Breaking News
Home / 2021 / ಏಪ್ರಿಲ್ (page 18)

Monthly Archives: ಏಪ್ರಿಲ್ 2021

ಪ್ರೀತಿಸಿದ ‘ಯುವ ಜೋಡಿ’ಗೆ ಕುಟುಂಬಸ್ಥರೇ ವಿಲನ್ : ‘ಯುವ ಪ್ರೇಮಿ’ಗಳು ಆತ್ಮಹತ್ಯೆಗೆ ಶರಣು

ಹಾವೇರಿ : ನಾಲ್ಕು ವರ್ಷಗಳಿಂದ ಪ್ರೀತಿಸಿದ್ದ ಆ ಇಬ್ಬರು ಯುವ ಪ್ರೇಮಿಗಳು, ಮದುವೆ ಆಗೋದಕ್ಕೂ ನಿರ್ಧರಿಸಿದ್ದರು. ಆದ್ರೇ.. ಕುಟುಂಬಸ್ಥರೇ ವಿಲನ್ ಆಗಿ ಪರಿಣಮಿಸಿ, ಯುವತಿಗೆ ಬೇರೆ ಹುಡುಗನೊಂದಿಗೆ ನಿಶ್ಚಿತಾರ್ಥ ನೆರವೇರಿಸಿದ್ದರು. ಇದರಿಂದ ಮನನೊಂದು ಇಬ್ಬರು ಯುವ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಹಾವೇರಿ ತಾಲೂಕಿನ ನಾನೂರು ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ನಾಗನೂರು ಗ್ರಾಮದ ಇರ್ಷಾದ್ ಕುಡಚಿ ಹಾಗೂ ವಿದ್ಯಾಶ್ರೀ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇರ್ಷಾದ್ ಡಿಪ್ಲೋಮಾ …

Read More »

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 300ರ ಗಡಿ ದಾಟಿದೆ. ಶನಿವಾರ ಒಟ್ಟೂ 313 ಜನರಿಗೆ ಸೋಂಕು ದೃಢ

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 300ರ ಗಡಿ ದಾಟಿದೆ. ಶನಿವಾರ ಒಟ್ಟೂ 313 ಜನರಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ 2ನೇ ಅಲೆಯಲ್ಲಿ 2ನೇ ಬಾರಿಗೆ ಮುನ್ನೂರರ ಗಡಿ ದಾಟಿದಂತಾಗಿದೆ. ಬೆಳಗಾವಿ ತಾಲೂಕಿನಲ್ಲಿ 104, ಅಥಣಿ 21, ಬೈಲಹೊಂಗಲ 8, ಚಿಕ್ಕೋಡಿ 9, ಗೋಕಾಕ 39, ಹುಕ್ಕೋರಿ 10, ಖಾನಾಪುರ 25, ರಾಮದುರ್ಗ 19, ರಾಯಬಾಗ 41, ಸವದತ್ತಿ 16 ಹಾಗೂ ಇತರೆ …

Read More »

