Breaking News
Home / 2021 / ಏಪ್ರಿಲ್ / 18 (page 2)

Daily Archives: ಏಪ್ರಿಲ್ 18, 2021

Cinema ಮತ್ತೆ ವಿಜಯ್ ದೇವರಕೊಂಡ ಜೊತೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

ಮುಂಬೈ: ಟಾಲಿವುಡ್ ರೌಡಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಿನ್ನೆ ಮುಂಬೈನಲ್ಲಿ ಮತ್ತೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ಜಿಮ್‍ನಿಂದ ಹೊರಬರುವಾಗ ವಿಜಯ್ ದೇವರಕೊಂಡ ಟೋಪಿ ಹಾಗೂ ಮಾಸ್ಕ್‍ನಿಂದ ತಮ್ಮ ಮುಖ ಮುಚ್ಚಿಕೊಂಡಿದ್ದರೆ, ರಶ್ಮಿಕಾ ಆರಾಮಾಗಿ ಮಾಸ್ಕ್ ಧರಿಸದೇ ನಗುತ್ತಾ ಖುಷಿಯಿಂದ ಹೊರಬರುತ್ತಿರುವುದನ್ನು ಕಾಣಬಹುದಾಗಿದೆ. ಇಬ್ಬರು ತಮ್ಮ ಮುಂದಿನ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಬಹಳ ದಿನಗಳ ನಂತರ ಇದೀಗ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಕೆಲವು ದಿನಗಳ ಹಿಂದೆ …

Read More »

ಲಾಕ್ ಡೌನ್ ಇಲ್ಲ ಆದರೆ ಕಠಿಣ ನಿಯಮ ಜಾರಿ :ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರ ಸಭೆ ಬಳಿಕ ಅಮತನಾಡಿದ ಅವರು, ಲಾಕ್ ಡೌನ್ ಜಾರಿ ಪ್ರಶೆ ಇಲ್ಲ. ಆದರೆ ಟಫ್ ರೂಲ್ಸ್ ಜಾರಿ ಮಾಡಲಾಗುವುದು. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿ ಅಗತ್ಯವಿದೆ. ಬಡವರಿಗೆ ತೊಂದರೆಯಾಗದಂತೆ ನಿಯಮ ಜಾರಿ …

Read More »

ಸಿಎಮ್. ಹಾಗೂ ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಐದು ದಿನಗಳವರೆಗೆ “ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಶನಿವಾರದಂದು ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಗಳಾ ಸುರೇಶ ಅಂಗಡಿ ಅವರ ಪರ ಕ್ಷೇತ್ರಾದಾಧ್ಯಂತ ಮತಯಾಚಿಸಿ, ಹಗಲಿರುಳು ದುಡಿದ ಅರಭಾವಿ-ಗೋಕಾಕ ಕ್ಷೇತ್ರದ ಎಲ್ಲ ಮುಖಂಡರು, ಪದಾಧಿಕಾರಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಮೂಡಲಗಿಗೆ ಏ-14ರಂದು ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೋರೋನಾ ಸೋಂಕು ದೃಢಪಟ್ಟಿರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಚಾರಕ್ಕೆ ಆಗಮಿಸಿದ್ದ …

Read More »

ಬೆಳಗಾವಿಗೆ ಕೊರೊನಾ ಆತಂಕ ಶುರು ಇಂದು ಬರಲಿದೆ 500 ಜನರ ವರದಿ

ಬೆಳಗಾವಿ: ಉಪಚುನಾವಣೆ ಮುಗಿದ ಬೆನ್ನಲ್ಲೇ ಗಡಿಜಿಲ್ಲೆ ಬೆಳಗಾವಿಗೆ ಕೊರೊನಾ ಆತಂಕ ಶುರುವಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪನವರ ಸಂಪರ್ಕದಲ್ಲಿದ್ದವರ ಕೋವಿಡ್ ಟೆಸ್ಟ್ ವರದಿ ಇಂದು ಬರಲಿದೆ. ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕೆಲ ದಿನಗಳಿಂದ ಸಿಎಂ ಸಂಪರ್ಕದಲ್ಲಿದ್ದವರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ. ಬೆಳಗಾವಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸಿಎಂ ಸಂಪರ್ಕಕ್ಕೆ ಬಂದ 500 …

