Breaking News
Home / 2021 / ಏಪ್ರಿಲ್ (page 82)

Monthly Archives: ಏಪ್ರಿಲ್ 2021

ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಜ್ವರದಿಂದ ಗುಣಮುಖರಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಣಿಪಾಲ್ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾದರು. ವೈದ್ಯರಾದ ಡಾ.ಸುದರ್ಶನ್ ಬಲ್ಲಾಳ್, ಸತ್ಯನಾರಾಯಣ ಮೈಸೂರು ಮಾಜಿ ಪ್ರಧಾನಿ ದೇವೇಗೌಡರಿಗೆ ಶುಭಕೋರಿದರು. ದೇವೇಗೌಡರು ಮಾ.31 ರಂದು ಆಸ್ಪತ್ರೆ ದಾಖಲಾಗಿದ್ದರು. ಕೊರೊನಾ ಸೋಂಕು ದೃಢಪಟ್ಟಿರುವ ಅವರ ಪತ್ನಿ ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೊನ್ನೆ ಮಾರ್ಚ್ 31ರಂದು ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮರಿಗೆ …

Read More »

ಸಿಡಿ ಯುವತಿ ತಂದೆಯ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಗಳ ಹೇಳಿಕೆ ಪರಿಗಣಿಸದಂತೆ ಸಿಡಿ ಯುವತಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ನನ್ನ ಮಗಳ ಹೇಳಿಕೆ ಪರಿಗಣಿಸಬೇಡಿ ಎಂದು 164 ಅನ್ನು ರದ್ದು ಮಾಡುವಂತೆ ಸಿಡಿ ಯುವತಿ ತಂದೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ನಡೆಸಿದೆ.ಸಿಆರ್ ಪಿಸಿ ಸೆ. 164 ಹೇಳಿಕೆ ಕೋರ್ಟ್ ನಲ್ಲಿದೆ, ಆರೋಪಪಟ್ಟಿ ಸಲ್ಲಿಕೆಯಾಗುವವರೆಗೆ ಹೇಳಿಕೆಯ ಪ್ರತಿ ಸಿಗುವುದಿಲ್ಲ. ಹೀಗಾಗಿ ಹೇಳಿಕೆ …

Read More »

ಸರ್ಕಾರಿ ಆಸ್ಪತ್ರೆಯಲ್ಲೇ GP ಸದಸ್ಯನ ಲವ್ವಿ ಡವ್ವಿ.. ಸಿಸಿಟಿವಿಯಲ್ಲಿ ಸೆರೆ…

ವಿಜಯಪುರ :ಸರ್ಕಾರಿ ಆಸ್ಪತ್ರೆಯಲ್ಲೇ ಗ್ರಾಮ ಪಂಚಾಯತಿ ಸದಸ್ಯನ ಲವ್ವಿ ಡವ್ವಿ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ನಿಂಬೆನಾಡಿನಲ್ಲಿ ನಡೆದಿದೆ‌. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಪ್ರಾಥಮಿಕ ಆಸ್ಪತ್ರೆಯ ವಾರ್ಡ್ ನಲ್ಲಿ ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯತ್ ಸದಸ್ಯ D.K. ಪೂಜಾರಿ ಲವ್ವಿ ಡವ್ವಿ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿಕೊಂಡು ಕಿಸ್ಸಿಂಗ್ ಹಾಗೂ ರೊಮ್ಯಾನ್ಸ್ ಮಾಡಿರುವ ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದಸ್ಯ ವಿರುದ್ಧ …

Read More »

ನಿಜವಾಗಿಯೂ ಸಂತ್ರಸ್ತ ನನ್ನ ಕಕ್ಷಿದಾರ: ರಮೇಶ್ ಜಾರಕಿಹೊಳಿ ಪರ ವಕೀಲ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಕಕ್ಷಿದಾರ ನಿಜವಾಗಿಯೂ ಸಂತ್ರಸ್ತ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್ ಹೇಳಿದ್ದಾರೆ. ಇಂದುಮಾತನಾಡುತ್ತಾ ಅತ್ಯಾಚಾರ ಕೇಸ್‍ನ ತನಿಖೆ ಸರಿಯಾಗಿ ತನಿಖೆ ಆಗ್ತಿಲ್ಲ. ಪೊಲೀಸ್ ಆಯುಕ್ತರಿಗೆ ಯುವತಿ ಬರೆದಿರುವ ಪತ್ರದ ಕುರಿತು ಪ್ರತಿಕ್ರಿಯಿಸಿ, ಶ್ಯಾಮ್ ಸುಂದರ್ ಆಕ್ಷೇಪ ವ್ಯಕ್ತಪಡಿಸಿದರು. ಯುವತಿ ಸುಳ್ಳು ಆರೋಪ ಮತ್ತು ಸುಳ್ಳು ದೂರು ಕೊಡ್ತಿದ್ದಾರೆ. ನಿಜವಾಗಿಯೂ ಸಂತ್ರಸ್ತ ನನ್ನ ಕಕ್ಷಿದಾರ ಎಂದು ತಿಳಿಸಿದ್ದಾರೆ. ಇದೊಂದು …