ಭಾರತಕ್ಕೆ ಆಮ್ಲಜನಕ ಸಿಲಿಂಡರ್ ಪೂರೈಸಲು ನೆರವಾಗುವಂತೆ ಅಖ್ತರ್ ಮನವಿ

ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಬಿಕ್ಕಟ್ಟನ್ನು ಎದುರಿಸುತ್ತಿರುವ ಭಾರತಕ್ಕೆ ನೆರವಾಗುವಂತೆ ಪಾಕಿಸ್ತಾನ ಸರ್ಕಾರ ಹಾಗೂ ಅಭಿಮಾನಿಗಳಲ್ಲಿ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಮನವಿ ಮಾಡಿದ್ದಾರೆ. ಏಪ್ರಿಲ್ 24 ಶನಿವಾರದಂದು ಭಾರತದಲ್ಲಿ ಗರಿಷ್ಠ 3,46,786 ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಇದು ದಿನವೊಂದರಲ್ಲೇ ದಾಖಲಾದ ಗರಿಷ್ಠ ಪ್ರಕರಣಗಳಾಗಿವೆ. ಹಾಗೆಯೇ ಕಳೆದ 24 ತಾಸಿನಲ್ಲಿ 2,624 ಮಂದಿ ಮೃತಪಟ್ಟಿದ್ದಾರೆ. ‘ಈಗಿರುವ ಬಿಕ್ಕಟ್ಟಿನ ಪರಿಸ್ಥಿತಿಯನ್ನು ನಿಭಾಯಿಸುವುದು ಯಾವುದೇ ಸರ್ಕಾರಕ್ಕೆ ಕಷ್ಟಕರವಾಗಿದೆ. ಈ ಕಷ್ಟದ ಪರಿಸ್ಥಿತಿಯಲ್ಲಿ …

Read More »

ಭಾರತದಿಂದ ಎಲ್ಲಾ ವಾಣಿಜ್ಯ ವಿಮಾನ‌ಗಳಿಗೆ ನಿಷೇಧ ಏರಿದ ಕುವೈತ್

ನವದೆಹಲಿ:ಏಪ್ರಿಲ್ 24 ರಿಂದ ಜಾರಿಗೆ ಬರುವ ಮತ್ತು ಮುಂದಿನ ಸೂಚನೆ ಬರುವವರೆಗೂ ಭಾರತದಿಂದ ಬರುವ ಎಲ್ಲಾ ನೇರ ವಾಣಿಜ್ಯ ವಿಮಾನಗಳನ್ನು ಸ್ಥಗಿತಗೊಳಿಸಿದೆ ಎಂದು ಕುವೈತ್‌ನ ನಾಗರಿಕ ವಿಮಾನಯಾನ ನಿರ್ದೇಶನಾಲಯ ಶನಿವಾರ ಪ್ರಕಟಿಸಿದೆ. ಜಾಗತಿಕ ಕೋವಿಡ್-19 ಸ್ಥಿತಿಯ ಬಗ್ಗೆ ಕುವೈತ್ ಆರೋಗ್ಯ ಅಧಿಕಾರಿಗಳ ಮೌಲ್ಯಮಾಪನದ ಹಿನ್ನೆಲೆಯಲ್ಲಿ ಇದು ಬರುತ್ತದೆ.’ಭಾರತದಿಂದ ಆಗಮಿಸುವ ಎಲ್ಲ ಪ್ರಯಾಣಿಕರಿಗೆ ಕುವೈತ್ ರಾಜ್ಯಕ್ಕೆ ಬರುವ ಕನಿಷ್ಠ (14) ದಿನಗಳ ಮೊದಲು ಭಾರತದ ಹೊರಗೆ ವಾಸವಾಗದ ಹೊರತು ನೇರವಾಗಿ ಅಥವಾ …

Read More »

ನೀವು ತಿನ್ನಲು ಅನ್ನ ಸಿಗದೆ ಸಾಯುತ್ತೀರಿ: ಆಂಬುಲೆನ್ಸ್-ಸ್ಮಶಾನದವರ ವಿರುದ್ಧ ಜಗ್ಗೇಶ್ ಆಕ್ರೋಶ

ಬೆಂಗಳೂರು: ಕೋವಿಡ್ ಮಹಾಮಾರಿಗೆ ಬಲಿಯಾದವರ ಅಂತ್ಯ ಸಂಸ್ಕಾರಕ್ಕೆ ಆಯಂಬುಲೆನ್ಸ್ ಹಾಗೂ ಚಿತಾಗಾರದ ಸಿಬ್ಬಂದಿಗಳು ಹಣ ಪೀಕುತ್ತಿರುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ವಯ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರವನ್ನು ಬಿಬಿಎಂಪಿಯವರೇ ಮಾಡಬೇಕು. ಆದರೆ, ಈ ನಿಮಯ ಗಾಳಿಗೆ ತೂರಿರುವ ಕೆಲವರು, ಕೋವಿಡ್‍ನಿಂದ ಬಲಿಯಾದವರ ಶವಗಳ ಮೇಲೆ ಹಣದ ದಂಧೆಗೆ ಇಳಿದಿವೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಇದೀಗ ಸ್ವತಃ ಕನ್ನಡದ ನಟ ನವರಸ ನಾಯಕ ಜಗ್ಗೇಶ್ …

