Breaking News
Home / 2021 / ಏಪ್ರಿಲ್ (page 78)

Monthly Archives: ಏಪ್ರಿಲ್ 2021

ಚಿತ್ರಮಂದಿರಗಳು ಬಂದ್, ಶೂಟಿಂಗ್‌ಗೆ ಹೊಸ ಮಾರ್ಗಸೂಚಿ

ದೇಶದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಶುರುವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಒಂದು ಹಂತದಲ್ಲಿ ಕೋವಿಡ್ ನಿಯಂತ್ರಣದಲ್ಲಿ ಭಾರತ ಯಶಸ್ಸು ಕಂಡಿತ್ತು ಎಂದು ಹೇಳಲಾಗಿತ್ತು. ಇದೀಗ, ಮತ್ತೆ ದೇಶದಲ್ಲಿ ಕೊರೊನಾ ಸೋಂಕು ಹರಡುತ್ತಿವೆ. ಸದ್ಯ ಮಹಾರಾಷ್ಟ್ರದಲ್ಲಿ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಮಾಡುವ ಸುಳಿವು ಸಿಕ್ಕಿದೆ. ಇದರ ಮೊದಲ ಹಂತ ಎಂಬಂತೆ ಚಿತ್ರಮಂದಿರಗಳು, ರಂಗಮಂದಿರಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಶೂಟಿಂಗ್ ಮಾಡಲು ಷರತ್ತು ವಿಧಿಸಲಾಗಿದೆ.   …

Read More »

ಎಸ್‌ಎಸ್‌ಎಲ್ ಸಿ, ಪಿಯು ಪರೀಕ್ಷೆ ಸಿದ್ದತೆ ಪರಿಶೀಲನಾ ಸಭೆ: ಸಚಿವ ಸುರೇಶ್ ಕುಮಾರ್ ಭಾಗಿ

ಧಾರವಾಡ: ಕೋವಿಡ್ ಹಾವಳಿ‌ ಮಧ್ಯೆಯೂ ಕಳೆದ ವರ್ಷ ಎಸ್‌ಎಸ್‌ಎಲ್ ಸಿ, ಪಿಯು ಪರೀಕ್ಷೆ ನಡೆಸಿದಂತೆ ಈ ವರ್ಷ ನಿಗದಿಯಾಗಿರುವ ಪರೀಕ್ಷೆಗಳ ಯಶಸ್ವಿಯಾಗಿ ನಡೆಸಲು ಧಾರವಾಡದ ಡಯಟ್ ಸಭಾಂಗಣದಲ್ಲಿ ಇಂದು ಸಭೆ ನಡೆಸಲಾಗುತ್ತಿದೆ. ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು, ಬೆಳಗಾವಿ ವಿಭಾಗದ ಶೈಕ್ಷಣಿಕ ಜಿಲ್ಲೆಗಳ ಎಸ್‌ಎಸ್‌ಎಲ್ ಸಿ, ಪಿಯುಸಿ ಪರೀಕ್ಷಾ ಪೂರ್ವಸಿದ್ಧತಾ ಪರಿಶೀಲನೆ ಸಭೆ ನಡೆಸಿದರು. ಸಂಜೆವರೆಗೂ ಎಲ್ಲಾ ಒಂಭತ್ತು ಶೈಕ್ಷಣಿಕ ಜಿಲ್ಲೆಗಳಲ್ಲಿನ ಪರೀಕ್ಷಾ ಸಿದ್ದತೆ ಕುರಿತು …

Read More »

ಖಾಸಗಿ ವಾಹನಗಳು ವಸೂಲಿಗಿಳಿದರೆ ಕಾನೂನು ಕ್ರಮ : ಸಾರಿಗೆ ಆಯುಕ್ತರ ಎಚ್ಚರಿಕೆ

ಬೆಂಗಳೂರು,ಏ.6-ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ವಾಹನಗಳು ಎಲ್ಲಾ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಿದ್ದೇವೆ. ಒಂದು ವೇಳೆ ಯಾರಾದರೂ ಪರಿಸ್ಥಿತಿಯ ಲಾಭ ಪಡೆದು ಹೆಚ್ಚಿನ ದರ ವಸೂಲಿ ಮಾಡಲು ಮುಂದಾದರೆ ಅಂಥವರ ಮೇಲೂ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಸಾರಿಗೆ ಆಯುಕ್ತ ಶಿವಕುಮಾರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸಿ ಬಸ್‍ಗಳು ಕಾರ್ಯಾರಂಭ ಮಾಡದಿದ್ದರೆ, ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ಪರ್ಯಾಯ ಕ್ರಮ ಕೈಗೊಂಡಿದ್ದೇವೆ ಎಂದರು. …

