Breaking News
Home / 2021 / ಏಪ್ರಿಲ್ / 11 (page 3)

Daily Archives: ಏಪ್ರಿಲ್ 11, 2021

ಕಳತ್ಮಾಡು: ವರ್ಷದಿಂದ ಉಪಟಳ ನೀಡುತ್ತಿದ್ದ ಆನೆ ಕೊನೆಗೂ ಬಂದಿ!

ಮಡಿಕೇರಿ: ಒಂದು ವರ್ಷದಿಂದ ಗಾಮೀಣ ಭಾಗಗಳಿಗೆ ಲಗ್ಗೆ ಇಟ್ಟು ಅಪಾರ ಕೃಷಿ ಹಾನಿಗೆ ಕಾರಣವಾಗಿದ್ದ ಪುಂಡಾನೆಯನ್ನು ಅರಣ್ಯ ಇಲಾಖೆ ಸಿಬಂದಿ ಕಳತ್ಮಾಡು ಗ್ರಾಮದ ಕಾಫಿ ತೋಟದಿಂದ ಸೆರೆ ಹಿಡಿದಿದ್ದಾರೆ. 35ರ ಹರೆಯದ ಗಂಡಾನೆಯ ಸೆರೆಗೆ 3 ದಿನ ಗಳಿಂದ ಕಾರ್ಯಾಚರಣೆ ನಡೆಸಿರುವ ಸಿಬಂದಿ ಬಲ್ಲೆ ಹಾಗೂ ಮತ್ತಿಗೋಡು ಆನೆ ಶಿಬಿರಗಳ 6 ಸಾಕಾನೆಗಳ ಸಹಕಾರ ಪಡೆದುಕೊಂಡಿದ್ದರು. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿಗೆ ಒಳಪಟ್ಟ ಗೋಣಿಕೊಪ್ಪಲು ಬಳಿಯ ಕಳತ್ಮಾಡು ಹಾಗೂ ಅಮ್ಮತ್ತಿ …

Read More »

ಕೃಷಿಕರು, ಶ್ರಮಿಕ ವರ್ಗ ಹಾಗೂ ಯುವ ಶಕ್ತಿಯನ್ನು ನಿರ್ಲಕ್ಷಿಸುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ: ಬಾಬಾಗೌಡ ಪಾಟೀಲ

ಗೋಕಾಕ: ಕೃಷಿಕರು, ಶ್ರಮಿಕ ವರ್ಗ ಹಾಗೂ ಯುವ ಶಕ್ತಿಯನ್ನು ನಿರ್ಲಕ್ಷಿಸುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ಸರ್ವಾಧಿಕಾರಿತನದಿಂದ ಕೂಡಿರುವ ಪ್ರಧಾನಿ ಮೋದಿ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಹೋರಾಟದ ಧ್ಯೇಯವಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ರೈತ ಮುಖಂಡ ಬಾಬಾಗೌಡ ಪಾಟೀಲ ಗುಡುಗಿದರು. ಶನಿವಾರ ಇಲ್ಲಿನ ಡಾಲರ್ಸ್ ಕ್ಲಬ್‍ನಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಚಿಸಿದ ಕೃಷಿ ಸಂಬಂಧಿ ಕಾನೂನುಗಳ ಸಾಧಕ-ಬಾಧಕಗಳ ಪರಾಮರ್ಶಿಸಲು ಸದಾ ಸಿದ್ಧ …

Read More »

ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರದಲ್ಲಿ ನಂ.1: ಕಾಂಗ್ರೆಸ್‌ನ ಸುರ್ಜೇವಾಲಾ

ಬೆಳಗಾವಿ: ‘ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರವು ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ದೇಶದಲ್ಲೇ ನಂ.1 ಸ್ಥಾನದಲ್ಲಿದೆ’ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ದೂರಿದರು. ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ, ಶಾಸಕರನ್ನು ಖರೀದಿಸಿ ಬಂದ ಅನೈತಿಕ ಸರ್ಕಾರವಿದು. ಜನಾದೇಶದಿಂದ ರಚನೆಯಾದುದಲ್ಲ. ಅವ್ಯವಹಾರ, ಅಕ್ರಮಗಳಿಂದಲೇ ಕೂಡಿರುವ ಆಡಳಿತದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು. ‘ಸಚಿವರೊಬ್ಬರು ದೇಶದಲ್ಲೇ ಮೊದಲ …

Read More »

