Breaking News
Home / 2021 / ಏಪ್ರಿಲ್ (page 39)

Monthly Archives: ಏಪ್ರಿಲ್ 2021

ಕೇಂದ್ರ ಸರ್ಕಾರದಿಂದ ಆರೋಗ್ಯ ಕಾರ್ಯಕರ್ತರಿಗೆ ಬಿಗ್ ಶಾಕ್ : 50 ಲಕ್ಷ ರೂ. ವಿಮೆ ಸೌಲಭ್ಯ ರದ್ದು!

ನವದೆಹಲಿ : ಕೇಂದ್ರ ಸರ್ಕಾರವು ಆರೋಗ್ಯ ಕಾರ್ಯಕರ್ತರಿಗೆ ಬಿಗ್ ಶಾಕ್ ನೀಡಿದ್ದು, ಕೊರೊನಾ ಸೋಂಕಿತರ ಆರೈಕೆ ಸಂದರ್ಭದಲ್ಲಿ ಮೃತಪಟ್ಟ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ರೂ. ವಿಮೆ ಸೌಲಭ್ಯವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ. ಈ ಕುರಿತು ಎಲ್ಲಾ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣೆ ಪತ್ರ ಬರೆದಿದ್ದು, 2020 ರ ಮಾರ್ಚ್ 20 ರಂದು ಘೋಷಣೆಯಾಗಿದ್ದ ಕೊರೊನಾ ಸೋಂಕಿತರ ಆರೈಕೆ ಸಂದರ್ಭದಲ್ಲಿ ಮೃತಪಟ್ಟ ಮುಂಚೂಣಿ ಆರೋಗ್ಯ …

Read More »

ಮಹಾರಾಷ್ಟ್ರದಲ್ಲಿ ಒಂದೇ ದಿನ 68,000ಕ್ಕೂ ಹೆಚ್ಚು ಕೊರೊನಾ ಕೇಸ್!

ಮುಂಬೈ, ಏಪ್ರಿಲ್ 18: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಪ್ರತಿನಿತ್ಯ ಇಡೀ ದೇಶದಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ವರದಿಯಾಗುತ್ತಿವೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 68631 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ 503 ಮಂದಿ ಪ್ರಾಣ ಬಿಟ್ಟಿದ್ದು, 45,654 ಸೋಂಕಿತರು ಗುಣಮುಖರಾಗಿದ್ದಾರೆ.   ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 31,06,828 ಕೊರೊನಾವೈರಸ್ ಸೋಂಕಿತರು …

Read More »

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಆಸ್ಪತ್ರೆಗೆ ಅಲೆದಾಡಿದ ಮಹಿಳೆ

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹೆಚ್ಚುತ್ತಿರುವ ನಡುವೆಯೇ ಸಾಮಾನ್ಯ ರೋಗಿಗಳು ಸಹ ಚಿಕಿತ್ಸೆಗಾಗಿ ಪರದಾಡುವಂತೆ ಆಗಿದೆ. ಮಹಿಳೆಯೊಬ್ಬರು ಐಸಿಯು ಬೆಡ್ ಸಿಗದ ಕಾರಣ ಆಕ್ಸಿಜನ್ ಸಿಲಿಂಡರ್‌ನೊಂದಿಗೆ ಆಟೋದಲ್ಲಿ ಐದಾರು ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆಗೆ ತಿರುಗಾಡಿದ ಮನಕಲುವ ಘಟನೆ ರವಿವಾರ ನಡೆದಿದೆ. ಇಲ್ಲಿನ ಬಸವ ನಗರದ 55 ವರ್ಷದ ಮಹಿಳೆಯೊಬ್ಬರು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬೆಳಗ್ಗೆ ಅಸ್ವಸ್ಥಗೊಂಡಿದ್ದರು. ಹೀಗಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ಕುಟುಂಬದವರು ಕರೆದುಕೊಂಡು ಹೋಗಿದ್ದರು. ಆಗ ಐಸಿಯು …

Read More »

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಹಾವಳಿ : 8 ಜನರನ್ನು ಬಂಧಿಸಿದ ವಿಜಯಪುರ ಪೊಲೀಸ್

ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ ಬೆಟ್ಟಿಂಗ್ ಕೃತ್ಯದಲ್ಲಿ ತೊಡಗಿದ್ದ 8 ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 92 ಸಾವಿರ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ಸಂಜೆ ಮುಂಬೈ ಇಂಡಿಯನ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ಮಧ್ಯೆ ನಡೆದ ಐಪಿಎಲ್ ಪಂದ್ಯದ ವೇಳೆ ಇಂಡಿ ಪಟ್ಟಣದಲ್ಲಿರುವ ರೋಹಿತ್ ಶಹಾ ಕಾಂಪ್ಲೆಕ್ ಮೇಲ್ಭಾಗದಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. …

