Breaking News
Home / 2021 / ಏಪ್ರಿಲ್ (page 7)

Monthly Archives: ಏಪ್ರಿಲ್ 2021

ಮಾಜಿ ಸಚಿವ, ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ.

ಬೆಂಗಳೂರು – ಮಾಜಿ ಸಚಿವ, ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ. ರಮೇಶ ಎನ್ನುವ 45 ವರ್ಷದ ವ್ಯಕ್ತಿ ಕೊರೋನಾದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ರಮೇಶ್ ಬೆಂಗಳೂರಿನವರೇ ಆಗಿದ್ದು, ಸತೀಶ್ ಜಾರಕಿಹೊಳಿ ಈ ಹಿಂದೆ ಜವಳಿ ಸಚಿವರಾಗಿದ್ದಾಗಿನಿಂದಲೂ ಅವರ ಜೊತೆಗಿದ್ದರು.3 ದಿನದ ಹಿಂದೆ ರಮೇಶ ಅವರಿಗೆ ಕೊರೋನಾ ಸೊಂಕು ದೃಢಪಟ್ಟಿತ್ತು. ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಧ್ಯಾಹ್ನ 2 …

Read More »

ಅಕ್ಕಿ ಕೇಳಿದ ವ್ಯಕ್ತಿಗೆ ಸತ್ತರೆ ಒಳ್ಳೆಯದು ಎಂದ ಆಹಾರ ಸಚಿವ ಉಮೇಶ ಕತ್ತಿ, ಒದ್ದು ಹೊರಹಾಕಿ ಎಂದ ಎಚ್ಡಿಕೆ

ಬೆಂಗಳೂರು – ಅಕ್ಕಿ ಕೇಳಿದ ವ್ಯಕ್ತಿಗೆ ಸತ್ತರೆ ಒಳ್ಳೆಯದು ಎಂದ ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕಿಡಿ ಹೊತ್ತಿಸಿದೆ. ಉಮೇಶ ಕತ್ತಿಯನ್ನು ಒದ್ದು ಹೊರ ಹಾಕಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರೆ, ತಕ್ಷಣ ರಾಜಿನಾಮೆ ಪಡೆಯಿರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಉಮೇಶ ಕತ್ತಿ ಹೇಳಿಕೆಗೆ ವಿಷಾದಿಸುತ್ತೇನೆ ಎಂದಿದ್ದಾರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ಉಮೇಶ ಕತ್ತಿ ಹೇಳಿಕೆ ಮತ್ತು ಅದಕ್ಕೆ ಸಮರ್ಥನೆ ತೀವ್ರ ವಿವಾದಕ್ಕೆ …

Read More »

ಕೊರೊನಾ ಬರಲ್ಲ ಅಂತಾ ಮೂಗಿನಲ್ಲಿ ʼನಿಂಬೆ ರಸʼ ಹಾಕಿಕೊಂಡ ಶಿಕ್ಷಕ, ಒದ್ದಾಡಿ ಮೃತಪಟ್ಟ..!

ರಾಯಚೂರು: ಮೂಗಿನಲ್ಲಿ ನಿಂಬೆ ಮೂರು ಮೂರು ಹನಿ ನಿಂಬೆ ರಸ ಹಾಕಿಕೊಂಡ್ರೆ ಕೊರೊನಾ ವೈರಸ್‌ ವಕ್ಕರಿಸೋಲ್ಲ ಅನ್ನೋ ವರದಿಗಳು ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಸದ್ದು ಮಾಡ್ತಿದೆ. ಆದ್ರೆ, ಆರೋಗ್ಯವಾಗಿದ್ದ ಶಿಕ್ಷಕರೊಬ್ರು ಇದನ್ನ ನಂಬಿ ಮೂಗಿನಲ್ಲಿ ನಿಂಬೆ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ. ಹೌದು, ರಾಯಚೂರು ಜಿಲ್ಲೆಯ ಸಿಂಧನೂರು ನಗರದ ನಟರಾಜ ಕಾಲನಿಯಲ್ಲಿ ಈ ಘಟನೆ ನಡೆದಿದ್ದು, ನಗರದ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ …

Read More »

ತಲಾ 10 ಕೆ.ಜಿ ಉಚಿತ ಅಕ್ಕಿ, ಬಡ ಕುಟುಂಬಗಳಿಗೆ ₹10,000 ಕೊಡಬೇಕು: ಪ್ರಧಾನಿಗೆ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾದಿಂದ ಜನರನ್ನ ರಕ್ಷಣೆ ಮಾಡಲು ಅಗತ್ಯವಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಸಲಹೆ ನೀಡಿದ ಬೆನ್ನಲ್ಲೇ, ಪ್ರಧಾನಿ ಮೋದಿಗೂ ಪತ್ರದ ಮೂಲಕ ಹಲವು ಸಲಹೆಗಳನ್ನ ನೀಡಿದ್ದಾರೆ. ಭಾರತ ಪ್ರತಿದಿನ 3.5 ಲಕ್ಷಕ್ಕೂ ಹೆಚ್ಚು ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸುತ್ತಿದೆ. ತಜ್ಞರು ಮೇ ಮಧ್ಯದ ವೇಳೆಗೆ ಪ್ರಕರಣಗಳು ಹೆಚ್ಚುವ ಮುನ್ಸೂಚನೆ ನೀಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 35 ಲಕ್ಷಕ್ಕೆ ತಲುಪಬಹುದು. ದೈನಂದಿನ ಪ್ರಕರಣಗಳು …

