Breaking News
Home / 2021 / ಮಾರ್ಚ್ / 15 (page 3)

Daily Archives: ಮಾರ್ಚ್ 15, 2021

ಸಚಿವರಿಗೆ ಬಿಸಿಮುಟ್ಟಿಸಿದ ಸಿಎಂB.S.Y.

ಬೆಂಗಳೂರು: ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಸಚಿವರೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವದ ಅನೌಪಚಾರಿಕ ಸಭೆ ನಡೆಸಿದರು. ಸಂಪುಟ ಸಭೆಯಲ್ಲಿ ಚರ್ಚಿಸುವ ಹೊರತಾಗಿ ಇತರ ಪ್ರಾಮುಖ್ಯ ವಿಚಾರಗಳನ್ನು ತುರ್ತಾಗಿ ಚರ್ಚಿಸುವ ಉದ್ದೇಶದಿಂದ ಸಭೆ ಕರೆದಿದ್ದರು ಎಂದು ಮೂಲಗಳು ತಿಳಿಸಿದೆ. ಈವರೆಗೂ ಸರ್ಕಾರದ ಕಡೆಯಿಂದ ಸಭೆಯ ಅಧಿಕೃತ ಮಾಹಿತಿ ಹೊರಬಂದಿಲ್ಲ. ಸದನದಲ್ಲಿ ಸಚಿವರ ನಡವಳಿಕೆಗಳ ಕುರಿತು ಸಿಎಂ ಬುದ್ಧಿವಾದ ಹೇಳಿದರೆ ಎಂದು ತಿಳಿದುಬಂದಿದೆ. ಕಲಾಪದಲ್ಲಿ ಪ್ರತಿಪಕ್ಷದಿಂದ ದಾಳಿ ನಡೆಯುವಾಗ ಸದನದಲ್ಲಿ ಒಂದಿಬ್ಬರು …

Read More »

ಯಡಿಯೂರಪ್ಪನವರ ಸರಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣವಾಗಿದ್ದ ರಮೇಶ್ ಜಾರಕಿಹೊಳಿ, ಸದ್ಯ ರಾಜಕೀಯದಲ್ಲಿ ಹಿನ್ನಡೆ ಅನುಭವಿಸುತ್ತಿರಲು ಕಾರಣ ಏನು?

ರಾಜಕೀಯದಲ್ಲಿ ಒಬ್ಬರ ವಿರುದ್ದ ಇನ್ನೊಬ್ಬರು ಕತ್ತಿ ಮಸೆಯುವುದು ನೋಡಿದ್ದೇವೆ, ತಂತ್ರ ಷಡ್ಯಂತ್ರ ರೂಪಿಸುವುದು ಇದ್ದಿದ್ದೇ. ಇದಕ್ಕೆ ರಾಜ್ಯದ ಯಾವ ಪಕ್ಷವೂ ಹೊರತಾಗಿಲ್ಲ. ಜಾರಕಿಹೊಳಿ ಸಿಡಿ ಪ್ರಕರಣದ ಸತ್ಯಾಸತ್ಯತೆಯನ್ನು ಅರಿಯಲು ಸರಕಾರ ವಿಶೇಷ ತನಿಖಾ ದಳವನ್ನು ರಚಿಸಿದೆ. ತನಿಖೆ ವೇಗವನ್ನು ಪಡೆದುಕೊಳ್ಳುತ್ತಿದ್ದು ಪೊಲೀಸರು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿರುವುದರಿಂದ, ಬಿಜೆಪಿ ಮತ್ತು ಕಾಂಗ್ರೆಸ್ ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿವೆ. ಯಡಿಯೂರಪ್ಪನವರ ಸರಕಾರ ಅಧಿಕಾರಕ್ಕೆ …

Read More »

