Daily Archives: ಏಪ್ರಿಲ್ 24, 2021

ಬಯಲಾಯ್ತು ಖಾಸಗಿ ಆಸ್ಪತ್ರೆಗಳ ಬೆಡ್ ರಹಸ್ಯ: ಅಗತ್ಯವಿಲ್ಲದಿದ್ರೂ ರೋಗಿಗಳ ಹೆಸರಲ್ಲಿ ಹಾಸಿಗೆ ಭರ್ತಿ

ನವದೆಹಲಿ: ನೋಯ್ಡಾದ ಅನೇಕ ಆಸ್ಪತ್ರೆಗಳಲ್ಲಿ ಅಗತ್ಯವಿಲ್ಲದವರೂ ರೋಗಿಗಳ ಹೆಸರಲ್ಲಿ ಆಸ್ಪತ್ರೆಯ ಬೆಡ್ ಪಡೆದುಕೊಂಡಿರುವುದು ಬೆಳಕಿಗೆ ಬಂದಿದೆ. ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದಲ್ಲಿರುವ ಅನೇಕ ಆಸ್ಪತ್ರೆಗಳಲ್ಲಿ ಅಗತ್ಯವಿಲ್ಲದ ಅನೇಕ ಜನ ಹಾಸಿಗೆಗಳನ್ನು ಆಕ್ರಮಿಸಿಕೊಂಡಿದ್ದಾರೆ ಎಂದು ಗೌತಮಬುದ್ಧ ನಗರ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ಇಂತಹ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಆದೇಶಿಸಲಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ನೋಯ್ಡಾ ಜಿಲ್ಲೆಯ ಅನೇಕ ಆಸ್ಪತ್ರೆಗಳಲ್ಲಿ 200 ಕ್ಕೂ ಹೆಚ್ಚು ಮಂದಿಯನ್ನು ಜಾಗ ಖಾಲಿ ಮಾಡಿಸಲಾಗಿದೆ. …

Read More »

ಮುಂಗಡ ಹಣ ವಾಪಸ್ ನೀಡಲು ಕಲ್ಯಾಣ ಮಂಟಪ ಮಾಲೀಕರಿಂದ ನಕಾರ

ಚಿಕ್ಕಮಗಳೂರು: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮದುವೆ ಸಮಾರಂಭಗಳಿಗೆ ಕಠಿಣ ನಿಯಮವನ್ನು ಹೇರಲಾಗಿದೆ. ಸಾವಿರಾರು ಜನರನ್ನ ಸೇರಿಸಿ ಮದುವೆ ಮಾಡಬೇಕು ಎಂದು ಆಸೆಪಟ್ಟವರು ಇದೀಗ 50 ಮಂದಿಯನ್ನ ಸೇರಿಸಿ ಮದುವೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ದೊಡ್ದ ದೊಡ್ಡ ಹಾಲ್​ಗಳಲ್ಲಿ ಬುಕ್ ಮಾಡಿದ ಮದುವೆಗಳೇಲ್ಲ ಮನೆಗಳಲ್ಲಿ ಮತ್ತು ದೇವಸ್ಥಾನಗಳಲ್ಲಿ ಮಾಡಲು ನಿರ್ಧರಿಸಲಾಗಿದೆ. ಆದರೆ ಕನ್ಷೆಷನ್ ಹಾಲ್​ಗಳಿಗೆ ಮುಂಗಡವಾಗಿ ಕಟ್ಟಿದ ಹಣವನ್ನ ಮಾತ್ರ ಕೇಳಬೇಡಿ ಎಂದು ಮಾಲೀಕರು ಹೇಳುತ್ತಿದ್ದಾರೆ. ಹೀಗಾಗಿ ಕುಟುಂಬಸ್ಥರಲ್ಲಿ …

Read More »

