Home / 2021 / ಏಪ್ರಿಲ್ (page 71)

Monthly Archives: ಏಪ್ರಿಲ್ 2021

ಏಪ್ರಿಲ್‌ 10ರಿಂದ ರಾಜ್ಯದಲ್ಲಿ ‘ಕೊರೊನಾ ಕರ್ಫ್ಯೂ’: ಸಿಎಂ ಬಿಎಸ್‌ವೈ

ಬೆಂಗಳೂರು: ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕಾರಣ ರಾಜಧಾನಿ ಬೆಂಗಳೂರು ನಗರ ಸೇರಿ ರಾಜ್ಯದ ಏಳು ಜಿಲ್ಲಾ ಕೇಂದ್ರ ಮತ್ತು ಮಣಿಪಾಲದಲ್ಲಿ ಏ. 10ರಿಂದ 20ರವರೆಗೆ ‘ಕೊರೊನಾ ಕರ್ಫ್ಯೂ’ (ರಾತ್ರಿ ಕರ್ಫ್ಯೂ) ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಗುರುವಾರ ಸಂಜೆ ವಿಡಿಯೊ ಸಂವಾದದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ‘ಬೆಂಗಳೂರು ನಗರ, ಮೈಸೂರು, ಮಂಗಳೂರು, ಕಲಬುರ್ಗಿ, ಬೀದರ್, ತುಮಕೂರು, ಉಡುಪಿ ನಗರದ ಜೊತೆಗೆ …

Read More »

ಲಾಕ್‌ಡೌನ್ ಭೀತಿ: ಪ್ರಮುಖ ನಗರಗಳನ್ನು ತೊರೆಯುತ್ತಿರುವ ವಲಸೆ ಕಾರ್ಮಿಕರು

ಅಹಮದಾಬಾದ್: ಗುಜರಾತ್‌ನಲ್ಲಿ ಮತ್ತೆ ಲಾಕ್‌ಡೌನ್ ಹೇರಬಹುದು ಎಂಬ ಭೀತಿಯಿಂದ ವಲಸೆ ಕಾರ್ಮಿಕರು ರಾಜ್ಯದಿಂದ ಹೊರನಡೆಯುತ್ತಿದ್ದಾರೆ. ಅಹಮದಾಬಾದ್ ಮತ್ತು ಸೂರತ್‌ನಲ್ಲಿ ನೆಲೆಸಿರುವ ಉತ್ತರ ಪ್ರದೇಶ ಮತ್ತು ಬಿಹಾರದ ವಲಸೆ ಕಾರ್ಮಿಕರು, ತಮ್ಮ ಊರುಗಳಿಗೆ ವಾಪಸಾಗುತ್ತಿದ್ದಾರೆ. ಎರಡೂ ನಗರಗಳಲ್ಲಿ ಕೋವಿಡ್‌ನ ಹೊಸ ಪ್ರಕರಣಗಳ ಸಂಖ್ಯೆ ತೀವ್ರಮಟ್ಟದಲ್ಲಿ ಏರಿಕೆಯಾದ ಕಾರಣ, ಲಾಕ್‌ಡೌನ್ ಏಕೆ ಹೇರಬಾರದು ಎಂದು ಗುಜರಾತ್ ಹೈಕೋರ್ಟ್ ಈಚೆಗೆ ಸರ್ಕಾರವನ್ನು ಕೇಳಿತ್ತು. ಇದರ ಬೆನ್ನಲ್ಲೇ ಲಾಕ್‌ಡೌನ್ ಹೇರಿಕೆಯಾಗುವ ಭೀತಿ ಎದುರಾಗಿದೆ. ಒಮ್ಮೆ ಲಾಕ್‌ಡೌನ್ …

Read More »

