Breaking News
Home / 2021 / ಮಾರ್ಚ್ / 16 (page 4)

Daily Archives: ಮಾರ್ಚ್ 16, 2021

ಪೆಟ್ರೋಲ್‌, ಡೀಸೆಲ್‌ ಜಿಎಸ್‌ಟಿ ವ್ಯಾಪ್ತಿಗೆ ಇಲ್ಲ: ನಿರ್ಮಲಾ ಸೀತಾರಾಮನ್‌

ನವದೆಹಲಿ: ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್, ವಿಮಾನ ಇಂಧನ (ಎಟಿಎಫ್) ಮತ್ತು ನೈಸರ್ಗಿಕ ಅನಿಲವನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಪ್ರಸ್ತಾವ ಈ ಹಂತದಲ್ಲಿ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ‘ಈ ಉತ್ಪನ್ನಗಳನ್ನು ಜಿಎಸ್‌ಟಿ ವ್ಯವಸ್ಥೆಯ ಅಡಿ ತರುವುದು ಯಾವಾಗಿನಿಂದ ಎಂಬ ಬಗ್ಗೆ ಜಿಎಸ್‌ಟಿ ಮಂಡಳಿ ಶಿಫಾರಸು ಮಾಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ, ರಾಜ್ಯಗಳಿಗೂ ಪ್ರಾತಿನಿಧ್ಯ ಇರುವ ಜಿಎಸ್‌ಟಿ …

Read More »

ವಂಶವಾಹಿ ರಾಜಕಾರಣ ನಾಶ ಖಚಿತ

ದೇಶದಲ್ಲಿ ಈಗ “ಒಂದು ರಾಷ್ಟ್ರ ಒಂದು ಚುನಾವಣೆ’ ಎಂಬ ಪರಿಕಲ್ಪನೆ ಬಗ್ಗೆ ಚರ್ಚೆ ಆರಂಭವಾಗಿದೆ. ಈಚೆಗಷ್ಟೇ ರಾಜ್ಯ ವಿಧಾನಮಂಡಲಗಳಲ್ಲಿ ಈ ಬಗ್ಗೆ ಚರ್ಚೆಗೆ ಸಮಯ ನಿಗದಿಯಾಗಿತ್ತಾದರೂ, ವಿಪಕ್ಷಗಳ ವಿರೋಧದಿಂದ ಚರ್ಚೆ ಸಾಧ್ಯವಾಗಿಲ್ಲ. ಈ ಬಗ್ಗೆ “ಉದಯವಾಣಿ’ಯ ವೇದಿಕೆಯಲ್ಲಿ ರಾಜಕಾರಣಿಗಳು, ವಿಷಯ ತಜ್ಞರು ತಮ್ಮ ವಾದ ಮಂಡಿಸಲಿದ್ದಾರೆ. ದೃಷ್ಟಾರ ಮುಂದಿನ ಪೀಳಿಗೆಯ ಬಗ್ಗೆ ಯೋಚನೆ ಮಾಡಿದರೆ, ರಾಜಕೀಯ ನಾಯಕ ಕೇವಲ ಮುಂದಿನ ಚುನಾವಣೆ ಗೆಲ್ಲುವುದು ಹೇಗೆ ಎನ್ನುವುದನ್ನಷ್ಟೇ ಯೋಚಿಸುತ್ತಾನೆ. ಇದು ರಾಜಕೀಯ …

Read More »

GST ಪರಿಹಾರʼವಾಗಿ ರಾಜ್ಯಗಳಿಗೆ ಕೊನೆಯ ಕಂತಾಗಿ ʼ1.10 ಲಕ್ಷ ಕೋಟಿ ರೂʼ. ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ..!

ನವದೆಹಲಿ: 2020ರಲ್ಲಿ ಕೋವಿಡ್ -19 ಹರಡಿಯನ್ನ ತಡೆಗಟ್ಟಲು ಲಾಕ್‌ ಡೌನ್‌ ಮಾಡಿದ್ದರಿಂದ ಕೇಂದ್ರ ಮತ್ತು ರಾಜ್ಯಗಳ ಆದಾಯವು ತೀವ್ರವಾಗಿ ಕುಸಿಯಿತು. ಮಾರ್ಚ್-ಸೆಪ್ಟೆಂಬರ್ 2020ರ ಅವಧಿಯ ಡೇಟಾ ನೋಡೋದಾದ್ರೆ, ಈ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಜಿಎಸ್ಟಿ ಆದಾಯದ ಗ್ರಾಫ್ ತೀವ್ರವಾಗಿ ಕುಸಿಯಿತು. ಮಾರ್ಚ್ 22ರಿಂದ ದೇಶಾದ್ಯಂತ ಲಾಕ್‌ ಡೌನ್‌ ನಂತ್ರ ಹಲವಾರು ತಿಂಗಳುಗಳ ಕಾಲ ಆರ್ಥಿಕ ಚಟುವಟಿಕೆ, ಉತ್ಪಾದನೆ, ಉತ್ಪಾದನೆ ಮತ್ತು ಕಾರ್ಯಚಟುವಟಿಕೆಗಳು ಸ್ಥಗಿತಗೊಂಡವು. ಈ ಕಾರಣದಿಂದಾಗಿ ಮಾರ್ಚ್-ಆಗಸ್ಟ್ 2020ರ …

