ಮೈಸೂರು(ಮಾ.25): ಕೋಟ್ಯಾಂತರ ರೂಪಾಯಿ ಲೂಟ್ ಆಗಿರುವ ಇಡಿ ಬಗ್ಗೆ ಚರ್ಚೆ ಮಾಡೋಲ್ಲ ಬರಿ ಸಿಡಿ ಚರ್ಚೆ ಮಾಡುತ್ತೀರಲ್ಲಾ, ಬಜೆಟ್ ಚರ್ಚೆಗಿಂತ ಸಿಡಿಯೇ ಹೆಚ್ಚಾಯ್ತಾ ನಿಮಗೆ ಅಂತ, ಸದನದಲ್ಲಿ ಸರ್ಕಾರಕ್ಕೆ ಚಾಟಿ ಬೀಸಲಿಲ್ಲ ಎಂದು ವಿರೋಧ ಪಕ್ಷಗಳಿಗೆ ಪರಿಷತ್ ಸದಸ್ಯ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಚಾಟಿ ಬೀಸಿದ್ದಾರೆ. ನಿನ್ನೆ ಮುಗಿದ ಸದನ ಮುಗಿತು ಅಷ್ಟೆ, ಇದರಲ್ಲಿ ರಾಜ್ಯದ ಜನರಿಗೆ ಯಾವುದೇ ಪ್ರಯೋಜನ ಆಗಲಿಲ್ಲ. ಬಜೆಟ್ ಅಧಿವೇಶ ಅಂದ್ರೆ ಆದಾಯ, ತೆರಿಗೆ, ಹಣಕಾಸಿನ ಬಗ್ಗೆ …
Read More »Monthly Archives: ಮಾರ್ಚ್ 2021
C.D. ಯುವತಿ ಪರ ಮಹಿಳಾ ಕಾಂಗ್ರೆಸ್ ನಿಂತಿದೆ.
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ‘ಸಂತ್ರಸ್ತ’ ಯುವತಿ ಪರ ಮಹಿಳಾ ಕಾಂಗ್ರೆಸ್ ನಿಂತಿದೆ. ಒಬ್ಬ ರಾಜಕಾರಣಿಯಿಂದ ಆಕೆಗೆ ಅನ್ಯಾಯ ಆಗಿದ್ದರೂ ಸಂತ್ರಸ್ತೆಗೆ ಸರ್ಕಾರದಿಂದ ರಕ್ಷಣೆ ಕೊಡಲು ಸಾಧ್ಯವಾಗಿಲ್ಲ. ಸರ್ಕಾರದ ಮೇಲೆ ಆಕೆಗೆ ನಂಬಿಕೆ ಇಲ್ಲ, ಹಾಗಾಗಿ ಕಾಂಗ್ರೆಸ್ ನಾಯಕರ ಬಳಿ ರಕ್ಷಣೆ ಕೋರಿದ್ದಾಳೆ. ಆ ಹೆಣ್ಣುಮಗಳ ರಕ್ಷಣೆಗೆ ನಾವಿದ್ದೇವೆ ಎಂದು ಕಾಂಗ್ರೆಸ್ ಶಾಸಕಿಯರು ಹೇಳಿದ್ದಾರೆ. ಸಚಿವ ಡಾ.ಕೆ. ಸುಧಾಕರ್ ನೀಡಿದ್ದ ಏಕಪತ್ನಿವ್ರತಸ್ಥ ಹೇಳಿಕೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ …
Read More »ಬಸವಕಲ್ಯಾಣ ಅಭ್ಯರ್ಥಿಯಾಗಲು ಬಿಜೆಪಿಗೆ ಟಿಕೆಟ್ ಆಕಾಂಕ್ಷಿಯಿಂದ ದೊಡ್ಡ ಮಟ್ಟದ ಹಣ ಸಂದಾಯ: HDK
ಕಲಬುರಗಿ: ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ಬಿಜೆಪಿ ಟಿಕೆಟ್ ಆಕಾಂಕ್ಷಿಯೋರ್ವ ನಾಯಕರಿಗೆ ದೊಡ್ಡ ಮಟ್ಟದ ಹಣ ಸಂದಾಯ ಮಾಡಿದ್ದಾರೆ. ಗಾಬರಿಯಾಗುವ ಮೊತ್ತವನ್ನು ಆ ಆಕಾಂಕ್ಷಿ ನೀಡಿದ್ದಾರೆ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಸಂದಾಯವಾದ ಹಿನ್ನೆಲೆಯಲ್ಲಿ ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ರಾಜ್ಯದ ಹಣ ಲೂಟಿ ಮಾಡಿ ಬಿಜೆಪಿ ಚುನಾವಣೆ ಎದುರಿಸುತ್ತಿದೆ ಎಂದು ದೂರಿದರು. ಬಿಜೆಪಿಯವರು ಯಾರನ್ನ ನೆಮ್ಮದಿಯಿಂದ ಬದುಕಲು …
Read More »ಸತೀಶ ಜಾರಕಿಹೊಳಿ ಸ್ಪರ್ಧೆಯಿಂದ ಯಾರಿಗೆ ಲಾಭ? ಯಾರಿಗೆ ನಷ್ಟ? ಎಂಬ ಚರ್ಚೆ ಶುರುವಾಗಿದ್ದು, ಬಿಜೆಪಿ ಇದಕ್ಕೆ ಪ್ರತ್ಯಾಸ್ತ್ರವಾಗಿ ಯಾರನ್ನು ಕಣಕ್ಕೆ ಇಳಿಸಿದೆ ಎಂಬ ಕುತೂಹಲ ಹುಟ್ಟಿಸಿದೆ
