Breaking News
Home / 2021 / ಏಪ್ರಿಲ್ (page 19)

Monthly Archives: ಏಪ್ರಿಲ್ 2021

ಭಾರತಕ್ಕೆ ಅಮೆರಿಕ ಮಿತ್ರದ್ರೋಹ!

ಭಾರತದಲ್ಲಿ ಕೊರೋನಾ ಸಂಖ್ಯೆ ಮಿಂಚಿನ ವೇಗದಲ್ಲಿ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. ಆಕ್ಸಿಜನ್ ಸಿಗದೇ ಜನ ಪರದಾಡ್ತಿದ್ದಾರೆ. ಮತ್ತೊಂದ್ಕಡೆ ಲಸಿಕೆ ಉತ್ಪಾದಿಸಲು ಬೇಕಾದ ಕಚ್ಚಾ ವಸ್ತುಗಳ ಕೊರತೆ ಎದುರಾಗಿದೆ. ಇಂಥಾ ಹೊತ್ತಲ್ಲಿ ಭಾರತ ಅಮೆರಿಕದ ಬಳಿ ಸಹಾಯ ಯಾಚಿಸಿದ್ದು, ಅಮೆರಿಕ ಉಲ್ಟಾ ಹೊಡೆದಿದೆ. ಅಮೆರಿಕ ಲಸಿಕೆಯಲ್ಲಿ ಬಳಸಲಾಗುವ ಕಚ್ಚಾ ವಸ್ತುಗಳ ರಫ್ತಿನ ಮೇಲೆ ನಿರ್ಬಂಧ ವಿಧಿಸಿದೆ. ಹೀಗಾಗಿ ಈ ನಿರ್ಬಂಧವನ್ನು ಸಡಿಲಗೊಳಿಸಿ ಭಾರತಕ್ಕೆ ಲಸಿಕೆಗೆ ಬೇಕಾಗುವ ಕಚ್ಚಾವಸ್ತುಗಳನ್ನು …

Read More »

ಬೆಡ್​ ಸಿಗದೇ ಬೆಂಗಳೂರಿನ ಸ್ವಾಬ್​ ಕಲೆಕ್ಟರ್​ ದಾರುಣ ಸಾವು

ಬೆಂಗಳೂರು (ಏ. 24): ಕೊರೋನಾ ಎರಡನೇ ಅಲೆ ತಜ್ಞರು ಅಂದಾಜಿಸಿದ್ದಕ್ಕಿಂತ ಸಾಕಷ್ಟು ಕ್ರೂರವಾಗಿದೆ. ಸೋಂಕಿನ ಹರಡುವಿಕೆ ಅಂದಾಜಿಗೆ ಸಿಗದಾಗಿದ್ದು, ದಿನನಿತ್ಯ ಸಾವಿರಾರು ಜನರು ಸೋಂಕಿನಿಂದಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ನಡುವೆ ದೇಶದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಕೂಡ ಎದುರಾಗಿದೆ. ಜನರ ರಕ್ಷಣೆ ಮಾಡಬೇಕಾದ ವೈದ್ಯರು ಸೇರಿದಂತೆ ಅನೇಕ ಕೊರೋನಾ ವಾರಿಯರ್​ಗಳು ಸೋಂಕಿನಿಂದಾಗಿ ಪ್ರಾಣ ಕಳೆದುಕೊಳ್ಳುತ್ತಿರುವುದು ದುರದೃಷ್ಟಕರ. ಸಿಲಿಕಾನ್​ ಸಿಟಿಯಲ್ಲಿ ಸ್ವಾಬ್​ ಕಲೆಕ್ಟರ್​ರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮರ್ಸಿಟೌನ್​ ಗೀತಾ …

Read More »

ನಿನ್ನೆಗಿಂತ ಹೆಚ್ಚು ಪ್ರಕರಣ : ರಾಜ್ಯದಲ್ಲಿಂದು 29438 ಕೋವಿಡ್ ಹೊಸ ಕೇಸ್‍ ಪತ್ತೆ

ಬೆಂಗಳೂರು : ಇಂದೂ ಕೂಡ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಮುಖದಲ್ಲಿಯೇ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 29438 ಹೊಸ ಕೇಸ್‍ಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 234483ಕ್ಕೆ ಏರಿಕೆಯಾಗಿದೆ. ಇಂದು ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಇಂದು 9058 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಾಗೂ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ …

Read More »