Read More »

12 ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣ: ಮೊದಲ ಪಟ್ಟಿ ಸಲ್ಲಿಕೆ

ಈಗಾಗಲೇ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಖಾಸಗೀರಣ ವಿರೋಧಿಸಿ ಇಂದು ಮತ್ತು ನಾಳೆ (ಮಾರ್ಚ್ 15, 16) ಬ್ಯಾಂಕ್ ಒಕ್ಕೂಟಗಳು ಮುಷ್ಕರ ಹೂಡಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ 2021 ರಲ್ಲಿ ಘೋಷಿಸಿದಂತೆ, ಖಾಸಗೀಕರಣಗೊಳಿಸಲು ನಿಗದಿಪಡಿಸಿರುವ 12 ಸಾರ್ವಜನಿಕ ವಲಯದ (ಪಿಎಸ್‌ಯು) ಮೊದಲ ಪಟ್ಟಿಯನ್ನು ಸರ್ಕಾರ ಸಲ್ಲಿಸಿದೆ. ಕೇಂದ್ರ ಸರ್ಕಾರ ಸಲ್ಲಿಸಿರುವ ಈ ಪಟ್ಟಿಯು ಸಾರ್ವಜನಿಕ ವಲಯದ ಬ್ಯಾಂಕುಗಳು ಸೇರಿದಂತೆ ವಿಮಾ ಕಂಪನಿಗಳನ್ನು ಒಳಗೊಂಡಿದೆ. ಇದರ ಮೂಲಕ …

Read More »

ಇನ್ಮುಂದೆ ಪಡಿತರ ಚೀಟಿ ಬೇಕೆಂದಿಲ್ಲ..! ಯಾಕೆ..? ಪೂರ್ಣ ಮಾಹಿತಿ ಇಲ್ಲಿದೆ.

ನವ ದೆಹಲಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆಗೆ ಈಗ ತಾಂತ್ರಿಕ ಬೆಂಬಲ ದೊರಕಿದೆ. ದೇಶದ ಯಾವುದೇ ಭಾಗದಲ್ಲಿ ಪಡಿತರ ಪಡೆಯಲು ಜನರಿಗೆ ಅನುಕೂಲವಾಗುವ ಈ ಒನ್ ನೇಷನ್ ಒನ್ ರೇಷನ್ ಕಾರ್ಡ್‌ ಗೆ ಸಂಬಂಧಿಸಿದ ಸ್ಮಾರ್ಟ್‌ ಫೋನ್ ಆಪ್ ವೊಂದನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದೆ. ಪಡಿತರ ಕಾರ್ಡ್ ಹೊಂದಿದವರಿಗೆ ಸುಲಭವಾಗುವ ಹಾಗೆ ಕೇಂದ್ರ ಸರ್ಕಾರ ‘ಮೇರಾ ರೇಷನ್’ ಮೊಬೈಲ್ ಆಯಪ್ ನ್ನು …

Read More »

ರಾಜ್ಯ ಸರ್ಕಾರದಿಂದ ಬಡ ಜನತೆಗೆ ಬಿಗ್ ಶಾಕ್ : ಹೊಸ `BPL’ ಕಾರ್ಡ್ ನೀಡುವ ಪ್ರಕ್ರಿಯೆ ಸ್ಥಗಿತ

ಬೆಂಗಳೂರು : ರಾಜ್ಯ ಸರ್ಕಾರವು ಬಡ ಜನತೆಗೆ ಮತ್ತೊಂದು ಶಾಕ್ ನೀಡಿದ್ದು, ಕೊರೊನಾ ಕಾರಣ ನೀಡಿ ಒಂದು ವರ್ಷದಿಂದ ರೇಷನ್ ಕಾರ್ಡ್ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವವರು ಹಾಗೂ ಅರ್ಜಿ ಸಲ್ಲಿಸಲು ಕಾಯುತ್ತಿರುವವರು ಮತ್ತಷ್ಟು ದಿನ ಕಾಯುವುದು ಅನಿವಾರ್ಯವಾಗಿದೆ. ` ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಪಡೆಯಲು ಆನ್ ಲೈನ್ ಅರ್ಜಿಸಲ್ಲಿಸಲು ಅವಕಾಶ ನೀಡಿದ್ದರೂ, ಸರ್ಕಾರ ಆದೇಶ …

Read More »