Breaking News

Daily Archives: ಮಾರ್ಚ್ 16, 2021

ಫುಡ್ ಡೆಲಿವರಿ ಗಲಾಟೆ : ಹಿತೇಶಾ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು : ಯುವತಿ ಮೇಲೆ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಹಲ್ಲೆ ನಡೆಸಿದ್ದಾನೆ ಎನ್ನುವ ಆರೋಪದ ಪ್ರಕರಣದಲ್ಲಿ ಮತ್ತೊಂದು ಹೊಸ ಬೆಳವಣೆಗೆ ನಡೆದಿದೆ. ಇಂದು ( ಮಾರ್ಚ್ 15) ಹಲ್ಲೆಗೊಳಗಾಗಿದ್ದೇನೆ ಎಂದು ಆರೋಪಿಸಿದ ಯುವತಿ ಹಿತೇಶಾ ಚಂದ್ರಾಣಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಡೆಲಿವರಿ ಬಾಯ್ ಕಾಮರಾಜ್ ದೂರಿನ ಮೇರೆಗೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ 355 (ಹಲ್ಲೆ),504 ( ಅಪಮಾನ) ಮತ್ತು 506 ( ಕ್ರಿಮಿನಲ್ ಬೆದರಿಕೆ) …

Read More »

ಟೋಯಿಂಗ್‌ನಲ್ಲಿ ಅಕ್ರಮ: ಕ್ರಮಕ್ಕೆ ಒತ್ತಾಯ

ಬೆಂಗಳೂರು: ‘ನಿಲುಗಡೆ ನಿರ್ಬಂಧಿಸಿರುವ ಸ್ಥಳಗಳಲ್ಲಿ ನಿಲ್ಲಿಸಿರುವ ವಾಹನಗಳ ಟೋಯಿಂಗ್‌ ಮಾಡುವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯ ಘಟಕದ ವಿ.ಆರ್. ಮರಾಠೆ ಒತ್ತಾಯಿಸಿದರು. ‘ಟೋಯಿಂಗ್ ಮಾಡಲು ಬಳಸುವ ವಾಹನಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯದೆ ಅತಿ ಹೆಚ್ಚು ಮಾರ್ಪಾಡು ಮಾಡಿ ಕಾನೂನುಬಾಹಿರವಾಗಿ ಬಳಸಲಾಗುತ್ತದೆ. ಸಂಚಾರ ಪೊಲೀಸ್‌ ಅಧಿಕಾರಿಗಳಾಗಲಿ, ಸಾರಿಗೆ ಇಲಾಖೆ ಅಧಿಕಾರಿಗಳಾಗಲಿ ಇದರ ಬಗ್ಗೆ …

Read More »

ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಧಾರ್ಮಿಕ ಕಟ್ಟಡ ಕಟ್ಟಲು ಯಾವ ಧರ್ಮ ಹೇಳುತ್ತದೆ? : ಹೈಕೋರ್ಟ್‌

ಬೆಂಗಳೂರು: ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಧಾರ್ಮಿಕ ಕಟ್ಟಡ ನಿರ್ಮಿಸಿ ಎಂದು ಯಾವ ಧರ್ಮ ಹೇಳುತ್ತದೆ ಎಂದು ಪ್ರಶ್ನಿಸಿರುವ ಹೈಕೋರ್ಟ್‌, ದೇವರು-ಧರ್ಮದ ಹೆಸರಲ್ಲಿ ಸಾರ್ವಜನಿಕ ಆಸ್ತಿ ದುರ್ಬಳಕೆ ಮಾಡಿಕೊಳ್ಳುವುದನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಕೋಲಾರದ ಚನ್ನಸಂದ್ರ ಹಾಗೂ ಮಂಗಸಂದ್ರ ಗ್ರಾಮಗಳಲ್ಲಿನ ಸರ್ಕಾರಿ ಗೋಮಾಳಗಳ ಜಮೀನಿನಲ್ಲಿ ಅನಧಿಕೃತವಾಗಿ ದೇವಸ್ಥಾನ, ಚರ್ಚ್‌ ಹಾಗೂ ಮಿನಾರ್‌ ನಿರ್ಮಾಣ ಮಾಡಿದ್ದು, ಅವುಗಳನ್ನು ತೆರವುಗೊಳಿಸಬೇಕು ಎಂದು ಕೋರಿ ಸ್ಥಳೀಯ ನಿವಾಸಿ ಸಿದ್ದನಹಳ್ಳಿಯ ಕಿಶೋರ್‌ ರಾಮಮೂರ್ತಿ ಸಲ್ಲಿಸಿರುವ …

Read More »

