Breaking News

Daily Archives: ಮಾರ್ಚ್ 22, 2021

ತಾನೂ ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿ: ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ತಾವು ಟಿಕೆಟ್ ಆಕಾಂಕ್ಷಿ ಆಗಿದ್ದು, ತಮಗೆ ಟಿಕೆಟ್ ದೊರೆಯುವ ವಿಶ್ವಾಸವಿದೆ ಎಂದು ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಷಯವಾಗಿ ಹಲವು ನಾಯಕರೊಂದಿಗೆ ಚರ್ಚಿಸಿದ್ದೇನೆ. ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ನನಗೀಗ 66 ವರ್ಷ, ಇದು ಕೊನೆಯ ಯತ್ನ. ದೊರೆತರೆ ಸರಿ ಇಲ್ಲವಾದರೆ ಇಲ್ಲ. ಪಕ್ಷೇತರನಾಗಿ ಸ್ಪರ್ಧಿಸುವುದಿಲ್ಲ ಎಂದರು. …

Read More »

ಲೋಕಸಭಾ ಉಪಚುನಾವಣೆ ಹಿನ್ನೆಲೆ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು – ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ. ಡಾ.ಕೆ.ಹರೀಶ್ ಕುಮಾರ ಬೆಳಗಾವಿಯ ನೂತನ ಜಿಲ್ಲಾಧಿಕಾರಿಗಳಾಗಿದ್ದಾರೆ. ಹರೀಶ್ ಕುಮಾರ ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಆಯುಕ್ತರಾಗಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ಕಾರವಾರ ಜಿಲ್ಲಾಧಿಕಾರಿಗಳಾಗಿಯೂ ಕೆಲಸಮಾಡಿದ್ದಾರೆ     ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಎಂ.ಜಿ.ಹಿರೇಮಠ ಬೆಳಗಾವಿ ಜಿಲ್ಲೆಯವರಾಗಿರುವುದರಿಂದ ಅವರನ್ನು ಚುನಾವಣೆ ಸಂದರ್ಭದಲ್ಲಿ ವರ್ಗಾಯಿಸಲಾಗಿದೆ.

Read More »

ಸಿಇಟಿ, ನೀಟ್‌ ಜತೆಗೆ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್‌ ಕೋಚಿಂಗ್ : ʼಗೆಟ್‌-ಸೆಟ್‌ ಗೋʼ ವ್ಯವಸ್ಥೆಗೆ CM ಯಡಿಯೂರಪ್ಪ ಚಾಲನೆ

ಬೆಂಗಳೂರು : ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ, ನೀಟ್‌ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್‌ ನೀಡಲಾಗುವ ʼಗೆಟ್‌-ಸೆಟ್‌ ಗೋʼ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ʼಗೆಟ್‌-ಸೆಟ್‌ ಗೋʼ (GetCETgo) ವ್ಯವಸ್ಥೆಗೆ ಚಾಲನೆ ಕೊಟ್ಟರಲ್ಲದೆ; ‘ಈವರೆಗೆ ಸಿಇಟಿ ಮತ್ತು ನೀಟ್‌ಗೆ ಮಾತ್ರ ತರಬೇತಿ ನೀಡಲಾಗುತ್ತಿತ್ತು. ಈ ವರ್ಷದಿಂದ ಹೆಚ್ಚುವರಿಯಾಗಿ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್‌ …

Read More »

ತ್ರಿವರ್ಣ ಧ್ವಜ, ಭಾರತದ ನಕ್ಷೆ ಇರುವ ಕೇಕ್‌ ಕತ್ತರಿಸುವುದು ‘ಅವಮಾನವಲ್ಲ’ : ಮದ್ರಾಸ್ ಹೈಕೋರ್ಟ್

ಚನ್ನೈ: ತ್ರಿವರ್ಣ ಧ್ವಜ ಮತ್ತು ಅಶೋಕ ಚಕ್ರ ವಿನ್ಯಾಸವಿರುವ ಕೇಕ್ ಕತ್ತರಿಸುವುದರಿಂದ 1971ರ ರಾಷ್ಟ್ರೀಯ ಗೌರವ ಕಾಯಿದೆ 1971ರ ಅಡಿಯಲ್ಲಿ ‘ಅವಮಾನ’ ವಲ್ಲವೆಂದು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್.ಆನಂದ್ ವೆಂಕಟೇಶ್ ಅವರಿದ್ದ ನ್ಯಾಯಾಪೀಠ ತೀರ್ಪು ನೀಡಿದೆ. ಈ ಮೂಲಕ ಅವರು 2013ರಲ್ಲಿ ಕೇಕ್ ಕತ್ತರಿಸುವ ಪ್ರಕರಣದ ಬಗ್ಗೆ ಕೊಯಮತ್ತೂರ್ ಮ್ಯಾಜಿಸ್ಟ್ರೇಟ್ ಅವರು ಆರಂಭಿಸಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿ, ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಸ್ವಾಭಿಮಾನದ ಹಲವು ಮಹತ್ವದ ಮಾಹಿತಿಗಳನ್ನು ನ್ಯಾಯಾಪೀಠ ತಿಳಿಸಿದೆ. …