ಸುಳೇಭಾವಿಯ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಯ ಗದ್ದುಗೆಯ ಸ್ಥಳದಲ್ಲಿ ಶ್ರೀ ಸತೀಶಣ್ಣನವರ ಪರ ಪಕ್ಷದ ಬೃಹತ್ ಶಕ್ತಿ ಪ್ರದರ್ಶನ “

ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಯ ನಾಡು #ಸುಳೇಭಾವಿ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಪಕ್ಷದ ವತಿಯಿಂದ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಸಮಾವೇಶವನ್ನು ಕೈಗೊಳ್ಳಲಾಯಿತು. ಸಮಾವೇಶ ಪ್ರಾರಂಭಕ್ಕೂ ಮುನ್ನ ಮುಕ್ಕೋಟಿ ದೇವಾನು ದೇವತೆಗಳು ವರುಣದೇವನ ಮುಖಾಂತರ ಹರಸಿ, ಆಶೀರ್ವದಿಸಿದ್ದು ನಿಜಕ್ಕೂ ಪವಾಡ, ಮಳೆಯ ಹನಿಗಳು ನಮ್ಮೆಲ್ಲರ ಮೇಲೆ ಹೂ ಗಳಂತೆ ಚೆಲ್ಲಿದ್ದು ಆ ದೇವಾನು ದೇವತೆಗಳ ವರ ಪ್ರಸಾದವೇ ಆಗಿದೆ, ಇದು …

Read More »

ನಮ್ಮನ್ನು ಅಧಿಕಾರಕ್ಕೆ ತಂದರೆ ಒಂದೇ ವರ್ಷದಲ್ಲಿ ಪ್ರತಿ ಕುಟುಂಬಕ್ಕೆ ಮನೆ: ಕುಮಾರಸ್ವಾಮಿ

ಬೀದರ್, ಎ.10: ಯಾರು ರೈತರ ಪರವಾಗಿ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೋ ಅಂತ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ತಮ್ಮೆಲ್ಲರ ಕರ್ತವ್ಯವೆಂದು ನಾನು ಭಾವಿಸಿದ್ದೇನೆ. ಬಸವಕಲ್ಯಾಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಟ್ಟರೆ ನನಗೆ ಶಕ್ತಿ ಕೊಟ್ಟಂತೆಯಾಗುತ್ತದೆ. ಅದು ಮುಂದಿನ ಚುನಾವಣೆಯಲ್ಲಿ ನಮಗೆ ಸಹಾಯಕವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಬಸವಕಲ್ಯಾಣ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿರವರ ಪರವಾಗಿ ಕ್ಷೇತ್ರದ ಕೋಟಮಾಳ, ಹುಲಸೂರು, ಬೇಲೂರ, ನಾರಾಯಣಪುರ, …

Read More »

ಪಕ್ಷದಿಂದ ಉಚ್ಛಾಟನೆ ಮಾಡಬೇಡಿ ಅಂತ ಎಂದೂ ಯಾರಿಗೂಹೇಳಿಲ್ಲ.: ಅರುಣಸಿಂಗ್‍ಗೆ ಯತ್ನಾಳ ತಿರುಗೇಟು

ಹುಬ್ಬಳ್ಳಿ: ತನ್ನನ್ನು ವಜಾ ಮಾಡುವುದಾಗಿ ಹೇಳಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಅವರ ಹೇಳಿಕೆಗೆ ಬಸನಗೌಡ ಪಾಟೀಲ ಯತ್ನಾಳ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಕುಟುಂಬದ ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರುದ್ಧ ಮಾತನಾಡಿದ್ದೇನೆ. ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಮೊದಲು ಉಚ್ಛಾಟಿಸಲಿ ನಂತರ ನನ್ನ ಬಗ್ಗೆ ಚಿಂತನೆ ಮಾಡಲಿ ಎಂದು ಪ್ರತ್ಯುತ್ತರ ನೀಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಡಿ ಅಂತ ಎಂದೂ ಯಾರಿಗೂ ಹೇಳಿಲ್ಲ. ನೀವೆ ತಂದೆ …

Read More »