Read More »

ಕೋವಿಡ್ ನಿಯಂತ್ರಣ ವಿಷಯದಲ್ಲಿ ಸಚಿವ ಅಶೋಕ್‌, ಸುಧಾಕರ್‌ ನಡುವೆ ಶೀತಲ ಸಮರ

ಬೆಂಗಳೂರು: ಕೊರೊನಾ ನಿಯಂತ್ರಣದ ವಿಷಯದಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್‌ ಹಾಗೂ ಕಂದಾಯ ಸಚಿವ ಆರ್‌. ಅಶೋಕ್‌ ನಡುವೆ ಶೀತಲ ಸಮರ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೊನಾ ನಿರ್ವಹಣೆ ವಿಚಾರದಲ್ಲಿ ಶನಿವಾರ ಸಚಿವ ಆರ್‌. ಅಶೋಕ್‌, ಬಸವರಾಜ ಬೊಮ್ಮಾಯಿ ಜೊತೆ ಸೇರಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿರುವುದಕ್ಕೆ ಸಚಿವ ಡಾ. ಸುಧಾಕರ್‌ ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ. ಅಲ್ಲದೇ ಭಾನುವಾರ …

Read More »

ಬೆಣ್ಣೆ ನಗರಿಗೆ ತಟ್ಟಿದ ಕೊರೊನಾ ಬಿಸಿ : ನಾಳೆ ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಿಕೆ

ದಾವಣಗೆರೆ : ಬೆಣ್ಣೆ ನಗರಿ ದಾವಣಗೆರೆಗೂ ಕೊರೊನಾ ಬಿಸಿ ತಟ್ಟಿದ್ದು, ಕೊರೊನಾ ಭೀತಿ ಹಿನ್ನೆಲೆ ನಾಳೆ ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಿಕೆಯಾಗಿದೆ. ಈ ಬಗ್ಗೆ ದಾವಣಗೆರೆ ವಿಶ್ವವಿದ್ಯಾಲಯ ಪರೀಕ್ಷಾಂಗ ವಿಭಾಗದ ಕುಲಸಚಿವೆ ಡಾ ಹೆಚ್ ಎಸ್ ಅನಿತಾ ಮಾಹಿತಿ ನೀಡಿದ್ದು, ಕೊರೊನಾ ಭೀತಿ ಹಾಗೂ ಸಾರಿಗೆ ಮುಷ್ಕರದ ಹಿನ್ನೆಲೆ ನಾಳೆ ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಲಾಗಿದೆ. ಅಲ್ಲದೇ ಏಪ್ರಿಲ್ 20 ರಿಂದ ಆರಂಭವಾಗಲಿರುವ ಸ್ನಾತಕೋತ್ತರ …

Read More »

ಸಾರಿಗೆ ನೌಕರರ ಮುಷ್ಕರ : ನಿಗಮ-ನೌಕರರ ರಾತ್ರಿ ಕಾರ್ಯಾಚರಣೆ!

ಬೆಂಗಳೂರು : ಹನ್ನೊಂದು ದಿನಗಳಿಂದ ಸಾರಿಗೆ ನೌಕರರು ಕರ್ತವ್ಯದತ್ತ ಮುಖ ಮಾಡುತ್ತಿಲ್ಲ. ಆದರೆ ಸಾರಿಗೆ ನಿಗಮಗಳ ಅಧಿಕಾರಿಗಳು ಮತ್ತು ಕೆಲವು ನೌಕರರು ರಾತ್ರಿಯಿಡೀ ಕೆಲಸ ಮಾಡುತ್ತಿದ್ದಾರೆ! ಒಂದೆಡೆ ಬೆಂಗಳೂರಿನ ಕೇಂದ್ರ ಕಚೇರಿ ಮತ್ತು ವಿವಿಧ ಡಿಪೋಗಳಲ್ಲಿ ಅಧಿಕಾರಿಗಳು ಬೆಳಗಿನ ಜಾವ 4ರ ವರೆಗೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತೂಂದೆಡೆ ನೌಕರರು ರಾತ್ರಿಯಾಗುತ್ತಿದ್ದಂತೆಯೇ ಸಹೋದ್ಯೋಗಿಗಳ ಮನವೊಲಿಕೆಗೆ ಇಳಿಯುತ್ತಿದ್ದಾರೆ. ಅಧಿಕಾರಿಗಳು ನಿತ್ಯ ಸಂಜೆ ಹೊರಡಿಸುವ ಅಮಾನತು, ವಜಾ, ವರ್ಗಾವಣೆ ಪಟ್ಟಿಗಾಗಿ ರಾತ್ರಿಯಿಡೀ ಕೆಲಸ ಮಾಡುತ್ತಿದ್ದಾರೆ. …

Read More »

