Breaking News
Home / 2021 / ಏಪ್ರಿಲ್ (page 4)

Monthly Archives: ಏಪ್ರಿಲ್ 2021

ಸಚಿವರ ಹಾಗೂ 1 ವರ್ಷದ ಸಂಬಳ, ಶಾಸಕರ 1 ತಿಂಗಳ ಸಂಬಳ ಕೋವಿಡ್ ನಿಯಂತ್ರಣಕ್ಕಾಗಿ.”: ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಲಸಿಕೆ ಹಾಗೂ ಆಕ್ಸಿಜನ್ ವ್ಯವಸ್ಥೆಗಳ ನಿರ್ವಹಣೆಗೂ ಕೂಡ ಯಾವೆಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ನಿಯಂತ್ರಣಕ್ಕಾಗಿ ಸಚಿವರ 1 ವರ್ಷದ ಸಂಬಳ ಹಾಗೂ ಶಾಸಕರ 1 ತಿಂಗಳ …

Read More »

ಸಮಾಜಕ್ಕೆ ಮಾರಕವಾಗಿರುವ  6000 ಕೆ.ಜಿ. ತಂಬಾಕು ಉತ್ಪನ್ನಗಳನ್ನು ವಶಕ್ಕೆ: ಅಶೋಕ ತೇಲಿ 

ಬೆಳಗಾವಿ : ಬೆಳಗಾವಿ ಉಪವಿಭಾಗಾಧಿಕಾರಿ ಅಶೋಕ ತೇಲಿ ಇಂದು ಖಾನಾಪುರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 6,000 ಕೆಜಿ  ಅಕ್ರಮ ತಂಬಾಕು ವಶಕ್ಕೆ ಪಡೆಯಲಾಗಿದೆ.  ಖಾನಾಪುರದ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟಿರುವ ಸಮಾಜಕ್ಕೆ ಮಾರಕವಾಗಿರುವ  6000 ಕೆ.ಜಿ. ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಮೂರು ಸಾವಿರ ಕೆಜಿ ಬಿಡಿ ತಂಬಾಕು ವಶಪಡಿಸಿಕೊಂಡಿದ್ದು, ಇದರಲ್ಲಿ ಲೇಬಲ್, ಪ್ಯಾಕಿಂಗ್ ಇರಲಿಲ್ಲ. ಇನ್ನೂ ಮೂರು ಸಾವಿರ ಕೆಜಿ ಅಕ್ರಮ ತಂಬಾಕನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಎಪ್ಪತ್ತು ಕೆಜಿ ಪ್ಲಾಸ್ಟಿಕ್ ವಶ ಪಡಿಸಿಕೊಳ್ಳಲಾಗಿದೆ. …

Read More »

ಇಲ್ಲೊಬ್ಬ ಹೆಣ್ಮಗಳು ತನ್ನ ಪತಿಯನ್ನು ಉಳಿಸಿಕೊಳ್ಳಲು ಪಟ್ಟ ಪಾಡು ಕೇಳಿದರೆ ಎದೆ ಝಲ್ಲೆನ್ನುತ್ತದೆ.

ಬೆಂಗಳೂರು – ಕೊರೋನಾ ದಿನದಿಂದ ದಿನಕ್ಕೆ ಎಂತೆಂತವರ ಜೀವವನ್ನು ಕಸಿದುಕೊಳ್ಳುತ್ತಿದೆ ಎಂದು ನೋಡಿದಾಗ ನಿಂತಲ್ಲೇ ಕುಸಿದು ಬೀಳುವಂತಾಗಿದೆ. ಪತ್ನಿ ಪತಿಯನ್ನು ಉಳಿಸಿಕೊಳ್ಳಲು, ತಾಯಿ ಮಗನನ್ನು ಉಳಿಸಿಕೊಳ್ಳಲು, ಮಗ ತಂದೆ-ತಾಯಿಯನ್ನು ಉಳಿಸಿಕೊಳ್ಳಲು ಹೆಣಗಾಡುವುದನ್ನು ಕೇಳಿದರೆ ಈ ಜೀವನದ ಮೇಲಿನ ಭರವಸೆಯೇ ಹೊರಟು ಹೋಗುವಂತಾಗಿದೆ. ಇಲ್ಲೊಬ್ಬ ಹೆಣ್ಮಗಳು ತನ್ನ ಪತಿಯನ್ನು ಉಳಿಸಿಕೊಳ್ಳಲು ಪಟ್ಟ ಪಾಡು ಕೇಳಿದರೆ ಎದೆ ಝಲ್ಲೆನ್ನುತ್ತದೆ. ಇದು ಒಬ್ಬ ಹೆಣ್ಮಗಳ ಕಥೆಯಲ್ಲ, ಸಾವಿರಾರು ಜನರು ಕ್ಷಣ 7ಣವೂ ಪಡುತ್ತಿರುವ ಪಾಡು. …

Read More »

ಬೆಳಗಾವಿಯಲ್ಲಿ ಕೊರೋನಾ ಅಟ್ಟಹಾಸ ಮೆರದಿದ್ದು, ಮೊದಲಬಾರಿಗೆ 500ರ ಗಡಿ ದಾಟಿದೆ.

