Breaking News

Monthly Archives: ಏಪ್ರಿಲ್ 2021

ನ್ಯಾಯಾಧೀಶರು ಸಿಟ್ಟಾಗಿದ್ದು ಕುಮಾರಸ್ವಾಮಿ ವಿರುದ್ಧ ಬಂಧನ ವಾರಂಟ್ ಹೊರಡಿಸುವುದಾಗಿ ಎಚ್ಚರಿಕೆ

ರಾಮನಗರ: ನ್ಯಾಯಾಲಯದ ಎಚ್ಚರಿಕೆ ನಡುವೆಯೂ ಮಾಜಿ ಮುಖ್ಯಮಂತ್ರಿ ಎಚ್.ಡಿ.‌ಕುಮಾರಸ್ವಾಮಿ ಭಾನುವಾರ ರಾತ್ರಿ‌ ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾದರು. ಕೆಲವು ದಿನಗಳ ಹಿಂದಷ್ಟೇ ಕುಮಾರಸ್ವಾಮಿ ಬೆಂಗಳೂರಿನ ನ್ಯಾಯಾಲಯವೊಂದರಲ್ಲಿ ಪ್ರಕರಣವೊಂದರ ವಿಚಾರಣೆಗೆ ಗೈರಾಗಿದ್ದರು. ಎಚ್.ಡಿ. ದೇವೇಗೌಡರಿಗೆ ಕೋವಿಡ್ ಸೋಂಕು ತಗುಲಿದ ಕಾರಣ ಕುಮಾರಸ್ವಾಮಿ ಕ್ವಾರಂಟೈನ್ ಆಗಿದ್ದು, ಈ ಹಿನ್ನೆಲೆಯಲ್ಲಿ ಅವರು‌ ನ್ಯಾಯಾಲಯಕ್ಕೆ ಬಂದಿಲ್ಲ ಎಂದು ಎಚ್ ಡಿಕೆ ಪರ ವಕೀಲರು‌ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು.   ಇದಕ್ಕೆ ನ್ಯಾಯಾಧೀಶರು ಸಿಟ್ಟಾಗಿದ್ದು, …

Read More »

ರಾಜ್ಯದಲ್ಲಿ 4,553 ಹೊಸ ಸೋಂಕು ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ಸತತ ಐದನೇ ದಿನ ಕೂಡ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 4,553 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 39,092ಕ್ಕೆ ತಲುಪಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, 7 ಜಿಲ್ಲೆಗಳಲ್ಲಿ ಮೂರಂಕಿ ತಲುಪಿದೆ. ಬೆಂಗಳೂರಿನಲ್ಲಿ ಮತ್ತೆ 2,787 ಮಂದಿ ಸೋಂಕಿತರಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.47 ಲಕ್ಷ ದಾಟಿದೆ. ಮೈಸೂರು (260), ಕಲಬುರ್ಗಿ …

Read More »

ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಯಳ್ಳೂರ ಧಾಮನೆ, ಮಚ್ಚೆ, ಪೀರಣವಾಡಿ,ಮಜಗಾಂವ ಸೇರಿದಂತೆ ವಿವಿಧ ನಗರ ಬಡಾವಣೆಗಳಲ್ಲಿ ಇಂದು ಲೋಕಸಭಾ ಉಪಚುನಾವಣಾ ಪ್ರಚಾರ

ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಯಳ್ಳೂರ ಧಾಮನೆ, ಮಚ್ಚೆ, ಪೀರಣವಾಡಿ,ಮಜಗಾಂವ ಸೇರಿದಂತೆ ವಿವಿಧ ನಗರ ಬಡಾವಣೆಗಳಲ್ಲಿ ಇಂದು ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಲಾಯಿತು. ಇದೆ ಸಂದರ್ಭದಲ್ಲಿ ಶಿವಾಜಿ ಮಹಾರಾಜ, ಡಾ.ಬಿ.ಆರ್.ಅಂಬೇಡ್ಕರ್, ಸಂಗೋಳಿ ರಾಯಣ್ಣ ಪ್ರತಿಮೆಗಳಿಗೆ ಹೂವು ಮಾಲೆ ಹಾಕಿ ಗೌರವಿಸಲಾಯಿತು ಮತ್ತು ಪೀರಣವಾಡಿ ದರ್ಗಾಗೆ ಭೆಟ್ಟಿ ನೀಡಿ ದರ್ಶನ ಪಡೆಯಲಾಯಿತು. “ಕೇವಲ ಮಾತನಾಡುವುದರಿಂದ ರಾಮರಾಜ್ಯ ನಿರ್ಮಾಣವಾಗುವುದಿಲ್ಲ. ಪ್ರತಿ ಹಳ್ಳಿಗಳ ಅಭಿವೃದ್ಧಿಯಾದಾಗ ಮಾತ್ರ ರಾಮರಾಜ್ಯ ನಿರ್ಮಾಣವಾಗಲು ಸಾಧ್ಯ. ಸಂಸದರು ಪ್ರತಿ …