ಖರೀದಿದಾರರಿಗೆ ಬಿಗ್ ಶಾಕ್: ಚಿನ್ನದ ದರ 3000 ರೂಪಾಯಿ ಏರಿಕೆ -ಇನ್ನಷ್ಟು ಜಿಗಿಯುವ ಸಾಧ್ಯತೆ

ಮುಂಬೈ: ಚಿನ್ನದ ದರ ಒಂದು ತಿಂಗಳಲ್ಲಿ 3000 ರೂಪಾಯಿ ಏರಿಕೆಯಾಗಿದೆ. ಚಿನ್ನದ ದರ ಏರಿಕೆಯಾಗಿದ್ದರೂ ಖರೀದಿಗೆ ಇದು ಸಕಾಲ ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನದ ದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಅಮೆರಿಕದಲ್ಲಿ ಹಣದುಬ್ಬರ ಹೆಚ್ಚಿಸುವ ಸಾಧ್ಯತೆ ಇರುವುದರಿಂದ ಡಾಲರ್ ದುರ್ಬಲವಾಗಲಿದೆ. ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯಿಂದಾಗಿ ಚಿನ್ನದ ದರ ಏರಿಕೆಯಾಗಬಹುದು ಎಂದು ಹೇಳಲಾಗಿದೆ. ಏಪ್ರಿಲ್ ತಿಂಗಳಿನಲ್ಲಿ ಚಿನ್ನದ ದರ 10 ಗ್ರಾಂಗೆ …

Read More »

ವಿಮೆ ಪರಿಹಾರ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು: ಮಾನಸಿಕ ಅನಾರೋಗ್ಯಕ್ಕೂ ಪರಿಹಾರ

ನವದೆಹಲಿ: ಮಾನಸಿಕ ಅನಾರೋಗ್ಯಕ್ಕೆ ಕೂಡ ನ್ಯಾಯಬದ್ಧವಾಗಿ ವಿಮೆ ಪರಿಹಾರ ದೊರಕಿಸಿಕೊಡಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವಿಮೆ ಕಂಪನಿಗಳು ವಿಮೆ ಪರಿಹಾರ ನೀಡುವ ಸಂದರ್ಭದಲ್ಲಿ ಸಂತ್ರಸ್ತರ ದೈಹಿಕ ಮತ್ತು ಮಾನಸಿಕ ಆರೋಗ್ಯದ ವಿಷಯದಲ್ಲಿ ತಾರತಮ್ಯ ಮಾಡುವಂತಿಲ್ಲ ಎಂದು ಹೇಳಲಾಗಿದೆ. ಮಾನಸಿಕ ಅನಾರೋಗ್ಯಕ್ಕೆ ನ್ಯಾಯಬದ್ಧವಾದ ವಿಮೆ ಪರಿಹಾರ ನೀಡಬೇಕು ಎಂದು ದೆಹಲಿ ಹೈಕೋರ್ಟ್ ತಿಳಿಸಿದೆ. ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ನಿಂದ ವಿಮೆ ನಿಯಂತ್ರಕ ಸಂಸ್ಥೆ IRDAI ಗೆ ಈ …

Read More »

Bengaluru City ‘ನಿಮಗೆ ಕೃಜ್ಞರಾಗಿರಬೇಕು’ – ಕೆ.ಎಲ್ ರಾಹುಲ್‍ಗೆ ಹುಟ್ಟುಹಬ್ಬದ ಶುಭಕೋರಿದ ಅಥಿಯಾ ಶೆಟ್ಟಿ

ಬೆಂಗಳೂರು: ಭಾರತದ ಕ್ರಿಕೆಟ್ ಆಟಗಾರ, ಕನ್ನಡಿಗ ಕೆ.ಎಲ್ ರಾಹುಲ್ ಅವರಿಗೆ ಅವರ ಸ್ನೇಹಿತೆ ಸಿನಿಮಾ ನಟಿ ಅಥಿಯಾ ಶೆಟ್ಟಿ, ನಿಮಗೆ ಕೃತಜ್ಞರಾಗಿರಬೇಕು ಎಂದು ಬರೆದುಕೊಂಡು ಫೋಟೋ ಒಂದನ್ನು ಪೋಸ್ಟ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಕೋರಿದ್ದಾರೆ. ಕೆ.ಎಲ್ ರಾಹುಲ್ ಇಂದು 29ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಅಥಿಯಾ ಶೆಟ್ಟಿ, ರಾಹುಲ್ ಜೊತೆಗಿರುವ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಖ್ಯಾತ ಬಹುಭಾಷಾ ನಟ ಸುನೀಲ್ ಶೆಟ್ಟಿಯ ಮಗಳಾಗಿರುವ ಆಥಿಯಾ ಮತ್ತು ರಾಹುಲ್ …

Read More »