಸಂಗತಿ‌ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ‌ ಪರ್ಯಾಯ ಕಲಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಬಗ್ಗೆ ಮುಕ್ತ ನಿಲುವನ್ನು ಹೊಂದಿದೆ. …

Read More »

ಕಾರಿನಲ್ಲಿ ಸ್ಪೋಟಕ ಪತ್ತೆ ಪ್ರಕರಣ : ತಿಹಾರ್‌ ಜೈಲಿಗೆ ಮುಂಬಯಿ ಪೊಲೀಸ್‌ ಭೇಟಿ

ಮುಂಬಯಿ: ಅಂಬಾನಿ ನಿವಾಸದ ಬಳಿ ಸ್ಫೋಟಕವಿದ್ದ ಕಾರನ್ನು ತಾವೇ ನಿಲ್ಲಿಸಿದ್ದು ಎಂದು “ಜೈಶ್‌-ಉಲ್‌-ಹಿಂದ್‌’ ಸಂಘಟನೆಯ ಹೆಸರಿನಲ್ಲಿ ಟೆಲಿಗ್ರಾಂ ಆಯಪ್‌ ಸಂದೇಶದ ಹಿನ್ನೆಲೆಯಲ್ಲಿ ಮುಂಬಯಿ ಪೊಲೀಸರು, ಶನಿವಾರ ತಿಹಾರ್‌ ಜೈಲಿಗೆ ಭೇಟಿ ನೀಡಿ, ಅಲ್ಲಿ ಸೆಂಟ್ರಲ್‌ ಜೈಲ್‌ ಸಂಖ್ಯೆ 8ರಲ್ಲಿ ಬಂಧಿತನಾಗಿರುವ ತಹ್ಸಿನ್‌ ಅಖ್ತರ್‌ ಎಂಬಾತನನ್ನು ವಿಚಾರಣೆ ಗೊಳಪಡಿಸಿದರು. ಭಾರತದಲ್ಲಿ ಇಂಡಿಯನ್‌ ಮುಜಾಹಿದ್ದೀನ್‌ ಗುಂಪುಗಳನ್ನು ನಿರ್ವಹಿಸುತ್ತಿದ್ದ ಆರೋಪದಡಿ 2014ರಲ್ಲಿ ಈತ ಬಂಧನಕ್ಕೊಳಗಾಗಿದ್ದ. ವೇಝ್ ಅರ್ಜಿ ವಜಾ: ಇದೇ ಪ್ರಕರಣದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದ ಮನ್ಸುಖ್‌ …

Read More »

ಚಿತ್ರದುರ್ಗ: ‘ಶರಣ ಸೇನೆ’ ಉದ್ಘಾಟನೆ ಇಂದು

ಚಿತ್ರದುರ್ಗ: ‘ಶರಣ ಸೇನೆ ಹೆಸರಿನಲ್ಲಿ ಧರ್ಮಾತೀತ, ಜಾತ್ಯತೀತ ಹಾಗೂ ಪಕ್ಷಾತೀತ ಸಂಘಟನೆ ಸ್ಥಾಪಿಸಲಾಗಿದೆ’ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು. ‘ಮುರುಘಾ ಮಠದಲ್ಲಿ ಮಾರ್ಚ್‌ 14ರಂದು ಬೆಳಿಗ್ಗೆ 11ಕ್ಕೆ ಶರಣ ಸೇನೆ ಉದ್ಘಾಟನೆಯಾಗಲಿದೆ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ನೇತೃತ್ವ ವಹಿಸುವರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇನೆಗೆ ಚಾಲನೆ ನೀಡುವರು. ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಟಿ.ರಘುಮೂರ್ತಿ ಸೇನೆಯ ಲೋಗೊ …

Read More »

ಹೃತಿಕ್ ರೋಷನ್ ಅವರ ಮಾಜಿ ಪತ್ನಿ ಸುಸ್ಸೇನ್ ಖಾನ್ಬಿಗ್ ಬಾಸ್ ಸ್ಪರ್ಧಿ ಅರ್ಸ್ಲಾನ್ ಗೋನಿ ಜತೆ ಡೇಟಿಂಗ್‍ನಲ್ಲಿದ್ದಾರೆ

