Breaking News

Daily Archives: ಏಪ್ರಿಲ್ 30, 2021

ಕೊರೋನಾ ಕರ್ತವ್ಯ ನಿರತರಿಗಾಗಿ ಸಾರಿಗೆ ಸೌಲಭ್ಯ – ಡಿಸಿಎಂ ಲಕ್ಷ್ಮಣ್ ಸವದಿ

ಬೆಂಗಳೂರು : ಕೋವಿಡ್ 2ನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ಲಾಕ್ ಡೌನ್ ವಿಧಿಸಿದ್ದರು ಸಹ ಕೋವಿಡ್ ಗೆ ಸಂಬಂಧಪಟ್ಟ ಸೇವಾ ಚಟುವಟಿಕೆಗಳಿಗೆ ಮತ್ತು ಕೋವಿಡ್ ವಾರಿಯರ್ಸ್ ಗಳ ಸೇವೆಗೆ ಅಗತ್ಯವಾದಲ್ಲಿ ಬಸ್ಸುಗಳನ್ನು ಒದಗಿಸಲು ನಾಲ್ಕೂ ನಿಗಮಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿಯವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ಇಡೀ ರಾಜ್ಯವೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ …

Read More »

ಪಶ್ಚಿಮ ಬಂಗಾಳ ಪೀಪಲ್ಸ್ ಪಲ್ಸ್ ಎಕ್ಸಿಟ್ ಪೋಲ್: ಬಿಜೆಪಿ ದಿಗ್ವಿಜಯ

ಕೋಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳದ ಎಂಟು ಹಂತಗಳ ಸುದೀರ್ಘ ಅಸೆಂಬ್ಲಿ ಚುನಾವಣೆ ಇಂದು ಮುಕ್ತಾಯಗೊಂಡಿದೆ. ಚುನಾವಣಾ ಆಯೋಗದ ಆದೇಶದಂತೆ, ಮತದಾನ ಮುಗಿದ ನಂತರವಷ್ಟೇ ಮತಗಟ್ಟೆ ಸಮೀಕ್ಷೆಯನ್ನು ಪ್ರಕಟಿಸಬಹುದಾಗಿದೆ. ವಿವಿಧ ವಾಹಿನಿಗಳು ಜಂಟಿಯಾಗಿ ಪಶ್ಚಿಮ ಬಂಗಾಳದಲ್ಲಿ ವಿಜಯ ಸಾಧ್ಯತೆ ಯಾರಿಗೆ ಎನ್ನುವುದರ ಬಗ್ಗೆ ಫಲಿತಾಂಶವನ್ನು ನೀಡುತ್ತಿದೆ. ಕೆಲವು ವಾಹಿನಿಗಳು ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೇರುತ್ತಾರೆ ಎಂದಿವೆ. ಇನ್ನು ಕೆಲವು ವಾಹಿನಿಗಳು ಅತಂತ್ರ ಫಲಿತಾಂಶ ಬರಲಿದೆ ಎನ್ನುವ ವರದಿಯನ್ನು ಪ್ರಕಟಿಸುತ್ತಿದೆ. ಒಟ್ಟು …

Read More »

8 ಕೋಟಿ ವಲಸೆ ಕಾರ್ಮಿಕರಿಗೆ ಊಟ, ಸಾರಿಗೆ ವ್ಯವಸ್ಥೆಗಾಗಿ ಮನವಿ

ಕೋವಿಡ್ 19 ಕಾರಣದಿಂದ ವಲಸೆ ಮತ್ತು ಅಪಾಯದಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರಿಗೆ ಪಡಿತರ ಮತ್ತು ಆಹಾರ ಭದ್ರತೆಯ ಜೊತೆಗೆ ಕನಿಷ್ಠ ದರದಲ್ಲಿ ತವರಿಗೆ ಮರಳಲು ಅನುಕೂಲ ಕಲ್ಪಿಸುವಂತೆ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಹಾಕಲಾಗಿದೆ. ಸಾಮಾಜಿಕ ಕಾರ್ಯಕರ್ತರಾದ ಹರ್ಷ್‌ ಮಂದರ್‌, ಅಂಜಲಿ ಭಾರದ್ವಾಜ್‌ ಮತ್ತು ಜಗದೀಪ್‌ ಚೊಕ್ಕರ್‌ ಅವರು ಸುಪ್ರೀಂ ಕೋರ್ಟ್‌ಗೆ ತುರ್ತು ಮನವಿ ಸಲ್ಲಿಸಿದ್ದಾರೆ. ಪ್ರಸಕ್ತ ವರ್ಷದಲ್ಲಿ ರಾಜ್ಯ ಸರ್ಕಾರಗಳು ವಿಕೇಂದ್ರೀಕೃತ ರೀತಿಯಲ್ಲಿ ಲಾಕ್‌ಡೌನ್‌ ಮತ್ತು ಕರ್ಫ್ಯೂ …

