Breaking News
Home / 2021 / ಮಾರ್ಚ್ (page 31)

Monthly Archives: ಮಾರ್ಚ್ 2021

ಎಸ್‌ಐಟಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ: ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣದಲ್ಲಿ ರಾಜಿನಾಮೆ ಸಲ್ಲಿಸಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಅವರ ಸಹೋದರ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್‌ಐಟಿ ತನಿಖೆಯ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರಮೇಶ್‌ ಜಾರಕಿಹೊಳಿ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಿಡಿ ಪ್ರಕರಣ ಕುರಿತಂತೆ ಎಸ್‌ ಐ …

Read More »

ಜಿ.ಪಂ., ತಾ.ಪಂ. ಚುನಾವಣೆ ಮುಂದೂಡುವುದಿಲ್ಲ: ಸರಕಾರ ಸ್ಪಷ್ಟನೆ

ಬೆಂಗಳೂರು: ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಮಾರ್ಗಸೂಚಿಗಳ ಬಗ್ಗೆ ವಿಧಾನಸಭೆಯಲ್ಲಿ ಪಕ್ಷಾತೀತವಾಗಿ ಸದಸ್ಯರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಗುರುವಾರ ಸಭೆ ನಡೆಸಿ ಪರಿಷ್ಕೃತ ಮಾರ್ಗಸೂಚಿಗಳನ್ನು ರಾಜ್ಯ ಚುನಾವಣ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಸರಕಾರ ಪ್ರಕಟಿಸಿದೆ. ಈ ನಡುವೆ, ಯಾವುದೇ ಕಾರಣಕ್ಕೂ ಜಿ.ಪಂ., ತಾ.ಪಂ. ಚುನಾವಣೆ ಮುಂದೂಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸೋಮವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ವಿ. ಸುನಿಲ್‌ ಕುಮಾರ್‌ ಪ್ರಸ್ತಾವಿಸಿದ ವಿಷಯದ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಜಿ.ಪಂ., ತಾ.ಪಂ. ಕ್ಷೇತ್ರಗಳ …

Read More »

ಸಿ.ಡಿ. ಪ್ರಕರಣ: ನ್ಯಾಯಾಂಗ ತನಿಖೆಗೆ ಪಟ್ಟು, 6 ಸಚಿವರ ರಾಜೀನಾಮೆಗೂ ಕೈ ಆಗ್ರಹ

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಇದ್ದಾರೆ ಎನ್ನಲಾದ ಅಶ್ಲೀಲ ಸಿ.ಡಿ. ಪ್ರಕರಣ ವಿಧಾನಸಭೆಯಲ್ಲಿ ಸೋಮವಾರ ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್‌ ಸದಸ್ಯರ ನಡುವೆ ಭಾರೀ ವಾಗ್ವಾದಕ್ಕೆ ಕಾರಣವಾಯಿತು. ಸುಮಾರು 4 ತಾಸುಗಳ ಕಾಲ ಚರ್ಚೆ ನಡೆದು, ಸರಕಾರದ ಉತ್ತರದಿಂದ ತೃಪ್ತರಾಗದ ಕಾಂಗ್ರೆಸ್‌ ಸದಸ್ಯರು ಆರು ಮಂದಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಸಿ.ಡಿ. ಪ್ರಕರಣದ ಕುರಿತು ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ …

Read More »

ಕನ್ಯಾಕುಮಾರಿ ಟು ಕಾಶ್ಮೀರ: ಕೋವಿಡ್ ವಾರಿಯರ್ ಗಳ ಗೌರವಾರ್ಥ ಕನ್ನಡಿಗನಿಂದ ಪಾದಯಾತ್ರೆ

ಮೈಸೂರು: ಕೋವಿಡ್ ವಾರಿಯರ್ ಗಳ ತ್ಯಾಗಮತ್ತು ಪ್ರಯತ್ನಗಳನ್ನು ಪ್ರಶಸ್ತಿ ನೀಡುವುದು, ಕಲಾಕೃತಿ ರಚನೆ ಸೇರಿ ಅನೇಕ ವಿಧದಲ್ಲಿ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು ಗುರುತಿಸಿವೆ. ಆದರೆ ಮೈಸೂರಿನ ಈ 33 ವರ್ಷದ ವ್ಯಕ್ತಿ ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿರುವ ಕೋವಿಡ್ ವಾರಿಯರ್ ಗಳಿಗೆ ಅದ್ಭುತ ಗೌರವ ಸಲ್ಲಿಸಲು ನಿರ್ಧರಿಸಿದ್ದು ‘ವಾಕ್ ಫಾರ್ ಹ್ಯುಮಾನಿಟಿ’ ಎಂಬ ನೂತನ ಪ್ರಯತ್ನ ಪ್ರಾರಂಬಿಸಿದ್ದಾರೆ. ಮೈಸೂರಿನವರಾದ ಭರತ್ ಪಿ ಎನ್, ಕೋವಿಡ್ ಮುಂಚೂಣಿ ವಾರಿಯರ್ ಗಳ ಶ್ರಮ …

Read More »