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಶಿವರಾಜ್ ಕುಮಾರ್

ಬೆಂಗಳೂರು: ಸ್ಯಾಂಡಲ್ ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಡಿ ಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ಇಂದು ಬೆಳಗ್ಗೆ ಶಿವರಾಜ್ ಕುಮಾರ್ ಭೇಟಿಯಾದರು. ಜೆಡಿಎಸ್ ನಲ್ಲಿದ್ದ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಅವರ ಸಹೋದರಿ, ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕೂಡಾ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುದ್ದಿಗಳ ನಡುವೆ …

Read More »

ಶೇಂಗಾ ಹೋಳಿಗೆ ತಿಂದು ಮೀಸಲಾತಿ ಹೋರಾಟ ನಿಲ್ಲಿಸಿದ ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜಯ ಶ್ರೀ

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕಳೆದ 64 ದಿನಗಳಿಂದ ನಡೆಸಲಾಗುತ್ತಿದ್ದ ಹೋರಾಟವನ್ನು ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜಯ ಶ್ರೀ ಅವರು ಶೇಂಗಾ ಹೋಳಿಗೆ ತಿನ್ನಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ಅಂತ್ಯಗೊಳಿಸಿದ್ದಾರೆ. ಇಂದು ಬೆಳಗ್ಗೆ ಸದನದಲ್ಲಿ ಮಾತನಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಮುದಾಯದ ಸ್ವಾಮೀಜಿಗಳು ಆರು ತಿಂಗಳ ಕಾಲ ಹೋರಾಟವನ್ನು ಸ್ಥಗಿತಗೊಳಿಸಬೇಕೆಂದು ಮನವಿ ಮಾಡಿದ್ದರು. ಅದಾದ ಕೆಲವೇ …

Read More »

ಪಂಚಮಸಾಲಿ ಮೀಸಲಾತಿ ಹೋರಾಟ ತಾತ್ಕಾಲಿಕ ಮೊಟಕುಗೊಳಿಸಿ; ಸ್ವಾಮೀಜಿಗೆ ಶಾಸಕ ಯತ್ನಾಳ್ ಮನವಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಮುಂದುವರೆದಿದೆ. ಈ ನಡುವೆ ಹೋರಾಟ ಕೈಬಿಡುವಂತೆ ಸ್ವತಃ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಶಾಸಕ ಯತ್ನಾಳ್, ಪಂಚಮಸಾಲಿ ಮೀಸಲಾತಿ ವಿಚಾರ ಪ್ರಸ್ತಾಪಿಸುತ್ತಿದ್ದಂತೆಯೇ ಎದ್ದು ನಿಂತ ಸಿಎಂ ಬಿ.ಎಸ್. ಯಡಿಯೂರಪ್ಪ ಮೀಸಲಾತಿಗೆ ಸಂಬಂಧಿಸಿದಂತೆ ಇನ್ನು 6 ತಿಂಗಳಲ್ಲಿ ಹಿಂದುಳಿದ ವರ್ಗದ ಆಯೋಗದ ವರದಿ, ಸಮಿತಿ ವರದಿ ತರಿಸಿಕೊಳ್ಳುತ್ತೇನೆ. ನಂತರ …

Read More »