Read More »

ಮಕ್ಕಳ ಶೌಚಾಲಯ ಹೆಸರಿನಲ್ಲಿ ದುಡ್ಡು ತಿನ್ನುವ ಕೆಲಸ, ಕಾಮಗಾರಿಗೆ ಮುನ್ನವೇ ಹಣ ಬಿಡುಗಡೆ ಇದು ಬಿಕೆ ಕಂಗ್ರಾಳಿ ಗ್ರಾಮ ಪಂಚಾಯತಿ ಕಥೆ,

ಬೆಳಗಾವಿ: ಇವತ್ತು ಒಂದು ಅದ್ಭುತವಾದ ಕಥೆಯನ್ನ ನಾವು ಹೇಳ್ತೀವಿ ಇದೊಂದು ಗ್ರಾಮ ಪಂಚಾಯತಿ ಕಥೆ ಇದು ಬೆಳಗಾವಿಯ ಬಿಕೆ ಕಂಗ್ರಾಳಿ ಗ್ರಾಮ ಪಂಚಾಯತಿ ಕಥೆ, ನಮ್ಮ ರಾಜ್ಯದಲ್ಲಿ ಜಿಲ್ಲೆಯಲ್ಲಿ ಬ್ರಷ್ಟಾಚಾರದ ಕಥೆ ಗಳನ್ನಾ ಸುಮಾರು ಕೆಳಿದ್ದಿವಿ, ಹಾಗೂ ನಮ್ಮ ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಮಕ್ಕಳು ಯಾಕೆ ಬರಲ್ಲ ಅನ್ನೋದು ಕೂಡ ನಮ್ಮ ಈ ಸ್ಟೋರಿಗೆ ನಾವು ಹೇಳುವ ಕಥೆಗೂ ಲಿಂಕ್ ಇದೆ. ಜನ ಇವಾಗ ಕೆಲಸ ಮಾಡಿದ ಮೇಲೆ ದುಡ್ಡು …

Read More »

ಸಿಡಿ ಯುವತಿ ತಾಯಿಯ ಆರೋಗ್ಯದಲ್ಲಿ ಏರುಪೇರು

ವಿಜಯಪುರ: ಸಿಡಿ ಪ್ರಕರಣದ ಸಂತ್ರಸ್ತ ಯುವತಿಯ ತಾಯಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆದುಕೊಂಡು ಬರಲಾಗಿದೆ. ಸಿಡಿ ಯುವತಿ ತಾಯಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರೋಗ್ಯದಲ್ಲಿ ಏರಿಪೇರಾಗಿದ್ದು, ಕುಟುಂಬದವರು ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆದುಕೊಂಡು ಬಂದಿದ್ದಾರೆ ಎಂದು ತಿಳಿದು ಬಂದಿದೆ.   ಕೈ-ಕಾಲುಬಾವು ಬಂದಿದ್ದು ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾದ ಕಾರಣ ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಕಿರಿಯ ಪುತ್ರ ಕಾರಿನಲ್ಲಿ ವಿಜಯಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. …

Read More »

ರಮೇಶ್ ಜಾರಕಿಹೊಳಿ ಕಾರು ಚಾಲಕ, ಅಡುಗೆ ಭಟ್ಟರಿಗೂ ಕೊರೊನಾ ದೃಢ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಬೆನ್ನಲ್ಲೇ ಅವರ ಜೊತೆಗಿದ್ದವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಗೋಕಾಕ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಡಾ.ರವೀದ್ರ, ರಮೇಶ್ ಜಾರಕಿಹೊಳಿ ಅವರ ಕಾರು ಚಾಲಕ ಹಾಗೂ ಅಡುಗೆ ಭಟ್ಟರಿಗೆ ಕೊರೊನಾ ಸೋಂಕು ತಗುಲಿತ್ತು. ಅವರಿಂದಲೇ ರಮೇಶ್ ಅವರಿಗೂ ಸೋಂಕು ಹರಡಿರುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ನಿನ್ನೆ ಸಂಜೆ ಗೋಕಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ …

Read More »

ರಮೇಶ್ ಜಾರಕಿಹೊಳಿಗೆ ಕೋವಿಡ್ ಪಾಸಿಟಿವ್ ಹಿನ್ನೆಲೆ,

  ಗೋಕಾಕ ತಾಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಮಾಧ್ಯಮಗಳಿಗೆ ಹೇಳಿಕೆ, ಗುರುವಾರ ರಾತ್ರಿ ಅವರು ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ರಮೇಶ್ ಜಾರಕಿಹೊಳಿ ಬಂದಿದ್ರು, ನಿನ್ನೆ ರಾತ್ರಿ ಅವರನ್ನ ಕೋವಿಡ್ ಚಕ್ ಅಪ್ ಗೆ ಒಳಪಡಿಸಲಾಯ್ತು, ಶುಗರ್ ಮತ್ತು ಬಿಪಿ ಹೆಚ್ಚಾಗಿದ್ದರಿಂದ ಅವರನ್ನ ಐಸಿಯೂನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದೆವೆ, ಅವರು ಇನ್ನೂ ಮೂರು ನಾಲ್ಕು ದಿನ ಅವರು ಐಸಿಯೂ ನಲ್ಲಿ ಇರಬೇಕಾಗುತ್ತೆ, ಅವರು ಮಹಾರಾಷ್ಟ್ರ ಹಾಗೂ ಬೆಂಗಳೂರಿಗೆ ಹೋಗಿ …

Read More »

ಮಗನ ಫೋಟೋ ಇಟ್ಕೊಂಡು ಯುವರತ್ನ ಸಿನಿಮಾ ವೀಕ್ಷಣೆ

ಮೈಸೂರು: ನಾಲ್ಕು ತಿಂಗಳ ಹಿಂದೆ ಮಗನನ್ನು ಕಳೆದುಕೊಂಡು ದುಃಖದ ಮಡುವಿನಲ್ಲಿದ್ದ ಕುಟುಂಬ ಇಂದು ಮಗನ ಫೋಟೋ ಇಟ್ಟುಕೊಂಡೇ ಯುವರತ್ನ ಸಿನಿಮಾ ವೀಕ್ಷಿಸುವ ಮೂಲಕ ಗಮನ ಸೆಳೆದಿದೆ. ನಗರದ ಮುರಳಿಧರ್ ಅವರ ಮಗ ಹರಿಕೃಷ್ಣನ್ ಮೂರು ತಿಂಗಳ ಹಿಂದೆ ಅಕಾಲಿಕ ನಿಧನರಾದ್ದಾರೆ. ಹರಿಕೃಷ್ಣನ್ ಪುನೀತ್ ರಾಜ್‍ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ. ಅಲ್ಲದೆ ಯುವರತ್ನ ಸಿನಿಮಾ ನೋಡಬೇಕೆಂದು ಮಹದಾಸೆಯಿಂದ ಕಾಯುತ್ತಿದ್ದ. ಆದರೆ ಯುವರತ್ನ ಸಿನಿಮಾ ರಿಲೀಸ್‍ಗೂ ಮುನ್ನ ಸಾವನಪ್ಪಿದ್ದಾರೆ. ಈಜಲು ಹೋಗಿ ನೀರಲ್ಲಿ …

Read More »

5 ಲಕ್ಷ ಬೆಲೆಯ ಅಕ್ರಮ ಗೋವಾ ಮದ್ಯ ತುಂಬಿದ ಲಾರಿ ಪಲ್ಟಿ- ಚಾಲಕ ಪರಾರಿ

ಕಾರವಾರ: ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ಲಾರಿ ಪಲ್ಟಿಯಾಗಿದ್ದು, ಚಾಲಕ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಡ್ಲೂರು ಗ್ರಾಮದ ಬಳಿ ಇಂದು ಸಂಜೆ ನಡೆದಿದೆ. ಗೋವಾ ಮೂಲಕ ಕಾರವಾರ ಮಾರ್ಗವಾಗಿ ಹುಬ್ಬಳ್ಳಿ ಕಡೆ ಲಾರಿ ಚಲಿಸುತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಪರವಾನಿಗೆ ಇಲ್ಲದ ಗೋವಾ ಮದ್ಯ ರಸ್ತೆಯಲ್ಲೇ ಬಿದ್ದಿದೆ. ಈ ವೇಳೆ ಚಾಲಕ ಹೆದರಿ ಪರಾರಿಯಾಗಿದ್ದಾನೆ. ಒಂದು …

Read More »