ಪುಣೆ: ಶಿವಾಜಿ ಮಾರುಕಟ್ಟೆಯಲ್ಲಿ ಬೆಂಕಿ; 25 ಅಂಗಡಿಗಳು ನಾಶ

ಪುಣೆ: ‘ಮಹಾರಾಷ್ಟ್ರದ ಪುಣೆಯ ಹಣ್ಣು ಮತ್ತು ತರಕಾರಿಯ ಹಳೆಯ ಮಾರುಕಟ್ಟೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ 25 ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದರು. ‘ಪುಣೆಯ ಪ್ರಸಿದ್ಧ ಶಿವಾಜಿ ಮಾರುಕಟ್ಟೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ 25 ಅಂಗಡಿಗಳು ಸುಟ್ಟು ಹೋಗಿವೆ’ ಎಂದು ಅಧಿಕಾರಿಯೊಬ್ಬರು ಹೇಳಿದರು. ‘ನಮಗೆ ಈ ಬಗ್ಗೆ ಮಾಹಿತಿ …

Read More »

ಎರಡನೇ ದಿನವೂ ಮುಂದುವರೆದ ಬ್ಯಾಂಕ್ ನೌಕರರ ಮುಷ್ಕರ

ನವದೆಹಲಿ, ಮಾ.16-ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಸಿ ಬ್ಯಾಂಕ್ ನೌಕರರು ನಡೆಸುತ್ತಿರುವ ರಾಷ್ಟ್ರ ವ್ಯಾಪಿ ಬ್ಯಾಂಕ್ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದೆ. ಬ್ಯಾಂಕ್‍ಗಳ ಮುಷ್ಕರದಿಂದ ದೇಶಾದ್ಯಂತ ಗ್ರಾಹಕರು ಹಣ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮತ್ತಿತರ ಸೇವೆಗಳಿಂದ ವಂಚಿತರಾಗಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿರುವ ಖಾಸಗೀಕರಣ ನೀತಿ ವಿರೋಸಿ ಒಂಬತ್ತು ಬ್ಯಾಂಕ್ ನೌಕರರ ಸಂಘಟನೆ ನಿನ್ನೆಯಿಂದ ಹಮ್ಮಿಕೊಂಡಿರುವ ಮುಷ್ಕರದಲ್ಲಿ 10 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದು ನಮ್ಮ ಹೋರಾಟ …

Read More »

ಎರಡನೇ ದಿನವೂ ಮುಂದುವರೆದ ಬ್ಯಾಂಕ್ ನೌಕರರ ಮುಷ್ಕರ

ನವದೆಹಲಿ, ಮಾ.16-ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಸಿ ಬ್ಯಾಂಕ್ ನೌಕರರು ನಡೆಸುತ್ತಿರುವ ರಾಷ್ಟ್ರ ವ್ಯಾಪಿ ಬ್ಯಾಂಕ್ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದೆ. ಬ್ಯಾಂಕ್‍ಗಳ ಮುಷ್ಕರದಿಂದ ದೇಶಾದ್ಯಂತ ಗ್ರಾಹಕರು ಹಣ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮತ್ತಿತರ ಸೇವೆಗಳಿಂದ ವಂಚಿತರಾಗಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿರುವ ಖಾಸಗೀಕರಣ ನೀತಿ ವಿರೋಸಿ ಒಂಬತ್ತು ಬ್ಯಾಂಕ್ ನೌಕರರ ಸಂಘಟನೆ ನಿನ್ನೆಯಿಂದ ಹಮ್ಮಿಕೊಂಡಿರುವ ಮುಷ್ಕರದಲ್ಲಿ 10 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದು ನಮ್ಮ ಹೋರಾಟ …

Read More »

ಕಳೆದ ಎರಡು ವರ್ಷಗಳಲ್ಲಿ 2000 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿಲ್ಲ

ನವದೆಹಲಿ:ಕಳೆದ ಎರಡು ವರ್ಷಗಳಲ್ಲಿ 2000 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿಲ್ಲ ಎಂದು ಹಣಕಾಸು ಸಚಿವಾಲಯ ಸೋಮವಾರ(ಮಾರ್ಚ್ 15) ಲೋಕಸಭೆಗೆ ತಿಳಿಸಿದೆ. ನೋಟು ಅಮಾನ್ಯೀಕರಣದ ನಂತರ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದ ನಂತರ ಇದೀಗ 2000 ಮುಖಬೆಲೆಯ ನೋಟುಗಳು ವಿರಳವಾಗಿರುವುದು ಯಾಕೆ ಎಂಬ ಪ್ರಶ್ನೆಗೆ ಹಣಕಾಸು ಸಚಿವಾಲಯ ಈ ಉತ್ತರ ನೀಡಿದೆ. 2019-20 ಹಾಗೂ 2020-21ನೇ ಸಾಲಿನಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲು ಪ್ರಿಂಟಿಂಗ್ ಪ್ರೆಸ್ …

Read More »

ಕೆಂಪು, ಹಳದಿ ಬಾವುಟ ಹಾಕಿಕೊಂಡು ಓಡಾಡಿದ್ರೆ ಅಟ್ಟಾಡಿಸಿ ಹೊಡೀತಾನಂತೆ…!!