Read More »

ಪ್ರಧಾನಿ ಮೋದಿ ಬಳಿ ಸೆಲೆಬ್ರಿಟಿಗಳ ಬರ್ತ್ ​ಡೇ ವಿಶ್ ಮಾಡಲು ಸಮಯವಿದೆ, ರೈತರಿಗಾಗಿ ಸಮಯವಿಲ್ಲ: ಸತೀಶ್​ ಜಾರಕಿಹೊಳಿ

ಬೆಳಗಾವಿ: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಯಳ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಶುರುವಾಗಿದೆ. ಸತೀಶ್ ಜಾರಕಿಹೊಳಿ ಮತಯಾಚನೆ ಕೈಗೊಂಡಿದ್ದಾರೆ. ಮರಾಠಾ ಸಮುದಾಯ ಓಲೈಕೆಗೆ ಕಾಂಗ್ರೆಸ್ ಕಸರತ್ತು ಮಾಡಿದ್ದು ಕೇಸರಿ ಪೇಟ ಧರಿಸಿ ಸತೀಶ್ ಜಾರಕಿಹೊಳಿ ಮತಯಾಚನೆ ಕೈಗೊಂಡಿದ್ದಾರೆ. ಮರಾಠಿ ಭಾಷಿಗರೇ ಹೆಚ್ಚಾಗಿರುವ ಯಳ್ಳೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ. ಮತ ಪ್ರಚಾರದಲ್ಲಿ ಸತೀಶ್ ಜಾರಕಿಹೊಳಿ‌ ಹಿಂದಿ ಭಾಷೆಯಲ್ಲಿ ಭಾಷಣ ಮಾಡಿದ್ದಾರೆ. ಪೆಟ್ರೋಲ್​, ಡೀಸೆಲ್​ ಜೊತೆಗೆ …

Read More »

ರಾಮ ಮಂದಿರ ನಿರ್ಮಾಣದಿಂದ ರಾಮರಾಜ್ಯ ಆಗಲ್ಲ, ರೈತರ ಬಳಿ ಬರಲು ಮೋದಿಗೆ ಸಮಯ ಇಲ್ಲ : ಸತೀಶ್ ಜಾರಕಿಹೊಳಿ ವಾಗ್ಧಾಳಿ

ಬೆಳಗಾವಿ : ಪ್ರತಿಭಟನೆ ನಡೆಸುತ್ತಿರುವ ರೈತರ ಬಳಿ ಇದುವರೆಗೂ ಪ್ರಧಾನಿ ಮೋದಿ ಭೇಟಿ ನೀಡಿಲ್ಲ, ಸೆಲೆಬ್ರಿಟಿಗಳ ಬರ್ಥ್ ಡೇ ಗೆ ವಿಶ್ ಮಾಡಲು ಸಮಯ ಇದೆ, ಆದರೆ ರೈತರ ಬಳಿ ಬರಲು ಪ್ರಧಾನಿ ಮೋದಿಗೆ ಸಮಯ ಇಲ್ಲ ಎಂದು ‘ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಏಪ್ರಿಲ್ 17 ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಯಳ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಶುರುವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ …

Read More »

ಸಿಡಿ ಪ್ರಕರಣ : ಕಾಂಗ್ರೆಸ್‍ನ ಮಾಜಿ ಶಾಸಕರಿಬ್ಬರಿಗೆ ಎಸ್‍ಐಟಿ ನೋಟೀಸ್..!

ಬೆಂಗಳೂರು,ಏ.4-ದಿನಕ್ಕೊಂದು ವಿಚಿತ್ರ ತಿರುವು ಪಡೆಯುತ್ತಿರುವ ಸಿ.ಡಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕಾಂಗ್ರೆಸ್‍ನ ಇಬ್ಬರು ಮಾಜಿ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಎಸ್‍ಐಟಿ ನಿರ್ಧರಿಸಿದೆ. ಸಿ.ಡಿ ಬಹಿರಂಗವಾದ ಬಳಿಕ ಚಿತ್ರ,ವಿಚಿತ್ರ ತಿರುವುಗಳು ಪಡೆಯುತ್ತಿದ್ದು, ಒಂದಷ್ಟು ದಿನ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರ ಸುತ್ತಲೇ ಆರೋಪ-ಪ್ರತ್ಯಾರೋಪಗಳು ಕೇಳಿ ಬಂದಿದ್ದವು. ಈ ಹೊಸದಾಗಿ ಕಾಂಗ್ರೆಸ್‍ನ ಇಬ್ಬರು ಮಾಜಿ ಶಾಸಕರ ಹೆಸರುಗಳು ತಳುಕು ಹಾಕಿಕೊಂಡಿವೆ. ಹೀಗಾಗಿ ಸಿ.ಡಿ ಪ್ರಕರಣ ಮತ್ತೊಂದು ರೀತಿಯ ತಿರುವು ಪಡೆಯುತ್ತಿದೆ. …