ಆರು ಮಂದಿ ಸಚಿವರು ನ್ಯಾಯಾಲಯಕ್ಕೆ ಹೋಗಲು ಸಲಹೆ ಕೊಟ್ಟವರು ಅವಿವೇಕಿಗಳು: ರಮೇಶ್ ಕುಮಾರ್

ಬೆಂಗಳೂರು: ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಸಚಿವರು ನ್ಯಾಯಾಲಯಕ್ಕೆ ಹೋಗಲು ಸಲಹೆ ಕೊಟ್ಟವರು ಅವಿವೇಕಿಗಳು ಎಂದು ರಮೇಶ್ ಕುಮಾರ್ ಪರೋಕ್ಷವಾಗಿ ಸಚಿವ ಸುಧಾಕರ್ ಗೆ ಟಾಂಗ್ ನೀಡಿದರು. ಸಿಡಿ ಚರ್ಚೆ ವೇಳೆ ಮಾತನಾಡಿದ ಅವರು, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹೋಗಲು ಸಲಹೆ ಕೊಟ್ಟವರು ಅವಿವೇಕಿಗಳು ಅಥವಾ ಹಿತೈಷಿಗಳು ಎಂದು ನಟಿಸಿ ನಿಮ್ಮನ್ನು ಮುಗಿಸಲು ಮಾಡಿದ ಸಂಚು ಎಂದು ಆರೋಪಿಸಿದರು. ಕೋರ್ಟ್ ಗೆ ಹೋಗಿದ್ದನ್ನು ಸಮಾಜ ಏನು ತಿಳಿದುಕೊಳ್ಳುತ್ತದೆ, …

Read More »

ಕೊನೆಗೂ SITಯಿಂದ ಸಿಡಿ ಲೇಡಿ ಸಂಪರ್ಕ : 5ನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್

ಬೆಂಗಳೂರು : ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದಂತ ಸಿಡಿ ಪ್ರಕರಣನ ಸಿಡಿ ಲೇಡಿ ಪತ್ತೆಗೆ ಎಸ್‌ಐಟಿ ತಂಡ ಹರಸಾಹಸ ನಡೆಸುತ್ತಿತ್ತು. ಇದರ ಬೆನ್ನಲ್ಲೇ, ಪೋಷಕರ ಮೂಲಕ, ಸಿಡಿ ಲೇಡಿಯನ್ನು ಎಸ್‌ಐಟಿ ತಂಡ ಸಂಪರ್ಕಿಸಿದೆ. 5 ಬಾರಿ ಸಿಡಿ ಲೇಡಿ ತಮ್ಮನೊಂದಿಗೆ ಮಾತನಾಡಿರುವಂತ ಮಾಹಿತಿಯನ್ನು ವಿಚಾರಣೆಯ ವೇಳೆ ಎಸ್‌ಐಟಿ ಅಧಿಕಾರಿಗಳ ಮುಂದೆ ಪೋಷಕರು ಬಿಚ್ಚಿಟ್ಟಿದ್ದಾರೆ. ಹೀಗಾಗಿ ಐದನೇ ಬಾರಿ, ಸಿಡಿ ಲೇಡಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ತಂಡ, ನೋಟಿಸ್ ನೀಡಿದೆ. ಈಗಾಗಲೇ …

Read More »

ಕಣ್ಣು ಕಾಣದ ವ್ಯಕ್ತಿಯ ಪಾತ್ರದ ಮೂಲಕ ಮನರಂಜಿಸುವ ಪ್ರಯತ್ನ: ‘ಗೋಲ್ಡನ್​ ಸ್ಟಾರ್​’ ಗಣೇಶ್​

ಚೆಲ್ಲಾಟ’ ಸಿನಿಮಾದಿಂದ ನಾಯಕನಾದ ‘ಗೋಲ್ಡನ್​ ಸ್ಟಾರ್​’ ಗಣೇಶ್​ ಅವರು ಈವರೆಗೂ ಹಲವಾರು ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಅನೇಕ ಏಳು-ಬೀಳುಗಳನ್ನು ಅವರು ಕಂಡಿದ್ದಾರೆ. ನಾನಾ ವೇಷದಲ್ಲಿ ತಮ್ಮ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈಗ ಮತ್ತೊಂದು ಗೆಟಪ್​ನಲ್ಲಿ ಜನರ ಮುಂದೆ ಬರಲು ಸಜ್ಜಾಗುತ್ತಿದ್ದಾರೆ. ವಿಶೇಷ ಏನೆಂದರೆ, ಈ ಬಾರಿ ಕಣ್ಣು ಕಾಣದ ವ್ಯಕ್ತಿಯ ಪಾತ್ರದ ಮೂಲಕ ಮನರಂಜಿಸುವ ಪ್ರಯತ್ನ ಅವರದ್ದು. ಸಿಂಪಲ್​ ಸುನಿ ಮತ್ತು ಗಣೇಶ್​ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ‘ಸಖತ್​’ …

Read More »