Read More »

ನಾಳೆ ಮುಷ್ಕರ ನಡೆಸುವ ಸಾರಿಗೆ ನೌಕರರಿಗೆ ಎಸ್ಮಾ ಜಾರಿ; ಪರ್ಯಾಯ ವ್ಯವಸ್ಥೆಗೂ ಸಿದ್ಧತೆ: ಎಚ್ಚರಿಕೆ ನೀಡಿದ ಸರ್ಕಾರ

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಏ.7 ರಂದು ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರಿಗೆ ಸರ್ಕಾರ ಎಸ್ಮಾ ಎಚ್ಚರಿಕೆ ನೀಡಿದೆ. ಆರನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ, ಸಾರಿಗೆ ನೌಕರರೊಂದಿಗೆ ಮತ್ತೆ ಮಾತುಕತೆಯ ಪ್ರಶ್ನೆಯೂ ಇಲ್ಲ, ಮುಷ್ಕರಕ್ಕೆ ಮುಂದಾದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ,ಎಸ್ಮಾ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಷ್ಕರಕ್ಕೆ ಕರೆ …

Read More »

ಮತಗಟ್ಟೆಯಲ್ಲಿ ಅಭಿಮಾನಿಯ ಫೋನ್ ಕಿತ್ತುಕೊಂಡು ಟ್ರೋಲ್ ಗೆ ಗುರಿಯಾದ ತಮಿಳು ಸ್ಟಾರ್ ಅಜಿತ್!ವಿಡಿಯೋ

ಚೆನ್ನೈ: ಮತಗಟ್ಟೆ ಬಳಿ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದ ಮಾಸ್ಕ್ ಧರಿಸದ ಅಭಿಮಾನಿಯೊಬ್ಬರ ಫೋನ್ ನ್ನು ಕಾಲಿವುಡ್ ಸೂಪರ್ ಸ್ಟಾರ್ ಅಜಿತ್ ಕಸಿದುಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಚೆನ್ನೈ ಪಕ್ಕದಲ್ಲಿರುವ ತಿರುವಣ್ ಮಿಯೂರ್ ನ ಮತಗಟ್ಟೆಯೊಂದರ ಬಳಿ ಇಂದು ಬೆಳಗ್ಗೆ ಪತ್ನಿ ಶಾಲಿನಿ ಜೊತೆಗೆ ಮತದಾನ ಮಾಡಲು ವಿಜಯ್ ಬಂದಾಗ ಈ ಘಟನೆ ನಡೆದಿದೆ. ವಿಡಿಯೋ ದೃಶ್ಯಾವಳಿಗಳು ಇದೀಗ ವೈರಲ್ ಆಗಿವೆ. ಅಜಿತ್ ಅವರ ಒಪ್ಪಿಗೆ …

Read More »

ಜೊಯಿಡಾ ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ್‍ನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ

ಕಾರವಾರ: ಜೊಯಿಡಾ ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ್‍ನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಜೋಯಿಡಾದ ನಂದಿಗದ್ದಾ ಗ್ರಾಮದ ಗ್ರಾಮಪಂಚಾಯ್ತಿ ಅಧಿಕಾರಿ ರಾತ್ರಿ 8 ಗಂಟೆಯಾದರೂ ಕಚೇರಿ ಮುಂದೆ ಹಾರಾಡುತ್ತಿದ್ದ ರಾಷ್ಟ್ರಧ್ವಜವನ್ನು ಇಳಿಸದೆ ನಿರ್ಲಕ್ಷ್ಯದಿಂದ ತೆರಳಿದ್ದಾರೆ. ಈ ಘಟನೆ ಸ್ಥಳೀಯ ಜನರ ಗಮನಕ್ಕೆ ಬಂದಿದ್ದು ನಂತರ ಪಂಚಾಯ್ತಿ ಸಿಬ್ಬಂದಿ ರಾಷ್ಟ್ರಧ್ವಜವನ್ನು ಇಳಿಸಿದ್ದಾರೆ. ನಿಯಮದ ಪ್ರಕಾರ ಎಲ್ಲಾ ಗ್ರಾ.ಪಂಗಳಲ್ಲೂ ರಾಷ್ಟ್ರಧ್ವಜ ಬೆಳಗ್ಗೆ ಏರಿಸಿ ಸೂರ್ಯಾಸ್ತದ ವೇಳೆ ಇಳಿಸಬೇಕು. ಆದರೆ …

Read More »

ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ

ಕಲಬುರಗಿ: ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ ಮಾಡಿದ್ದಾರೆ. ಸಾರಿಗೆ ನೌಕರರ ಪ್ರತಿಭಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಯವಿಟ್ಟು ಕೊರೊನಾ ಸಂಕಷ್ಟದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ನೀತಿ ಸಂಹಿತೆಯಿಂದಾಗಿ ಬೇಡಿಕೆ ಈಡೇರಿಕೆಗೆ ಸಾಧ್ಯವಿಲ್ಲ. ಘೋಷಣೆ ಮಾಡುವ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು. ನೀತಿ ಸಂಹಿತೆ ಜಾರಿ ಇರೋದ್ರಿಂದ ಏನು ಹೇಳಲು ಆಗೋದಿಲ್ಲ. ಇಂದು ಸಾರಿಗೆ ನೌಕರರ ಜೊತೆ ಜೊತೆ …

Read More »

ಪ್ರತಿಭಟನೆಗೆ ಹೋದ್ರೆ ಸಾರಿಗೆ ಇಲಾಖೆ ಬೇರೆ ವ್ಯವಸ್ಥೆ ಮಾಡಲಿದೆ – ಬಸ್‍ಗೆ ಹಾನಿ ಮಾಡಿದ್ರೂ ಕಠಿಣ ಕ್ರಮ:ರವಿ ಕುಮಾರ್ ಸ್ಪಷ್ಟನೆ

ಬೆಂಗಳೂರು: ಸಾರಿಗೆ ನೌಕರರು ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಹೋಗಬಾರದು ಎಂದು ಮನವಿ ಮಾಡುತ್ತೇವೆ. 9 ಬೇಡಿಕೆಗಳಲ್ಲಿ ಒಂದು ಬೇಡಿಕೆ ಬಿಟ್ಟು ಎಲ್ಲಾ ಈಡೇರಿಸಿದ್ದೇವೆ ಎಂದು ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ. ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತುರ್ತು ಸಭೆ ಕರೆದ ಸಿಎಂ ಬಿಎಸ್ ಯಡಿಯೂರಪ್ಪ, ನಾಲ್ಕು ನಿಗಮಗಳ ಎಂಡಿಗಳ ಜೊತೆ ಕೃಷ್ಣಾದಲ್ಲಿ ಸಭೆ ನಡೆಸಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮುಂದಿನ ನಿರ್ಧಾರದ ಬಗ್ಗೆ ಚರ್ಚೆ ಮಾಡಲಾಗಿದೆ. …

Read More »

‘ಭಾರತ ನಿಮ್ಮನ್ನು ಎಣಿಕೆ ಮಾಡುತ್ತಿದೆ’ : ಮತದಾನ ಮಾಡಲು ರಾಹುಲ್, ಪ್ರಿಯಾಂಕಾ ಮನವಿ

ನವದೆಹಲಿ,ಏ.6- ಭಾರತ ನಿಮ್ಮನ್ನು ಎಣಿಕೆ ಮಾಡುತ್ತಿದೆ ಹೀಗಾಗಿ ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಎಂದು ವಿಧಾನಸಭಾ ಚುನಾವವಣೆ ನಡೆಯುತ್ತಿರುವ ರಾಜ್ಯಗಳ ಮತದಾರರಿಗೆ ರಾಹುಲ್‍ಗಾಂಧಿ ಮನವಿ ಮಾಡಿಕೊಂಡಿದ್ದಾರೆ. ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ರಾಹುಲ್ ಈ ರೀತಿಯ ಟ್ವೀಟ್ ಮಾಡಿದ್ದಾರೆ. ಇಂದು ನೀವು ಮತದಾನ ಮಾಡಿದರೆ ಮುಂದೆ ದೇಶ ಮುಂದೆ ನಿಮ್ಮನ್ನು ಎಣಿಕೆ ಮಾಡಲಿದೆ ಎಂದು ಅವರು ಮಾಡಿರುವ …

Read More »

402 PSI ಹುದ್ದೆಗಳಿಗೆ ಅರ್ಜಿ ಆಹ್ವಾನ ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಪತ್ರದ ಅಧಿಸೂಚನೆ ಸಂಖ್ಯೆ 08/ನೇಮಕಾತಿ-2/2021-22, ದಿನಾಂಕ :03-03-2021 ನ್ನು ಮುಂದುವರೆಸುತ್ತಾ ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 402 ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಆಹ್ವಾನ ಮಾಡಲಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ 01/04/2021 ಆನ್‌ಲೈನ್ ಅರ್ಜಿ ಸೃಜಿಸಲು ಕೊನೆಯ ದಿನಾಂಕ 03/05/2021 ಆನ್‌ಲೈನ್ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ …

Read More »