ಅಕಾಲಿಕ ಆಲಿಕಲ್ಲು ಮಳೆಗೆ ಬೆಳೆ ನಾಶ; ರೈತರಲ್ಲಿ ಹೆಚ್ಚಿದ ಆತಂಕ

ಚಿಕ್ಕಬಳ್ಳಾಪುರ: ಜಿಲ್ಲೆಯ ರೈತರು ಎರಡು ಸಾವಿರ ಅಡಿಗಳ ಪಾತಾಳದಿಂದ ನೀರು ತೆಗೆದು, ತರಕಾರಿ ಹಾಗೂ ಹಣ್ಣು ಬೆಳೆದು ಜೀವನ ಸಾಗಿಸುತ್ತಿದ್ದಾರೆ. ಹಗಲು ರಾತ್ರಿ ಕಷ್ಟ ಪಟ್ಟು ಬೆಳೆದ ಬೆಳೆಗಳನ್ನು ಇನ್ನೇನು ಕಟಾವು ಮಾಡಿ ಅದರಿಂದ ಆದಾಯ ಗಳಿಸಬಹುದು ಎಂದು ಆಸೆ ಇಟ್ಟುಕೊಂಡಿದ್ದರು. ಆದರೆ ಅಷ್ಟರಲ್ಲಿ ಶುಕ್ರವಾರ ಸಂಜೆ ಸುರಿದ ಆಲಿಕಲ್ಲು ಮಳೆಗೆ ಎಲ್ಲವೂ ಮಣ್ಣು ಪಾಲಾಗಿವೆ. ಮತ್ತೊಂದೆಡೆ ಲಕ್ಷಾಂತರ ರೂಪಾಯಿ ಸಾಲ ಮಾಡಿ ಕಟ್ಟಿದ್ದ ಪಾಲಿ ಹೌಸ್​ಗಳು ಅಸ್ತವ್ಯಸ್ತವಾಗಿವೆ. ಕೊರೊನಾ …

Read More »

ನಟ ಮಂಡ್ಯ ರಮೇಶ್​ಗೆ ಎಸ್​ಐ ಪುಟ್ಟರಾಜು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೈಸೂರು: ವಾರಾಂತ್ಯದ ಕರ್ಫ್ಯೂ ನಿಯಮ ಉಲ್ಲಂಘಿಸಿ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯ ಬಳಿ ಕಾರಿನಲ್ಲಿ ತೆರಳುತ್ತಿದ್ದ ಪ್ರಸಿದ್ಧ ನಟ ಮಂಡ್ಯ ರಮೇಶ್​ಗೆ ಎಸ್​ಐ ಪುಟ್ಟರಾಜು ಕರ್ಫ್ಯೂ ನಿಯಮ ಉಲ್ಲಂಘಿಸದಂತೆ ಬುದ್ಧಿವಾದ ಹೇಳಿದ್ದಾರೆ. ಅಲ್ಲದೇ ಮೈಸೂರಿನ ಗ್ರಾಮೀಣ ಪ್ರದೇಶಗಳಲ್ಲೂ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದ ಜನರಿಗೆ ಪೊಲೀಸರು ತಡೆ ಒಡ್ಡಿದ್ದಾರೆ. ಕುಂಟು ನೆಪ ಹೇಳಿ ತಿರುಗಾಡುವವರನ್ನು ಖಾಕಿ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಸಬ್ ಇನ್ಸಪೆಕ್ಟರ್ ಪುಟ್ಟರಾಜು ಮತ್ತು ಇತರ …

Read More »

ಮುಸ್ಲಿಂ ಯುವಕರ ತಂಡದಿಂದ ಕೊವಿಡ್​ಗೆ ಬಲಿಯಾದವರ ಉಚಿತ ಅಂತ್ಯಸಂಸ್ಕಾರ; ತುಮಕೂರಿನಲ್ಲೊಂದು ಮಾನವೀಯ ಕಾರ್ಯ