Read More »

ಅಕ್ಷರಶಃ ಆಕ್ಸಿಜನ್ ‘ಯಮ’ರ್ಜೆನ್ಸಿ ಸೃಷ್ಟಿಯಾಗಿದೆ. ಪರದಾಡಿ, ಗೋಳಾಡಿ ಬೆಡ್ ಪಡೆದರೂ ಜನರ ಜೀವಕ್ಕೆ ಖಾತ್ರಿ ಇಲ್ಲ.

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ 17 ಸಾವಿರ ಸೋಂಕು, 80 ಸಾವಿನೊಂದಿಗೆ ಇವತ್ತೂ ಮತ್ತೊಂದು ದಾಖಲೆ ಬರೆದಿದೆ. ಇದರ ಮಧ್ಯೆ ಬೆಂಗಳೂರಿನಲ್ಲಿ ಸದ್ಯದ ಪರಿಸ್ಥಿತಿ ರಣಭಯಂಕರವಾಗ್ತಿದೆ. ಅಕ್ಷರಶಃ ಆಕ್ಸಿಜನ್ ‘ಯಮ’ರ್ಜೆನ್ಸಿ ಸೃಷ್ಟಿಯಾಗಿದೆ. ಪರದಾಡಿ, ಗೋಳಾಡಿ ಬೆಡ್ ಪಡೆದರೂ ಜನರ ಜೀವಕ್ಕೆ ಖಾತ್ರಿ ಇಲ್ಲ. ಬೆಂಗಳೂರಿನ ಕೆಲವು ಆಸ್ಪತ್ರೆಗಳಲ್ಲಿ ಈಗಾಗಲೇ ಆಕ್ಸಿಜನ್ ಖಾಲಿಯಾಗಿದ್ರೆ, ಮತ್ತೆ ಕೆಲವು ಆಸ್ಪತ್ರೆಗಳಲ್ಲಿ ಇನ್ನೊಂದೆರಡು ದಿನಗಳಲ್ಲಿ `ಪ್ರಾಣವಾಯು’ ಕೊರತೆ ಎದುರಾಗಲಿದೆ. ಐಸಿಯುನಲ್ಲಿರೋ ರೋಗಿಗಳು `ದಯವಿಟ್ಟು ನಮಗೆ ಆಕ್ಸಿಜನ್ ಕೊಡಿಸಿ.. …

Read More »

ಕೊರೊನಾ ಮಧ್ಯೆ 3 ಕ್ಷೇತ್ರಗಳಿಗೆ ಉಪ ಚುನಾವಣೆ- ಕರ್ತವ್ಯಕ್ಕೆ ಬಾರದ 29 ಮಂದಿ ವಿರುದ್ಧ ಎಫ್‍ಐಆರ್

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಾದ ಬೆಳಗಾವಿ, ಮಸ್ಕಿ, ಬಸವಕಲ್ಯಾಣದ ಉಪಚುನಾವಣೆಗೆ ತೆರೆ ಬಿದ್ದಿದೆ. ಬೆಳಗಾವಿಯಲ್ಲಿ ಶೇ.60, ಬಸವಕಲ್ಯಾಣ ಶೇ.65 ಹಾಗೂ ಮಸ್ಕಿಯಲ್ಲಿ ಶೇ.71ರಷ್ಟು ಮತದಾನವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಸೇರಿದಂತೆ ಕುಟುಂಬಸ್ಥರು ಮತ ಚಲಾಯಿಸಿ, ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸಿದ್ರು. ಗೋಕಾಕ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮತದಾನ ಮಾಡಿದ್ರು. ಸೋಂಕು ಪೀಡಿತ ಸವದತ್ತಿ ಶಾಸಕ ಆನಂದ್ ಮಾಮನಿ ಪಿಪಿಇ ಕಿಟ್ ಧರಿಸಿ ಓಟ್ ಮಾಡಿದ್ರು. …

