Breaking News
Home / 2021 / ಮಾರ್ಚ್ (page 14)

Monthly Archives: ಮಾರ್ಚ್ 2021

ಸಿಡಿ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಏನು.?

ಹಾವೇರಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಷಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಹಾನಾಯಕ ಮತ್ತು ಬಿಜೆಪಿ ಯುವರಾಜನ ಬಳಿ ಸಿಡಿ ತಯಾರಿಸುವ ಕಾರ್ಖಾನೆಗಳಿವೆ. ಇವರು ಸಿಡಿಗಳನ್ನು ಖರೀದಿ ಮಾಡುತ್ತಾರೆ. ಈಗಾಗಲೇ ಕಾಂಗ್ರೆಸ್ ಮಹಾನಾಯಕನ ಹೆಸರು ಹೊರಬಿದ್ದಿದೆ. ಕೆಲವೇ ದಿನಗಳಲ್ಲಿ ಬಿಜೆಪಿ ಯುವರಾಜನ ಹೆಸರು ಹೊರಬರಲಿದೆ ಎಂದು ಹೇಳಿದ್ದಾರೆ. ಮಹಾನಾಯಕ ಮತ್ತು ಯುವರಾಜರು ಹೆಣ್ಣುಮಕ್ಕಳನ್ನು ಬಿಟ್ಟು …

Read More »

‘ರಾಜ್ಯದಲ್ಲಿ 17 ಕಾಂಗ್ರೆಸ್, ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟರು; ತಮ್ಮನ್ನು ಗೆಲ್ಲಿಸಿದ ಪಕ್ಷಕ್ಕೆ ದ್ರೋಹ ಬಗೆದರು’

ಶಿವಮೊಗ್ಗ: ರಮೇಶ್ ಜಾರಕಿಹೊಳಿ​ ಸಿಡಿ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ಸಚಿವ ಕೆ.ಎಸ್​.ಈಶ್ವರಪ್ಪ ನಿರಾಕರಿಸಿದ್ದಾರೆ. ಜೊತೆಗೆ, ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಗರಂ ಸಹ ಆದರು. ಒಂದು ದೇಶ ಒಂದು ಚುನಾವಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಒಳ್ಳೇ ವಿಚಾರ ಕೇಳಿದ್ದೇನೆ. ಆ ದರಿದ್ರ ಸಿಡಿ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಈಶ್ವರಪ್ಪ ಹೇಳಿ ಹೊರಟು ಹೋದರು. ಇದಕ್ಕೂ ಮುಂಚೆ, ನಗರದಲ್ಲಿ ನಡೆದ ಒಂದು ದೇಶ ಒಂದು ಚುನಾವಣೆ …

Read More »

ಅಚ್ಛೇ ದಿನ್‌ ಬರುತ್ತದೆ ಎಂದು ಕಾಯುತ್ತಾ ಕೂರಬೇಡಿ, ಅಚ್ಛೇ ದಿನ್‌ ಬರುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಅಚ್ಛೇ ದಿನ್‌ ಬರುತ್ತದೆ ಎಂದು ಕಾಯುತ್ತಾ ಕೂರಬೇಡಿ. ಅಚ್ಛೇ ದಿನ್‌ ಯಾವತ್ತೂ ಬರುವುದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ. ತಮಿಳುನಾಡಿನ ಥಳಿ, ಹೊಸೂರು ಹಾಗೂ ವೇಪನಪಲ್ಲಿ ವಿಧಾನಸಭೆ ಕ್ಷೇತ್ರಗಳಲ್ಲಿ ಶನಿವಾರ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮಿಳುನಾಡಿನ ಜನತೆ ಈವರೆಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅವರಿಗೆ ನಮೋ ನಮಃ ಎಂದು ತಿಳಿಸಿದರು. ಎಐಎಡಿಎಂಕೆ ಹೆಗಲ ಮೇಲೆ ಕುಳಿತು ಬಿಜೆಪಿ ತಮಿಳುನಾಡಿನಲ್ಲಿ …

Read More »

ಯಶಸ್ವಿ ಶಸ್ತ್ರಚಿಕಿತ್ಸೆ: ಯುವತಿ ಹೊಟ್ಟೆಯಲ್ಲಿದ್ದ 8 ಕೆ.ಜಿ. ಗಡ್ಡೆ ಹೊರಕ್ಕೆ

ಸಾಗರ: ಇಲ್ಲಿನ ತಾಯಿ ಮಗು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು 21 ವರ್ಷದ ಯುವತಿಯ ಹೊಟ್ಟೆಯಲ್ಲಿದ್ದ 8 ಕೆ.ಜಿ. ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಪ್ರಸೂತಿ ತಜ್ಞರಾದ ಡಾ. ಪ್ರತಿಮಾ ಅವರ ಬಳಿ ಸೊರಬ ತಾಲ್ಲೂಕಿನ ಯುವತಿಯೊಬ್ಬರು ತೀವ್ರವಾಗಿ ಕಾಡುತ್ತಿದ್ದ ಹೊಟ್ಟೆನೋವಿಗೆ ಚಿಕಿತ್ಸೆ ಪಡೆಯಲು ಬಂದಿದ್ದರು. ಯುವತಿಯನ್ನು ಸ್ಕ್ಯಾನಿಂಗ್‌ಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ದೊಡ್ಡ ಗಾತ್ರದ ಗಡ್ಡೆ ಬೆಳೆದಿರುವುದು ಪತ್ತೆಯಾಗಿದೆ. ಅದನ್ನು ಹಾಗೆಯೇ ಬಿಟ್ಟರೆ ಮುಂದಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತಿರುಗುವ …

Read More »

ಶೀಘ್ರವೇ `ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್’ ರೈಲು

ಹುಬ್ಬಳ್ಳಿ : ರಾಜ್ಯದ ರೈಲು ಪ್ರಯಾಣಿಕರಿಗೆ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು ಆರಂಭಕ್ಕೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಮ್ಮತಿ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹುಬ್ಬಳ್ಳಿ ಬೆಂಗಳೂರು ಮಧ್ಯೆ ಸೂಪರ್ ಫಾಸ್ಟ್ ರೈಲು ಆರಂಭಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಹುಬ್ಬಳ್ಳಿಯಿಂದ ಬೆಂಗಳೂರಿಗೆ ರೈಲು ಪ್ರಯಾಣದ ಅವಧಿ 8 …

Read More »

ತೈಲೋತ್ಪನ್ನ: ಜನರಿಗೆ ತೆರಿಗೆ ಹೊರೆ

ಆದಾಯ, ವೆಚ್ಚ, ತೈಲೋತ್ಪನ್ನಗಳು ಮತ್ತು ಇತರ ಅಗತ್ಯ ವಸ್ತುಗಳ ಬೆಲೆ ಏರಿಕೆ…ಇವು ಇದೀಗ ಜನಸಾಮಾನ್ಯರ ದೈನಂದಿನ ಚರ್ಚೆಯ ವಿಷಯಗಳು. ಬೇಸಗೆಯ ಸುಡುಬಿಸಿಲಿನ ಝಳಕ್ಕಿಂತಲೂ ಬೆಲೆ ಏರಿಕೆಯ ಬಿಸಿ ಶ್ರೀಸಾಮಾನ್ಯರನ್ನು ಹೆಚ್ಚು ತಟ್ಟತೊಡಗಿದೆ. ಕಳೆದ ವರ್ಷವಿಡೀ ಕೊರೊನಾದಿಂದಾಗಿ ಕಂಗೆಟ್ಟಿದ್ದ ಜನಸಾಮಾನ್ಯರು ಮೈಕೊಡವಿ ಎದ್ದುನಿಲ್ಲುವ ಪ್ರಯತ್ನದಲ್ಲಿರುವಾಗಲೇ ಬೆಲೆ ಏರಿಕೆ ಹೊಡೆತ ನೀಡಿದೆ. ಬೆಲೆ ಏರಿಕೆಗೆ ಸರಕಾರ ಬೆಟ್ಟು ಮಾಡುತ್ತಿರುವುದು ಕಚ್ಚಾ ತೈಲ ಬೆಲೆ ಹೆಚ್ಚಳದತ್ತ. ವಾಸ್ತವವಾಗಿ ಕಳೆದ ಏಳು ವರ್ಷಗಳಲ್ಲಿ ಸರಕಾರವು ಪೆಟ್ರೋಲಿಯಂ …

Read More »

ಯುವತಿಯ ಪೋಷಕರು ಡಿಕೆಶಿ ಬಗ್ಗೆ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು: ಜೋಶಿ

ಬೆಳಗಾವಿ: ‘ನಮ್ಮ ಮಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಣ ಕೊಟ್ಟು ಗೋವಾಕ್ಕೆ ಕಳುಹಿಸಿದ್ದರು ಎಂದು ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ.ಯಲ್ಲಿ ಕಾಣಿಸಿಕೊಂಡ ಯುವತಿಯ ಪೋಷಕರು ಹೇಳಿಕೆ ನೀಡಿರುವುದನ್ನು ಎಸ್‌ಐಟಿಯವರು ಗಂಭೀರವಾಗಿ ಪರಿಗಣಿಸಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದರು. ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಕರಣ ಗೊಂದಲಕಾರಿಯಾಗಿದೆ. ತನಿಖಾ ಸಂಸ್ಥೆಯು ಕಾನೂನಾತ್ಮಕವಾಗಿ ತಾರ್ಕಿಕ ಅಂತ್ಯಕ್ಕೆ ಬೇಗನೆ ತೆಗೆದುಕೊಂಡು ಹೋಗಬೇಕು. ಯುವತಿಯ ಪೋಷಕರು ಮಾಡಿರುವ ಆರೋಪಗಳು ಗಂಭೀರ …

Read More »