Read More »

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊರೊನಾ ಸೋಂಕಿನ ಭೀತಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊರೊನಾ ಸೋಂಕಿನ ಭೀತಿ ಎದುರಾಗಿದೆ. ಹೀಗಾಗಿ ಸೋಂಕು ಹರಡದಂತೆ ತಡೆಯಲು ಜೈಲಿನಲ್ಲಿ ಸುರಕ್ಷತೆಗೆ ಪೂರಕ ವ್ಯವಸ್ಥೆ ಮಾಡಲಾಗಿದೆ. ಕೈದಿಗಳಿಗೆ ಕೊರೊನಾ ನೆಗಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಪ್ರತಿದಿನ ಬರುವ ಕೈದಿಗಳಿಗೆ ಕೊರೊನಾ ಟೆಸ್ಟ್​ ಮಾಡಲಾಗ್ತಿದೆ. ಈವರೆಗೆ ಒಟ್ಟು 44 ಕೈದಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆದ್ರೆ ಬಹುತೇಕ ಕೈದಿಗಳಿಗೆ ಏಸಿಂಪ್ಟಮ್ಯಾಟಿಕ್ ಇದೆ. ಅಂದ್ರೆ ಅವರಿಗೆ ರೋಗಲಕ್ಷಣ ಕಾಣಿಸಿಕೊಂಡಿಲ್ಲ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟು 5,062 …

Read More »

ಅತ್ಯಾಚಾರಕ್ಕೆ ಯತ್ನ: ಸಂಬಂಧಿಯ ಮರ್ಮಾಂಗ ಕತ್ತರಿಸಿ ಹಂದಿಗಳಿಗೆ ಉಣಬಡಿಸಿದ ಸಂತ್ರಸ್ತೆಯ ಲವರ್​!​

ಬ್ರಾಸಿಲಿಯಾ: ಸೋದರಸಂಬಂಧಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಮರ್ಮಾಂಗ ಮತ್ತು ವೃಷಣಗಳನ್ನು ಕತ್ತರಿಸಿ ಕಾಡುಹಂದಿಗೆ ಆಹಾರವಾಗಿ ನೀಡಿರುವ ಘಟನೆ ಏಪ್ರಿಲ್​ 19ರಂದು ಬ್ರೆಜಿಲ್​ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 20 ವರ್ಷದ ಸೋದರಸಂಬಂಧಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವಿಷಯವೂ ಉತ್ತರ ಬ್ರೆಜಿಲಿಯನ್​ ಮುನ್ಸಿಪಾಲಿಟಿಯ ಒಲ್ಹಾಸ್​ ಡಿ ಔಗಾ ಪಟ್ಟಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು, 36 ವರ್ಷದ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಲಾಗಿದೆ. ಸೋದರಸಂಬಂಧಿ ಮನೆಯಲ್ಲಿ ಮಲಗಿದ್ದ ವೇಳೆ ಪಾನಮತ್ತ …

Read More »

ಕೊರೊನಾ ರೋಗಿಯನ್ನ ಕೊಲೆಗೈದಿದ್ದಾರೆಂದು ಫೇಕ್ ವಿಡಿಯೋ ಅಪ್ಲೋಡ್ ಮಾಡಿದ ಯುವಕನಿಂದ ಕ್ಷಮೆ ಯಾಚನೆ

ಬೆಂಗಳೂರು: ಕೊರೊನಾ ಸೋಂಕು ಪ್ರಕರಣಗಳ ಏರಿಕೆ ಜನರನ್ನ ಆತಂಕಕ್ಕೀಡುಮಾಡಿದೆ. ಇಂಥ ಹೊತ್ತಲ್ಲಿ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳನ್ನ ಹರಿಬಿಟ್ಟು ಜನರ ದಾರಿ ತಪ್ಪಿಸುತ್ತಿರೋದು ಬೆಳಕಿಗೆ ಬಂದಿದೆ. ಕೊರೊನಾ ಆಸ್ಪತ್ರೆಯೊಂದರಲ್ಲಿ ದುಡ್ಡಿಗಾಗಿ ರೋಗಿಯ ಕತ್ತುಹಿಸುಕು ಸಾಯಿಸಿದ್ದಾರೆ ಎನ್ನಲಾದ ವಿಡಿಯೋ, ಮತ್ತೊಂದು ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ರೋಗಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ವಿಡಿಯೋ ತುಣುಕು ಜೊತೆಗೆ ಯುವತಿಯೊಬ್ಬಳು ತನ್ನ ತಂದೆಯನ್ನ ಕಳೆದುಕೊಂಡು ರೋಧಿಸಿದ್ದ ವಿಡಿಯೋವನ್ನ ಸೇರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, …