ಮಂಗಳೂರಿನಲ್ಲಿ ಬೆಂಕಿ ಅವಘಡ, ಲಾಕ್ ಡೌನ್ ಹಿನ್ನಲೆ ತಪಿತಿ ಬಹುದೊಡ್ಡ ಅನಾಹುತ

ಮಂಗಳೂರು: ಕ್ಯಾಟಸೆಂತ್ ಕೆಮಿಕಲ್ ಫ್ಯಾಕ್ಟರಿ ಯಲ್ಲಿ ಬೆಂಕಿ ಅವಘಡವಾಗಿರುವ ಘಟನೆ ಕಂಡುಬಂದಿದೆ. ಮಂಗಳೂರ ನಗರ ಹೊರವಲಯದ ಸುರತ್ಕಲ್ ಸಮೀಪದ ಕಳವಾರ ನಲ್ಲಿರುವ ಕ್ಯಾಟಸೆಂತ್ ಫ್ಯಾಕ್ಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕ್ಯಾಟಸೆಂತ್ ಫ್ಯಾಕ್ಟರಿಯ ಎರಡನೇ ಮಹಡಿಯಲ್ಲಿ ಈ ಬೆಂಕಿ ಕಾಣಿಸಿಕೊಂಡಿದ್ದು, ಸುರತ್ಕಲ್,MRPL ಅಗ್ನಿಶಾಮಕ ದಳದಿಂದ ತಂಡ ಕಾರ್ಯಚರಣೆ ನಡೆಸುತ್ತಿದೆ. ಪ್ರಸ್ತುತದ ಲಾಕ್ ಡೌನ್ ಹಿನ್ನಲೆ ಕಾರ್ಮಿಕರೆಲ್ಲ ಇರದ ಕಾರಣ ಬಹುದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗುತ್ತಿದೆ.

Read More »

ರಾಜ್ಯದ ಕೋವಿಡ್ ಪರಿಸ್ಥಿತಿ ನಮ್ಮ ನಿಯಂತ್ರಣದಲ್ಲಿಲ್ಲ: ಬಿ.ಎಸ್ . ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಬೆಡ್ , ಐಸಿಯು , ವೆಂಟಿಲೇಟರ್ ಬೆಡ್’ಗಳ ಕೊರತೆ ಕಂಡುಬಂದಿದ್ದು , ಪರಿಸ್ಥಿತಿ ನಿಯಂತ್ರಣದಲ್ಲಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಹೇಳಿದ್ದಾರೆ . ಸಾವಿನ ಸಂಖ್ಯೆ ಹಾಗೂ ಸೋಂಕಿತ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹೆನ್ನೇಳೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೇನೆಡೆಸಿದ ಬಿಎಸ್’ವೈ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರೊಂದಿಗೆ, ಬೆಂಗಳೂರಿನಲ್ಲಿ ವೆಂಟಿಲೇಟರ್ ಹಾಸಿಗೆಗಳನ್ನು 10 ಪಟ್ಟು ಹೆಚ್ಚಳ ಮಾಡುವಂತೆ ಆದೇಶಿಸಿದ್ದಾರೆ …

Read More »

‘ಲಸಿಕೆ ಪಡೆಯುವ ಮೊದಲು ರಕ್ತದಾನ ಮಾಡಿ ಪ್ಲೀಸ್’: ಶಿರಸಿ ವೈದ್ಯೆಯ ಜಾಗೃತಿ ಅಭಿಯಾನ

ಶಿರಸಿ: ಕೇಂದ್ರ ಸರಕಾರ ಕೋವಿಡ್ 19ರ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ಪಡೆದುಕೊಳ್ಳಲು ಮುಕ್ತ ಅವಕಾಶ ಪ್ರಕಟಿಸಿದೆ. ಸರಕಾರಗಳಿಂದ ಕೋವಿಡ್ ನಿಯಂತ್ರಣಕ್ಕೆ ಇದು ಅತ್ಯಂತ ಮಹತ್ವದ ನಡಯಾಗಿದೆ. ಈ ನಡೆಯ ಬೆನ್ನಲ್ಲೇ ಶಿರಸಿಯ ವೈದ್ಯೆಯೊಬ್ಬರು ಲಸಿಕೆ ಹಾಕಿಸಿಕೊಳ್ಳುವ ಮೊದಲು ಅರ್ಹ ದಾನಿಗಳು ‘ರಕ್ತದಾನ ಮಾಡಿ ಪ್ಲೀಸ್’ ಎಂಬ ವಿನೂತನ ಜಾಗೃತಿ ಅಭಿಯಾನವನ್ನೂ ಆರಂಭಿಸಿದ್ದಾರೆ. ಏನಿದು ಅಡಚಣೆ? ಕೋವಿಡ್ ನಿರೋಧಕ ಲಸಿಕೆ …

Read More »