Read More »

ಸಿಬ್ಬಂದಿ ಕೊರತೆ, ಸಿಟಿ ಸ್ಕ್ಯಾನ್, ಲ್ಯಾಬ್ ಸಮಸ್ಯೆಗಳನ್ನು ಬಗೆಹರಿಸಿ : ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ : ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ. ಅಲ್ಲದೇ ಸಿಟಿ ಸ್ಕ್ಯಾನ್ ಮಷೀನ್ ಕೆಟ್ಟುನಿಂತಿದೆ. ಲ್ಯಾಬ್ ಗಳ ಸಮಸ್ಯೆ ಇದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಕೂಡಲೇ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಆಗ್ರಹಿಸಿದ್ದಾರೆ. ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಾ. ಸುಧಾಕರ್ ರವರ ನೇತೃತ್ವದಲ್ಲಿ ನಡೆದ ಕೋವಿಡ್ …

Read More »

ಕಾಂಗ್ರೆಸ್ ಮಡಿಲಿಗೆ ರಾಮನಗರ

ರಾಮನಗರ,ಏ.30-ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕರ್ಮಭೂಮಿ ರಾಮನಗರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ.ರಾಮನಗರ ನಗರಸಭೆಯ 31 ವಾರ್ಡ್‍ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಹಿಡಿದಿದೆ. ಜೆಡಿಎಸ್ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಾಗಿದೆ. ಎಸ್‍ಡಿಪಿಐ ಒಂದು ವಾರ್ಡ್‍ನಲ್ಲಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಒಂದು ಕ್ಷೇತ್ರವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ಬೇಲೂರು ಪುರಸಭೆಯಲ್ಲಿ ಕಾಂಗ್ರೆಸ್ ಜಯಬೇರಿ: ಜೆಡಿಎಸ್ ಭದ್ರಕೋಟೆಯನ್ನು ಭೇದಿಸಿ ಬೇಲೂರು …

Read More »

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ತಂದೆ ತಾಯಿ ಕೊರೊನಾಗೆ ಬಲಿ

ಧಾರವಾಡ : ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್​​ ಅವರ ತಂದೆ ಮತ್ತು ತಾಯಿ ಇಬ್ಬರೂ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮೂರು ದಿನಗಳ ಹಿಂದೆ ಕಳೆದ 27 ರಂದು ಅರುಣ್ ತಾಯಿ 53 ವರ್ಷದ ಕಸ್ತೂರಮ್ಮ ಬಡಿಗೇರ್ ನಿಧನವಾಗಿದ್ದರು ಅಂದಿನಿಂದ ಮತ್ತಷ್ಟು ಗಂಭೀರವಾಗಿದ್ದ ಅರುಣ್ ತಂದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಚಂದ್ರಶೇಖರ್ ಬಡಿಗೇರ್ ಕೆಇ ಬೋರ್ಡ್ ಶಾಲೆಯ ನಿವೃತ್ತ ಶಿಕ್ಷಕರಾಗಿದ್ದರು ಕೊರೊನಾ ದೃಢ ಪಟ್ಟಿದ್ದರಿಂದ ಅವರನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ …

Read More »

ಹಣ ಪಡೆದು ಕೊರೋನಾ ನೆಗೆಟಿವ್ ವರದಿ ನೀಡ್ತಾ ಇದ್ದ ಇಬ್ಬರು ಆರೋಪಿಗಳು ಅರೆಸ್ಟ್.!

ಬೆಂಗಳೂರು : ಯಾವುದೇ ಸ್ವ್ಯಾಬ್ ಪಡೆಯದೇ, ಜನರಿಂದ ಕೊರೋನಾ ನೆಗೆಟಿವ್ ವರದಿ ನೀಡುತ್ತಿದ್ದಂತ ಇಬ್ಬರು ಆರೋಪಿಗಳನ್ನು ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ಯಾವುದೇ ಸ್ವ್ಯಾಬ್ ಟೆಸ್ಟ್ ಪಡೆಯದೇ, ಕೊರೋನಾ ನೆಗೆಟಿವ್ ವರದಿಯನ್ನು ಜನರಿಗೆ ನೀಡುತ್ತಿದ್ದರು. ಈ ಖಚಿತ ಮಾಹಿತಿಯಿಂದ ದಾಳಿ ನಡೆಸಿದಂತ ಸಿಸಿಬಿಯ ವಿಶೇಷ ದಳದ ಅಧಿಕಾರಿಗಳು, ರಾಜಸ್ಥಾನ ಮೂಲಕ ಮುಕೇಶ್ ಸಿಂಗ್ ಹಾಗೂ ಸ್ಥಳೀಯ ನಗರದ ನಿವಾಸಿ ನಾಗರಾಜ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಮೊಬೈಲ್ ಜಪ್ತಿ …

