Breaking News

Daily Archives: ಮಾರ್ಚ್ 28, 2021

ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ..!

ಹಾಸನ,ಮಾ.28-ಬಸ್ ನಿಲ್ದಾಣದಲ್ಲಿ ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದ ಕಾಮುಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ ಮೂಲದ ಅಲೆಮಾರಿ ಕುಟುಂಬವೊಂದು ಹಾಸನದ ಹೊಸ ಬಸ್ ನಿಲ್ದಾಣಕ್ಕೆ ಬಂದಿದೆ. ರಾತ್ರಿ ಪೋಷಕರೊಂದಿಗೆ ಮಲಗಿದ್ದ ಆರು ವರ್ಷದ ಬಾಲಕಿಯನ್ನು ಕಾಮುಕ ಎತ್ತಿಕೊಂಡು ಹೋಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಬೆಳಗ್ಗೆ ವಿಷಯ ಗೊತ್ತಾಗಿದೆ. ಪೊಲೀಸರ ಮೊರೆಹೋದ ಬಾಲಕಿಯ ಕುಟುಂಬ ದೂರು ನೀಡಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಸಿಸಿಕ್ಯಾಮೆರಾವನ್ನು ಪರಿಶೀಲಿಸಿದಾಗ ಬಾಲಕಿಯನ್ನು ಎತ್ತಿಕೊಂಡು ಹೋಗುವ …

Read More »

ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ನೆನಪಿನ ಶಕ್ತಿ ಕಡಿಮೆ ಆಗಿದೆ. ಮೇಟಿ ಪ್ರಕರಣವನ್ನು ಸಿಐಡಿಗೆ ಕೊಟ್ಟು ಮುಚ್ಚಿ ಹಾಕಿದ್ದರು.: ಬೊಮ್ಮಾಯಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಮರ್ಪಕವಾಗಿ ಕೆಲಸ ಮಾಡುತ್ತಿದೆ. ಆಡಿಯೋ, ವೀಡಿಯೋ, ಸಿಡಿ ಎಲ್ಲವನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಸತ್ಯಾಸತ್ಯತೆ ಹೊರಬರಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ನೆನಪಿನ ಶಕ್ತಿ ಕಡಿಮೆ ಆಗಿದೆ. ಮೇಟಿ ಪ್ರಕರಣವನ್ನು ಸಿಐಡಿಗೆ ಕೊಟ್ಟು ಮುಚ್ಚಿ ಹಾಕಿದ್ದರು. ಮೇಟಿ ವಿರುದ್ಧ ಕೇಸ್ ಕೂಡ ದಾಖಲಿಸಿರಲಿಲ್ಲ. ಆದರೆ ಈ ಪ್ರಕರಣದಲ್ಲಿ ನಾವು ಯುವತಿ ದೂರು …

Read More »

ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಕಲ್ಲು ತೂರಾಟ, ಚಪ್ಪಲಿ ಎಸೆದಂತಹ ಯಾವುದೇ ಘಟನೆ ನಡೆದೇ ಇಲ್ಲ ಎಂದು ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಕಲ್ಲು ತೂರಾಟ, ಚಪ್ಪಲಿ ಎಸೆದಂತಹ ಯಾವುದೇ ಘಟನೆ ನಡೆದೇ ಇಲ್ಲ ಎಂದು ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಸಮಜಾಯಿಷಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಹಾಗೂ ಬೆಂಬಲಿಗರ ವಾಹನದ ಮೇಲೆ ಕಲ್ಲು ತೂರಾಟದಂತಹ ಘಟನೆ ನಡೆದಿಲ್ಲ. ವಿಐಪಿಗಳು ಬಂದು ಹೋದ ಮೇಲೆ ಅಂತಹ ಘಟನೆ ನಡೆದಿದ್ದರೆ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. ಡಿ.ಕೆ.ಶಿವಕುಮಾರ್ ಬೆಳಗಾವಿ ಭೇಟಿಗೆ …

Read More »

