ಮೈಸೂರು: ವಾರಾಂತ್ಯದ ಕರ್ಫ್ಯೂ ನಿಯಮ ಉಲ್ಲಂಘಿಸಿ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯ ಬಳಿ ಕಾರಿನಲ್ಲಿ ತೆರಳುತ್ತಿದ್ದ ಪ್ರಸಿದ್ಧ ನಟ ಮಂಡ್ಯ ರಮೇಶ್ಗೆ ಎಸ್ಐ ಪುಟ್ಟರಾಜು ಕರ್ಫ್ಯೂ ನಿಯಮ ಉಲ್ಲಂಘಿಸದಂತೆ ಬುದ್ಧಿವಾದ ಹೇಳಿದ್ದಾರೆ. ಅಲ್ಲದೇ ಮೈಸೂರಿನ ಗ್ರಾಮೀಣ ಪ್ರದೇಶಗಳಲ್ಲೂ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದ ಜನರಿಗೆ ಪೊಲೀಸರು ತಡೆ ಒಡ್ಡಿದ್ದಾರೆ. ಕುಂಟು ನೆಪ ಹೇಳಿ ತಿರುಗಾಡುವವರನ್ನು ಖಾಕಿ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಸಬ್ ಇನ್ಸಪೆಕ್ಟರ್ ಪುಟ್ಟರಾಜು ಮತ್ತು ಇತರ …
Read More »Daily Archives: ಏಪ್ರಿಲ್ 25, 2021
ಮುಸ್ಲಿಂ ಯುವಕರ ತಂಡದಿಂದ ಕೊವಿಡ್ಗೆ ಬಲಿಯಾದವರ ಉಚಿತ ಅಂತ್ಯಸಂಸ್ಕಾರ; ತುಮಕೂರಿನಲ್ಲೊಂದು ಮಾನವೀಯ ಕಾರ್ಯ
ತುಮಕೂರು: ಕೊವಿಡ್ ಸೋಂಕು ಎಲ್ಲರನ್ನೂ ಭಾವನಾತ್ಮಕವಾಗಿ, ಮಾನಸಿಕವಾಗಿ ಒಗ್ಗೂಡಿಸುತ್ತಿದೆ. ಮನುಷ್ಯರೆಲ್ಲರೂ ಒಂದೇ ಎಂಬ ಭಾವವನ್ನು ಎಲ್ಲರ ಮನಸ್ಸಿನಲ್ಲಿಯೂ ಮೂಡಿಸುತ್ತಿದೆ. ಕೊವಿಡ್ನಿಂದ ಉಂಟಾದ ಸಮಸ್ಯೆಯನ್ನು ಪರಿಹರಿಸಲು ಮುಸ್ಲಿಂ ಯುವಕರ ತಂಡವೊಂದು ನಡೆಸುತ್ತಿರುವ ಮಾನವೀಯ ಕಾರ್ಯಕ್ಕೆ ತುಮಕೂರು ಸಾಕ್ಷಿಯಾಗುತ್ತಿದೆ. ನಿನ್ನೆಯಿಂದ ಜಿಲ್ಲೆಯ ಮಧುಗಿರಿಯ ಎಂಟು ಮುಸ್ಲಿಂ ಯುವಕರ ತಂಡವೊಂದು ಸ್ವಯಂ ಪ್ರೇರಿತರಾಗಿ ತಾಲ್ಲೂಕು ಆಸ್ಪತ್ರೆ, ವಿವಿಧ ಖಾಸಗಿ ಆಸ್ಪತ್ರೆ ಗಳಲ್ಲಿ ಕೊವಿಡ್ನಿಂದ ಮೃತಪಟ್ಟ ಶರೀರವನ್ನು ಆಯಾ ಗ್ರಾಮಗಳಲ್ಲಿ ಅವರ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಿಕೊಡುತ್ತಿದೆ. …
Read More »ತೊದಲು ನುಡಿಯಲ್ಲೇ ಲೋಕಜ್ಞಾನ ತೆರೆದಿಡುವ ಮಗು; ಎರಡೂವರೆ ವರ್ಷದ ಬಾಲಕಿ ಜ್ಞಾಪಕ ಶಕ್ತಿಗೆ ಬೆರಗಾದ ಬಾಗಲಕೋಟೆ ಮಂದಿ
ಬಾಗಲಕೋಟೆ: ಮಕ್ಕಳಿರಲವ್ವ ಮನೆ ತುಂಬ, ಕೂಸು ಕಂದಯ್ಯ ಒಳ ಹೊರಗಾ ಆಡಿದರ ಬೀಸಣಿಕೆ ಗಾಳಿ ಸುಳಿದಾವ ಎಂಬ ಮಾತು ಇದೆ. ಮಕ್ಕಳಿದ್ದ ಮನೆಯಲ್ಲಿ ಪ್ರತಿದಿನವೂ ಸಂಭ್ರಮ, ಅವುಗಳ ತೊದಲು ನುಡಿ ತುಂಟಾಟ ನೋಡುವುದೇ ಅಂದ ಎಂಬುವುದು ಇದರ ಅರ್ಥ. ಇದಕ್ಕೆ ಪುಷ್ಠಿ ನೀಡುವಂತೆ ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ಓರ್ವ ಅಸಾಮಾನ್ಯ ಬಾಲಕಿ ಇದ್ದು, ಆಕೆಯ ಹೆಸರು ಸಮನ್ವಿತಾ ಕರಕಟ್ಟಿ. ವಯಸ್ಸು ಕೇವಲ ಎರಡುವರೆ ವರ್ಷ,ಆದರೆ ಈಕೆಯ ಸಾಧನೆ ಮಾತ್ರ …
Read More »