‘ಮಹಾನಾಯಕ’ ಎಂದಾಕ್ಷಣ ತನಗೇ ಹೇಳಿದ್ದು ಎಂದುಕೊಳ್ಳುವುದೇಕೆ?; ಡಿಕೆಶಿಗೆ ಹೆಚ್.ಡಿ.ಕೆ. ಟಾಂಗ್

ಮೈಸೂರು: ರಾಸಲೀಲೆ ಸಿಡಿ ಪ್ರಕರಣವನ್ನು ಎಲ್ಲರೂ ಹುಡುಗಾಟಿಕೆಯಾಗಿ ತೆಗೆದುಕೊಂಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮಹಾನಾಯಕ ಎಂದಾಕ್ಷಣ ತಾನೇ ಎಂದುಕೊಂಡು ಡಿ.ಕೆ.ಶಿವಕುಮಾರ್ ಹೇಳಿಕೆಗಳನ್ನು ನೀಡುತ್ತಿರುವುದೇಕೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಿಡಿ ಪ್ರಕರಣದಲ್ಲಿ ಡಿಕೆಶಿ ಹೆಸರನ್ನು ಯಾರಾದರೂ ಹೇಳಿದ್ದಾರಾ? ರಮೇಶ್ ಜಾರಕಿಹೊಳಿ ಮಹಾನಾಯಕರೊಬ್ಬರ ಪಿತೂರಿ ಇದೆ ಎಂದಾಕ್ಷಣ ಇವರು ತನಗೇ ಹೇಳಿದ್ದು ಎಂದುಕೊಳ್ಳುವುದೇಕೇ? ಈ ರಾಜ್ಯದಲ್ಲಿ ಮಹಾನಾಯಕರು ಬಹಳ ಜನರಿದ್ದಾರೆ. ಆ ಮಹಾನಾಯಕ ಯಾರೆಂದು ಗೊತ್ತಿಲ್ಲ. …

Read More »

ರಮೇಶ್ ಜಾರಕಿಹೊಳಿ ಸದಾಶಿವ ನಗರದಲ್ಲಿರುವ ಮನೆ ಬದಲಿಸಿ ಮಲ್ಲೇಶ್ವರದ ಮಂತ್ರಿ ಅಪಾರ್ಟ್ ಮೆಂಟ್ ಗೆ ಶಿಫ್ಟ್ ?

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಂದೂವರೆ ವರ್ಷದ ಹಿಂದೆ ಖರೀದಿಸಿದ್ದ ಮನೆಯೇ ಅವರಿಗೆ ಮುಳುವಾಗಿದೆಯಾ? ಅವರ ಸಂಕಷ್ಟಗಳಿಗೆ ಈ ಹೊಸ ಮನೆಯ ವಾಸ್ತು ದೋಷವೇ ಕಾರಣವೇ ಎಂಬುದು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಹೌದು, ರಮೇಶ್ ಜಾರಕಿಹೊಳಿ ಬೆಂಗಳೂರಿನ ಸದಾಶಿವನಗರದಲ್ಲಿ ಒಂದೂವರೆ ವರ್ಷದ ಹಿಂದೆ ಖರೀದಿಸಿದ್ದ ಮನೆಯನ್ನು ಇದೀಗ ಮಾರಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಈ ಪ್ರವೇಶಿಸಿದಾಗಿನಿಂದ ಅವರಿಗೆ ಒಂದಲ್ಲಾ ಒಂದು ಸಮಸ್ಯೆ ಕಾಡುತ್ತಿದ್ದು, ಸಂಕಷ್ಟಗಳಿಂದ ಹೊರಬರಲು ಅವರು ಈ …

Read More »

ಸಿಡಿ ಡೀಲ್‌ ದುಡ್ಡಲ್ಲಿ ಐಶಾರಾಮಿ ಕಾರು, ಕಾಫಿ ತೋಟ ಖರೀದಿಸಲು ಹೊರಟಿದ್ದ ಪತ್ರಕರ್ತ!!

ಬೆಂಗಳೂರು: ರಮೇಶ್‌ ಜಾರಕಿಹೊಳಿ ಅಶ್ಲೀಲ ಸಿಡಿ ಹಗರಣ ಸಂಬಂಧ ಬಂಧಿತರಾಗಿರುವ ಪತ್ರಕರ್ತರಲ್ಲಿ ಒಬ್ಬನಾದ ತುಮಕೂರಿನ ಶಿರಾ ಮೂಲದ ಕಿಂಗ್​ಪಿನ್ ಸಿಡಿ ಡೀಲ್‌ ದುಡ್ಡಲ್ಲಿ ಎರಡು ಐಶಾರಾಮಿ ಕಾರು ಖರೀದಿಸಲು ಮುಂದಾಗಿದ್ದ ಎಂದು ತಿಳಿದುಬಂದಿದೆ. ಮಹೀಂದ್ರಾ ಎಕ್ಸ್‌ಯುವಿ-500 ಹಾಗೂ ಥಾರ್‌ ಜೀಪ್‌ ಖರೀದಸಲು ಆತ ಮುಂದಾಗಿದ್ದ ಎಂದು ಎಸ್‌ಐಟಿ ತನಿಖೆಗಳಿಂದ ತಿಳಿದುಬಂದಿದೆ. ಮಹೀಂದ್ರಾ ಕಾರು ಖರೀದಿಗೆ ಒಂದೂವರೆ ಲಕ್ಷ ಹಾಗೂ ಥಾರ್‌ ಜೀಪ್‌ಗಾಗಿ 25 ಸಾವಿರ ರೂ. ಅಡ್ವಾನ್ಸ್‌ ನೀಡಿದ್ದ ಎಂದು …

