ಕೊಪ್ಪಳ : ಬೆಳಗಾವಿ, ಮಸ್ಕಿ ಹಾಗೂ ಬಸವಕಲ್ಯಾಣದ ಉಪ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಕೊಪ್ಪಳ ಜಿಲ್ಲೆ ತಾವರಗೇರಾ ಪಟ್ಟಣದಲ್ಲಿ ಮಾತನಾಡಿ, ಮಸ್ಕಿ ಉಪಚುನಾವಣೆ ಪ್ರಚಾರಕ್ಕಾಗಿ ಹೋಗುತ್ತಿದ್ದೇನೆ. ಇಂದು 10- 15 ಕಡೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲಿದ್ದೇನೆ. ಬೆಳಗಾವಿ ಲೋಕಸಭೆ ಮತ್ತು 2 ವಿಧಾನಸಭೆ ಉಪ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದರು. ಕಾಂಗ್ರೆಸ್ ಚಿಲ್ಲರೇ ರಾಜಕಾರಣ ಮಾಡುತ್ತಿದೆ ಎಂಬ ಸಚಿವ ಜಗದ್ದೀಶ …
Read More »Daily Archives: ಏಪ್ರಿಲ್ 5, 2021
ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ – ಲಕ್ಷ್ಮಿ ಹೆಬ್ಬಾಳಕರ್ ಎಂ.ಬಿ.ಪಾಟೀಲ
ಬೆಳಗಾವಿ – ಬಿಜೆಪಿ ನೂರಾರು ಸುಳ್ಳು ಭರವಸೆಗಳನ್ನು ಜನರಿಗೆ ನೀಡಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಆದರೆ ಭ್ರಷ್ಟಾಚಾರ ಹೊರತುಪಡಿಸಿ ಎರಡೂ ಸರಕಾರಗಳ ಸಾಧನೆ ಶೂನ್ಯ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಪ್ರಯುಕ್ತ ಇಂದು ಮುತ್ನಾಳ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ವಿದೇಶದಿಂದ ಕಪ್ಪು ಹಣ ವಾಪಸ್ ತರುವುದಾಗಿ ಹೇಳಲಾಗಿತ್ತು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. …
Read More »ಏ.7 ರಿಂದ ಸಾರಿಗೆ ಮುಷ್ಕರ; ಖಾಸಗಿ ವಾಹನ ಸಂಚಾರಕ್ಕೆ ಅವಕಾಶ
ಧಾರವಾಡ, ಏಪ್ರಿಲ್ 4; ” ಕರ್ನಾಟಕ ಸರ್ಕಾರ ಎಸ್ಮಾ ಜಾರಿಗೊಳಿಸಿದರೂ ನಾವು ಭಯ ಪಡುವುದಿಲ್ಲ. ಏಪ್ರಿಲ್ 7ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತವಾಗುವುದು ಖಂಡಿತ” ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಸಾರಿಗೆ ನೌಕರರನ್ನು 6ನೇ ವೇತನ ಆಯೋಗದ ಅಡಿ ತರಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ಇದರಿಂದಾಗಿ ಸರ್ಕಾರಿ ಬಸ್ಗಳ …
Read More »ಗಂಡ ಹೆಂಡತಿ ಜೊತೆಗೆ ಹೋಗಬಹುದಂತೆ, ಥಿಯೇಟರ್ ನಲ್ಲಿ ಬೇರೆ ಬೇರೆ ಕೂತ್ಕೋಬೇಕಂತೆ