Read More »

ಕೊರೊನಾದಿಂದ ಬಳಲುತ್ತಿರೋ ಸಿಎಂ ಆರೋಗ್ಯ ಸ್ಥಿರ

ಬೆಂಗಳೂರು: ಕೋವಿಡ್ ನಿಂದ ಮಣಿಪಾಲ್ ಆಸ್ಪತ್ರೆ ಸೇರಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಲವಲವಿಕೆಯಿಂದ ಇದ್ದಾರೆ ಅಂತ ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಹೇಳಿದೆ. ತಜ್ಞ ವೈದ್ಯರ ತಂಡ ಶ್ವಾಸಕೋಶದ ಮೇಲೂ ನಿಗಾ ಇರಿಸಲಾಗಿದೆ ಅಂದಿದೆ. ಸಿಎಂ ಮೊಮ್ಮಗಳು ಸೌಂದರ್ಯ ಮತ್ತು ಅವರ ಪತಿ ಡಾ.ನಿರಂಜನ್‍ರಿಗೂ ಪಾಸಿಟಿವ್ ಆಗಿದ್ದು, ಮಣಿಪಾಲದಲ್ಲಿ ಸಿಎಂ ಪಕ್ಕದ ವಾರ್ಡ್‍ನಲ್ಲೇ ದಾಖಲಿಸಲಾಗಿದೆ. ಸಿಎಂ ಪ್ರಾಥಮಿಕ ಸಂಪರ್ಕಿತರಾಗಿರೋ ಡಿಸಿಎಂ ಲಕ್ಷ್ಮಣ ಸವದಿ ಗನ್‍ಮ್ಯಾನ್‍ಗೂ ಸೋಂಕು ದೃಢವಾಗಿದೆ. …

Read More »

5 ವರ್ಷಗಳಲ್ಲಿ ಚಿರತೆಗಳ ಸಂಖ್ಯೆ ದುಪ್ಪಟ್ಟು : ದೇಶದಲ್ಲೇ ಕರ್ನಾಟಕಕ್ಕೆ ದ್ವಿತೀಯ ಸ್ಥಾನ

ಉಡುಪಿ : ಚಿರತೆ ದಾಳಿಯಿಂದ ನಾಯಿ/ಹಸು ಬಲಿ, ಚಿರತೆ ಬೋನಿಗೆ ಇತ್ಯಾದಿ ಸುದ್ದಿಗಳನ್ನು ಆಗಾಗ್ಗೆ ಮಾಧ್ಯಮಗಳಲ್ಲಿ ನೋಡುತ್ತೇವೆ. ಕಾಡು ನಾಶದಿಂದ ವನ್ಯಜೀವಿಗಳು ನಾಡಿಗೆ ಬರುತ್ತಿವೆ ಎಂಬ ಕಾರಣ ನಿಜವಾದರೂ ಕಾಡು ನಾಶವಾಗುತ್ತಿದ್ದರೂ ವನ್ಯಜೀವಿಗಳ ಸಂಖ್ಯೆ ಏರುತ್ತಲ್ಲಿದೆ ಎಂಬ ಇನ್ನೊಂದು ಸತ್ಯವೂ ಗೋಚರಿಸುತ್ತಿದೆ. ಸರಕಾರದ ವನ್ಯಜೀವಿ ರಕ್ಷಣ ಕಾಯಿದೆಯಂತೆ ಅರಣ್ಯ ಇಲಾಖೆಯವರು ಮಾಡುತ್ತಿರುವ ಸಂರಕ್ಷಣ ಪ್ರಯತ್ನಗಳೂ ಕಾಡು ಪ್ರಾಣಿಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿವೆ. 2014ರಲ್ಲಿ ಭಾರತದಲ್ಲಿ ಚಿರತೆಯ ಗಣತಿ ನಡೆದಿದ್ದು ಬಳಿಕ …