Read More »

ರೆಮಿಡಿಸಿವಿರ್‌ ಮರುಹಂಚಿಕೆ : ರಾಜ್ಯಕ್ಕೆ 1.22 ಲಕ್ಷ ವಯಲ್‌

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಬೇಡಿಕೆಗೆ ಅನುಗುಣವಾಗಿ ಶನಿವಾರ ರೆಮಿಡಿಸಿವಿರ್‌ ಮರು ಹಂಚಿಕೆ ಮಾಡಿದ್ದೇವೆ. ಕರ್ನಾಟಕದ ಪಾಲು 1.22 ಲಕ್ಷ ವಯಲ್‌ಗ‌ಳಿಗೆ ಏರಿಕೆಯಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. ನಾನು ನಿರ್ವಹಿಸುವ ಔಷಧ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಉನ್ನತಾಧಿಕಾರದ ಸಮಿತಿಯು ಈ ನಿರ್ಣಯ ಕೈಗೊಂಡಿದೆ ಎಂದು ಡಿವಿಎಸ್‌ ಟ್ವೀಟ್‌ ಮಾಡಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯಕ್ಕೆ ನಾವು ಸಂಪೂರ್ಣ ಸಹಕಾರ, …

Read More »

ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಕೊರತೆಯಿಲ್ಲ:ಜಗದೀಶ ಶೆಟ್ಟರ

ಹುಬ್ಬಳ್ಳಿ, ಏ24: ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಕೊರತೆಯಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜಿಲ್ಲಾಡಳಿತ ತುರ್ತು ಪರಿಸ್ಥಿತಿಯಿದ್ದರೆ ದಿನದ 24 ತಾಸು ಕಾರ್ಯ ನಿರ್ವಹಿಸುತ್ತಿದೆ. ಸದ್ಯ ಧಾರವಾಡ ಜಿಲ್ಲೆಯಲ್ಲಿ 2ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಂಡಿದ್ದು, ಆಕ್ಸಿಜನ್ ಜೊತೆಗೆ 2 ಸಾವಿರ ಬೆಡ್‍ಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದ ಅವರು ಕಿಮ್ಸನಲ್ಲಿ 500 ಬೆಡ್ ಬದಲಿಗೆ 1 ಸಾವಿರ …

Read More »

ಬೆಳಗಾವಿಯಲ್ಲಿ ಉಸ್ತುವಾರಿ ಸಚಿವರಿಲ್ಲದೇ ಕೋವಿಡ್ ತಡೆಗೆ ಹಿನ್ನಡೆ ಆತಂಕ

ಬೆಳಗಾವಿ: ಕೋವಿಡ್ ಸೋಂಕಿನಿಂದ ತೀವ್ರ ಆತಂಕದಲ್ಲಿರುವ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸೂಕ್ತ ಮತ್ತು ಕಠಿಣ ನಿರ್ಧಾರ ತೆಗೆದುಕೊಳ್ಳಲು ಯಾವುದೇ ಉಸ್ತುವಾರಿ ಸಚಿವರಿಲ್ಲದೇ ಇರುವದು ಸಾರ್ವಜನಿಕರಲ್ಲಿ ಗೊಂದಲದ ಜೊತೆಗೆ ಚಿಂತೆ ಉಂಟುಮಾಡಿದೆ. ರಾಜ್ಯದಲ್ಲಿ ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲ ಸಚಿವರು ತಕ್ಷಣದಿಂದಲೇ ಜಿಲ್ಲೆಯಲ್ಲಿ ಸೋಂಕಿತರ ನೋವಿಗೆ ಸ್ಪಂದಿಸಿ ಪರಿಶೀಲಿಸುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೂಚಿಸಿದ್ದರು. ಆದರೆ ಜಿಲ್ಲೆಯಲ್ಲಿ ಯಾವುದೇ ಉಸ್ತುವಾರಿ ಸಚಿವರಿಲ್ಲದೆ ಅಧಿಕಾರಿಗಳು ಪ್ರತಿಯೊಂದೂ …

