Breaking News
Home / 2021 / ಏಪ್ರಿಲ್ / 23 (page 4)

Daily Archives: ಏಪ್ರಿಲ್ 23, 2021

ಬೆಂಗಳೂರಲ್ಲಿ ಇಂದು 15,244 ಹೊಸ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪೀಡಿತರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಗುರುವಾರ ಒಟ್ಟು 25,795 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 123 ಮಂದಿ ಮೃತರಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್‌ ಕಾಣಿಸಿಕೊಂಡ ನಂತರ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣ ಇದಾಗಿದೆ. ರಾಜ್ಯದ ವಿವಿಧೆಡೆ ಕೋವಿಡ್‌ ತೀವ್ರಗತಿಯಲ್ಲಿ ಏರುತ್ತಿದೆ. ಹೀಗಾಗಿ ಪರೀಕ್ಷೆಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಗುರುವಾರ ಒಟ್ಟು 1.62 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 15.87ಕ್ಕೆ ಏರಿಕೆಯಾಗಿದೆ. …

Read More »

ಬನಶಂಕರಿ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿಷೇಧ

ಬಾದಾಮಿ: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕೇಂದ್ರ ಸುಕ್ಷೇತ್ರ ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿಷೇ ಧಿಸಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಐತಿಹಾಸಿಕ, ಧಾರ್ಮಿಕ ಕೇಂದ್ರ, ಪ್ರಮುಖ ಶಕ್ತಿ ಪೀಠಗಳಲ್ಲಿ ಒಂದಾದ ಬಾದಾಮಿಯ ಬನಶಂಕರಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಗುಂಪು ಸೇರುವುದು, ಜಾತ್ರೆ, ಉತ್ಸವ ನಿಷೇಧ ಮಾಡಲಾಗಿದೆ. …

Read More »

18 ಇಲಾಖೆ ಸಿಬಂದಿಗೆ ರಜೆ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ 18 ಇಲಾಖೆಗಳ ಅಧಿಕಾರಿ, ಸಿಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಅಲ್ಲದೆ ಅವರು ಕೇಂದ್ರ ಸ್ಥಾನ ತೊರೆಯದಂತೆ ಸರಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪ್ರಮುಖವಾದ ಆರೋಗ್ಯ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಆಹಾರ, ಸಾರಿಗೆ, ವಾರ್ತಾ, ಇಂಧನ, ಖಜಾನೆ, ಸಿಬಂದಿ ಮತ್ತು ಆಡಳಿತ ಸುಧಾರಣೆ, ಪಶುಸಂಗೋಪನೆ, ಕಾರ್ಮಿಕ, ಅರಣ್ಯ, ಕೃಷಿ, ಕೃಷಿ ಮಾರುಕಟ್ಟೆ ಹಾಗೂ ತೋಟಗಾರಿಕೆಯು ಅಗತ್ಯ …

Read More »

ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ಐಸಿಯುನಲ್ಲಿದ್ದ 13 ರೋಗಿಗಳು ಸಾವು!

ಮುಂಬೈ (ಏ. 23): ಮಹಾರಾಷ್ಟ್ರದಲ್ಲಿ ಇಂದು ಮುಂಜಾನೆ ಭಾರೀ ದುರಂತವೊಂದು ನಡೆದಿದ್ದು, ಕೋವಿಡ್-19 ಸೆಂಟರ್​ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 13 ಕೊರೋನಾ ರೋಗಿಗಳು ಸಜೀವ ದಹನವಾಗಿದ್ದಾರೆ. ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ವಾಸೈನಲ್ಲಿನ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಇನ್ನೂ ಅನೇಕ ರೋಗಿಗಳಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಐಸಿಯುನಲ್ಲಿದ್ದ 13 ರೋಗಿಗಳು ಸಾವನ್ನಪ್ಪಿದ್ದು, ಉಳಿದ ಮೂರ್ನಾಲ್ಕು ಕೊರೋನಾ ರೋಗಿಗಳ ಸ್ಥಿತಿ ಚಿಂತಾಜನಕವಾಗಿದೆ. …

Read More »

ಒಂದೇ ಕುಟುಂಬದ ಮೂವರು ಸದಸ್ಯರು ಕರೊನಾಕ್ಕೆ ಬಲಿ! ಆಘಾತ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಸೊಸೆ!

