Breaking News
Home / 2021 / ಮಾರ್ಚ್ / 20 (page 4)

Daily Archives: ಮಾರ್ಚ್ 20, 2021

ಪ್ರತಿಭಟನಾನಿರತ ರೈತರಿಗೂ ಲಸಿಕೆ ನೀಡಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌

ನವದೆಹಲಿ: ದೆಹಲಿಯ ಗಡಿಗಳಲ್ಲಿ 111 ದಿನಗಳಿಂದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೋವಿಡ್‌ ಲಸಿಕೆ ನೀಡಬೇಕೆಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಗುರುವಾರ ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಅವರು, ‘ದೇಶದಾದ್ಯಂತ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಪ್ರತಿಭಟನಾ ಸ್ಥಳದಲ್ಲಿಯೇ ಮುನ್ನೆಚ್ಚರಿಕಾ ಕ್ರಮವಾಗಿ ಸಮಾಜಿಕ ಅಂತರ ಹಾಗೂ ಕೊರೊನಾ ಸಂಬಂಧಿ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ. ಹೋರಾಟದಲ್ಲಿ ಪಾಲ್ಗೊಂಡಿರುವ ರೈತರಿಗೆ ಸರ್ಕಾರವು ಲಸಿಕೆ ನೀಡಬೇಕು. ನಾನು ಕೂಡ ಲಸಿಕೆ …

Read More »

ಅಮಾನತುಗೊಂಡ ಪೊಲೀಸ್ ಅಧಿಕಾರಿ ಬಳಿ ಮತ್ತೆರಡು ಲಕ್ಸುರಿ ಕಾರು ಪತ್ತೆ

ಮುಂಬಯಿ: ಅಮಾನತುಗೊಂಡಿರುವ ಮುಂಬಯಿ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಸಂಬಂಧಪಟ್ಟ ಇನ್ನೆರಡು ಲಕ್ಸುರಿ ಕಾರುಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್ ಐಎ) ವಶಪಡಿಸಿಕೊಂಡಿದೆ. ಎನ್ ಐಎ ಮೂಲಗಳ ಪ್ರಕಾರ ಟೊಯೊಟಾ ಲ್ಯಾಂಡ್ ಕ್ರೂಸರ್ ಪ್ರಡೊ ಕಾರು ವಾಜೆ ನಿವಾಸದಲ್ಲಿ ಪತ್ತೆಯಾಗಿದೆ. ಮರ್ಸಡೀಸ್ ಕಾರನ್ನು ಕೂಡ ಸಚಿನ್ ಮನೆಯಿಂದ ವಶಕ್ಕೆ ಪಡೆಯಲಾಗಿದೆ. ಇದುವರೆಗೆ ಒಟ್ಟು ಐದು ಲಕ್ಸುರಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ವಾಜೆ ಜತೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಹಿರಿಯ ಪೊಲೀಸ್ ಇನ್ಸ್ …

Read More »

ಹೊತ್ತಿ ಉರಿದ ಕ್ಯಾಂಟರ್: ಚಾಲಕ ಸಜೀವ ದಹನ

ಹಾಸನ: ರಸ್ತೆ ಬದಿ ನಿಲ್ಲಿಸಿದ್ದ ಕ್ಯಾಂಟರ್ ವಾಹನ ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಹಾಸನ ನಗರದ ಹೊರವಲಯದ ಬಿಟ್ಟಗೌಡನಹಳ್ಳಿಯ ಬೈಪಾಸ್ ರಸ್ತೆಯ ಬಳಿ ನಡೆದಿದೆ. ತಮಿಳುನಾಡು ಮೂಲದ ಜಮೀರ್(40) ವಾಹನದಲ್ಲಿಯೇ ಸಜೀವ ದಹನಗೊಂಡ ಚಾಲಕ. ಈತ ತಮಿಳುನಾಡಿನಿಂದ ತಂದ ಸರಕನ್ನು ನಿಗದಿತ ಸ್ಥಳಕ್ಕೆ ತಲುಪಿಸಿ ನಂತರ ಬಿಟ್ಟಗೌಡನಹಳ್ಳಿ ವೃತ್ತದ ಬೈಪಾಸ್ ರಸ್ತೆ ಬದಿ ನಿಲ್ಲಿಸಿ ವಾಹನದಲ್ಲಿಯೇ ಮಲಗಿದ್ದಾನೆ. ಬೆಳಗಿನ ಜಾವದಲ್ಲಿ ಚಾಲಕನ ಸೀಟು ಬಳಿ ಬೆಂಕಿ …

Read More »

Covid-19 Karnataka Updates: ಸತತ ನಾಲ್ಕನೇ ದಿನ ಸಾವಿರ ದಾಟಿದ ಹೊಸ ಪ್ರಕರಣ Covid-19 Karnataka Updates: ಸತತ ನಾಲ್ಕನೇ ದಿನ ಸಾವಿರ ದಾಟಿದ ಹೊಸ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಸತತ ನಾಲ್ಕನೇ ದಿನ ಹೊಸ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟಿದೆ. ಶುಕ್ರವಾರ 1,587 ಪ್ರಕರಣಗಳು ದೃಢಪಟ್ಟಿವೆ. ಮೂರುವರೆ ತಿಂಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ. ಈವರೆಗೆ ಸೋಂಕಿತರಾದವರ ಸಂಖ್ಯೆ 9.66 ಲಕ್ಷ ದಾಟಿದೆ. ಹೊಸ ಪ್ರಕರಣಗಳು ಏರುಗತಿ ಪಡೆದ ಕಾರಣ ಸಕ್ರಿಯ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದ್ದು, 12,067 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 131 ಮಂದಿ ತೀವ್ರ …

Read More »

‘ವಾಟ್ಸಾಪ್’ ಚಾಟ್ ಯುವತಿ ಸಾವಿಗೆ ಕಾರಣವಾಯ್ತು

ಸಾಮಾಜಿಕ ತಾಣಗಳು ಎಷ್ಟು ಅನುಕೂಲವೋ ಅಷ್ಟೇ ಮಾರಕವೆಂಬುದು ಹಲವು ಸಂದರ್ಭಗಳಲ್ಲಿ ಸಾಬೀತಾಗಿದ್ದು, ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ವಾಟ್ಸಾಪ್ ಮೂಲಕ ಪರಿಚಿತನಾಗಿದ್ದ ಯುವಕನೊಬ್ಬ ತನ್ನನ್ನು ಪ್ರೀತಿಸುವಂತೆ ಯುವತಿಗೆ ಗಂಟು ಬಿದ್ದ ಹಿನ್ನೆಲೆಯಲ್ಲಿ ಬೇಸತ್ತ ಆಕೆ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೆಂಚನಾಲ ಕಲ್ಯಾಣಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ 19 ವರ್ಷದ …

Read More »