ಕಾನೂನು ಸುವ್ಯವಸ್ಥೆಗೆ 10 ಸ್ಕಾರ್ಪಿಯೊ

ಕಲಬುರ್ಗಿ: ದೆಹಲಿಯ ನಿರ್ಭಯಾ ಘಟನೆ ಬಳಿಕ ನಗರ ಪ್ರದೇಶದಲ್ಲಿ ಮಹಿಳಾ ಸುರಕ್ಷತೆ ಸೇರಿದಂತೆ ಸಂಭವ ನೀಯ ಅವಘಡಗಳನ್ನು ತಡೆಯಲು ಕಲಬುರ್ಗಿ ಕಮಿಷನರೇಟ್‌ಗೆ ಗೃಹ ಇಲಾಖೆ 10 ಸುಸಜ್ಜಿತ ಸ್ಕಾರ್ಪಿಯೊ ಜೀಪ್‌ಗಳನ್ನು ಮಂಜೂರು ಮಾಡಿದೆ. ಕೆಲವೇ ದಿನಗಳಲ್ಲಿ ಅವು ಸೇವೆಗೆ ಸೇರ್ಪಡೆಗೊಳ್ಳಲಿವೆ. ಈ ವಾಹನಕ್ಕೆ ಜಿಪಿಎಸ್‌ ವ್ಯವಸ್ಥೆ ಇರಲಿದ್ದು, 112 ಸಂಖ್ಯೆಗೆ ಯಾರಾದರೂ ಕರೆ ಮಾಡಿದರೆ ಅದರ ವಿವರಗಳು ಬೆಂಗಳೂರಿನ ಕಂಟ್ರೋಲ್‌ ರೂಮ್‌ಗೆ ಹೋಗಲಿದೆ. ಅಲ್ಲಿಂದ ಸಮೀಪದ ವಾಹನದಲ್ಲಿರುವ ಕಂಪ್ಯೂಟರ್‌ ಪರದೆಯ …

Read More »

5ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಇಂದು 8 ಗಂಟೆಯವರೆಗೆ ಸಂಚರಿಸಿದ ಸಾರಿಗೆ ಬಸ್ ಗಳು ಎಷ್ಟು ಗೊತ್ತಾ.?

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಇಂದಿಗೆ 5ನೇ ದಿನಕ್ಕೆ ಕಾಲಿಟ್ಟಿದೆ. 6ನೇ ವೇತನ ಆಯೋಗ ಶಿಫಾರಸ್ಸು ಸೇರಿದಂತೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ, ಇಂದು ಕೂಡ ಸಾರಿಗೆ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ಮುಂದುವರೆಸಿದ್ದಾರೆ. ಇಂತಹ ಸಾರಿಗೆ ನೌಕರರ ಮುಷ್ಕರದಿಂದಾಗಿ ರಾಜ್ಯಾಧ್ಯಂತ ಸಾರಿಗೆ ಬಸ್ ಸಂಚಾರ ಕೂಡ ವಿರಳವಾಗಿದೆ. ಯುಗಾದಿ ಹಬ್ಬಕ್ಕೆ ತೆರಳುತ್ತಿರುವಂತ ನೌಕರರು ಬಸ್ ಗಳಿಲ್ಲದೇ ಪರದಾಡುವಂತ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಇದರ ಮಧ್ಯೆ 8 ಗಂಟೆಯವರೆಗೆ ವಿವಿಧ ನಿಗಮಗಳಿಂದ ಒಟ್ಟು …

Read More »

ಯಡಿಯೂರಪ್ಪನವರ ಕೈ ಬಲಪಡಿಸಿ ಅವರಿಗೆ ಶಕ್ತಿ ತುಂಬುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಗೋಕಾಕ: ಮಹಿಳೆಯರ ಕಲ್ಯಾಣಕ್ಕಾಗಿ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮಿಸುತ್ತಿದ್ದು, ಸಾಕಷ್ಟು ಯೋಜನೆಗಳನ್ನು ಮಹಿಳೆಯರ ಅಭ್ಯುದಯಕ್ಕಾಗಿ ರೂಪಿಸಿವೆ. ಸಮಗ್ರ ಅಭಿವೃದ್ದಿ ದೃಷ್ಟಿಕೋನದಿಂದ ಬಿಜೆಪಿಗೆ ಆಶೀರ್ವದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಮ್ ಯಡಿಯೂರಪ್ಪನವರ ಕೈ ಬಲಪಡಿಸಿ ಅವರಿಗೆ ಶಕ್ತಿ ತುಂಬುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಶನಿವಾರದಂದು ಇಲ್ಲಿನ ಹೊರವಲಯದ ಪ್ರಭಾ ಶುಗರ್ಸ್ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಅಭ್ಯರ್ಥಿ ಮಂಗಳಾ ಅಂಗಡಿ …

Read More »