Read More »

ಶಾಸಕರ ಪುತ್ರನಿಗೆ ಯುವತಿ ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬೆನ್ನಲ್ಲೇ ಇದೀಗ ಮತ್ತೊಂದು ಸಿಡಿ ಪ್ರಕರಣ ಬಹಿರಂಗವಾಗಿದೆ. ಅಶ್ಲೀಲ ವಿಡಿಯೋ ಇಟ್ಟುಕೊಂಡು ಮಾಜಿ ಶಾಸಕರ ಪುತ್ರನಿಗೆ ಯುವತಿಯೊಬ್ಬಳು ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಧಾರವಾಡದ ಮಾಜಿ ಶಾಸಕರ ಪುತ್ರನಿಗೆ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಬಳಿಕ ವಿಡಿಯೋ ಕಾಲ್ ಮಾಡಿ ಸಲುಗೆ ಬೆಳೆಸಿಕೊಂಡಿದ್ದಳು. ಹೀಗೆ ಮಾಡಿದ್ದ ವಿಡಿಯೋ ಕಾಲ್ ಗಳನ್ನೇ ಎಡಿಟ್ ಮಾಡಿ …

Read More »

ಬೆಳಗಾವಿ ಲೋಕಸಭೆ ಸೇರಿ ಉಪಚುನಾವಣೆ ಎದುರಿಸಲು ಕಾಂಗ್ರೆಸ್ ಸಂಪೂರ್ಣ ಸಿದ್ಧ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ ಲೋಕಸಭೆ ಸೇರಿ ಉಪಚುನಾವಣೆ ಎದುರಿಸಲು ಕಾಂಗ್ರೆಸ್ ಸಂಪೂರ್ಣ ಸಿದ್ಧ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ರಾಜ್ಯದಲ್ಲಿ ಏಪ್ರಿಲ್ 17ರಂದು ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ. ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಆಯ್ಕೆಗಾಗಿ ಹೈಕಮಾಂಡ್‍ಗೆ ಶಿಫಾರಸ್ಸು ಕಳುಹಿಸಲಾಗಿದ್ದು, ಆದೇಶಕ್ಕಾಗಿ ಕಾಯಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಕಾಂಗ್ರೆಸ್ ಉಪಚುನಾವಣೆ ಎದುರಿಸಲು ಸನ್ನದ್ಧವಾಗಿದೆ. ಬೆಳಗಾವಿ …

Read More »

ಲೋಕಸಭೆ ಉಪಚುನಾವಣೆ ಸಿದ್ಧತೆ ಪೂರ್ಣ, ನಾಳೆಯಿಂದ ಕಟ್ಟು ನಿಟ್ಟಿನ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮಹತ್ವದ ಮಾಹಿತಿ ನೀಡಿದರು. ಏಪ್ರೀಲ್ 17ರಂದು ಚುನಾವಣೆ ಮತದಾನ ನಿಗದಿಯಾಗಿದ್ದು, ಮಾರ್ಚ್ 23ರಿಂದ ಚುನಾವಣೆ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ತಿಳಿಸಿದರು. : ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆಳಗಾವಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಹತ್ವದ ಮಾಹಿತಿ ನೀಡಿದರು. ಏಪ್ರಿಲ್ 17ರಂದು ಉಪಚುನಾವಣೆ ಮತದಾನ ನಿಗದಿಯಾಗಿದ್ದು, ಮಾರ್ಚ್ 23ರಿಂದ ಗೆಜೆಟ್ ಪ್ರಕಟಣೆ ಮೂಲಕ ಚುನಾವಣೆ ಪ್ರಕ್ರಿಯೆಗಳು ಆರಂಭವಾಗಲಿವೆ. ನಾಮಪತ್ರ ಸಲ್ಲಿಸಲು …

Read More »

