Daily Archives: ಏಪ್ರಿಲ್ 9, 2021

IPL 2021 Live Score, MI vs RCB: ಆರ್​ಸಿಬಿ ಶುಭಾರಂಭ: ಟಾಸ್ ಗೆದ್ದ ವಿರಾಟ್ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್‌ನ 14 ನೇ ಸೀಸನ್​ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್​ನ್ನು ಎದುರಿಸುತ್ತಿದ್ದು, ಟಾಸ್ ಗೆದ್ದಿರುವ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಅತ್ತ 6ನೇ ಬಾರಿ ಚಾಂಪಿಯನ್​ ಪಟ್ಟದ ಮೇಲೆ ಕಣ್ಣಿಟ್ಟಿರುವ ಮುಂಬೈ ಇಂಡಿಯನ್ಸ್​ಗೆ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸುವ …

Read More »

1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ : ಅಶ್ವತ್ಥ್ ನಾರಾಯಣ್

ಮಂಗಳೂರು : ಸಾರಿಗೆ ನೌಕರರ ಸಂಬಳದ ವಿಚಾರವನ್ನು ಸ್ವಾಯತ್ತ ಸಂಸ್ಥೆಗಳಿಗೆ ಬಿಡಲಾಗಿದೆ. ಅವರ ಹಣಕಾಸಿನ ಪರಿಸ್ಥಿತಿಗೆ ಅನುಗುಣವಾಗಿ ಸಂಬಳಗಳು ನಿಗದಿಯಾಗಲಿದೆ ಎಂದು ಶುಕ್ರವಾರ ಮಂಗಳೂರಿನಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ಸರ್ಕಾರ ಈಗಾಗಲೇ ಸಾಕಷ್ಟು ಅನುದಾನವನ್ನ ಬಿಡುಗಡೆ ಮಾಡಿದೆ. 1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ. ಕೋವಿಡ್ ಸಮಯದಲ್ಲಿ ಸಾರಿಗೆ ಸಂಸ್ಥೆಗಳಿಗೆ ತುಂಬಾ ನಷ್ಟವಾಗಿದೆ. ಇದರ ನಡುವೆ ಸಾರಿಗೆ ನೌಕರರ ಬೇಡಿಕೆಗಳನ್ನು …

Read More »

18 ವರ್ಷ ಮೇಲ್ಪಟ್ಟವರು ಬೇಕಾದ ಧರ್ಮ ಆಯ್ಕೆ ಮಾಡಲು ಅರ್ಹರು : ಸುಪ್ರೀಂ ಕೋರ್ಟ್

ನವ ದೆಹಲಿ : 18 ವರ್ಷಕ್ಕಿಂತ ಮೇಲ್ಪಟ್ಟವರು ಯಾರಾದರೂ ತಮಗೆ ಹಿತವೆನ್ನಿಸುವ ಧರ್ಮವನ್ನು ಆರಿಸಲು ಮುಕ್ತರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಧಾರ್ಮಿಕ ಮತಾಂತರವನ್ನು ತಡೆಯುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸೂಚಿಸಬೇಕು ಎಂದು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ತಮ್ಮ ಧರ್ಮವನ್ನು ಆಯ್ಕೆ ಮಾಡಲು ಅನುಮತಿಸದೆ ಇರಲು ಯಾವುದೇ ಕಾರಣವಿಲ್ಲ. ನಾವು ಈ ಅರ್ಜಿಗೆ ಅನುಮತಿಯನ್ನು …

Read More »

ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.