Covid-19 Karnataka Update: 50 ಸಾವಿರ ದಾಟಿದ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಸತತ ಮೂರನೇ ದಿನ ಕೂಡ ಆರು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 6,570 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 53,395ಕ್ಕೆ ತಲುಪಿದೆ. ಕಳೆದ ತಿಂಗಳು ರಾಜ್ಯದಲ್ಲಿ ಈ ವೇಳೆ ಕೇವಲ 6,815 ಸಕ್ರಿಯ ಪ್ರಕರಣಗಳಿದ್ದವು. ಬಳಿಕ ಹೊಸ ಪ್ರಕರಣಗಳು ಏರುಗತಿ ಪಡೆದುಕೊಂಡಿದ್ದು, ಈಗ ಕೇವಲ ಮೂರು ದಿನಗಳ ಅವಧಿಯಲ್ಲಿಯೇ 19,941 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ರಾಜ್ಯದ …

Read More »

ನೂತನ ಮರಳು ನೀತಿ ಶೀಘ್ರ: ಮುರುಗೇಶ ನಿರಾಣಿ

ಮಂಗಳೂರು: ‘ಸರ್ಕಾರವು ನೂತನ ಮರಳು ನೀತಿಯನ್ನು ಜಾರಿಗೆ ತರಲಿದ್ದು, ಇದರಲ್ಲಿ ಕರಾವಳಿ ಭಾಗಕ್ಕೆ ಪ್ರತ್ಯೇಕ ಅಧ್ಯಾಯ ಇರಲಿದೆ’ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಜ್ಞರ ಜೊತೆ ಚರ್ಚೆ ನಡೆಸಿ ಕರಡು ರೂಪಿಸಲಾಗುವುದು. ಬಳಿಕ ಜನಪ್ರತಿನಿಧಿಗಳು, ಸಾರ್ವಜನಿಕರ ಸಲಹೆ-ಸೂಚನೆಗಳನ್ನು ಸ್ವೀಕರಿಸಲಾಗುವುದು. ಪರಿಸರ ಹಾಗೂ ಅಭಿವೃದ್ಧಿ ಆಯಾಮಗಳನ್ನು ಪರಿಗಣಿಸಲಾಗುವುದು. ಇದರಲ್ಲಿ ₹10 ಲಕ್ಷಕ್ಕಿಂತ ಕಡಿಮೆ ವೆಚ್ಚದ ನಿರ್ಮಾಣಗಳಿಗೆ ಟನ್‌ಗೆ ಅಂದಾಜು …

Read More »

ಏಪ್ರಿಲ್ 10 ರಂದು ‘ಬೆಂಗಳೂರು ವಿವಿ’ ಪದವಿ ಪರೀಕ್ಷೆ ನಿಗದಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬೆಂಗಳೂರು ವಿಶ್ವ ವಿದ್ಯಾಲಯದ 1 ಮತ್ತು ಮೂರನೇ ವರ್ಷದ ಸ್ನಾತಕ ಪದ್ದತಿಯ ಬಿಕಾಂ, ಬಿಎ. ಬಿಎಸ್ಸಿ, ಬಿಬಿಎಂ, ಬಿಬಿಎ, ಬಿ ಹೆಚ್ ಎಂ ಹಾಗೂ ದೂರ ಶಿಕ್ಷಣ ಪರೀಕ್ಷೆಗಳು ಇದೇ ತಿಂಗಳ 10 ರಂದು ನಡೆಯಲಿದೆ. ಈ ಬಗ್ಗೆ ಬೆಂಗಳೂರು ವಿವಿ ಕುಲಸಚಿವರು ( ಮೌಲ್ಯಮಾಪನ) ಪ್ರಕಟಣೆ ಹೊರಡಿಸಿದ್ದು, ಇದೇ 7 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಸಾರಿಗೆ ನೌಕರರ ಮುಷ್ಕರ …

Read More »

CBSE 10, 12 ತರಗತಿ ಬೋರ್ಡ್‌ ಪರೀಕ್ಷೆಗಳು ರದ್ದು?