ಬೆಳಗಾವಿ ಆಕ್ಸಿಜನ್ ಪ್ಲಾಂಟ್‌’ ಗೆ ಭೇಟಿ ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಕಾಕತಿಯಲ್ಲಿರುವ ಬೆಳಗಾವಿ ಆಕ್ಸಿಜನ್ ಪ್ಲಾಂಟ್‌’ ಗೆ ಭೇಟಿ ನೀಡಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಪ್ಲಾಂಟ್ ನಲ್ಲಿನ ಆಕ್ಸಿಜನ್ ಸಿಲಿಂಡರ್ ಗಳ ಸಂಗ್ರಹಣೆ ಹಾಗೂ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿ ಪ್ಲಾಂಟ್ ಗೆ ಆಕ್ಸಿಜನ್ ಸರಬರಾಜು ಮಾಡುವ ಮೂಲಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸಹಾಯಕ ಔಷಧ ನಿಯಂತ್ರಕ ರಘುರಾಮ್ ಅವರೊಂದಿಗೆ ಚರ್ಚೆ ನಡೆಸಿದ ಅವರು ಕಾರ್ಖಾನೆಯಲ್ಲಿ ಅಗತ್ಯ ಪ್ರಮಾಣದ …

Read More »

ಕರ್ಫ್ಯೂ ಹೊತ್ತಲ್ಲಿ ಮಾನವೀಯತೆ ಮೆರೆದ ಯುವ ಕಾಂಗ್ರೆಸ್ ಕಾರ್ಯಕರ್ತರು

ಶಿವಮೊಗ್ಗ: ವೀಕೆಂಡ್ ಕರ್ಫ್ಯೂ ನಿಂದಾಗಿ ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಅನ್ನ ಮತ್ತು ನೀರಿಗಾಗಿ ನಿರ್ಗತಿಕರು, ಭಿಕ್ಷುಕರು ಪರದಾಟ ನಡೆಸಿದ್ದು, ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಈ ಮೂಲಕ ಮಾನವೀಯತೆ ಮೆರೆದಿದ್ದಾರೆ. ವೀಕೆಂಡ್ ಕರ್ಫ್ಯೂ ಇರುವುದರಿಂದ ನಗರದಲ್ಲಿ ಎಲ್ಲಾ ಹೋಟೆಲ್ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಇಂತಹ ಸಂದರ್ಭದಲ್ಲಿ ನಿರ್ಗತಿಕರಿಗೆ ತೊಂದರೆಯಾಗುವುದನ್ನು ಮನಗಂಡ ಯುವ ಕಾಂಗ್ರೆಸ್ ಕಾರ್ಯಕರ್ತರು ಊಟದ ಪ್ಯಾಕೆಟ್ ಮತ್ತು ನೀರಿನ ಬಾಟಲಿಯನ್ನು …

Read More »

ಎರಡೇ ದಿನದಲ್ಲಿ ಇಬ್ಬರನ್ನು ಕಳೆದುಕೊಂಡೆ – ಸರ್ಕಾರದ ವಿರುದ್ಧ ನಟ ಪವನ್ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಕೈಮೀರುತ್ತಿದೆ. ಈ ನಡುವೆ ಕಿರುತೆರೆ ಕಲಾವಿದ ಗಟ್ಟಿಮೇಳದ ಪವನ್ ಕುಮಾರ್ ತಮ್ಮ ಕುಟುಂಬದ ಇಬ್ಬರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಕೊರೊನಾದಿಂದಾಗಿ ಮರಣ ಹೊಂದಿದ್ದಾರೆ. ರಾಜ್ಯ ಸರ್ಕಾರ ಜನರ ಜೀವಕ್ಕೆ ಬೆಲೆ ಕೊಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಪವನ್ ತಮ್ಮ ಕುಟುಂಬದವರನ್ನು ಕಳೆದುಕೊಂಡ ದುಖಃದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡುವ ಮೂಲಕ ಕೊರೊನಾ ಬಗ್ಗೆ ಜನರಿಗೆ ಅರಿವು ಮೂಡಿಸಿದ್ದಾರೆ. ಪವನ್ ಕುಟುಂಬದಲ್ಲಿ …

Read More »