ಭೋಪಾಲ್​: ಕರೊನಾ ದೇಶದ ಜನರಲ್ಲಿ ಭಯ ಹುಟ್ಟಿಸಿದೆ. ಸೋಂಕು ಹರಡಿ ಕೆಲವೇ ದಿನಗಳಲ್ಲಿ ಜನರು ಪ್ರಾಣ ಬಿಡುತ್ತಿರುವ ಉದಾಹರಣೆಗಳು ಹೆಚ್ಚಾಗುತ್ತಿವೆ. ಇದೇ ರೀತಿ ಒಂದೇ ಕುಟುಂಬದ ಮೂವರು ಸದಸ್ಯರು ಕರೊನಾಕ್ಕೆ ಒಂದು ತಿಂಗಳ ಅವಧಿಯಲ್ಲಿ ಬಲಿಯಾಗಿದ್ದಾರೆ. ಅದನ್ನು ಕಂಡ ಮನೆಯ ಸೊಸೆ ಆಘಾತ ತಾಳಲಾರದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ದೇವಾಸ್​ ನಗರದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಬಾಲಕಿಶನ್​ ಅವರ ಪತ್ನಿ ಚಂದ್ರಕಲಾ (75) ಅವರು ಏಪ್ರಿಲ್​ 14ರಂದು …

Read More »

ಅಂದಿನ ತಪ್ಪಿಗೆ ಇಂದು ಬೆಲೆ ತೆರಬೇಕಾಗಿದೆ; ರಾಜ್ಯ ಸರ್ಕಾರದ ನಡೆಗೆ ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕು ಕಟ್ಟುನಿಟ್ಟಾಗಿ ನಿಯಂತ್ರಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ. ಯಾರೋ ಬಂದು ಹೇಳಿದ ಮಾತ್ರಕ್ಕೆ ನಿಯಮಗಳನ್ನೇ ವಾಪಸ್ ಪಡೆದುಕೊಳ್ಳುವುದು ಸರಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಕಳೆದ ಒಂದು ವಾರದಲ್ಲಿ 15 ಪಟ್ಟು ಕೋವಿಡ್ ಪ್ರಕರಣಗಳು ಹೆಚ್ಚಾಗಿವೆ. ಆದರೂ ಆ ನಿಟ್ಟಿನಲ್ಲಿ ಸರ್ಕಾರ ಸಿದ್ಧತೆ ಮಾಡಿಕೊಂಡಂತೆ ಕಾಣುತ್ತಿಲ್ಲ. ಕಳೆದ ಎಂಟು ದಿನಗಳ ಹಿಂದೆ ಥಿಯೇಟರ್, …

Read More »

ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್: ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್ ಜಾರಿ ಮಾಡಲಾಗಿದೆ. ಮೇ 4 ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದ ಸರ್ಕಾರ ಜನತೆಗೆ ದಿಢೀರ್ ಶಾಕ್ ನೀಡಿದೆ. ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ ನೀಡಿದೆ. ಮೇ 4 ರ ವರೆಗೆ ವಾಣಿಜ್ಯ ಮಳಿಗೆ, ಅಂಗಡಿ ಮುಂಗಟ್ಟು ಬಂದ್ ಆಗಲಿವೆ. ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮಾತ್ರ ಅಂಗಡಿ ಬಂದ್ ಮಾಡಬೇಕು ಎಂದುಕೊಂಡಿದ್ದವರಿಗೆ ಶಾಕ್ ನೀಡಿದೆ. ಅಗತ್ಯ ವಸ್ತುಗಳ …