ಬೆಂಗಳೂರು, ಏಪ್ರಿಲ್ 4: ಕೊರೊನಾ ಪಾಸಿಟೀವ್ ಕೇಸುಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ನಗರದಲ್ಲಿ ಮಾತನಾಡುತ್ತಿದ್ದ ಡಿಕೆಶಿ, “ಸರಕಾರದ ಹೊಸ ಮಾರ್ಗಸೂಚಿ ಅಟ್ಟರ್ ಫ್ಲಾಪ್ ಆಗಲಿದೆ. ಪ್ರಾಕ್ಟಿಕಲ್ ಬುದ್ದಿ ಅನ್ನೋದು ಸರಕಾರಕ್ಕೆ ಇಲ್ಲ. ಯಾರನ್ನು ನಿಯಂತ್ರಣ ಮಾಡಬೇಕೋ ಅಲ್ಲಿ ಮಾಡಬೇಕು”ಎಂದು ಅಭಿಪ್ರಾಯ ಪಟ್ಟರು. “ಪ್ರಯಾಣಿಕರು ನಿಂತುಕೊಂಡು ಹೋಗಬಾರದು ಎನ್ನುವ ಕಾನೂನು ತಂದಿದ್ದಾರೆ. ಅಕ್ಕಪಕ್ಕ ಕೂತರೆ ಕೊರೊನಾ …
Read More »ಡಿಕೆಶಿ, ಸಿದ್ಧರಾಮಯ್ಯ ಚಿಲ್ಲರೆ ಕೆಲಸ ಬಿಡಬೇಕು: ಜಗದೀಶ್ ಶೆಟ್ಟರ್
ಬೆಳಗಾವಿ: ಚುನಾವಣೆಯಲ್ಲಿ ಎದುರಾಳಿಗಳನ್ನ ಎದುರಿಸಿ ಗೆಲ್ಲುವ ಕೆಲಸ ಮಾಡಬೇಕು. ಅದು ಬಿಟ್ಟು ಇನ್ನೊಬ್ಬರ ವೈಯಕ್ತಿಕ ವಿಚಾರದಲ್ಲಿ ಚಾರಿತ್ರ್ಯವಧೆ ಮಾಡುವ ಕೆಲಸಮಾಡಬಾರದು ಅದು ಚಿಲ್ಲರೆ ಕೆಲಸವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ವಿರುದ್ಧ ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. ಬೆಳಗಾವಿಯ ಲೋಕಸಭಾ ಉಪಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣವನ್ನು ಈಗಾಗಲೇ ಎಸ್ಐಟಿ ಗೆ ವಹಿಸಲಾಗಿದೆ. ಅದು ತನಿಖೆ ನಡೆಯುತ್ತಿದೆ. …
Read More »ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು : ಜ್ವರದಿಂದ ಗುಣಮುಖರಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಣಿಪಾಲ್ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾದರು. ವೈದ್ಯರಾದ ಡಾ.ಸುದರ್ಶನ್ ಬಲ್ಲಾಳ್, ಸತ್ಯನಾರಾಯಣ ಮೈಸೂರು ಮಾಜಿ ಪ್ರಧಾನಿ ದೇವೇಗೌಡರಿಗೆ ಶುಭಕೋರಿದರು. ದೇವೇಗೌಡರು ಮಾ.31 ರಂದು ಆಸ್ಪತ್ರೆ ದಾಖಲಾಗಿದ್ದರು. ಕೊರೊನಾ ಸೋಂಕು ದೃಢಪಟ್ಟಿರುವ ಅವರ ಪತ್ನಿ ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೊನ್ನೆ ಮಾರ್ಚ್ 31ರಂದು ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮರಿಗೆ …
Read More »ಸಿಡಿ ಯುವತಿ ತಂದೆಯ ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮಗಳ ಹೇಳಿಕೆ ಪರಿಗಣಿಸದಂತೆ ಸಿಡಿ ಯುವತಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ನನ್ನ ಮಗಳ ಹೇಳಿಕೆ ಪರಿಗಣಿಸಬೇಡಿ ಎಂದು 164 ಅನ್ನು ರದ್ದು ಮಾಡುವಂತೆ ಸಿಡಿ ಯುವತಿ ತಂದೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ನಡೆಸಿದೆ.ಸಿಆರ್ ಪಿಸಿ ಸೆ. 164 ಹೇಳಿಕೆ ಕೋರ್ಟ್ ನಲ್ಲಿದೆ, ಆರೋಪಪಟ್ಟಿ ಸಲ್ಲಿಕೆಯಾಗುವವರೆಗೆ ಹೇಳಿಕೆಯ ಪ್ರತಿ ಸಿಗುವುದಿಲ್ಲ. ಹೀಗಾಗಿ ಹೇಳಿಕೆ …