ಅಣ್ಣಾವ್ರ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ನಟಿಸುವ ಅವಕಾಶ

ಕನ್ನಡ ಚಿತ್ರರಂಗದ ಯಶಸ್ವಿ ನಿರ್ಮಾಣ ಸಂಸ್ಥೆಯಲ್ಲಿ ಪೂರ್ಣಿಮಾ ಎಂಟರ್‌ಪ್ರೈಸಸ್ ಮೊದಲ ಸಾಲಿನಲ್ಲಿ ನಿಲ್ಲುತ್ತದೆ. ಡಾ ಪಾರ್ವತಮ್ಮ ರಾಜ್ ಕುಮಾರ್ ಮುನ್ನಡೆಸುತ್ತಿದ್ದ ಬಹುದೊಡ್ಡ ಚಲನಚಿತ್ರ ನಿರ್ಮಾಣ ಸಂಸ್ಥೆ. ಈ ಸಂಸ್ಥೆಯಡಿ ಬರಲಿರುವ ಹೊಸ ಸಿನಿಮಾದಲ್ಲಿ ನಟಿಸುವ ಅವಕಾಶ ಬಂದಿದೆ. ಪೂರ್ಣಿಮಾ ಎಂಟರ್‌ಪ್ರೈಸಸ್ ಸಂಸ್ಥೆಯಲ್ಲಿ ತಯಾರಾಗಲಿರುವ ಹೊಸ ಸಿನಿಮಾದಲ್ಲಿ ನಾಯಕಿ ನಟಿ ಪಾತ್ರಕ್ಕಾಗಿ ಆಡಿಷನ್ ಮಾಡಲಾಗುತ್ತಿದೆ. ಈ ಆಡಿಷನ್‌ನಲ್ಲಿ ಭಾಗವಹಿಸಿ ದೊಡ್ಮನೆ ನಿರ್ಮಾಣದ ಚಿತ್ರದಲ್ಲಿ ಹೀರೋಯಿನ್ ಆಗುವ ಅದೃಷ್ಟ ನಿಮ್ಮದಾಗಬಹುದು.   ಆಡಿಷನ್‌ನಲ್ಲಿ …

Read More »

ಡಿಕೆಶಿ ಕಾರಿಗೆ ಚಪ್ಪಲಿ ಎಸೆದ ರಮೇಶ್‌ ಜಾರಕಿಹೊಳಿ ಬೆಂಬಲಿಗರು

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಪರವಾಗಿ ಪ್ರಚಾರಕ್ಕೆ ಬೆಳಗಾವಿಗೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ರಮೇಶ್‌ ಜಾರಕಿಹೊಳಿ ಬೆಂಬಲಿಗರು ಘೋಷಣೆ ಕೂಗಿದರು. ಈ ವೇಳೆ ಡಿಕೆಶಿ ಬೆಂಬಲಿಗರ ಕಾರಿಗೆ ಚಪ್ಪಲಿಯನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ವಿಮಾನ ನಿಲ್ದಾಣದ ಬಳಿ ಕಾರಿನಲ್ಲಿ ಡಿಕೆಶಿ ತೆರಳುತ್ತಿದ್ದಾಗ ರಸ್ತೆಯುದ್ದಕ್ಕೂ ನಿಂತಿದ್ದ ರಮೇಶ್‌ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ʻಗೋ ಬ್ಯಾಕ್‌ ಡಿಕೆಶಿʼ ಎಂದು ಕೂಗಿ, ಕಾರಿಗೆ …

Read More »

ಡಿಕೆಶಿಗೆ ಪ್ರತಿಭಟನೆಯ ಬಿಸಿ; ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆತ; ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಆಗಮಿಸಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ಬಿಸಿ ತಟ್ಟಿದೆ. ರಮೇಶ್ ಜಾರಕಿಹೊಳಿ ಬೆಂಬಲಿಗರ ತೀವ್ರ ಪ್ರತಿಭಟನೆ, ವಿರೋಧದ ನಡುವೆಯೂ ಡಿ.ಕೆ.ಶಿವಕುಮಾರ್ ಇಂದು ಬೆಳಗಾವಿಗೆ ಭೇಟಿ ನೀಡಿದ್ದು, ಸಾಂಬ್ರಾ ವಿಮಾನ ನಿಲ್ದಾಣದಿಂದ ಹೋಟೆಲ್ ಗೆ ತೆರಳುತ್ತಿದ್ದಂತೆಯೇ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಪ್ಪು ಬಾವುಟ ಪ್ರದರ್ಶಿಸಿ, ಡಿಕೆಶಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆದರೆ ಪೊಲೀಸರು ತಡೆಯೊಡ್ಡಿದ್ದಾರೆ. …