Read More »

ಪ್ರೀತಿಗಾಗಿ ಅಣ್ಣನ ರುಂಡ ಚೆಂಡಾಡಿದ ತಂಗಿ

ಹುಬ್ಬಳ್ಳಿ:  ಧಾರವಾಡ ಜಿಲ್ಲೆಯ ಪೊಲೀಸರನ್ನೂ ಆತಂಕದಲ್ಲಿ ದೂಡಿದ್ದ ಪ್ರಕರಣದ ಹೊಸ ಸ್ವರೂಪ ಬಯಲಾಗಿದೆ. ರುಂಡ-ಮುಂಡ ಚೆಂಡಾಡಿದ ಪ್ರಕರಣದಲ್ಲಿ ಭೀಕರವಾಗಿ ಹತ್ಯೆಯಾದ ಯುವಕನ ಸಹೋದರಿ ಕಂ ಚಲನಚಿತ್ರ ನಟಿ ಕಂ ಮಾಡೆಲ್ ಕಂ ವಿಲನ್ ಪಾತ್ರ ಇರುವುದು ಸ್ಪಷ್ಟವಾಗಿದ್ದು, ಚಿತ್ರನಟಿ ಕೊನೆಗೂ ಜೈಲು ಪಾಲಾಗಿದ್ದಾಳೆ. ರಾಕೇಶ ಶೆಟ್ಟಿ ಎಂಬ ಸಹೋದರನನ್ನ ಮೂರು ಸೈಟ್ ವಿಚಾರಕ್ಕೆ ಕೊಲೆ ಮಾಡಿದ್ದು, ಈಗಾಗಲೇ ಸಿಕ್ಕಿರುವ ನಾಲ್ವರ ಜೊತೆ ರಾಕೇಶ ಶೆಟ್ಟಿಯ ಸಹೋದರಿ ಛೋಟಾ ಬಾಂಬೆ ಸಿನೇಮಾದ …

Read More »

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ

ಬೆಂಗಳೂರು: ಕಳೆದ ಒಂದು ವಾರದಲ್ಲಿ 15 ಪಟ್ಟು ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಆದರೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಂಡಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಗಂಭೀರತೆ ಬಗ್ಗೆ ಇಷ್ಟು ದಿನ ನಾನೂ ಮಾಧ್ಯಮಗಳಲ್ಲಿ ನೋಡುತ್ತಿದ್ದೆ. ಇಂದು ಸ್ವತ: ಖುದ್ದಾಗಿ ಬಂದು ಪರಿಸ್ಥಿತಿ ಗಮನಿಸುತ್ತಿದ್ದೇನೆ. ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತು ಗಂಭೀರವಾಗಿ ಸಿದ್ಧತೆ ಮಾಡಿಕೊಳ್ಳಬೇಕು …

Read More »

ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮೂಹಿಕ ವಿವಾಹ ,ವಧುವಿನ ಮನೆಗೇ ತಲುಪಲಿದೆ ವಿವಾಹ ಸಾಮಗ್ರಿ

ಧರ್ಮಸ್ಥಳ – ದಿನಾಂಕ ೨೯.೪.೨೦೨೧ ರಂದು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮಾಹಿಕ ವಿವಾಹ ಕಾರ್ಯಕ್ರಮವನ್ನು ವ್ಯವಸ್ಥೆಗೊಳಿಸಲಾಗಿದ್ದು, ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಸರಕಾರದ ಆದೇಶದಂತೆ ಈ ಕಾರ್ಯಕ್ರಮವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಇದರ ಬದಲಾಗಿ ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳಿಗೂ ಕ್ಷೇತ್ರದ ವತಿಯಿಂದ ಆಶೀರ್ವಾದಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಮತ್ತಿತ್ಯಾದಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಯ ಕಾರ್ಯಕರ್ತರ ಮುಖೇನ ವಧುವಿನ …

Read More »