Read More »ಸರ್ಕಾರಿ ಆಸ್ಪತ್ರೆಯಲ್ಲೇ GP ಸದಸ್ಯನ ಲವ್ವಿ ಡವ್ವಿ.. ಸಿಸಿಟಿವಿಯಲ್ಲಿ ಸೆರೆ…
ವಿಜಯಪುರ :ಸರ್ಕಾರಿ ಆಸ್ಪತ್ರೆಯಲ್ಲೇ ಗ್ರಾಮ ಪಂಚಾಯತಿ ಸದಸ್ಯನ ಲವ್ವಿ ಡವ್ವಿ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ನಿಂಬೆನಾಡಿನಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಪ್ರಾಥಮಿಕ ಆಸ್ಪತ್ರೆಯ ವಾರ್ಡ್ ನಲ್ಲಿ ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯತ್ ಸದಸ್ಯ D.K. ಪೂಜಾರಿ ಲವ್ವಿ ಡವ್ವಿ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿಕೊಂಡು ಕಿಸ್ಸಿಂಗ್ ಹಾಗೂ ರೊಮ್ಯಾನ್ಸ್ ಮಾಡಿರುವ ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದಸ್ಯ ವಿರುದ್ಧ …
Read More »ನಿಜವಾಗಿಯೂ ಸಂತ್ರಸ್ತ ನನ್ನ ಕಕ್ಷಿದಾರ: ರಮೇಶ್ ಜಾರಕಿಹೊಳಿ ಪರ ವಕೀಲ
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಕಕ್ಷಿದಾರ ನಿಜವಾಗಿಯೂ ಸಂತ್ರಸ್ತ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್ ಹೇಳಿದ್ದಾರೆ. ಇಂದುಮಾತನಾಡುತ್ತಾ ಅತ್ಯಾಚಾರ ಕೇಸ್ನ ತನಿಖೆ ಸರಿಯಾಗಿ ತನಿಖೆ ಆಗ್ತಿಲ್ಲ. ಪೊಲೀಸ್ ಆಯುಕ್ತರಿಗೆ ಯುವತಿ ಬರೆದಿರುವ ಪತ್ರದ ಕುರಿತು ಪ್ರತಿಕ್ರಿಯಿಸಿ, ಶ್ಯಾಮ್ ಸುಂದರ್ ಆಕ್ಷೇಪ ವ್ಯಕ್ತಪಡಿಸಿದರು. ಯುವತಿ ಸುಳ್ಳು ಆರೋಪ ಮತ್ತು ಸುಳ್ಳು ದೂರು ಕೊಡ್ತಿದ್ದಾರೆ. ನಿಜವಾಗಿಯೂ ಸಂತ್ರಸ್ತ ನನ್ನ ಕಕ್ಷಿದಾರ ಎಂದು ತಿಳಿಸಿದ್ದಾರೆ. ಇದೊಂದು …
Read More »ಮಕ್ಕಳ ಶೌಚಾಲಯ ಹೆಸರಿನಲ್ಲಿ ದುಡ್ಡು ತಿನ್ನುವ ಕೆಲಸ, ಕಾಮಗಾರಿಗೆ ಮುನ್ನವೇ ಹಣ ಬಿಡುಗಡೆ ಇದು ಬಿಕೆ ಕಂಗ್ರಾಳಿ ಗ್ರಾಮ ಪಂಚಾಯತಿ ಕಥೆ,
ಬೆಳಗಾವಿ: ಇವತ್ತು ಒಂದು ಅದ್ಭುತವಾದ ಕಥೆಯನ್ನ ನಾವು ಹೇಳ್ತೀವಿ ಇದೊಂದು ಗ್ರಾಮ ಪಂಚಾಯತಿ ಕಥೆ ಇದು ಬೆಳಗಾವಿಯ ಬಿಕೆ ಕಂಗ್ರಾಳಿ ಗ್ರಾಮ ಪಂಚಾಯತಿ ಕಥೆ, ನಮ್ಮ ರಾಜ್ಯದಲ್ಲಿ ಜಿಲ್ಲೆಯಲ್ಲಿ ಬ್ರಷ್ಟಾಚಾರದ ಕಥೆ ಗಳನ್ನಾ ಸುಮಾರು ಕೆಳಿದ್ದಿವಿ, ಹಾಗೂ ನಮ್ಮ ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಮಕ್ಕಳು ಯಾಕೆ ಬರಲ್ಲ ಅನ್ನೋದು ಕೂಡ ನಮ್ಮ ಈ ಸ್ಟೋರಿಗೆ ನಾವು ಹೇಳುವ ಕಥೆಗೂ ಲಿಂಕ್ ಇದೆ. ಜನ ಇವಾಗ ಕೆಲಸ ಮಾಡಿದ ಮೇಲೆ ದುಡ್ಡು …
Read More »