ಮಗನ ಸಾವಿನ ಬಗ್ಗೆ ಪ್ರಶ್ನಿಸಿದ್ದಕ್ಕೆ ಕೇಸು ಹಾಕುದಾಗಿ ಬೆದರಿಸಿದ ಖಾಸಗಿ ಆಸ್ಪತ್ರೆ

ಬೆಂಗಳೂರು: ಜ್ವರ ಎಂದು ನಗರದ ಖಾಸಗಿ ಆಸ್ಪತ್ರೆಗೆ ಸೇರಿದ ಒಬ್ಬ ಯುವಕ ಇಂದು ಮೃತಪಟ್ಟಿದ್ದಾನೆ. ಆತನ ಮರಣದ ಕುರಿತು ಆಸ್ಪತ್ರೆಯೊಂದಿಗೆ ವಿಚಾರಿಸಿದ ಯುವಕನ ಪೋಷಕರಿಗೆ ಆಸ್ಪತ್ರೆ ಸಿಬ್ಬಂದಿ ನಿಮ್ಮ ಮಗನ ಸಾವಿನ ಬಗ್ಗೆ ಕೇಳಿದರೆ ನಿಮ್ಮ ಮೇಲೆ ಕೇಸು ಹಾಕುದಾಗಿ ಬೆದರಿಕೆ ಹಾಕಿದ್ದಾರೆ. ಕೇಂದ್ರದ ಮಾಜಿ ಅಧಿಕಾರಿಯಾಗಿದ್ದ ದಿವಾಕರ್ ಕೋರೆ ಅವರ ಮಗ ಅಲೋಕ್ ಜ್ವರ ಎಂದು ಅತ್ತಿಬೆಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ. ನಂತರ ಆತನಿಗೆ ಕೊರೊನಾ ಪಾಸಿಟಿವ್ ಆಗಿತ್ತು. …

Read More »

ವರನಟ ಡಾ.ರಾಜ್‍ಕುಮಾರ್ 92ನೇ ಜನ್ಮದಿನ ಸಂಭ್ರಮಾಚರಣೆಯನ್ನು ರಾಜ್ ಅವರ ಮೂವರು ಮಕ್ಕಳು ಒಂದೊಂದು ರೀತಿಯಾಗಿ ವಿಶೇಷವಾಗಿ ಆಚರಿಸುವ ಮೂಲಕವಾಗಿ ತಂದೆಗೆ ಪ್ರೀತಿಯನ್ನು ತೋರಿಸಿದ್ದಾರೆ.

ಬೆಂಗಳೂರು: ವರನಟ ಡಾ.ರಾಜ್‍ಕುಮಾರ್ 92ನೇ ಜನ್ಮದಿನ ಸಂಭ್ರಮಾಚರಣೆಯನ್ನು ರಾಜ್ ಅವರ ಮೂವರು ಮಕ್ಕಳು ಒಂದೊಂದು ರೀತಿಯಾಗಿ ವಿಶೇಷವಾಗಿ ಆಚರಿಸುವ ಮೂಲಕವಾಗಿ ತಂದೆಗೆ ಪ್ರೀತಿಯನ್ನು ತೋರಿಸಿದ್ದಾರೆ. ನಟನೆ ಸರಳತೆ, ವ್ಯಕ್ತಿತ್ವದ ಮೂಲಕವಾಗಿ ಅಪಾರ ಸಂಖ್ಯೆ ಅಭಿಮಾನಿಗಳನ್ನು ಗಳಿಸಿಕೊಂಡಿದ್ದ ರಾಜ್‍ಕುಮಾರ್ ಅವರಿಗೆ ಅವರು ಮಕ್ಕಳು ದೊಡ್ಡ ಅಭಿಮಾನಿಗಳಾಗಿದ್ದಾರೆ. ತಾವು ಮಾಡುವ ಯಾವುದೇ ಕೆಲಸಗಳಿಗೆ ರಾಜ್‍ಮಕ್ಕಳು ತಮ್ಮ ತಂದೆಯನ್ನು ನೆನೆಯುತ್ತಾರೆ. ನಾವು ನಮ್ಮ ತಂದೆಗೆ ದೊಡ್ಡ ಅಭಿಮಾನಿಗಳು ಎಂದು ಆಗಾಗ ಹೇಳುತ್ತಿರುತ್ತಾರೆ. ರಾಜ್‍ಕುಮಾರ್ ಅವರ …

Read More »