Read More »

ಖಾಸಗಿ ಆಸ್ಪತ್ರೆಗಳಿಗೆ ₹600, ರಾಜ್ಯಗಳಿಗೆ ₹400, ಕೇಂದ್ರಕ್ಕೆ 150 ರೂಪಾಯಿಗೆ ಕೊರೊನಾ ಲಸಿಕೆ ಮಾರಾಟ: ಸೀರಮ್ ಸ್ಪಷ್ಟನೆ

ನವದೆಹಲಿ: ಕೋವಿಶೀಲ್ಡ್ ಕೊರೊನಾ ವೈರಸ್ ಲಸಿಕೆಯ ಮುಕ್ತ ಮಾರುಕಟ್ಟೆ ಬೆಲೆ ನಿಗದಿ ಕುರಿತು ಟೀಕೆಗೆ ಸೀರಮ್ ಸಂಸ್ಥೆ ಶನಿವಾರ ಪ್ರತಿಕ್ರಿಯಿಸಿದ್ದು, ‘ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್ ಗೆ ₹600 ಮಾರಾಟ ಮಾಡಲಾಗುವುದು, ರಾಜ್ಯಗಳಿಗೆ ₹400 ಮತ್ತು ಕೇಂದ್ರಕ್ಕೆ 150 ರೂಪಾಯಿಗೆ ನೀಡಲಾಗುವುದು’ ಎಂದಿದ್ದಾರೆ. ತಯಾರಕರು ‘ಭಾರತದೊಂದಿಗೆ ಲಸಿಕೆಯ ಜಾಗತಿಕ ಬೆಲೆಗಳ ನಡುವೆ ಮಾಡಲಾದ ನಿಖರವಲ್ಲದ ಹೋಲಿಕೆ’ಯಾಗಿದೆ. ಪ್ರಸ್ತುತ ದೇಶದಲ್ಲಿ ಬಳಸಲಾಗುತ್ತಿರುವ ಎರಡು ಲಸಿಕೆಗಳಲ್ಲಿ ಒಂದಾದ ಕೋವಿಶೀಲ್ಡ್, ಇಂದು ಮಾರುಕಟ್ಟೆಯಲ್ಲಿ ಲಭ್ಯವಿರುವ …

Read More »

BIG BREAKING: ಬೆಳಗ್ಗೆ 11 ಗಂಟೆಗೆ ಮೋದಿ ಭಾಷಣ, ದೇಶಾದ್ಯಂತ ಲಾಕ್ ಡೌನ್ ಜಾರಿ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ‘ಮನ್ ಕಿ ಬಾತ್’ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ಬಿತ್ತರವಾಗಲಿದೆ. ದೇಶದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿದ್ದು, ಅನೇಕ ರಾಜ್ಯಗಳಲ್ಲಿ ಪರಿಸ್ಥಿತಿ ಕೈಮೀರಿದೆ. ಹೀಗಾಗಿ ಕೆಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ ನಂತಹ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಹಲವೆಡೆ ಲಾಕ್ಡೌನ್ ಮಾದರಿಯ ನಿರ್ಬಂಧ ಹೇರಲಾಗಿದೆ. ಕೊರೋನಾಗೆ ಲಾಕ್ಡೌನ್ …

Read More »