Read More »

‘1 ರಿಂದ9 ತರಗತಿ ಪರೀಕ್ಷೆ ರದ್ದು ಮಾಡುವ ಕುರಿತು ಸಿಎಂ ಜತೆ ಚರ್ಚೆ

ಬೆಂಗಳೂರು,ಮಾ.28- ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗೆ ಕಳೆದ ಬಾರಿಯಂತೆ ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ನಾಳೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಮೂಲಕ ಕಳೆದ ಬಾರಿಯಂತೆ ಈ ಬಾರಿಯೂ 1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳು ರದ್ದಾಗುವ ಸಾಧ್ಯತೆಯಿದೆ ಎಂಬ ಸುಳಿವನ್ನು ಅವರು ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಚಪ್ಪಲಿ ಎಸೆದು ಸ್ವಾಗತ ಸ್ವಾಗತ

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭಾನುವಾರ ಬೆಳಗಾವಿಗೆ ಆಗಮಿಸಿದರು. ರಾಮಲಿಂಗಾರೆಡ್ಡಿ ಅವರ ಜೊತೆಗೆ ಆಗಮಿಸಿದ ಶಿವಕುಮಾರ ಅವರಿಗೆ ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಶಾಸಕರು ಅದ್ಧೂರಿಯಾಗಿ ಸ್ವಾಗತಕೋರಿದರು. ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ನ ಎಲ್ಲ ಮುಖಂಡರೂ ಸೇರಿ ಒಮ್ಮತದಿಂದ ಅಭ್ಯರ್ಥಿಯನ್ನಾಗಿಸಿದ್ದೇವೆ. ಒಳ್ಳೆಯ …

Read More »

ಉಪ ಚುನಾವಣೆ: ಬೆಳಗಾವಿಗೆ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಭೇಟಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭಾನುವಾರನಗರಕ್ಕೆ ಭೇಟಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರವಾಗಿ ಪ್ರಚಾರ ಕಾರ್ಯತಂತ್ರ ರೂಪಿಸುವುದಕ್ಕಾಗಿ ಅವರು ಪ್ರವಾಸ ಕೈಗೊಂಡಿದ್ದಾರೆ. ಸಾಂಬ್ರಾ ವಿಮಾನನಿಲ್ದಾಣಕ್ಕೆ ಬರುವ ಅವರು, ಸಂಜೆ 7ಕ್ಕೆ ಕಾಂಗ್ರೆಸ್‌ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಮಾರ್ಚ್‌ 29ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಕ್ಷದ ಅಭ್ಯರ್ಥಿಯೊಂದಿಗೆ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನಸಭೆ ವಿರೋಧಪಕ್ಷದ …

Read More »

ಬೆಳಗಾವಿ ಲೋಕಸಭಾ ಉಪ ಚುನಾವಣೆ: ಲಿಂಗಾಯತ ಸಮಾಜದ ಬೆಂಬಲ ಕೋರಿದ ಮಂಗಲಾ ಅಂಗಡಿ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು, ನಗರದಲ್ಲಿ ಲಿಂಗಾಯತ ಸಂಘಟನೆ ಸದಸ್ಯರೊಂದಿಗೆ ಭಾನುವಾರ ಸಭೆ ನಡೆಸಿದರು. ‘ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಉಪ ಚುನಾವಣೆಯಲ್ಲಿ ಸಮುದಾಯದ ಸಂಪೂರ್ಣ ಬೆಂಬಲ ಹಾಗೂ ಸಹಕಾರವನ್ನು ನನಗೆ ನೀಡಬೇಕು’ ಎಂದು ಕೋರಿದರು. ‘ಪತಿಯಾಗಿದ್ದ ದಿವಂಗತ ಸುರೇಶ ಅಂಗಡಿ ಅವರು ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಅವುಗಳನ್ನು ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲು ಅವಕಾಶ ಕಲ್ಪಿಸಬೇಕು’ …

Read More »