ತುಮಕೂರು: ಕೊವಿಡ್ ಸೋಂಕು ಎಲ್ಲರನ್ನೂ ಭಾವನಾತ್ಮಕವಾಗಿ, ಮಾನಸಿಕವಾಗಿ ಒಗ್ಗೂಡಿಸುತ್ತಿದೆ. ಮನುಷ್ಯರೆಲ್ಲರೂ ಒಂದೇ ಎಂಬ ಭಾವವನ್ನು ಎಲ್ಲರ ಮನಸ್ಸಿನಲ್ಲಿಯೂ ಮೂಡಿಸುತ್ತಿದೆ. ಕೊವಿಡ್​ನಿಂದ ಉಂಟಾದ ಸಮಸ್ಯೆಯನ್ನು ಪರಿಹರಿಸಲು ಮುಸ್ಲಿಂ ಯುವಕರ ತಂಡವೊಂದು ನಡೆಸುತ್ತಿರುವ ಮಾನವೀಯ ಕಾರ್ಯಕ್ಕೆ ತುಮಕೂರು ಸಾಕ್ಷಿಯಾಗುತ್ತಿದೆ. ನಿನ್ನೆಯಿಂದ ಜಿಲ್ಲೆಯ ಮಧುಗಿರಿಯ ಎಂಟು ಮುಸ್ಲಿಂ ಯುವಕರ ತಂಡವೊಂದು ಸ್ವಯಂ ಪ್ರೇರಿತರಾಗಿ ತಾಲ್ಲೂಕು ಆಸ್ಪತ್ರೆ, ವಿವಿಧ ಖಾಸಗಿ ಆಸ್ಪತ್ರೆ ಗಳಲ್ಲಿ ಕೊವಿಡ್​ನಿಂದ ಮೃತಪಟ್ಟ ಶರೀರವನ್ನು ಆಯಾ ಗ್ರಾಮಗಳಲ್ಲಿ ಅವರ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಿಕೊಡುತ್ತಿದೆ. …

Read More »

ತೊದಲು ನುಡಿಯಲ್ಲೇ ಲೋಕಜ್ಞಾನ ತೆರೆದಿಡುವ ಮಗು; ಎರಡೂವರೆ ವರ್ಷದ ಬಾಲಕಿ ಜ್ಞಾಪಕ ಶಕ್ತಿಗೆ ಬೆರಗಾದ ಬಾಗಲಕೋಟೆ ಮಂದಿ

ಬಾಗಲಕೋಟೆ: ಮಕ್ಕಳಿರಲವ್ವ ಮನೆ ತುಂಬ, ಕೂಸು ಕಂದಯ್ಯ ಒಳ ಹೊರಗಾ ಆಡಿದರ ಬೀಸಣಿಕೆ ಗಾಳಿ ಸುಳಿದಾವ ಎಂಬ ಮಾತು ಇದೆ. ಮಕ್ಕಳಿದ್ದ ಮನೆಯಲ್ಲಿ ಪ್ರತಿದಿನವೂ ಸಂಭ್ರಮ, ಅವುಗಳ ತೊದಲು ನುಡಿ ತುಂಟಾಟ ನೋಡುವುದೇ ಅಂದ ಎಂಬುವುದು ಇದರ ಅರ್ಥ. ಇದಕ್ಕೆ ಪುಷ್ಠಿ ನೀಡುವಂತೆ ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ಓರ್ವ ಅಸಾಮಾನ್ಯ ಬಾಲಕಿ ಇದ್ದು, ಆಕೆಯ ಹೆಸರು ಸಮನ್ವಿತಾ ಕರಕಟ್ಟಿ. ವಯಸ್ಸು ಕೇವಲ ಎರಡುವರೆ ವರ್ಷ,ಆದರೆ ಈಕೆಯ ಸಾಧನೆ ಮಾತ್ರ …

Read More »

ಬಯಲಾಯ್ತು ಖಾಸಗಿ ಆಸ್ಪತ್ರೆಗಳ ಬೆಡ್ ರಹಸ್ಯ: ಅಗತ್ಯವಿಲ್ಲದಿದ್ರೂ ರೋಗಿಗಳ ಹೆಸರಲ್ಲಿ ಹಾಸಿಗೆ ಭರ್ತಿ