ಬೆಂಗಳೂರು : ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದ ಆರೋಪದಡಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ವಿಜಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ಮತ್ತೆ ಮುಂದೂಡಿದೆ. ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದೆ. ಇಂದು ವಿಚಾರಣೆಯ ಮಾಡಿದ ನ್ಯಾಯಮೂರ್ತಿಗಳು ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದ್ದಾರೆ. ಈ ಮೂಲಕ …

Read More »

ಪ್ರಹ್ಲಾದ್ ಜೋಶಿ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಹುಬ್ಬಳ್ಳಿಯ ಮನೆಯ ಮುಂದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.   ಶ್ರೀದೇವಿ ಕಮ್ಮಾರ ಮೃತ ಮಹಿಳೆ. ಮನೆ ಬಿದ್ದ ಪರಿಣಾಮ ಪರಿಹಾರಕ್ಕೆ ಅಲೆದಾಡಿದ ಮಹಿಳೆ ಮನನೊಂದು ಏಪ್ರಿಲ್ 6ರಂದು ಸಚಿವರ ಹುಬ್ಬಳ್ಳಿ ಮಯೂರಿ ಎಸ್ಟೇಟ್ ನಲ್ಲಿರುವ ಮನೆಯ ಎದುರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದೇ ವೇಳೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ …

Read More »

ಕೊರೊನಾ ಕರ್ಫ್ಯೂ ಮಾರ್ಗಸೂಚಿ ಪ್ರಕಟ ನಾಳೆ ರಾತ್ರಿಯಿಂದ 10 ದಿನಗಳ ಕಾಲ ಕರ್ಫ್ಯೂ ಜಾರಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಳೆಯಿಂದ 8 ಜಿಲ್ಲೆಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಗೊಳಿಸಿದ್ದು, ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ನಾಳೆ ರಾತ್ರಿ 10ಗಂಟೆಯಿಂದ ಏಪ್ರಿಲ್ 20ರವರೆಗೆ ರಾತ್ರಿ ವೇಳೆ ಕೊರೊನಾ ಕರ್ಫ್ಯೂ ಜಾರಿಗೆ ಬರಲಿದ್ದು, ವೈದ್ಯಕೀಯ ಹಾಗೂ ತುರ್ತು ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ.ಉಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ರಾತ್ರಿ 10ಗಂಟೆಯಿಂದ ಎಲ್ಲಾ ಅಂಗಡಿಗಳು, ಹೋಟೆಲ್, ಬಾರ್, ರೆಸ್ಟೋರೆಂಟ್, ಸೇರಿದಂತೆ ವಾಣಿಜ್ಯ …

Read More »

ಲಾಟರಿಯಲ್ಲಿ ಕೋಟಿ ರೂ. ಒಲಿದ ಕಥೆ ಕಟ್ಟಿದ ತೊಕ್ಕೊಟ್ಟು ವಾಚ್‌ಮನ್

ಮಂಗಳೂರು, ಏಪ್ರಿಲ್ 9: ಸಾಲಗಾರರ ಕಾಟ ತಡೆಯಲಾರದೆ ಲಾಟರಿಯಲ್ಲಿ ಒಂದು ಕೋಟಿ ರೂ. ಗೆದ್ದ ಸುಳ್ಳಿನ ಕಥೆ ಕಟ್ಟಿ ಸೆಕ್ಯೂರಿಟಿ ಗಾರ್ಡ್ ಪರಾರಿಯಾದ ಸ್ವಾರಸ್ಯಕರ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗುರುವಾರ ಮಂಗಳೂರು ನಗರ ಹೊರವಲಯದ ತೊಕ್ಕೊಟ್ಟು ಜಂಕ್ಷನ್ನಿನ ಕಟ್ಟಡದಲ್ಲಿ ಮೂರು ವರ್ಷಗಳಿಂದ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಕೇರಳದ ಕ್ಯಾಲಿಕಟ್ ನಿವಾಸಿ ಮೊಯಿದ್ದೀನ್ ಕುಟ್ಟಿ, ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದ್ದರು.   ಸೆಕ್ಯೂರಿಟಿ ಗಾರ್ಡ್ ಕೇರಳದ ಲಾಟರಿಯಲ್ಲಿ …

Read More »