ಮುಂಬೈ : ಬಾಲಿವುಡ್ ನಟ ಹೃತಿಕ್ ರೋಷನ್ ಅವರ ಮಾಜಿ ಪತ್ನಿ ಸುಸ್ಸೇನ್ ಖಾನ್ ಒಬ್ಬಂಟಿ ಜೀವನಕ್ಕೆ ಗುಡ್ ಬೈ ಹೇಳಿದ್ದಾರಂತೆ. ಈಕೆ ಮತ್ತೆ ಲವ್‍ನಲ್ಲಿ ಬಿದ್ದಿದ್ದಾರಂತೆ. ಬಿಗ್ ಬಾಸ್ ಸ್ಪರ್ಧಿ ಅರ್ಸ್ಲಾನ್ ಗೋನಿ ಜತೆ ಡೇಟಿಂಗ್‍ನಲ್ಲಿದ್ದಾರೆ ಎನ್ನುವ ರೂಮರ್ ಬಿಟೌನ್ ಅಂಗಳದಲ್ಲಿ ಜೋರಾಗಿ ಕೇಳಿ ಬರುತ್ತಿದೆ. 2014 ರಲ್ಲಿ ಹೃತಿಕ್ ರೋಷನ್ ಹಾಗೂ ಸುಸ್ಸೇನಾ ಪರಸ್ಪರ ವಿಚ್ಛೇದನ ಪಡೆಯುವ ಮೂಲಕ ತಮ್ಮ 14 ವರ್ಷಗಳ ದಾಂಪತ್ಯ ಜೀವನಕ್ಕೆ ಇತಿಶ್ರೀ …

Read More »

ಕುದುರೆ ಏರಿ ನಿಂತ. ಚೆಂದನೇ ಪೋಸ್​ ಕೊಟ್ಟ.. ಹೆಣ್ಮಕ್ಕಳು ಫಿದಾ. ಗಂಡುಮಕ್ಕಳು ಗರಂ!

ಮುಂಬೈ: ಇಲ್ಲಿ ಕುದುರೆ ಮೇಲೆ ಏರಿನಿಂತು ಫೋಟೋಗೆ ಪೋಸ್​ ಕೊಟ್ಟವನು ಖ್ಯಾತ ಬಾಲಿವುಡ್ ನಟ ವಿಕ್ಕಿ ಕೌಶಲ್. ಅಪಾಯಕಾರಿ ಎನ್ನುವಂಥ ಪೋಸ್​ ನೀಡಿರುವ ಈತ ಇದೀಗ ಸಾಮಾಜಿಕ ಜಾಲತಾಣದ ಹೀರೋ. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ವಿಧವಾದ ಪೋಟೋದಲ್ಲಿ ಕಾಣಿಸಿಕೊಂಡಿರುವ ನಟ ಕುದುರೆ ಸವಾರಿ ಮಾಡುವಾಗ ಬಳಸಲಾಗುವ ಉಡುಪನ್ನು ಧರಿಸಿದ್ದು, ಜೊತೆಯಲ್ಲಿ ಹೆಲ್ಮೆಟ್ ಹಾಗೂ ಕಾಲಿಗೆ ಶೂ ಧರಿಸಿದ್ದು, ಕುದುರೆ ಮೇಲೆ ನಿಂತು ಬ್ಯಾಲೆನ್ಸ್ …

Read More »

ಬಿಗ್​ ಬಾಸ್​ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್​ ಆಗಿ ತಬ್ಬಿಕೊಳ್ಳುವ ಪ್ರಶಾಂತ್​ ಸಂಬರಗಿಗೆ ಸುದೀಪ್​ ಖಡಕ್​ ವಾರ್ನಿಂಗ್​