ಬೆಳಗಾವಿ (ಮಾ. 25): ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 17ರಂದು ನಡೆಯಲಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಕಾಂಗ್ರೆಸ್ ಪಕ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಈ ಬೆಳವಣಿಗೆ ಹಿಂದ ಹಲವು ರಾಜಕೀಯ ಲೆಕ್ಕಾಚಾರಗಳು ಜಿಲ್ಲೆಯಲ್ಲಿ ಆರಂಭವಾಗಿದೆ. ಸತೀಶ ಜಾರಕಿಹೊಳಿ ಸ್ಪರ್ಧೆಯಿಂದ ಯಾರಿಗೆ ಲಾಭ? ಯಾರಿಗೆ ನಷ್ಟ? ಎಂಬ ಚರ್ಚೆ ಶುರುವಾಗಿದ್ದು, ಬಿಜೆಪಿ ಇದಕ್ಕೆ ಪ್ರತ್ಯಾಸ್ತ್ರವಾಗಿ ಯಾರನ್ನು ಕಣಕ್ಕೆ ಇಳಿಸಿದೆ …
Read More »ಉಪ ಚುನಾವಣಾ ಕಣವು ಜಾರಕಿಹೊಳಿ ಸಹೋದರರ ಸವಾಲು-ಜವಾಬುಗಳಿಗೆ ವೇದಿಕೆಯಾಗುವ ಸಾಧ್ಯತೆ
ಬೆಳಗಾವಿ: ಬಿಜೆಪಿಯ ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಎದುರಾಗಿರುವ ಉಪ ಚುನಾವಣಾ ಕಣವು ಜಾರಕಿಹೊಳಿ ಸಹೋದರರ ಸವಾಲು-ಜವಾಬುಗಳಿಗೆ ವೇದಿಕೆಯಾಗುವ ಸಾಧ್ಯತೆಗಳಿವೆ. ನಾಲ್ವರಲ್ಲಿ ತಲಾ ಇಬ್ಬರು ಸಹೋದರರು ಬಿಜೆಪಿ ಹಾಗೂ ಕಾಂಗ್ರೆಸ್ನಲ್ಲಿ ಇದ್ದಾರೆ. ಅವರವರಿಗೆ ಬೇಕಾದವರ ಗೆಲುವಿಗೆ ಪೈಪೋಟಿ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ‘ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಸತೀಶ ಜಾರಕಿಹೊಳಿ ಅವರೇ ಕಾಂಗ್ರೆಸ್ ಅಭ್ಯರ್ಥಿ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು …
Read More »ಸುಧಾಕರ್ ಅವರನ್ನು ಶಾಸಕ ಸ್ಥಾನದಿಂದಲೇ ಅನರ್ಹಗೊಳಿಸುವಂತೆ ಮಹಿಳಾ ಕಾಂಗ್ರೆಸ್ ಆಗ್ರಹ
ಬೆಂಗಳೂರು: 225 ಶಾಸಕರ ಬಗ್ಗೆಯೂ ಕೀಳಾಗಿ ಮಾತನಾಡುವ ಮೂಲಕ ವಿಧಾನಸಭೆಗೆ ಅವಮಾನ ಮಾಡಿರುವ ಡಾ.ಕೆ. ಸುಧಾಕರ್ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾ ಮಾಡಬೇಕು. ಅವರು ಶಾಸಕರಾಗಿಯೂ ಉಳಿಯಬಾರದು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಆಗ್ರಹಿಸಿದೆ. ಪಕ್ಷದ ಶಾಸಕಿಯರ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಪುಷ್ಪಾ ಅಮರನಾಥ್, ‘ ಸುಧಾಕರ್ ಆರೋಗ್ಯ ಸಚಿವರಲ್ಲ, ಅನಾರೋಗ್ಯ ಸಚಿವ. ಅವರು ಸಚಿವರಾಗಿರಲು ನಾಲಾಯಕ್. ಮುಖ್ಯಮಂತ್ರಿ …
Read More »ಒಂದಲ್ಲ, ನನ್ನ ವಿರುದ್ಧ ಇನ್ನೂ 10 ಸಿಡಿ ಬರಲಿ ಎದುರಿಸಲು ನಾನು ಸಿದ್ಧನಿದ್ದೇನೆ.: ರಮೇಶ್ ಜಾರಕಿಹೊಳಿ
ಬೆಂಗಳೂರು: ನನ್ನ ವಿರುದ್ಧ ಷಡ್ಯಂತ್ರ ನಡೆದಿರುವುದಂತು ಸ್ಪಷ್ಟ. ಸಾಕಷ್ಟು ಪ್ಲಾನ್ ಮಾಡಿ ನನ್ನನ್ನು ಸಿಲುಕಿಸುವ ತಂತ್ರ ಮಾಡಿದ್ದಾರೆ. ಇದರಲ್ಲಿ ನನ್ನದೇನೂ ತಪ್ಪಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸಿಡಿ ಲೇಡಿ ಮತ್ತೊಂದು ಸಿಡಿ ಬಿಡುಗಡೆ ಮಾಡಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ದೂರು ಕೊಟ್ಟು ಅರ್ಧ ಗಂಟೆ ಬಳಿಕ ಸಿಡಿ ಬಿಡುಗಡೆಯಾಗುತ್ತೆ. ಕೆಲ ದಿನಗಳ ನಂತರ ಯುವತಿ ಒಂದು ವಿಡಿಯೋ …
Read More »ನನ್ನ ಜೇಬಲ್ಲಿ ಬಾಂಬ್ ಇದೆ. ತಡ್ಕೊಳಿ. ಸದ್ಯ ಗಪ್ಚುಪ್ ಇದ್ದೇನೆ. ಹೊರಹಾಕಿದ್ರೆ ಅಷ್ಟೇ.