ಬೆಳಗಾವಿ: ಕನ್ನಡಿಗರನ್ನೆ ಅಟ್ಟಾಡಿಸಿ ಹೊಡ್ತಿವಿ ಎಂದು ಬೆಳಗಾವಿಯಲ್ಲಿ ಎಂಇಎಸ್ ಮುಖಂಡ ಹೂಂಕರಿಸಿ ಸಂಕಷ್ಟಕ್ಕೆ ಬಿದ್ದಿದ್ದಾನೆ. ಬೆಳಗಾವಿ ನೆಲದಲ್ಲಿ ನಿಂತುಕೊಂಡು ಈ ರೀತಿ ಧಮ್ಕಿ ಹಾಕಿದವ ಎಂಇಎಸ ಮುಖಂಡ ಶುಭಂ ಸಾಳುಂಕೆ. ಬೆಳಗಾವಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಎರಡು ಒಂದಾಗಿವೆ ಎಂದಿರುವ ಸಾಳುಂಕೆ, ಹಳದಿ ಕೆಂಪು ಬಣ್ಣದ ಶಾಲು ಧರಿಸಿದವರನ್ನು ಸಿಕ್ಕ ಸಿಕ್ಕಲ್ಲಿ ನಾವು ಹೊಡ್ತಿವಿ ಎಂದಿದ್ದಾನೆ. ನಮ್ಮ ಶಾಂತಿಯುತ ಹೋರಾಟವನ್ನ ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂದು ಕನ್ನಡಿಗರು ಮತ್ತು ಸರಕಾರಕ್ಕೆ ಎಚ್ಚರ …

Read More »

ಮತ್ತೆ ಲಾಕ್‌ಡೌನ್‌ ಆಗದಿರಲಿ; ಸಾರ್ವಜನಿಕರ ಪಾತ್ರ ಮುಖ್ಯ

ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಎಲ್ಲೆ ಮೀರುತ್ತಿದ್ದು, ಒಂದೊಂದೇ ಜಿಲ್ಲೆಗಳು ಲಾಕ್‌ಡೌನ್‌ಗೆ ಮೊರೆ ಹೋಗುತ್ತಿವೆ. ಕರ್ನಾಟಕದಲ್ಲಿ ಸದ್ಯಕ್ಕೆ ಅಂಥ ಪರಿಸ್ಥಿತಿ ಮೇಲ್ನೋಟಕ್ಕೆ ಕಾಣಿಸುತ್ತಿಲ್ಲವಾದರೂ ಇದು ಅಷ್ಟೊಂದು ಸರಳವಾದ ವಿಚಾರ ವಂತೂ ಅಲ್ಲ. ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಏರಿಕೆ ಯಾಗುತ್ತಿರುವುದನ್ನು ಗಮನಿಸಿದರೆ ನಾವು ಇನ್ನೊಮ್ಮೆ ಲಾಕ್‌ಡೌನ್‌ನತ್ತ ಮುಖ ಮಾಡದೆ ಇರುವಂತೆ ನೋಡಿಕೊಳ್ಳಬೇಕಾಗಿದೆ. ಇದನ್ನೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒತ್ತಿ ಒತ್ತಿ ಹೇಳುತ್ತಿರುವುದು. ಸೂಕ್ತ ಮುಂಜಾಗ್ರತ ಕ್ರಮ ಕೈಗೊಳ್ಳುವ ಮೂಲಕ ನಾವು …

Read More »

ಈ ಸಾಲಿನ ಬಜೆಟ್ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ: ಸಿದ್ದರಾಮಯ್ಯ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಮಾರಕವಾಗಿದೆ. ಕಾರಣ ಈ ಸಾಲಿನಲ್ಲಿ ರಾಜಸ್ವ ಆದಾಯಕ್ಕಿಂತ ರಾಜಸ್ವ ಖರ್ಚು ಹೆಚ್ಚಾಗುವ ಮೂಲಕ ಮೊದಲನೇ ಬಾರಿಗೆ ರಾಜಸ್ವ ಖೋತಾ‌ ಅಥವಾ ರಾಜಸ್ವ ಕೊರತೆ ಉಂಟಾಗಿದೆ. 2004 ರ ನಂತರ ವಿತ್ತೀಯ ಹೊಣೆಗಾರಿಕೆ ನೀತಿಯನ್ನು ಕರ್ನಾಟಕ ಅಳವಡಿಸಿಕೊಂಡ ನಂತರದಲ್ಲಿ ಇಂಥದ್ದೊಂದು ರಾಜಸ್ವ ಕೊರತೆಯ ಬಜೆಟ್‌ ಈ ವರೆಗೆ ಮಂಡನೆಯಾಗಿರಲಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ …

Read More »