Read More »

ರೈತನಿಗೆ ನೀನು ಸತ್ತು ಹೋಗಿ ಬಿಡುವುದು ಒಳ್ಳೆಯದು ಎಂದ್ರಾ ಉಮೇಶ್​ ಕತ್ತಿ? ಆಡಿಯೋ ವೈರಲ್

ಬೆಳಗಾವಿ: ರಾಜ್ಯ ಸರ್ಕಾರ ಪಡಿತರ ವಿತರಣೆಯಲ್ಲಿ 2 ಕೆ.ಜಿ. ಅಕ್ಕಿ ಕಡಿತಗೊಳಿಸಿರುವ ವಿಚಾರಕ್ಕೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್​ ಕತ್ತಿ ರೈತ ಸಂಘದ ಕಾರ್ಯಕರ್ತರೊಂದಿಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಸಚಿವರು ಮಾತನಾಡಿದ್ದರೆ ಎನ್ನಲಾದ ಆಡಿಯೋದಲ್ಲಿ ಗದಗ ಜಿಲ್ಲೆಯ ಕುರ್ತಕೋಟೆ ಗ್ರಾಮದ ನಿವಾಸಿ, ರೈತ ಸಂಘದ ಕಾರ್ಯಕರ್ತ ಈಶ್ವರ್ ಎಂಬುವರು ಪಡಿತರ ಕಡಿತ ಕುರಿತಂತೆ ಸಚಿವರಿಗೆ ಕರೆ ಮಾಡಿ ತರಾಟೆ ತೆಗೆದುಕೊಂಡಿದ್ದು, ಎರಡು …

Read More »

ಲಾಕ್‌ಡೌನ್: ಆಟೋ, ಟ್ಯಾಕ್ಸಿ ಇಲ್ಲ, 150 ಬಿಎಂಟಿಸಿ ಬಸ್ ಸಂಚಾರ

ಬೆಂಗಳೂರು: ಲಾಕ್‌ಡೌನ್ ಇದ್ದರೂ ಕಾರ್ಯನಿರ್ವಹಿಸುವ ಜನರ ಸಂಚಾರಕ್ಕೆ ಅನುಕೂಲ ಆಗುವಂತೆ 150 ಬಸ್‌ಗಳನ್ನು ರಸ್ತೆಗಳಿಸಲು ಬಿಎಂಟಿಸಿ ನಿರ್ಧರಿಸಿದೆ. ಬೆಳಿಗ್ಗೆ 6ರಿಂದ ರಾತ್ರಿ 7 ಗಂಟೆ ತನಕ ಈ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಕೆಂ‍ಪೇಗೌಡ ಬಸ್‌ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯಾಚರಣೆ ಮಾಡುವ 6 ಬಸ್‌ಗಳು ದಿನದ 24 ಗಂಟೆಯೂ ಕಾರ್ಯಾಚರಣೆ ಮಾಡಲಿವೆ ಎಂದು ಬಿಎಂಟಿಸಿ ತಿಳಿಸಿದೆ. ಸಾಮಾನ್ಯ ಬಸ್‌ಗಳು ಶಿವಾಜಿನಗರ, ಕೆಂಪೇಗೌಡ ಬಸ್ ನಿಲ್ದಾಣ, ಮಲ್ಲೇಶ್ವರ, ಹಂಪಿನಗರ, ಬನಶಂಕರಿ, …

Read More »

ಕರ್ನಾಟಕ ಲಾಕ್‌ಡೌನ್; ಜನರಿಗೆ ಮತ್ತೊಮ್ಮೆ ಮನವಿ ಮಾಡಿದ ಸಿಎಂ

ಬೆಂಗಳೂರು, ಏಪ್ರಿಲ್ 28: ಮಂಗಳವಾರ ರಾತ್ರಿಯಿಂದ ರಾಜ್ಯದಲ್ಲಿ ಹದಿನಾಲ್ಕು ದಿನಗಳ ಅವಧಿಯ ಲಾಕ್‌ಡೌನ್ ಆರಂಭವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ. ಕೊರೊನಾ ಸರಪಳಿಯನ್ನು ಮುರಿಯಲು ಎರಡು ವಾರಗಳ ಕಠಿಣ ಲಾಕ್‌ಡೌನ್ ಹೇರಲಾಗಿದೆ. ರಾಜ್ಯದ ಪ್ರತಿಯೊಬ್ಬರಿಗೂ ನಾನು ಕೇಳಿಕೊಳ್ಳುತ್ತೇನೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರಕ್ಕೆ ಬೆಂಬಲ ನೀಡಿ. ಮನೆಯೊಳಗೇ ಇರಿ. ನಾವೆಲ್ಲರೂ ಒಟ್ಟಾದರೆ ಕೊರೊನಾವನ್ನು ಸೋಲಿಸುವುದು ಸುಲಭವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ …

Read More »