Breaking News
Home / 2021 / ಏಪ್ರಿಲ್ / 27 (page 4)

Daily Archives: ಏಪ್ರಿಲ್ 27, 2021

ತಾಯಿ ನಿಧನಕ್ಕೆ ಆಕ್ರೋಶಗೊಂಡ ಪೊಲೀಸ್​ ಅಧಿಕಾರಿಯಿಂದ ವೈದ್ಯರ ಮೇಲೆ ಹಲ್ಲೆ..!

ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಕ್ಕೆ ಆಕ್ರೋಶಗೊಂಡ ಪೊಲೀಸ್​ ಇನ್​ಸ್ಪೆಕ್ಟರ್​ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಪ್ರಯಾಗ್​ರಾಜ್​​ನ ಸ್ವರೂಪ್​ ರಾಣಿ ನೆಹರು ಆಸ್ಪತ್ರೆಯಲ್ಲಿ ನಡೆದಿದೆ. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪೊಲೀಸ್​ ಅಧಿಕಾರಿಯ 72 ವರ್ಷದ ತಾಯಿ ಸಾವಿಗೀಡಾಗಿದ್ದದಾರೆ. ಇದರಿಂದ ಆಕ್ರೋಶಗೊಂಡ ಜುಲ್ಫೀಕರ್​ ಅಲಿ ಹಾಗೂ ಆತನ ಸಹೋದರ ವೈದ್ಯರ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ ಎಂದು ಆರೋಪಿಸಿದ್ದಾರೆ. ಇಬ್ಬರು ಮೊಬೈಲ್​ನಲ್ಲಿ ವಿಡಿಯೋ ಮಾಡಲು ಆರಂಭಿಸಿದ್ದಾರೆ. ಇದಕ್ಕೆ ವೈದ್ಯರು ತಡೆ ಒಡ್ಡುತ್ತಿದ್ದಂತೆಯೇ …

Read More »

VTU’ನ ಎಲ್ಲಾ ಪರೀಕ್ಷೆ ಮುಂದೂಡಿಕೆ, ಇಲ್ಲಿದೆ ಅಧಿಕೃತ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ನಾಳೆಯಿಂದ 14 ದಿನ ಕೊರೊನಾ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದ ( VTU) ಎಲ್ಲಾ ಪರೀಕ್ಷೆಗಳು ಮುಂದೂಡಿಕೆಯಾಗಿದೆ ಎಂದು ವಿವಿ ಮಾಹಿತಿ ನೀಡಿದೆ. ಮುಂದಿನ ಆದೇಶದವರೆಗೂ ಪರೀಕ್ಷೆಗಳನ್ನು ಮುಂದೂಡಿ ವಿಟಿಯು ಆದೇಶ ಹೊರಡಿಸಿದೆ. ನಾಳೆ ಸಂಜೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ‘ಕೊರೊನಾ ಕರ್ಪ್ಯೂ’ ಜಾರಿಗೊಳಿಸಿ ರಾಜ್ಯ ಸರ್ಕಾರ ಮಹತ್ತರ ಆದೇಶ ಹೊರಡಿಸಿದೆ. …

Read More »

ಸರ್ಕಾರದ ನಿಯಮಗಳಿಂದ ತೊಂದರೆಗೊಳಗಾಗುವವರಿಗೆ ಆರ್ಥಿಕ ಪ್ಯಾಕೇಜ್ ನೀಡುವಂತೆ ಡಿಕೆಶಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ 15 ದಿನಗಳ ಕಠಿಣ ಕರ್ಫ್ಯೂ ಮಾಡುವ ಬಗ್ಗೆ ಸರ್ಕಾರ ಘೋಷಣೆ ಮಾಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಸಿದ್ದು, ‘ಜನರ ಆರೋಗ್ಯ ಕಾಪಾಡಲು ಯಾವುದೇ ಕ್ರಮಗಳನ್ನು ತೆಗೆದುಕೊಂಡರೂ ನಮ್ಮ ಅಭ್ಯಂತರ ಇಲ್ಲ. ಆದರೆ, ಈ ಕಠಿಣ ನಿಯಮಗಳಿಂದ ತೊಂದರೆಗೊಳಗಾಗುವವರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು’ ಎಂದು ಆಗ್ರಹಿಸಿದ್ದಾರೆ. ‘ಸರ್ಕಾರದ ದಿಢೀರ್ ತೀರ್ಮಾನಗಳಿಂದ ಎಲ್ಲ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡಿ, …

Read More »

ಬೆಳಗಾವಿ ನಗರ ಸಿಸಿಬಿ ತಂಡ ದಾಳಿ ನಡೆಸಿ ಅಕ್ರಮವಾಗಿ ರೆಮ್‌ಡಿಸಿವರ್ ಔಷಧಿಯನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದೆ.