Read More »

ನಿಮ್ಗೆ ಶಾಕ್ ಆದ್ರೂ.. ಸತ್ಯ.! ಬೆಳಗಾವಿಯ ‘ಬಿಮ್ಸ್ ಆಸ್ಪತ್ರೆ’ಯಲ್ಲಿ ಮಹಾ ಎಡವಟ್ಟು : ‘ಕೊರೋನಾ ಸೋಂಕಿತ’ರ ಆರೈಕೆಗಾಗಿ ‘ಕುಟುಂಬಸ್ಥ’ರಿಗೆ ಅವಕಾಶ.!

ಬೆಳಗಾವಿ : ಕೊರೋನಾ ಸೋಂಕಿತರಾದಂತವರಿಗೆ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಪಿಪಿಇ ಕಿಟ್ ಹಾಕೊಂಡು, ವೈದ್ಯರು, ನರ್ಸ್ ಗಳು ಚಿಕಿತ್ಸೆ ನೀಡೋದು, ಆರೈಕೆ ಮಾಡೋದು ನೋಡಿದ್ದೀರಿ. ಆದ್ರೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮಾತ್ರ ಸೋಂಕಿತರ ಆರೈಕೆ ಮಾಡ್ತಾ ಇರೋದು ಕುಟುಂಬಸ್ಥರು. ಹೀಗೊಂದು ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಹೌದು.. ರಾಜ್ಯದಲ್ಲಿ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಈಗಾಗಲೇ ಕೊರೋನಾ ಕರ್ಪ್ಯೂ ಜಾರಿಗೊಳಿಸಿದೆ. ಸೋಂಕಿನ ನಿಯಂತ್ರಣಕ್ಕೆ ನಾನಾ ಸರ್ಕಸ್ …

Read More »

ಓಡಾಟ ನಡೆಸುತ್ತಿದ್ದವರ ಮೇಲೆ ಪೊಲೀಸರ ಲಾಠಿಚಾರ್ಜ್ ವಾಹನಗಳ ಸೀಜ್

ಬೆಳಗಾವಿ; ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯ ಕರ್ಫ್ಯೂ ಜಾರಿಗೆ ತಂದಿದೆ. ಕರ್ಫ್ಯೂ ಜಾರಿಯಲ್ಲಿದ್ದರೂ ಜನರು ಮಾತ್ರ ನಿಯಮಗಳನ್ನು ಉಲ್ಲಂಘನೆ ಮಾಡಿ ಬೇಕಾಬಿಟ್ಟಿ ಓಡಾಟ ನಡೆಸುತ್ತಿದ್ದಾರೆ. ಸರ್ಕಾರ ಜಾರಿಗೆ ತಂದಿರುವ ಬಿಗಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದು ಆಯಾ ಜಿಲ್ಲಾಡಳಿತದ ಜವಾಬ್ದಾರಿ ಎಂದು ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದಾಗ್ಯೂ ಕೂಡ ಜಿಲ್ಲಾಡಳಿತವಾಗಲಿ, ಪೊಲೀಸರಾಗಲಿ ಎಚ್ಚೆತ್ತುಕೊಂಡಂತಿಲ್ಲ. …

Read More »

ಆಜ್ ತಕ್ ಸುದ್ದಿ ವಾಹಿನಿಯ ನಿರೂಪಕ ರೋಹಿತ್ ಸರ್ದಾನ ಕೊರೊನಾ ಸೋಂಕಿಗೆ ಬಲಿ

ನವದೆಹಲಿ: ಹಿರಿಯ ಪತ್ರಕರ್ತ, ಆಜ್ ತಕ್ ಸುದ್ದಿ ವಾಹಿನಿಯ ನಿರೂಪಕ ರೋಹಿತ್ ಸರ್ದಾನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ರೋಹಿತ್ ಸರ್ದಾನ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆಜ್ ತಕ್ ನಲ್ಲಿ ದಂಗಲ್ ಎಂಬ ಚರ್ಚಾ ಕಾರ್ಯಕ್ರಮದ ಮೂಲಕ ರೋಹಿತ್ ಜನಪ್ರಿಯರಾಗಿದ್ದರು. ಕೊರೊನಾ ಸೋಂಕಿನಿಂದ ಹಿರಿಯ ಪತ್ರಕರ್ತ, ಸುದ್ದಿ ನಿರೂಪಕ ಸಾವನ್ನಪ್ಪಿರುವುದು ಸಹೋದ್ಯೋಗಿಗಳಿಗೆ ಆಘಾತವನ್ನುಂಟು ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಹಿತ್ …

Read More »