ಬೆಂಗಳೂರು : ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ತಮ್ಮ ನಿವಾಸದ ಬಾಗಿಲಿಗೆ ಬೋರ್ಡ್ ಒಂದನ್ನು ಹಾಕಿದ್ದಾರೆ. ಕೋವಿಡ್ ಮೊದಲ ಅಲೆಯಲ್ಲಿ ಸಿದ್ದರಾಮಯ್ಯನವರಿಗೆ ಸೋಂಕು ತಗುಲಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಅವರು ಸದ್ಯ ಎಲ್ಲಿಗೆ ಹೋದರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿದ್ದಾರೆ. ಅಲ್ಲದೆ ಕೋವಿಡ್ ಸೋಂಕಿನ ಬಗ್ಗೆ ತುಂಬಾ ಜಾಗೃತರಾಗಿದ್ದಾರೆ. ರಾಜ್ಯದಲ್ಲಿ ನಿನ್ನೆ 21,794 …
Read More »Monthly Archives: ಏಪ್ರಿಲ್ 2021
ಹೈಕೋರ್ಟ್ ಆದೇಶದ ಹಿನ್ನೆಲೆ: ʼಸಾರಿಗೆ ನೌಕರʼರ ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್..!
ಬೆಂಗಳೂರು: 6ನೇ ವೇತನ ಆಯೋಗದ ಜಾರಿಗಾಗಿ ಪಟ್ಟು ಹಿಡಿದ ಕುಳಿತಿದ್ದ ಸಾರಿಗೆ ನೌಕಕರ ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದು, ಸೇವೆ ಹಾಜರಾಗುವುದಾಗಿ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ‘ಸಾರಿಗೆ ನೌಕರರ ಮುಷ್ಕರವನ್ನ ತಾತ್ಕಾಲಿಕವಾಗಿ ಹಿಂಪಡೆಯುತ್ತೇವೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸೇವೆಗೆ ಹಾಜರಾಗ್ತೇವೆ’ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ‘ನ್ಯಾಯಮೂರ್ತಿಗಳ ಹೇಳಿಕೆವನ್ನ ನಾವು ಗೌರವಿಸುತ್ತೇವೆ. ಈ ಪರಿಸ್ಥಿತಿಯಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. …
Read More »ಬೆಡ್ ಸಿಗದೆ ಆಸ್ಪತ್ರೆಗಳ ಮುಂದೆ ಅಂಬುಲೆನ್ಸ್ ಕ್ಯೂ..!
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಜೋರಾಗಿದೆ. ಎಲ್ಲಿ ನೋಡಿದರು ಕೂಡ ಕೊರೊನಾ ರೋಗಿಗಳ ನರಳಾಟ ಕಂಡುಬರುತ್ತಿದೆ. ಈ ನಡುವೆ ಜನ ಆಸ್ಪತ್ರೆ, ಚಿತಾಗಾರ, ಪಿಎಚ್ಸಿ ಸೆಂಟರ್ ಗಳಲ್ಲಿ ಕ್ಯೂ ನಿಂತು ಪರದಾಡುವಂತ ಪರಿಸ್ಥಿತಿ ಬಂದಿದೆ. ಕೊರೊನಾ ಸೋಂಕಿತರನ್ನು ಹೊತ್ತು ತರುವ ಅಂಬುಲೆನ್ಸ್ ಬೆಡ್ ಸಿಗದೆ ಆಸ್ಪತ್ರೆಗಳ ಮುಂದೆ ಕ್ಯೂ ನಿಂತರೆ, ಅಂತ್ಯಕ್ರಿಯೆಗಾಗಿ ಮೃತದೇಹಗಳನ್ನ ಹೊತ್ತು ಚಿತಾಗಾರಗಳ ಬಳಿ ಅಂಬುಲೆನ್ಸ್ ಸರದಿಯಲ್ಲಿ ನಿಲ್ಲುವಂತಹ ಪರಿಸ್ಥಿತಿ ಬಂದೊದಗಿದೆ. ಅಂಬುಲೆನ್ಸ್ ಕಥೆ ಈ ರೀತಿಯಾದರೆ …
Read More »ತರಕಾರಿ ಮಾರುಕಟ್ಟೆಯನ್ನು ಲಾಕ್ ಡೌನ್ ಹಿನ್ನಲೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಬಂದ್ ಮಾಡಲಾಗುವುದು
ಬೆಳಗಾವಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಗಂಣದಲ್ಲಿರುವ ತರಕಾರಿ ಮಾರುಕಟ್ಟೆಯನ್ನು ಲಾಕ್ ಡೌನ್ ಹಿನ್ನಲೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಬಂದ್ ಮಾಡಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಕರೋನಾ ಎರಡನೇ ಅಲೆ ಹೆಚ್ಚಾಗಿರುವುದರಿಂದ ಏ.20 ರಂದು ಸರ್ಕಾರ ಹೊರಡಿಸಿದ ಆದೇಶ ಸಂ. ಆರ್ ಡಿ 158 ಟಿಎನ್ ಆರ್ 2020 ಅನ್ವಯ ಹಾಗೂ ಕೋವಿಡ್-19ರ ರಾಜ್ಯ ಮಾರ್ಗಸೂಚಿ ನಿಯಮಗಳ ಪ್ರಕಾರ …
Read More »ಟಂಟಂಗೆ ಲಾರಿ ಡಿಕ್ಕಿ: 5 ಕೂಲಿ ಕಾರ್ಮಿಕರು ಸಾವು
ಟಂಟಂ ಆಟೋಗೆ ಕಾಂಕ್ರಿಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಯಾದಗಿರಿಯಲ್ಲಿ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳೂರು ಎಂ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಐವರು ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟರೆ ಮೂವರಿಗೆ ಗಂಭೀರ ಗಾಯಗಳಾಗಿವೆ. ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರಾದ ಅಯ್ಯಮ್ಮ (60) ಶರಣಮ್ಮ (40) ಕಾಸೀಂಬೀ (40) ಭೀಮಬಾಯಿ (40) …
Read More »ಚಾಕುವಿನಿಂದ ಇರಿದು ಕಟ್ಟಡ ಕಾರ್ಮಿಕನ ಕೊಲೆ
ಬೆಂಗಳೂರು, ಏ.21- ನಿರ್ಮಾಣ ಹಂತದ ಕಟ್ಟಡ ಕಾರ್ಮಿಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಹುಬ್ಬಳ್ಳಿ ನಿವಾಸಿ ಪ್ರಕಾಶ್ (25) ಕೊಲೆಯಾದ ಕಾರ್ಮಿಕ. ತಿಂಡ್ಲು ಸಮೀಪದ ಸಪ್ತಗಿರಿ ಲೇಔಟ್ನಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಇಲ್ಲಿ ಪ್ರಕಾಶ್ ಗಾರೆ ಕೆಲಸ ಮಾಡಿಕೊಂಡು ಈ ಜಾಗದಲ್ಲೇ ನಿರ್ಮಿಸಲಾಗಿದ್ದ ಲೇಬರ್ ಶೆಡ್ನಲ್ಲಿ ನೆಲೆಸುತ್ತಿದ್ದನು. ರಾತ್ರಿ ಪ್ರಕಾಶ್ ಹೊರಗೆ ಹೋಗಿ ಮನೆಗೆ ವಾಪಸಾಗುತ್ತಿದ್ದಾಗ ಶೆಡ್ನಿಂದ …
Read More »ಬೀದರ್ ತಾಲೂಕಿನ ಬಾವಗಿ ಗ್ರಾಮಸ್ಥರು ಸ್ವಯಂ ಲಾಕ್ಡೌನ್ ಜಾರಿಗೊಳಿಸಿದ್ದಾರೆ.
ಬೀದರ್, ಏಪ್ರಿಲ್ 21: ಕಳೆದ ಕೆಲವು ದಿನಗಳಿಂದ ಬೀದರ್ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳಿಂದ ಜನರು ಆತಂಕಕ್ಕೊಳಗಾಗಿದ್ದು, ಬೀದರ್ ತಾಲೂಕಿನ ಬಾವಗಿ ಗ್ರಾಮಸ್ಥರು ಸ್ವಯಂ ಲಾಕ್ಡೌನ್ ಜಾರಿಗೊಳಿಸಿದ್ದಾರೆ. ರಾಜ್ಯ ಸರ್ಕಾರ ಲಾಕ್ಡೌನ್ ಮಾಡಲು ಮೀನಮೇಷ ಏಣಿಸುತ್ತಿರುವಾಗಲೇ ಬಾವಗಿ ಗ್ರಾಮಸ್ಥರ ನಿರ್ಣಯ ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ. ಸರ್ಕಾರ ಈ ಹಿಂದೆ ಮಾಡಿದ ಲಾಕ್ಡೌನ್ ಮಾದರಿಯಲ್ಲೇ ಬಾವಗಿಯಲ್ಲಿ ಕಳೆದ ಏ.೧೯ರಿಂದ ಸ್ವಯಂ ದಿಗ್ಭಂಧನ ವಿಧಿಸಲಾಗಿದೆ. ಗ್ರಾಮದಲ್ಲಿ ಡಂಗೂರ ಸಾರಿ ಗ್ರಾಮಸ್ಥರಿಗೆ ಲಾಕ್ಡೌನ್ …