ಬಾಂಬೆ ತಂಡ’ದ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ ಯಡಿಯೂರಪ್ಪನವರೇ? ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು : ಮಸ್ಕಿಯಲ್ಲಿ ಶಾಸಕರಾಗಿರುವ ಮಹಾತ್ಯಾಗದಿಂದ ಬಿಎಸ್‌ವೈ ಅವರಿಗೆ ಅಧಿಕಾರ ಸಿಕ್ಕು 2 ವರ್ಷಗಳಾಗುತ್ತಾ ಬಂದಿವೆ. ಈ ವರೆಗೆ ಯಾಕಾಗಿರಲಿಲ್ಲ ಮಸ್ಕಿಯ ಅಭಿವೃದ್ಧಿ? ಪ್ರಗತಿಗೆ ಉಪಚುನಾವಣೆ ಮುಹೂರ್ತವಾಗಿತ್ತೇ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿರುವ ಕುಮಾರಸ್ವಾಮಿ, ಮಸ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಇತ್ತೀಚೆಗೆ ಪ್ರಚಾರ ಸಭೆಯಲ್ಲಿ ಹೇಳಿರುವುದು ಗಮನಕ್ಕೆ ಬಂತು. ಬಿಎಸ್‌ವೈ …

Read More »

ದುಬೈನಿಂದ ಬಂದ ಪ್ರಯಾಣಿಕನ ವಿಗ್‍ನಲ್ಲಿತ್ತು 5.55 ಕೆಜಿ ಚಿನ್ನ..!

ಚೆನ್ನೈ,ಮಾ.22- ಚಿನ್ನ ಕಳ್ಳಸಾಗಾಣೆಯ ಒಂದು ದೊಡ್ಡ ಜಾಲ ಭಾರತದಲ್ಲಿ ನಡೆಯುತ್ತಿದೆ ಎಂಬುದಕ್ಕೆ ಪದೇ ಪದೇ ಹಲವು ನಿದರ್ಶನಗಳು ಸಿಗುತ್ತವೆ. ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಕಳ್ಳ ಮಾರ್ಗದಲ್ಲಿ ತರಲು ಯತ್ನಿಸಿದ್ದ, ಸುಮಾರು 5.55 ಕೆಜಿ ಚಿನ್ನ ಹಾಗೂ ವಿದೇಶಿ ಕರೆನ್ಸಿಗಳನ್ನು ವಾಯುಯಾನ ಕಸ್ಟಮ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.ಈ ಸಂಬಂಧ ಆರು ಮಂದಿಯನ್ನು ಬಂಸಲಾಗಿದ್ದು, ವಿಚಿತ್ರವೆಂದರೆ ತಮ್ಮ ಬೋಳು ತಲೆಯನ್ನು ಮುಚ್ಚಿಕೊಳ್ಳಲು ವಿಗ್‍ನಲ್ಲಿ , ಕಾಲಚೀಲದಲ್ಲಿ, ಒಳಉಡುಪಿನಲ್ಲಿ ಈ ಚಿನ್ನ ಪತ್ತೆಯಾಗಿದ್ದರೆ …

Read More »

ರಮೇಶ್ ಜಾರಕಿಹೊಳಿ ಹೋದರೆ ಯಡಿಯೂರಪ್ಪ ಸರ್ಕಾರ ಜಾರಿ ಹೋಗುತ್ತೆ :ವಾಟಾಳ್ ನಾಗರಾಜ್

ಮೈಸೂರು : ರಮೇಶ್ ಜಾರಕಿಹೊಳಿ ಹೋದರೆ ಯಡಿಯೂರಪ್ಪ ಸರ್ಕಾರ ಜಾರಿ ಹೋಗುತ್ತದೆ ಎಂದು ವಾಟಾಳ್​ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಬಿಎಸ್​ವೈಗೆ ಕುಟುಕಿದ್ದಾರೆ. ನಂಜನಗೂಡಿನಲ್ಲಿ ಮಾ.26ರಂದು ಪಂಚ ಮಹಾರಥೋತ್ಸವ ನಡೆಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಡಿಯ ಹಿಂದೆ ಯಾರಿದ್ದಾರೆ ಎಂದು ತಿಳಿಯಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆದರೆ, ರಮೇಶ್ ಜಾರಕಿಹೊಳಿಯನ್ನು ಪರಮ ಪವಿತ್ರ ಎಂದು ಬಿಂಬಿಸುತ್ತಿದ್ದಾರೆ. ಜಾರಕಿಹೊಳಿ ಪರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ …

Read More »