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಮಧ್ಯೆ ಸಿಬಿಎಸ್‌ಇ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನ ನಡೆಸಲು ಹೊರಟಿದೆ. ದಯವಿಟ್ಟು ಈ ಪರೀಕ್ಷೆಗಳನ್ನ ರದ್ದುಗೊಳಿಸಿ ಇಲ್ಲವೇ ಆನ್‌ಲೈನ್ ಮೋಡ್‌ʼನಲ್ಲಿ ನಡೆಸುವಂತೆ ಲಕ್ಷಾಂತರ ವಿದ್ಯಾರ್ಥಿಗಳು ಕೇಂದ್ರ ಸರ್ಕಾರವನ್ನ ಕೋರಿದ್ದಾರೆ.   ‘ಕ್ಯಾನ್ಸಿಲ್ಬೋರ್ಡೆಕ್ಸ್ 2021’ ಎಂಬ ಹ್ಯಾಶ್‌ಟ್ಯಾಗ್ ಕಳೆದ ಎರಡು ದಿನಗಳಿಂದ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ. ಆದ್ರೆ, ಪರೀಕ್ಷೆಯ ಸಮಯದಲ್ಲಿ ಎಲ್ಲಾ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಲಾಗುವುದರಿಂದ ಸಿಬಿಎಸ್‌ಇ 10, 12 …

Read More »

ರೌಡಿಯೇ ಬೇಕೆಂದು ತಾಳಿ ಕಟ್ಟಿಸಿಕೊಂಡ್ಳು – ಮದ್ವೆ ಬಳಿಕ ಮತ್ತೊಬ್ಬನೊಂದಿಗೆ ಮಂಚ ಏರಿದ್ಳು!

ಮಂಡ್ಯ: ಆಕೆಗೆ ರೌಡಿ ಶೀಟರ್ ಜೊತೆ ಲವ್ ಆಗಿತ್ತು. ಹೆತ್ತವರು ವಿರೋಧ ಮಾಡಿದ್ರಿಂದ ಮನೆ ಬಿಟ್ಟೋಗಿ ಮದುವೆಯಾಗಿದ್ದ ಆಕೆಗೆ 8 ವರ್ಷದ ಗಂಡು ಮಗುವೂ ಇತ್ತು. ಈ ನಡುವೆ ಗಂಡನ ಸ್ನೇಹಿತನೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಳು. ಮೊದಲೇ ಆಕೆಯ ಬಗ್ಗೆ ಸಂಶಯಗೊಂಡಿದ್ದ ಗಂಡನಿಗೆ ರೆಡ್ ಹ್ಯಾಂಡ್ ಆಗಿ ಪ್ರಿಯಕರನೊಂದಿಗೆ ಸಿಕ್ಕಿಬಿದ್ದಿದ್ದು, ಪ್ರಿಯಕರನ ಬುರುಡೆಯನ್ನು ಗಂಡ ಬಿಚ್ಚಿದ್ದಾನೆ. ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮ ಹರ್ಷಿತಾ ಶಾಲೆಯಲ್ಲಿ ಓದುವಾಗಲೇ ರೌಡಿ ಶೀಟರ್ ನಾಗೇಂದ್ರ …

Read More »