Read More »ನಾಸಿಕ್ ನಲ್ಲಿ ಆಕ್ಸಿಜನ್ ಸಿಲಿಂಡರ್ ಸೋರಿಕೆ : 22 ಮಂದಿ ಸಾವು
ಮಹಾರಾಷ್ಟ್ರ : ಮಹಾರಾಷ್ಟ್ರದ ನಾಸಿಕ್ ನಲ್ಲಿ ಕೋವಿಡ್ -19 ರೋಗಿಗಳಿಗೆ ಸಿವಿಕ್ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ರೋಗಿಗಳು ಬುಧವಾರ (ಏಪ್ರಿಲ್ 21) ಸಾವನ್ನಪ್ಪಿದ್ದಾರೆ ಎಂಬ ವರದಿಯಾಗಿದೆ. ಜಾಕಿರ್ ಹುಸೇನ್ ಪುರಸಭೆಯ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ಜನರು ಸಾವನ್ನಪ್ಪಿದ್ದಾರೆ. ರೋಗಿಗಳು ವೆಂಟಿಲೇಟರ್ ಗಳಲ್ಲಿದ್ದರು ಮತ್ತು ಆಮ್ಲಜನಕದ ಪೂರೈಕೆಯಾಗುತ್ತಿದ್ದರೂ, ಆಮ್ಲಜನಕ ಪೂರೈಕೆ ತೊಟ್ಟಿಯಲ್ಲಿ ಸೋರಿಕೆಯ ಕಾರಣದಿಂದ ಈ ಅವಘಡ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ …
Read More »ಶ್ರೀರಾಮನವಮಿ ಅಂಗವಾಗಿ ರಮೇಶ್ ಜಾರಕಿಹೊಳಿ ಅವರ ಟ್ವಿಟರ್ ಖಾತೆಯಲ್ಲಿ ಶುಭಾಶಯ
ಬೆಂಗಳೂರು, ಏ.21- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಶ್ರೀರಾಮನವಮಿ ಅಂಗವಾಗಿ ರಮೇಶ್ ಜಾರಕಿಹೊಳಿ ಅವರ ಟ್ವಿಟರ್ ಖಾತೆಯಲ್ಲಿ ಶುಭಾಶಯ ತಿಳಿಸಲಾಗಿದೆ. ಫೆ.18ರಿಂದ ನಿಷ್ಕ್ರಿಯವಾಗಿದ್ದ ಟ್ವಿಟರ್ ಖಾತೆ ಇಂದು ಬೆಳಗ್ಗೆ ಸಕ್ರಿಯವಾಗಿದೆ. ಸಿಡಿ ಪ್ರಕರಣದಲ್ಲಿ ಸಿಲುಕಿದ ರಮೇಶ್ ಜಾರಕಿಹೊಳಿ ಅವರು ಇದ್ದಕ್ಕಿದ್ದಂತೆ ಅಜ್ಞಾತವಾಸಕ್ಕೆ ತೆರಳಿದ್ದರು. ನ್ಯಾಯಾೀಶರ ಮುಂದೆ ಯುವತಿ ಹೇಳಿಕೆ ನೀಡಿದ ಬಳಿಕ ರಮೇಶ್ ಜಾರಿಕಿಹೊಳಿ ಬೆಳಗಾವಿ ಸೇರಿಕೊಂಡಿದ್ದು, ಕೊರೊನಾ ಸೋಂಕು ತಗುಲಿದೆ ಎಂದು ಚಿಕಿತ್ಸೆ …
Read More »ಸೆಕೆಯಿಂದ ಪಾರಾಗೋಕೆ ಹೊಸ ಪ್ಲಾನ್ ಕಂಡು ಹಿಡಿದ ಗ್ರಾಮಸ್ಥರು..!
ಬೇಸಿಗೆ ಕಾಲ ಶುರುವಾಗಿರೋದ್ರಿಂದ ಸೂರ್ಯನ ಶಾಖದಿಂದ ತಪ್ಪಿಸಿಕೊಳ್ಳೋಕೆ ಜನರು ಇನ್ನಿಲ್ಲದ ಹರಸಾಹಸ ಪಡ್ತಿದ್ದಾರೆ. ಫ್ಯಾನ್, ಎಸಿಗಳು ಮನೆಯಲ್ಲಿ ಇರುವಾಗ, ಕಟ್ಟಡದಲ್ಲಿ ಇರುವಾಗ ಬಳಕೆ ಮಾಡಬಹುದು. ಆದರೆ ಮನೆಯಿಂದ ಹೊರಗಿದ್ದಾಗ ಸೆಖೆಯಿಂದ ಪಾರಾಗೋಕೆ ಏನು ಮಾಡೋದು..? ಎಂಬ ಯೋಚನೆ ಅನೇಕರಲ್ಲಿ ಇರಬಹುದು. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೋದಲ್ಲಿ ಗ್ರಾಮಸ್ಥನೊಬ್ಬ ಕತ್ತೆಯ ಸಹಾಯದಿಂದ ಸೆಕೆಯಿಂದ ಪಾರಾಗಿದ್ದಾನೆ. 54 ಸೆಕೆಂಡ್ಗಳ ಈ ವಿಡಿಯೋದಲ್ಲಿ, ಮರುಭೂಮಿ ಪ್ರದೇಶದಲ್ಲಿ ಮಂಚದ ಮೇಲೆ ಜನರು ಕೂತಿರೋದನ್ನ …
Read More »