ಯಾವ ಪುರುಷಾರ್ಥಕ್ಕೆ ಸರ್ಕಾರ ಬೀಳಿಸಿದ್ವೋ ಅನ್ನಿಸ್ತಿದೆ, ಈ ಅಡ್ಜಸ್ಟ್​ಮೆಂಟ್​ ಸರ್ಕಾರದಲ್ಲಿ ಹೆಚ್​ಡಿಕೆ, ಸಿದ್ದು ಮೋಸದ ಪಾಲಿದೆ: ಹೆಚ್​.ವಿಶ್ವನಾಥ್

ಮೈಸೂರು: ರಾಜ್ಯದಲ್ಲಿರೋದು ಬಿಜೆಪಿ ಸರ್ಕಾರ ಅಲ್ಲ. ಅದು ನ್ಯಾಷನಲ್ ಸರ್ಕಾರ. ಸಿದ್ದರಾಮಯ್ಯರನ್ನ ಕುಮಾರಸ್ವಾಮಿ ರಕ್ಷಣೆ ಮಾಡ್ತಾರೆ, ಕುಮಾರಸ್ವಾಮಿರವನ್ನ ಸಿದ್ದರಾಮಯ್ಯ ರಕ್ಷಣೆ ಮಾಡ್ತಾರೆ, ಇಬ್ಬರೂ ಸೇರಿ ಯಡಿಯೂರಪ್ಪರನ್ನ ರಕ್ಷಿಸುತ್ತಿದ್ದಾರೆ. ಇದು ಒಬ್ಬೊರಿಗೊಬ್ಬರು ಅಡ್ಜಸ್ಟ್​ಮೆಂಟ್ ರಾಜಕಾರಣ. ಇದರಲ್ಲಿ ಯಡಿಯೂರಪ್ಪ ನ್ಯಾಷನಲ್ ಗೌರ್ನ್​ಮೆಂಟ್ ಚೀಫ್ ಮಿನಿಸ್ಟರ್. ಅವರು ಬುದ್ದಿ ಚಾತುರ್ಯದಿಂದ ಎಲ್ಲರನ್ನು ಅಡ್ಜಸ್ಟ್​ ಮಾಡಿಕೊಂಡಿದ್ದಾರೆ. ಅವರವರ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಈ ರೀತಿ ಅಡ್ಜಸ್ಟ್​ಮೆಂಟ್ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಎಂಎಲ್‌ಸಿ, ಹಳ್ಳಿಹಕ್ಕಿ ಹೆಚ್.ವಿಶ್ವನಾಥ್​ ತಮ್ಮ …

Read More »

ಇವರು ಸದನದಲ್ಲಿ ಮಾತಾಡೋಕೆ ನಿಂತರೆ ಸಿಎಂ ಯಡಿಯೂರಪ್ಪ ‌ಕೂಡ ಸುಮ್ಮನಾಗ್ತಾರೆ -ಶಾಸಕರನ್ನು ಕೊಂಡಾಡಿದ ಶ್ರೀರಾಮುಲು

ಹಾಸನ: ರಾಜಕೀಯದಲ್ಲಿ ಆ ಜಾತಿ ಈ ಜಾತಿ ಎಂದು ಹೇಳುತ್ತೇವೆ. ಆದ್ರೆ ಮಕ್ಕಳಲ್ಲಿ ಸರ್ವಧರ್ಮತ್ವವನ್ನ ಶಿಕ್ಷಕರು ಬೆಳೆಸುತ್ತಾರೆ ಎಂದು ರಾಮನಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆ ಉದ್ಘಾಟನೆ ವೇಳೆ ಸಚಿವ ಶ್ರೀರಾಮುಲು ಮಾತನಾಡಿದರು. ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಮನಹಳ್ಳಿಯಲ್ಲಿ ಸಚಿವ ಶ್ರೀರಾಮುಲು ವಸತಿ ಶಾಲೆ ಉದ್ಘಾಟನೆ ಮಾಡಿದರು. ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಸದನದಲ್ಲಿ ಮಾತನಾಡುತ್ತ ನಿಂತರೆ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಸುಮ್ಮನಾಗ್ತಾರೆ ಎಂದು ಶ್ರೀರಾಮುಲು ಹೇಳಿದರು. ರೈತರ ವಿಚಾರ, ನೀರಾವರಿ …

Read More »

ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ

ಕೊಪ್ಪಳ: ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರಿನ ಚಾಲಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿದ್ದಾರೆ. ಚಾಲಕ ಅವಾಚ್ಯ ಶಬ್ದ ಉಪಯೋಗಿಸಿದ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ಮಹಿಳೆ ಸುಜಾತಾ ಗೋರ್ಲೆಕೊಪ್ಪ ಕೊಪ್ಪಳದ ಕುಕನೂರು ಪಟ್ಟಣ ನಿವಾಸಿ. ಕಾರು ಚಾಲಕ ವಿಜಯ್​ ನನ್ನನ್ನು ನಿಂದಿಸಿದ್ದಾನೆಂದು ಆರೋಪಿಸಿ, ಕೊಪ್ಪಳ ಜಿಲ್ಲಾಡಳಿತದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲೇ ಚಪ್ಪಲಿಯಿಂದ ಹೊಡೆದಿದ್ದಾರೆ. ಈ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Read More »