ಡಿಕೆಶಿ ಸಪೋರ್ಟ್ ಇದೆ, ಗೋವಾಕ್ಕೆ ಕಳಿಸಿದ್ದಾರೆ; ಸಿಡಿ ಯುವತಿಯ ಮತ್ತೊಂದು ಆಡಿಯೋ ಬಹಿರಂಗ

ಯುವತಿಯ ಮತ್ತೊಂದು ಆಡಿಯೋ ಬಹಿರಂಗವಾಗಿದೆ. ಡಿ.ಕೆ. ಶಿವಕುಮಾರ್ ಹೆಸರು ಹೇಳಿದ ಸಿಡಿ ಯುವತಿಯ ಇನ್ನೊಂದು ಆಡಿಯೋ ಬಹಿರಂಗವಾಗಿದೆ. ಸಹೋದರನೊಂದಿಗೆ ಯುವತಿ ಮಾತನಾಡಿರುವ ಆಡಿಯೋ ಬಹಿರಂಗವಾಗಿದೆ. ಇವತ್ತು 1ನಿಮಿಷ 51 ಸೆಕೆಂಡ್ ಆಡಿಯೋ ಬಹಿರಂಗವಾಗಿದ್ದು, ನನಗೆ ಡಿಕೆಶಿ ಸಪೋರ್ಟ್ ಇದೆ ಎಂದು ಸಹೋದರನೊಂದಿಗೆ ಮಾತನಾಡುತ್ತಾ ಯುವತಿ ಹೇಳಿದ್ದು. ನಾನು ಗೋವಾಕ್ಕೆ ಹೋಗುತ್ತಿದ್ದೇನೆ. ನೀನು ಭಯ ಪಡಬೇಡ. ಮನೆಯವರಿಗೆ ವಿಷಯ ತಿಳಿಸಬೇಡ ಎಂದು ಹೇಳಿದ್ದಾರೆ. ಇದೇ ವೇಳೆ ಸಹೋದರ ಸಿಮ್ ಕಾರ್ಡ್ ಬದಲಿಸು …

Read More »

ಕೆಪಿಸಿಸಿ ಕಚೇರಿಯಲ್ಲೇ ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡಿದ್ದೀರಾ? – ಬಿಜೆಪಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ಒತ್ತೆಯಾಗಿಟ್ಟುಕೊಂಡು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ರಾಜಕೀಯ ಆಟವಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿದ್ದು, ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡು ರಾಜಕೀಯ ಆಟ ಆಡುತ್ತಿರುವ ಮಾನ್ಯ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮದೆಂತಹ ಕುತ್ಸಿತ ಮನೋಸ್ಥಿತಿ ಇರಬಹುದು? ಕೆಪಿಸಿಸಿ ಕಚೇರಿಯಲ್ಲೇ ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡಿದ್ದೀರಾ? ಎಂದು ಪ್ರಶ್ನಿಸಿದೆ. ಸಂತ್ರಸ್ಥೆಯ ಕುರಿತು ಮೊಸಳೆ ಕಣ್ಣೀರು ಸುರಿಸಿದ ಕಾಂಗ್ರೆಸ್‌ ನಾಯಕರು ಈಗೆಲ್ಲಿದ್ದಾರೆ? ಎಂದು ಬಿಜೆಪಿ ಕಿಡಿ …

Read More »

ಪೋಷಕರಿಂದಲೇ ಬಯಲಾಯ್ತು ರಹಸ್ಯ – ಯುವತಿಗೆ ದುಡ್ಡು ಕೊಟ್ಟು ಒತ್ತೆಯಾಳಾಗಿಟ್ಟುಕೊಂಡ ಡಿಕೆಶಿ

ಒಬ್ಬ ಹೆಣ್ಣು ಮಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ನಮ್ಮ ಅಕ್ಕನನ್ನು ಒತ್ತೆಯಾಳಾಗಿ ಮಾಡಿದ್ದಾರೆ ಎಂದು ಸಿಡಿಯಲ್ಲಿದ್ದ ಯುವತಿಯ ಸಹೋದರ ಆರೋಪಿಸಿದ್ದಾರೆ. ಎಸ್‌ಐಟಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಕುಟುಂಬದವರು, ನನ್ನ ಅಕ್ಕನ ಜೊತೆ ಮೊಬೈಲ್ ನಲ್ಲಿ ಚರ್ಚೆ ಮಾಡಿದ ಆಡಿಯೋ ವೈರಲ್ ಆಗಿದೆ. ನಮ್ಮ ಕುಟುಂಬಕ್ಕೆ ಏನೇ ತೊಂದರೆಯಾದರೂ ಡಿ.ಕೆ. ಶಿವಕುಮಾರ್ ಅವರೇ ಹೊಣೆ ಎಂದು ಪೋಷಕರು ಹೇಳಿದ್ದಾರೆ. ನಮ್ಮ ಅಕ್ಕನನ್ನು ನಮಗೆ ತಂದು ಒಪ್ಪಿಸಿ …

Read More »