ಬಿಗ್​ ಬಾಸ್​ ಮನೆ ಸೇರಿರುವ ಪ್ರಶಾಂತ್​ ಸಂಬರಗಿ ತುಂಬಾನೇ ಚರ್ಚೆಗೆ ಕಾರಣವಾಗಿತ್ತು. ಇದಕ್ಕೆ ಕಾರಣ ಅವರು ಎಲ್ಲಾ ಸ್ಪರ್ಧಿಗಳ ಬಗ್ಗೆ ರೇಗೋದು. ಮತ್ತೊಂದು ಎಂದರೆ, ಪ್ರಶಾಂತ್​ ಸಂಬರಗಿ ಹೆಣ್ಣುಮಕ್ಕಳನ್ನು ಟೈಟ್​ ಆಗಿ ಹಗ್​ ಮಾಡಿಕೊಳ್ಳುವುದು. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಟ್ರೋಲ್​ ಕೂಡ ಹರಿದಾಡಿತ್ತು. ಈಗ ಈ ವಿಚಾರದಲ್ಲಿ ಪ್ರಶಾಂತ್​ಗೆ ಸುದೀಪ್​ ಖಡಕ್​ ಆಗಿ ವಾರ್ನಿಂಗ್​ ನೀಡಿದ್ದಾರೆ. ವೈರಸ್​ …

Read More »

ವಿದ್ಯುತ್ ಸಮಸ್ಯೆ ಖಂಡಿಸಿ 15ರಂದು 20 ಕಿ.ಮೀ. ಪಾದಯಾತ್ರೆ

ಹೊಸನಗರ: ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಮಾರ್ಚ್ 15ರಂದು 20 ಕಿ.ಮೀ. ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯುತ್ ಬಳಕೆದಾರರ ಹೋರಾಟ ಸಮಿತಿಯ ವಾಟಗೋಡು ಸುರೇಶ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ತಾಲ್ಲೂಕಿನ ಬಟ್ಟೆಮಲ್ಲಪ್ಪದಿಂದ ಪಾದಯಾತ್ರೆ ಆರಂಭವಾಗಲಿದ್ದು, ಮಾರುತಿಪುರ, ಕಚ್ಚಿಗೆಬೈಲು, ಬ್ರಹ್ಮೇಶ್ವರ, ಮಾವಿನಕೊಪ್ಪ ವೃತ್ತ ಮಾರ್ಗವಾಗಿ ತಹಶೀಲ್ದಾರ್ ಕಚೇರಿಯ ತನಕ ನಡೆಯಲಿದೆ ಎಂದರು. ಈ ಪಾದಯಾತ್ರೆಯಲ್ಲಿ ರೈತರು, ರೈತ ಕಾರ್ಮಿಕರು, ಸ್ವ-ಸಹಾಯ ಸಂಘದ ಸದಸ್ಯರು, ವಿದ್ಯುತ್ …

Read More »

ಪೊಲೀಸ್‌ ದೌರ್ಜನ್ಯ ಮುಂದುವರಿದರೆ ಎಲ್ಲ ಠಾಣೆಗಳಿಗೆ ಮುತ್ತಿಗೆ: ಸಿದ್ದರಾಮಯ್ಯ

ಶಿವಮೊಗ್ಗ: ರಾಜ್ಯದ ಕಾರ್ಯಕರ್ತರು ಮುಖಂಡರ ಮೇಲೆ ಭದ್ರಾವತಿಯಲ್ಲಿ ನಡೆದಂತಹ ಪೊಲೀಸ್‌ ದೌರ್ಜನ್ಯ ಮುಂದುವರಿದರೆ ರಾಜ್ಯದ ಎಲ್ಲ ಠಾಣೆಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದರು. ನಗರದ ಬಿ.ಎಚ್‌.ರಸ್ತೆಯ ಸೈನ್ಸ್‌ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಿವಮೊಗ್ಗ ಚಲೋ-ಜನಾಕ್ರೋಶ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋಟಿಗಟ್ಟಲೆ ದುಡ್ಡು ಕೊಟ್ಟು ಶಾಸಕರನ್ನು ಖರೀದಿಸಿದರು. ಲೂಟಿ‌ ಹೊಡೆದು ಆಸ್ತಿ ಮಾಡಿದರು. ಹಾಗಂತ ಅವರೇ ಪೊಲೀಸರಿಗೆ ಸಂಬಳ ಕೊಡುತ್ತಾರಾ? …

Read More »