Read More »

ಸ್ವಂತ ಜಮೀನಿಗೂ ಸರ್ಕಾರದಿಂದ ಅನುದಾನ; ಫಾರ್ಮ್ ಹೌಸ್ ಅಭಿವೃದ್ಧಿಗೆ ಕೋಟ್ಯಂತರ ರೂ. ಬಿಡುಗಡೆ; ಬಿಎಸ್ ವೈ ವಿರುದ್ಧ ಶಾಸಕನ ಗಂಭೀರ ಆರೋಪ

ಮೈಸೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪನವರ ಕುಟುಂಬ ರಾಜಕಾರಣ ನಡೆಯುತ್ತಿದೆ. ತಮ್ಮ ಕುಟುಂಬದವರಿಗಾದರೆ ಹಣ ಕೇಳಿದ ತಕ್ಷಣ ಅನುದಾನವನ್ನೇ ಬಿಡುಗಡೆ ಮಾಡುತ್ತಾರೆ. ಆದರೆ ಕ್ಷೇತ್ರದ ಅಭಿವೃದ್ಧಿಗೆ ಕೇಳಿದರೆ ಹಣವೇ ಇಲ್ಲ ಎನ್ನುತ್ತಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಶಾಸಕ ಹೆಚ್.ಪಿ.ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಂತ ಜಮೀನಿನ ಕೆಲಸಕ್ಕೂ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಸಿಎಂ ಬಿ ಎಸ್ ವೈ ತಂಗಿಯ ಪುತ್ರ ಅಶೋಕ್ ಅವರದ್ದು …

Read More »

ಸಾಂಬ್ರಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿಸಭೆಯನ್ನು ಏರ್ಪಡಿಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು.

ಸಾಂಬ್ರಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಏರ್ಪಡಿಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು. ಸತೀಶಣ್ಣನವರನ್ನು ಬೆಂಬಲಿಸುವ ಮೂಲಕ ಬೆಳಗಾವಿಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೈಜೊಡಿಸೋಣ, ನಾವೆಲ್ಲರೂ ಒಗ್ಗಟ್ಟಿನ ಮಂತ್ರದೊಂದಿಗೆ ಸತೀಶಣ್ಣನವರನ್ನು ಲೋಕಸಭೆಗೆ ಆಯ್ಕೆ ಮಾಡೋಣ. ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಮುಖಂಡರು, ಶ್ರೀ ಎಮ್. ಬಿ. ಪಾಟೀಲ ಅಣ್ಣ, ಗಣೇಶ ಹುಕ್ಕೇರಿ, ರಾಜು ಸೇಠ್, ಸಿ ಸಿ ಪಾಟೀಲ …

Read More »

ಬಿಜೆಪಿ ಸರ್ಕಾರ ಬಂದ ಮೇಲೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಒಂದು ಪೈಸೆ ಕೊಡ್ತಿಲ್ಲ.: ಯತೀಂದ್ರ ಸಿದ್ದರಾಮಯ್ಯ

ಮೈಸೂರು:ಬಿಜೆಪಿ ಸರ್ಕಾರ ಬಂದ ಮೇಲೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಒಂದು ಪೈಸೆ ಕೊಡ್ತಿಲ್ಲ. ಎಷ್ಟೇ ಪತ್ರ ಬರೆದರೂ ಹಣ ಕೊಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕ್ಷೇತ್ರದಲ್ಲಿ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಯತೀಂದ್ರ, ಚುನಾವಣೆ ಸಮಯದಲ್ಲಿ ಕೊಟ್ಟ ಭರವಸೆಗಳನ್ನ ಈಡೇರಿಸಲು ಆಗ್ತಿಲ್ಲ. ರಸ್ತೆ, ಚರಂಡಿ ಕಾಮಗಾರಿಗೇ ಇವರು ಹಣ ಕೊಡುತ್ತಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ರಸ್ತೆಗಳು ನಡೆಯುತ್ತವೆ. ಹೀಗಾಗಿ ನಾನು …

Read More »

ಸಪ್ಲಾಯರ್ ಕೆಲಸ ಮಾಡಿಲ್ಲ. ಹೀಗಾಗಿ ಸಪ್ಲೈಯರ್ ಗಳಿಂದ ನಾನು ಏನನ್ನೂ ಕಲಿಯಬೇಕಿಲ್ಲ ಎಂದು ಕಿಡಿ‌ ಕಾರಿದ ಯತ್ನಾಳ

ವಿಜಯಪುರ: ಮಂತ್ರಿಯಾಗಲು, ಎಂಎಲ್ ಸಿ ಆಗಲು ಅಶ್ಲೀಲ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾದುದು ಏನೂ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಮತ್ತೆ ಹರಿ ಹಾಯ್ದಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು.   ಮಂತ್ರಿ ಆಗಲು ನಾನು ಯಾರಿಗೂ …

Read More »