ಬೆಳಗಾವಿ – 2 ಅಲೆಯಲ್ಲಿ ಬೆಳಗಾವಿಯಲ್ಲಿ ಕೊರೋನಾ ಅಟ್ಟಹಾಸ ಮೆರದಿದ್ದು, ಮೊದಲಬಾರಿಗೆ 500ರ ಗಡಿ ದಾಟಿದೆ. ಇಂದು 545 ಜನರಿಗೆ ಜಿಲ್ಲೆಯಲ್ಲಿ ಕೊರೋನಾ ದೃಢಪಟ್ಟಿದೆ. ಬೆಳಗಾವಿ ನಗರದಲ್ಲಿ 157, ಗೋಕಾಕ ತಾಲೂಕಲ್ಲಿ 104 ಜನರಿಗೆ ಸೋಂಕು ಪತ್ತೆಯಾಗಿದೆ. ಅಥಣಿಯಲ್ಲಿ 76, ಬೈಲಹೊಂಗಲ 50, ಚಿಕ್ಕೋಡಿ 30, ಹುಕ್ಕೇರಿ 18, ಖಾನಾಪುರ 10, ರಾಮದುರ್ಗ 15, ರಾಯಬಾಗ 38, ಸವದತ್ತಿ 30 ಹಾಗೂ ಇತರೆ 17 ಜನರಿಗೆ ಸೋಂಕು ದೃಢಪಟ್ಟಿದೆ. ಇಲ್ಲಿಯವರೆಗೆ …

Read More »

ನಿಯಮ‌‌ ಉಲ್ಲಂಘಿಸಿದರೆ ಶಿಸ್ತು ಕ್ರಮ: ಡಾ.ಕೆ.ಹರೀಶ್ ಕುಮಾರ್

ಬೆಳಗಾವಿ: ಲೋಕಸಭಾ ಉಪ ಚುನಾವಣೆಯ ಮತ ಎಣಿಕೆಯು ಭಾನುವಾರ (ಮೇ.02) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಕೋವಿಡ್-19 ಮಾರ್ಗಸೂಚಿಗಳನ್ನು ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಿದೆ. ಅಭ್ಯರ್ಥಿ ಹಾಗೂ ಏಜೆಂಟರುಗಳಿಗೆ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯ : ಮತ ಎಣಿಕೆ‌ ಕೇಂದ್ರ ಪ್ರವೇಶಿಸುವ ಅಭ್ಯರ್ಥಿಗಳು ಕೊರೋನಾ ನೆಗೆಟಿವ್ ವರದಿ ಅಥವಾ ಎರಡು ಡೋಸ್ ಲಸಿಕೆ ಪಡೆದಿರುವ ಬಗ್ಗೆ ದಾಖಲೆ‌ ಸಲ್ಲಿಸಬೇಕು. ಏಜೆಂಟರು ಕೂಡ 48 …

Read More »

ಮಾಸ್ಕ್ ಧರಿಸಿ ಪೇಟೆಗೆ ಬಂದ ನಾಯಿ!

ಮಂಗಳೂರು, ಏಪ್ರಿಲ್ 29; ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಅಂತಾ ಸರ್ಕಾರ ಕಠಿಣ ನಿಯಮಗಳನ್ನು ಮಾಡಿದೆ. ಜನ ಮಾತ್ರ ಕೊರೊನಾ ಬಂದು ವರ್ಷ ಕಳೆದರೂ ಇನ್ನೂ ಮಾಸ್ಕ್ ಧರಿಸುತ್ತಿಲ್ಲ. ಮಾಸ್ಕ್ ಬಳಕೆಯ ಗಂಭೀರತೆಯೂ ಜನರಿಗೆ ಅರ್ಥವಾಗಿಲ್ಲ. ಹೀಗಾಗಿ ಪ್ರತಿದಿನ ಮಾಸ್ಕ್ ಧರಿಸದೇ ದಂಡವನ್ನು ಕಟ್ಟುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಶ್ವಾನದ ಮಾಲಿಕರೊಬ್ಬರು ತನ್ನ ಪ್ರೀತಿಯ ಶ್ವಾನಕ್ಕೆ ಮಾಸ್ಕ್ ಹಾಕಿಸಿ ಕರೆದುಕೊಂಡು ಬಂದಿದ್ದರು. ಗುರುವಾರ ಅಗತ್ಯ ವಸ್ತುಗಳ ಖರೀದಿ ಸಮಯದಲ್ಲಿ …