Read More »

ಗ್ರಾಮ ಪಂಚಾಯತ್‌ ಭರ್ತಿ 8 ಸಾವಿರ ಹುದ್ದೆಗಳು ಖಾಲಿ ;

ಬೆಂಗಳೂರು : ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆದು, ಅಧ್ಯಕ್ಷ- ಉಪಾಧ್ಯಕ್ಷರು ಆಯ್ಕೆಯಾಗಿ ಪೂರ್ಣ ಪ್ರಮಾಣದಲ್ಲಿ ಪಂಚಾಯತ್ಗಳು ಅಸ್ತಿತ್ವಕ್ಕೆ ಬಂದಿವೆ. ಆದರೆ ಬಹುತೇಕ ಕಡೆ ಖಾಲಿ ಹುದ್ದೆಗಳು ಹೊಸ ಅಧ್ಯಕ್ಷ- ಉಪಾಧ್ಯಕ್ಷರನ್ನು ಸ್ವಾಗತಿಸುವ ಸ್ಥಿತಿ ಇದೆ. ಬಹುತೇಕ ಗ್ರಾ.ಪಂ.ಗಳಲ್ಲಿ ಪಿಡಿಒ, ಗ್ರಾ.ಪಂ. ಕಾರ್ಯದರ್ಶಿ, ದ್ವಿ.ದ. ಲೆಕ್ಕ ಸಹಾಯಕರ ಹುದ್ದೆಗಳು ಖಾಲಿ ಇವೆ. ಕೊರೊನಾ ಕಾರಣಕ್ಕೆ ಆರ್ಥಿಕ ಮಿತವ್ಯಯ ಹೇರಿದ್ದರ ಪರಿಣಾಮ ಒಂದು ವರ್ಷದಿಂದ ಹೊಸ ನೇಮಕ ಆಗಿಲ್ಲ. ಇದು ಆಡಳಿತ ಮತ್ತು …

Read More »

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸದನದಲ್ಲಿ ಯಾವುದೇ ವಿಷಯ ಪ್ರಸ್ತಾಪ ಮಾಡಲು ಸರ್ವ ಸ್ವತಂತ್ರರಿದ್ದಾರೆ.: B.S.Y.

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸದನದಲ್ಲಿ ಯಾವುದೇ ವಿಷಯ ಪ್ರಸ್ತಾಪ ಮಾಡಲು ಸರ್ವ ಸ್ವತಂತ್ರರಿದ್ದಾರೆ. ಅವರು ಸಿಡಿ ಬಗ್ಗೆ ಚರ್ಚೆ ಮಾಡಿದರೂ ಸ್ವಾಗತ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರು ಯಾವುದೇ ವಿಷಯದ ಮೇಲೆ ಸರಿಯಾದ ರೀತಿಯಲ್ಲಿ ಬೆಳಕು ಚೆಲ್ಲಿದರೆ ಅವರ ಸಲಹೆ ಮೇಲೆ ನಾವು ನಮ್ಮ ಸಚಿವರನ್ನು ಬಿಗಿಗೊಳಿಸಲು ಅನುಕೂವಾಗುತ್ತದೆ. ವಿರೋಧ ಪಕ್ಷದ ನಾಯಕರು ಯಾವುದೇ ವಿಷಯ ಪ್ರಸ್ತಾಪ ಮಾಡುವುದು ಅಪರಾಧವಲ್ಲ. …

Read More »