ನವದೆಹಲಿ: ನೋಯ್ಡಾದ ಅನೇಕ ಆಸ್ಪತ್ರೆಗಳಲ್ಲಿ ಅಗತ್ಯವಿಲ್ಲದವರೂ ರೋಗಿಗಳ ಹೆಸರಲ್ಲಿ ಆಸ್ಪತ್ರೆಯ ಬೆಡ್ ಪಡೆದುಕೊಂಡಿರುವುದು ಬೆಳಕಿಗೆ ಬಂದಿದೆ. ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದಲ್ಲಿರುವ ಅನೇಕ ಆಸ್ಪತ್ರೆಗಳಲ್ಲಿ ಅಗತ್ಯವಿಲ್ಲದ ಅನೇಕ ಜನ ಹಾಸಿಗೆಗಳನ್ನು ಆಕ್ರಮಿಸಿಕೊಂಡಿದ್ದಾರೆ ಎಂದು ಗೌತಮಬುದ್ಧ ನಗರ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ಇಂತಹ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಆದೇಶಿಸಲಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ನೋಯ್ಡಾ ಜಿಲ್ಲೆಯ ಅನೇಕ ಆಸ್ಪತ್ರೆಗಳಲ್ಲಿ 200 ಕ್ಕೂ ಹೆಚ್ಚು ಮಂದಿಯನ್ನು ಜಾಗ ಖಾಲಿ ಮಾಡಿಸಲಾಗಿದೆ. …

Read More »

ಮುಂಗಡ ಹಣ ವಾಪಸ್ ನೀಡಲು ಕಲ್ಯಾಣ ಮಂಟಪ ಮಾಲೀಕರಿಂದ ನಕಾರ

ಚಿಕ್ಕಮಗಳೂರು: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮದುವೆ ಸಮಾರಂಭಗಳಿಗೆ ಕಠಿಣ ನಿಯಮವನ್ನು ಹೇರಲಾಗಿದೆ. ಸಾವಿರಾರು ಜನರನ್ನ ಸೇರಿಸಿ ಮದುವೆ ಮಾಡಬೇಕು ಎಂದು ಆಸೆಪಟ್ಟವರು ಇದೀಗ 50 ಮಂದಿಯನ್ನ ಸೇರಿಸಿ ಮದುವೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ದೊಡ್ದ ದೊಡ್ಡ ಹಾಲ್​ಗಳಲ್ಲಿ ಬುಕ್ ಮಾಡಿದ ಮದುವೆಗಳೇಲ್ಲ ಮನೆಗಳಲ್ಲಿ ಮತ್ತು ದೇವಸ್ಥಾನಗಳಲ್ಲಿ ಮಾಡಲು ನಿರ್ಧರಿಸಲಾಗಿದೆ. ಆದರೆ ಕನ್ಷೆಷನ್ ಹಾಲ್​ಗಳಿಗೆ ಮುಂಗಡವಾಗಿ ಕಟ್ಟಿದ ಹಣವನ್ನ ಮಾತ್ರ ಕೇಳಬೇಡಿ ಎಂದು ಮಾಲೀಕರು ಹೇಳುತ್ತಿದ್ದಾರೆ. ಹೀಗಾಗಿ ಕುಟುಂಬಸ್ಥರಲ್ಲಿ …

Read More »

ಮಂಗಳೂರಿನಲ್ಲಿ ಬೆಂಕಿ ಅವಘಡ, ಲಾಕ್ ಡೌನ್ ಹಿನ್ನಲೆ ತಪಿತಿ ಬಹುದೊಡ್ಡ ಅನಾಹುತ

ಮಂಗಳೂರು: ಕ್ಯಾಟಸೆಂತ್ ಕೆಮಿಕಲ್ ಫ್ಯಾಕ್ಟರಿ ಯಲ್ಲಿ ಬೆಂಕಿ ಅವಘಡವಾಗಿರುವ ಘಟನೆ ಕಂಡುಬಂದಿದೆ. ಮಂಗಳೂರ ನಗರ ಹೊರವಲಯದ ಸುರತ್ಕಲ್ ಸಮೀಪದ ಕಳವಾರ ನಲ್ಲಿರುವ ಕ್ಯಾಟಸೆಂತ್ ಫ್ಯಾಕ್ಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕ್ಯಾಟಸೆಂತ್ ಫ್ಯಾಕ್ಟರಿಯ ಎರಡನೇ ಮಹಡಿಯಲ್ಲಿ ಈ ಬೆಂಕಿ ಕಾಣಿಸಿಕೊಂಡಿದ್ದು, ಸುರತ್ಕಲ್,MRPL ಅಗ್ನಿಶಾಮಕ ದಳದಿಂದ ತಂಡ ಕಾರ್ಯಚರಣೆ ನಡೆಸುತ್ತಿದೆ. ಪ್ರಸ್ತುತದ ಲಾಕ್ ಡೌನ್ ಹಿನ್ನಲೆ ಕಾರ್ಮಿಕರೆಲ್ಲ ಇರದ ಕಾರಣ ಬಹುದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗುತ್ತಿದೆ.

Read More »