Read More »

ಬೆಂಗಳೂರಿನಿಂದ ಬಂದರೆ ಈ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ

ಧಾರವಾಡ, ಏಪ್ರಿಲ್ 29; ಕೋವಿಡ್ 2ನೇ ಅಲೆ ವೇಗವಾಗಿ ಹಬ್ಬುತ್ತಿದೆ. ಕರ್ನಾಟಕ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಬೆಂಗಳೂರು ನಗರ ಮತ್ತು ವಿವಿಧ ಜಿಲ್ಲೆಗಳ ಜನರು ತವರಿಗೆ ವಾಪಸ್ ಆಗುತ್ತಿದ್ದಾರೆ. ಬೆಂಗಳೂರು ಮತ್ತು ಹೊರ ಜಿಲ್ಲೆಗಳಿಂದ ಬರುವ ಜನರಿಂದ ಕೋವಿಡ್ ಸೋಂಕು ಹರಡಬಾರದು ಎಂದು ಧಾರವಾಡ ಜಿಲ್ಲೆಯ ಗ್ರಾಮವೊಂದು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ.   ಧಾರವಾಡ ಸಮೀಪದ ಹೆಬ್ಬಳ್ಳಿ ಗ್ರಾಮದ ಜನರು ಸ್ವಯಂ ಆಗಿ ತೀರ್ಮಾನ ಕೈಗೊಂಡಿದ್ದಾರೆ. …

Read More »

ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಬಜಾಜ್ ರಾಜೀನಾಮೆ, ನೀರಜ್ ಬಜಾಜ್ ನೂತನ ಅಧ್ಯಕ್ಷ

ನವದೆಹಲಿ:ರಾಹುಲ್ ಬಜಾಜ್ ಅವರು ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಸ್ಥಾನದಿಂದ ಏಪ್ರಿಲ್ 30ರಂದು ಕೆಳಗಿಳಿಯಲಿದ್ದಾರೆ ಎಂದು ಬಜಾಜ್ ಆಟೋ ಗುರುವಾರ(ಏಪ್ರಿಲ್ 29) ಘೋಷಿಸಿದೆ. ರಾಹುಲ್ (82ವರ್ಷ) ಅವರು ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇನ್ನು ಮುಂದೆ ಅವರು ಐದು ವರ್ಷಗಳ ಕಾಲ ಕಂಪನಿಯ ವಿಶ್ರಾಂತ ಅಧ್ಯಕ್ಷರಾಗಲಿದ್ದಾರೆ ಎಂದು ಬಜಾಜ್ ತಿಳಿಸಿದೆ. ಅಲ್ಲದೇ ನೀರಜ್ ಬಜಾಜ್ ಅವರು ಮೇ 1ರಂದು ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದೆ. …

Read More »

ಧಾರವಾಡ: ಜಿಲ್ಲೆಯ ಜನರಿಗೆ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ದೀಪಕ್‌ಗೆ ಧಾರವಾಡ ಡಿಸಿ ನೋಟಿಸ್

ಧಾರವಾಡ: ಜಿಲ್ಲೆಯ ಜನರಿಗೆ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ದೀಪಕ್‌ಗೆ ಧಾರವಾಡ ಡಿಸಿ ನೋಟಿಸ್ ಜಾರಿ ಮಾಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್, ಬೆಡ್, ವೆಂಟಿಲೇಟ್, ICU ಬೆಡ್ ಇಲ್ಲವೆಂದು ದೀಪಕ್ ವಿಡಿಯೋ ಮಾಡಿದ್ದರು. ಆದರೆ ಧಾರವಾಡ ಜಿಲ್ಲೆಯಲ್ಲಿ 80 ಐಸಿಯು ಬೆಡ್, 103 ವೆಂಟಿಲೇಟರ್, 545 ಆಕ್ಸಿಜನ್ ಬೆಡ್ ಖಾಲಿ ಇವೆ. ಹೀಗಾಗಿ ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದೀಪಕ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ. ಎಐಸಿಸಿ …

Read More »

ನಿಮ್ಮ ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು:H.D.K.

ಬೆಂಗಳೂರು: ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಭ್ಯವಿರುವ ಮಾಹಿತಿ ಪ್ರಕಾರ ಮೇ …

Read More »