ಹೈಕಮಾಂಡ್ ಎಲ್ಲವನ್ನ ಗಮನಿಸುತ್ತಿದೆ: ಯತ್ನಾಳ್ ವಿರುದ್ಧ ರಾಘವೇಂದ್ರ ಕಿಡಿ

ಚಿಕ್ಕಮಗಳೂರು: ಯಡಿಯೂರಪ್ಪನವರು ನನ್ನ ತಂದೆ, ವಿಜಯೇಂದ್ರ ನನ್ನ ತಮ್ಮನೇ ಆಗಿದ್ದರೂ ಕೂಡ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಗಳು, ವಿಜಯೇಂದ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸಂಘಟನೆ ಕೆಲಸ ಮಾಡುತ್ತಿದ್ದಾರೆ. ವೈಯಕ್ತಿಕ ಅಲ್ಲದಿದ್ರು ಪಕ್ಷಕ್ಕೆ ಮುಜಗರವಾಗುವಂತಹ ಕೆಲಸ-ಕಾರ್ಯಗಳು ನಡೆಯುತ್ತಿದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ಸಮಯ-ಸಂದರ್ಭ ಬಂದಾಗ ಯಾರು-ಯಾವ ತೀರ್ಮಾನ ತೆಗೆದುಕೊಳ್ಳಬೇಕು ತೆಗೆದುಕೊಳ್ತಾರೆ ಎಂದು ಯತ್ನಾಳ್ ವಿರುದ್ಧ ಶಿವಮೊಗ್ಗ ಸಂಸದ ರಾಘವೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ವೀರಶೈವ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, …

Read More »

ಬೆಳಗಾವಿ ಸಬ ರಿಜಿಸ್ಟರ್ ಕಚೇರಿಯಲ್ಲಿ ಮತ್ತೆ ಲಂಚದ ಹಾವಳಿ ಸಂಕನ್ ಗೌಡ ಹಟಾವೋ ವಿಷ್ಣು ತೀರ್ಥ ಬುಲಾವೋ ಎಂದ ಜನತೆ

ಬೆಳಗಾವಿ: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಖಂಡಿಸಿ ವಕೀಲರು ಸಬ್ ರಿಜಿಸ್ಟ್ರಾರ್ ಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ದುಡ್ಡು ಕೊಟ್ಟರೆ ಮಾತ್ರ ಜನಸಾಮಾನ್ಯರಿಗೆ ಕೆಲಸ ಮಾಡಿಕೊಡಲಾಗುತ್ತಿದೆ. ಏಜೆಂಟ್ ಗಳ ಹಾವಳಿ ಮಿತಿ ಮೀರಿದ್ದು, ಅಧಿಕಾರಿಗಳು ವಕೀಲರಿಗೂ ಕ್ಯಾರೇ ಎನ್ನುತ್ತಿಲ್ಲ. 5-50 ಸಾವಿರ ರೂಪಾಯಿವರೆಗೆ ಲಂಚ ಪಡೆಯುತ್ತಿದ್ದಾರೆ ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸದಾಗಿ ವಿವಾಹವಾಗುವ ಜೋಡಿಗಳಿಗೂ ರಜಿಸ್ಟರ್ ಮಾಡಿಕೊಳ್ಳಲು 5 ಸಾವಿರ ಲಂಚಕ್ಕೆ …

Read More »

ನಮಗೆ ಲಿಂಗಾಯತ, ಮರಾಠಾ ಸೇರಿದಂತೆ ಎಲ್ಲಾ ಸಮುದಾಯದವರು ಒಂದೆ..: ಡಿ ಕೆ ಶಿವಕುಮಾರ್

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಡಿ ಕೆ ಶಿವಕುಮಾರ್ ಹೇಳಿಕೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ಜೊತೆಗೆ ಸಭೆ ಮಾಡುತ್ತೇನೆ. ಈಗಾಗಲೇ ರೈತ ನಾಯಕ ಬಾಬಾಗೌಡ ಪಾಟೀಲ್, ಸೇರಿದಂತೆ ಎಲ್ಲರಿಗೂ ಭೇಟಿ ಆಗುತ್ತಿದ್ದೇನೆ.. ಅನೇಕ ಧರ್ಮ ಪೀಠದ ಸ್ವಾಮೀಜಿಗಳಿಗೆ ಭೇಟಿ ಮಾಡಿದ್ದೇನೆ . ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಉತ್ತಮ ಪ್ರತಿಕ್ರಿಯೆ ಕೊಟ್ಟಿದ್ದಾರೆ.. ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ರೂ ಕೇಂದ್ರ ಸರ್ಕಾರ ಅವರು ಜೊತೆಗೆ ಮಾತನಾಡಿಲ್ಲ. ಹೀಗಾಗಿ ರೈತರ ಆಕ್ರೋಶ …

Read More »