ಎಚ್.ಕೆ.ಪಾಟೀಲ್ ಮತ್ತು ಅಶೋಕ ಮಹದೇವಗೆ ಗೌರವ ಡಾಕ್ಟರೇಟ್

ಗದಗ : ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಅಶೋಕ ಮಹದೇವ ದಳವಾಯಿ ಅವರಿಗೆ ಇಲ್ಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಕಟಿಸಿದೆ. ಸಾರ್ವಜನಿಕ ನೀತಿ ಮತ್ತು ಸಮಾಜ ಸೇವೆಗೆ ನೀಡಿದ ಗಮನಾರ್ಹ ಕೊಡುಗೆಯನ್ನು ಗುರುತಿಸಿ ಎಚ್.ಕೆ.ಪಾಟೀಲ್ ಅವರಿಗೆ ಹಾಗೂ ದೇಶದ ಗ್ರಾಮೀಣ ಮತ್ತು ಬುಡಕಟ್ಟು ಜನಾಂಗಗಳ ಪುನರ್ ನಿರ್ಮಾಣದಲ್ಲಿ ಸಲ್ಲಿಸಿರುವ ಮಹತ್ತರ ಸೇವೆಯನ್ನು ಪರಿಗಣಿಸಿ ಡಾ|ಅಶೋಕ ಮಹಾದೇವ ದಳವಾಯಿ ಅವರಿಗೆ …

Read More »

ಸರ್ಕಾರದ ಬೆದರಿಕೆ ತಂತ್ರಗಳಿಗೆ ಹೆದರುವುದಿಲ್ಲ, ಮುಷ್ಕರ ಮುಂದುವರಿಕೆ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮೂರನೇ ದಿನ ಮುಂದುವರಿಯುತ್ತಿದ್ದು ಇಲಾಖೆ ನೌಕರರ ಭವಿಷ್ಯ, ಜೀವನದ ಅನೇಕ ಪ್ರಶ್ನೆಗಳನ್ನು ಸರ್ಕಾರದ ಮುಂದಿಡಲಾಗಿದೆ. ನೌಕರರ ಜೀವನ ಸುಧಾರಣೆಗೆ ಸರ್ಕಾರ ತಾರತಮ್ಯ ನೀತಿಯನ್ನು ಅನುಸರಿಸಬಾರದು ಎಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಸರ್ಕಾರ ವೇತನ ಶ್ರೇಣಿಯ ವ್ಯತ್ಯಾಸ ಮಾಡುತ್ತಿದೆ. ಸಾರಿಗೆ ನೌಕರರ ವಿಚಾರದಲ್ಲಿ ತಾರತಮ್ಯ ಮಾಡ್ತಿದ್ದಾರೆ. ನಿನ್ನೆಯ ಸಭೆಯಲ್ಲಿ ಯಾವುದೇ ತೀರ್ಮಾನಗಳು ಆಗಿಲ್ಲ. ರಾಜ್ಯ …

Read More »

ಕೆಲಸಕ್ಕೆ ಬರದಿದ್ದರೆ ವಜಾ ಮಾಡ್ತೀವಿ : ಮುಷ್ಕರ ನಿರತ ‘ಸಾರಿಗೆ ನೌಕರ’ರಿಗೆ ಅಧಿಕಾರಿಗಳಿಂದ ‘ಬ್ಲಾಕ್‌ಮೇಲ್’.?

ಬೆಂಗಳೂರು : ರಾಜ್ಯ ಸರ್ಕಾರವು ಈಗಾಗಲೇ 8 ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಿದೆ. ಆದ್ರೇ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಬೇಕು ಎನ್ನುವ ಬೇಡಿಕೆ ಮಾತ್ರ ಈಡೇರಿಸೋದಕ್ಕೆ ಬಿಲ್ ಕುಲ್ ನೋ ಎಂದಿದೆ. ಹೀಗಾಗಿ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಇಂದು ಕಾಲಿಟ್ಟಿದೆ. ಇಂತಹ ನೌಕರರನ್ನು ಮನವೊಲಿಸುವ ಬದಲಾಗಿ, ಕೆಲಸಕ್ಕೆ ಬಾರದಿದ್ದರೇ ವಜಾ ಮಾಡ್ತೀವಿ ಎಂಬುದಾಗಿ ಅನೇಕ ಮುಷ್ಕರ ನಿರತ ನೌಕರರಿಗೆ …

Read More »