Read More »

ಒಂದೇ ದಿನ 2,433 ಸಾರಿಗೆ ನೌಕರರ ಅಮಾನತು : 11 ದಿನಗಳಲ್ಲಿ ಇಂಥ ಕ್ರಮ ಇದೇ ಮೊದಲು

ಬೆಂಗಳೂರು: ಮುಷ್ಕರ ನಿರತ ಬಿಎಂಟಿಸಿ ನೌಕರರಿಗೆ ಸರಕಾರ ಭಾರೀ ಪೆಟ್ಟು ನೀಡಿದ್ದು, ಶನಿವಾರ ಒಂದೇ ದಿನ 2,443 ನೌಕರರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಇಷ್ಟು ನೌಕರರನ್ನು ಅಮಾನತು ಮಾಡಿರುವುದು ಇದೇ ಮೊದಲು. ಮುಷ್ಕರ ನಿಷೇಧಿಸಿದ್ದರೂ ಅನಧಿಕೃತವಾಗಿ ಭಾಗವಹಿಸಿದ್ದು ಮತ್ತು ಇತರರನ್ನು ಪ್ರಚೋದಿಸಿದ ಆರೋಪದ ಹಿನ್ನೆಲೆಯಲ್ಲಿ ಈ ಎಲ್ಲ ಸಿಬಂದಿಯನ್ನು ಅಮಾನತು ಮಾಡಲಾಗಿದೆ. ಸಾವಿರ ಮೀರಿದ ಸಂಖ್ಯೆ ಇತರ ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಇದುವರೆಗೆ 1 ಸಾವಿರಕ್ಕೂ ಅಧಿಕ ನೌಕರರನ್ನು ವಜಾಗೊಳಿಸಲಾಗಿದೆ. …

Read More »

ʼಹೆಲಿಪ್ಯಾಡ್‌ ನಮ್ಮ ಆಸ್ತಿ, ಮರ ಕಡಿಯಲು ಜನಾಭಿಪ್ರಾಯ ಸಂಗ್ರಹದ ಅಗತ್ಯ ಏನು?ʼ

ಮೈಸೂರು: ಹೆಲಿಟೂರಿಸಂಗಾಗಿ ಲಲಿತಮಹಲ್ ಬಳಿ ನೂರಾರು ಮರಗಳನ್ನು ಕಡಿಯುವ ಬಗ್ಗೆ ಸಾರ್ವಜನಿಕ ಅಹವಾಲು ಸಂಗ್ರಹಿಸಲು ಏ.೨೩ರಂದು ದಿನಾಂಕ ನಿಗದಿ ಮಾಡಿರುವ ಅರಣ್ಯಾಧಿಕಾರಿಗಳ ನಡೆಗೆ ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಲಲಿತಮಹಲ್ ಪ್ಯಾಲೆಸ್ ಮುಂಭಾಗದ ಮೈದಾನದಲ್ಲಿ ಹೆಲಿ ಟೂರಿಸಂಗಾಗಿ ನೂರಾರು ಮರಗಳನ್ನು ಕಡಿಯಲು ಸಾರ್ವಜನಿಕ ಅಹವಾಲಿಗೆ ಆಹ್ವಾನಿಸಿರುವುದು ಮಾಧ್ಯಮಗಳಿಂದ ತಿಳಿದು ಬಂದಿದೆ. ಲಲಿತಮಹಲ್ ಸುತ್ತ-ಮುತ್ತ ಇರುವುದು ಸಾರ್ವಜನಿಕವಲ್ಲ ಖಾಸಗಿ ಒಡೆತನದ ಆಸ್ತಿ. ಈ ಜಾಗದಲ್ಲಿರುವ ಮರಗಳನ್ನು ಕಡಿಯುವುದಕ್ಕೆ ಸಾರ್ವಜನಿಕರ ಅಹವಾಲು …

Read More »