ಬೆಂಗಳೂರು, ಮಾರ್ಚ್ 25; “ನನ್ನ ಜೇಬಿನಲ್ಲೊಂದು ಬಾಂಬ್ ಇದೆ. ನನ್ನ ವಿರುದ್ಧ ದೊಡ್ಡ ಮಟ್ಟದ ಷಡ್ಯಂತ್ಯ ನಡೆದಿರುವುದು ಈಗ ಖಚಿತವಾಗಿದೆ” ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ದೂರು ಕೊಟ್ಟ ಅರ್ಧ ಗಂಟೆಯಲ್ಲಿ ವಿಡಿಯೋ ಬಿಡುಗಡೆ ಆಗುತ್ತದೆ. ಇದು ಎಷ್ಟು ದೊಡ್ಡ ಷಡ್ಯಂತ್ಯ ಎಂಬುದು ಈಗ ತಿಳಿಯುತ್ತಿದೆ” ಎಂದರು. “ಇನ್ನೂ 10 ಸಿಡಿ ಬರಲಿ ಎದುರಿಸಲು ನಾನು ಸಿದ್ಧವಾಗಿದ್ದೇನೆ. …
Read More »ಸಿಡಿ ಲೇಡಿಯ’ 2ನೇ ವೀಡಿಯೋ ಹೇಳಿಕೆ ಕುರಿತು ‘ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ’ ಹೇಳಿದ್ದೇನು ಗೊತ್ತಾ.?
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿ ಇಂದು ಎರಡನೇ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆ ವೀಡಿಯೋದಲ್ಲಿ ಎಸ್ಐಟಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೂಡ ಮಾಡಿದ್ದರು. ಇದರ ಬಗ್ಗೆ ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಏನ್ ಹೇಳಿದ್ರು ಅಂತ ಮುಂದೆ ಓದಿ.. ಸಿಡಿಯಲ್ಲಿನ ಸಂತ್ರಸ್ತ ಯುವತಿ ಇಂದು 2ನೇ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ, ಆ ವೀಡಿಯೋದಲ್ಲಿ ತಾನು ಸಿಡಿಯನ್ನು ಪೊಲೀಸ್ ಕಮೀಷನರ್ ಅವರಿಗೆ …
Read More »ಹೃದಯ ಕರಗಿಸುತ್ತದೆ ‘ವಿಶೇಷ’ ಮಕ್ಕಳೊಂದಿಗೆ ಸಲ್ಮಾನ್ ಖಾನ್ ಮಾಡಿದ ನೃತ್ಯ
ಮಕ್ಕಳ ಎದುರು ಮಗುವಾಗಿಬಿಡುತ್ತಾರೆ ಸಲ್ಮಾನ್ ಖಾನ್. ಮಕ್ಕಳೊಂದಿಗೆ ಸಲ್ಮಾನ್ ಆಟವಾಡುತ್ತಿರುವ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಲಭ್ಯವಿವೆ. ಸಲ್ಮಾನ್ ಖಾನ್ ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿದ್ದು ವಿಡಿಯೋದಲ್ಲಿ ‘ವಿಶೇಷ’ ಮಕ್ಕಳೊಂದಿಗೆ ಸಲ್ಮಾನ್ ಖಾನ್ ನೃತ್ಯ ಮಾಡುತ್ತಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ಸಲ್ಮಾನ್ ಖಾನ್ರ ಆಪ್ತ ನಟಿ, ರಾಜಕಾರಣಿ ಬಿನಾ ಕಾಕ್ ಸ್ಥಾಪಿಸಿರುವ ವಿಶೇಷ ಮಕ್ಕಳ ಶಾಲೆ ಉಮಂಗ್ ಗೆ ಇತ್ತೀಚೆಗೆ ಭೇಟಿ ನೀಡಿದ್ದ …
Read More »