ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಲಸಿಕೆ ಹಾಗೂ ಆಕ್ಸಿಜನ್ ವ್ಯವಸ್ಥೆಗಳ ನಿರ್ವಹಣೆಗೂ ಕೂಡ ಯಾವೆಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ನಿಯಂತ್ರಣಕ್ಕಾಗಿ ಸಚಿವರ 1 ವರ್ಷದ ಸಂಬಳ ಹಾಗೂ ಶಾಸಕರ 1 ತಿಂಗಳ …
Read More »Daily Archives: ಏಪ್ರಿಲ್ 30, 2021
ಸಮಾಜಕ್ಕೆ ಮಾರಕವಾಗಿರುವ 6000 ಕೆ.ಜಿ. ತಂಬಾಕು ಉತ್ಪನ್ನಗಳನ್ನು ವಶಕ್ಕೆ: ಅಶೋಕ ತೇಲಿ
ಬೆಳಗಾವಿ : ಬೆಳಗಾವಿ ಉಪವಿಭಾಗಾಧಿಕಾರಿ ಅಶೋಕ ತೇಲಿ ಇಂದು ಖಾನಾಪುರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 6,000 ಕೆಜಿ ಅಕ್ರಮ ತಂಬಾಕು ವಶಕ್ಕೆ ಪಡೆಯಲಾಗಿದೆ. ಖಾನಾಪುರದ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟಿರುವ ಸಮಾಜಕ್ಕೆ ಮಾರಕವಾಗಿರುವ 6000 ಕೆ.ಜಿ. ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಮೂರು ಸಾವಿರ ಕೆಜಿ ಬಿಡಿ ತಂಬಾಕು ವಶಪಡಿಸಿಕೊಂಡಿದ್ದು, ಇದರಲ್ಲಿ ಲೇಬಲ್, ಪ್ಯಾಕಿಂಗ್ ಇರಲಿಲ್ಲ. ಇನ್ನೂ ಮೂರು ಸಾವಿರ ಕೆಜಿ ಅಕ್ರಮ ತಂಬಾಕನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಎಪ್ಪತ್ತು ಕೆಜಿ ಪ್ಲಾಸ್ಟಿಕ್ ವಶ ಪಡಿಸಿಕೊಳ್ಳಲಾಗಿದೆ. …
Read More »ಇಲ್ಲೊಬ್ಬ ಹೆಣ್ಮಗಳು ತನ್ನ ಪತಿಯನ್ನು ಉಳಿಸಿಕೊಳ್ಳಲು ಪಟ್ಟ ಪಾಡು ಕೇಳಿದರೆ ಎದೆ ಝಲ್ಲೆನ್ನುತ್ತದೆ.
ಬೆಂಗಳೂರು – ಕೊರೋನಾ ದಿನದಿಂದ ದಿನಕ್ಕೆ ಎಂತೆಂತವರ ಜೀವವನ್ನು ಕಸಿದುಕೊಳ್ಳುತ್ತಿದೆ ಎಂದು ನೋಡಿದಾಗ ನಿಂತಲ್ಲೇ ಕುಸಿದು ಬೀಳುವಂತಾಗಿದೆ. ಪತ್ನಿ ಪತಿಯನ್ನು ಉಳಿಸಿಕೊಳ್ಳಲು, ತಾಯಿ ಮಗನನ್ನು ಉಳಿಸಿಕೊಳ್ಳಲು, ಮಗ ತಂದೆ-ತಾಯಿಯನ್ನು ಉಳಿಸಿಕೊಳ್ಳಲು ಹೆಣಗಾಡುವುದನ್ನು ಕೇಳಿದರೆ ಈ ಜೀವನದ ಮೇಲಿನ ಭರವಸೆಯೇ ಹೊರಟು ಹೋಗುವಂತಾಗಿದೆ. ಇಲ್ಲೊಬ್ಬ ಹೆಣ್ಮಗಳು ತನ್ನ ಪತಿಯನ್ನು ಉಳಿಸಿಕೊಳ್ಳಲು ಪಟ್ಟ ಪಾಡು ಕೇಳಿದರೆ ಎದೆ ಝಲ್ಲೆನ್ನುತ್ತದೆ. ಇದು ಒಬ್ಬ ಹೆಣ್ಮಗಳ ಕಥೆಯಲ್ಲ, ಸಾವಿರಾರು ಜನರು ಕ್ಷಣ 7ಣವೂ ಪಡುತ್ತಿರುವ ಪಾಡು. …
Read More »