ಬೆಳಗಾವಿ – ಬೆಳಗಾವಿ ನಗರ ಸಿಸಿಬಿ ತಂಡ ದಾಳಿ ನಡೆಸಿ ಅಕ್ರಮವಾಗಿ ರೆಮ್‌ಡಿಸಿವರ್ ಔಷಧಿಯನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದೆ. ನಗರದಲ್ಲಿ ಕೋವಿಡ್-೧೯ ರೋಗಿಗಳಿಗೆ ನೀಡುವ ರೆಮ್‌ಡಿಸಿವರ್ ಔಷಧಿಯನ್ನು ಅಕ್ರಮ/ಕಾಳ ಸಂತೆಯಲ್ಲಿ ಮಾರಾಟ ಮಾಡುವಂಥರನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸುವಂತೆ ಡಾ|| ತ್ಯಾಗರಾಜನ್. ಕೆ. ಪೊಲೀಸ್ ಆಯುಕ್ತರು, ಸಿಟಿ ಕ್ರೈಂ ಬ್ರಾಂಚನ್ ಪಿಐ   ನಿಂಗನಗೌಡ ಪಾಟೀಲ ರವರಿಗೆ ಸೂಚಿಸಿದ್ದರು.  ಸಿಕ್ಕ ಖಚಿತ ಮಾಹಿತಿಯಂತೆ  ಆರೋಪಿಯೊಂದಿಗೆ ತಮ್ಮ ಸಿಬ್ಬಂದಿಯೊಬ್ಬರ ಮುಖಾಂತರ …

Read More »

ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ

ಬೆಂಗಳೂರು: ನಾಳೆಯಿಂದ ಕರ್ಫ್ಯೂ ಮತ್ತು ಲಾಕ್ಡೌನ್ ಬಿಗಿಗೊಳಿಸಿರುವುದರಿಂದ ಗಮನಾರ್ಹ ಸಂಖ್ಯೆಯ ಸಾರ್ವಜನಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ನಮ್ಮ 3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ. ನಾಳೆ ರಾತ್ರಿಯ ನಿಗದಿತ ಕರ್ಫ್ಯೂ ಸಮಯದ …

Read More »

ಇಂದು ರಾತ್ರಿಯಿಂದ ‘ಕರ್ನಾಟಕದಲ್ಲಿ 14 ದಿನ ಕೊವಿಡ್ ಕರ್ಫ್ಯೂ’: ಏನಿರುತ್ತೆ? ಏನಿರಲ್ಲ? ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ

ಬೆಂಗಳೂರು: ಕರೊನ ಮಟ್ಟ ಹಾಕುವ ನಿಟ್ಟಿನಲ್ಲಿ ಇಂದು ರಾತ್ರಿ 9 ಗಂಟೆಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಅಂದ ಹಾಗೇ 14 ದಿನಗಳ ತನಕ ಪ್ರತಿ ದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಇದೇ ವೇಳೆ …

Read More »

ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಗೆ ಕೊರೋನಾ ಪಾಸಿಟಿವ್

ನವದೆಹಲಿ : ಕೇಂದ್ರೀಯ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರಿಗೂ ಕೊರೊನಾ ವೈರಸ್ ಪಾಸಿಟಿವ್ ವರದಿಯಾಗಿದೆ ಎಂದು ತಿಳಿದು ಬಂದಿದೆ. ಹಿರಿಯ ಐಎಎಸ್ ಅಧಿಕಾರಿ ರಾಜೇಶ್ ಭೂಷಣ್ ಅವರನ್ನು ಕಳೆದ ವರ್ಷ ಜುಲೈನಲ್ಲಿ ಹೊಸ ಆರೋಗ್ಯ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಅವರು ಕಳೆದ ವರ್ಷ ಕೊರೊನಾ ವೈರಸ್ ಮೊದಲ ಅಲೆಯ ಸಮಯದಲ್ಲಿ ಮಾಜಿ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುಡಾನ್ ಬಳಿಕ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಭೂಷಣ್ ೧೯೮೭ ರ ಬ್ಯಾಚ್ ಬಿಹಾರ ಕೇಡರ್ …

Read More »