Breaking News
Home / 2021 / ಏಪ್ರಿಲ್ (page 9)

Monthly Archives: ಏಪ್ರಿಲ್ 2021

ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿ ಅಂತ್ಯಕ್ರಿಯೆ

ಬ್ಯಾಡಗಿ: ಕೊರೊನಾ ರೋಗದಿಂದ ಮೃತಪಟ್ಟ ಹಿಂದೂ ಯುವಕನೊಬ್ಬನ ಅಂತ್ಯಕ್ರಿಯೆಯನ್ನು ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ನಾಲ್ವರು ನೆರವೇರಿಸಿ ಮಾನವೀಯತೆ ಹಾಗೂ ಸೌಹಾರ್ದತೆ ತೋರಿದ ಘಟನೆ ತಾಲೂಕಿನ ಖುರ್ದವೀರಾಪುರದಲ್ಲಿ ಸೋಮವಾರ ನಡೆದಿದೆ. ಖುರ್ದವೀರಾಪುರದ ಶಿವಪ್ಪ ಮಾರ್ತಾಂಡಪ್ಪ ಕುಮ್ಮೂರು (ಜೋಗಿಹಳ್ಳಿ)(45) ಕಳೆದ ಹಲವು ವರ್ಷದಿಂದ ಪಾವಗಡದಲ್ಲಿ ವಾಸವಾಗಿದ್ದ. ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಈತ ಪತ್ನಿ ಸೇರಿದಂತೆ ಕುಟುಂಬದ ಇನ್ನಿತರ ಸದಸ್ಯರನ್ನು ಬಿಟ್ಟು ರಾಣೆಬೆನ್ನೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ. ಬಳಿಕ ಕೊರೊನಾ ಪರೀಕ್ಷೆ …

Read More »

ಸಿರಗುಪ್ಪ ಬಳಿ ಕಾರು- ಲಾರಿ ನಡುವೆ ಭೀಕರ ಅಪಘಾತ: ಚಿಂಚೋಳಿಯ ನಾಲ್ವರ ಸಾವು

ಚಿಂಚೋಳಿ(ಕಲಬುರ್ಗಿ ಜಿಲ್ಲೆ): ಕೋವಿಡ್ ನಿಯಂತ್ರಣಕ್ಕಾಗಿ ಜಾರಿ ಮಾಡಿದ ಲಾಕ್‌ಡೌನ್ ಕಾರಣ ಸ್ವಗ್ರಾಮಕ್ಕೆ ಬರುವಾಗ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಸುಕಿನ 1.45ರ ಸುಮಾರಿಗೆ ನಡೆದಿದೆ. ಮೃತರು ಚಿಂಚೋಳಿ ತಾಲ್ಲೂಕಿನ ಚಿಮ್ಮಾಈದಲಾಯಿ ಮತ್ತು ಕೊರಡಂಪಳ್ಳಿ ಗ್ರಾಮದವರಾಗಿದ್ದಾರೆ. ಲಾಕ್‌ಡೌನ್ ಜಾರಿಯಿಂದಾಗಿ ಬೆಂಗಳೂರಿನಿಂದ ಕಾರಿನಲ್ಲಿ ಬರುವಾಗ ಲಾರಿ ಗುದ್ದಿದೆ ಆಗ ಬಳ್ಳಾರಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ (ತಂದೆ) ಬಸವರಾಜ ಭೀಮರಾವ ಬೆಳ್ಳೂರು(52), …

Read More »

ಅಘೋಷಿತ ಲಾಕ್​ಡೌನ್ ವೇಳೆಯೂ ಬಿಎಂಟಿಸಿ ಬಸ್ ಸಂಚಾರಕ್ಕೆ ಅನುಮತಿ; ಇವರಷ್ಟೇ ಮಾತ್ರ ಪ್ರಯಾಣಿಸಬಹುದು?

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ 14 ದಿನಗಳ ಕಾಲ ರಾಜ್ಯದಲ್ಲಿ ಅಘೋಷಿತ ಲಾಕ್​ಡೌನ್ ಘೋಷಣೆ ಮಾಡಿದೆ. ಈ ವೇಳೆ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಈ ವೇಳೆ ಎಲ್ಲ ಸಾರಿಗೆ ಓಡಾಟವನ್ನು ನಿಷೇಧಿಸಲಾಗಿದೆ. ಆದರೆ, ಕೆಲವು ನಿರ್ದಿಷ್ಟ ಉದ್ಯೋಗಿಗಳ ಓಡಾಟದ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಬೆಳಗ್ಗೆ 6 ರಿಂದ ಸಂಜೆ 7ರವರೆಗೆ ಬಿಎಂಟಿಸಿ ಬಸ್ …

Read More »

ಅಘೋಷಿತ ಲಾಕ್​ಡೌನ್ ವೇಳೆ ಏನಿರುತ್ತೆ, ಏನಿರಲ್ಲ, ನಿಯಮಗಳನ್ನು ವಿವರಿಸಿದ ಪೊಲೀಸ್ ಕಮಿಷನರ್ ಕಮಲ ಪಂಥ್

ಬೆಂಗಳೂರು: ಕರ್ನಾಟಕ ಸರ್ಕಾರ ಆದೇಶ ಹೊರಡಿಸಿರುವ ಪ್ರಕಾರ ಇವತ್ತು ರಾತ್ರಿ 9 ಗಂಟೆಯಿಂದ ಹೊಸ ಗೈಡ್ ಲೈನ್ಸ್ ಜಾರಿಯಲ್ಲಿ ಇರುತ್ತೆ. ಈ ಮಾರ್ಗಸೂಚಿ ಪ್ರಕಾರ, ಬೆಳಗ್ಗೆ 6 ಗಂಟೆಯಿಂದ ಹತ್ತು ಗಂಟೆವರೆಗೂ ಅಗತ್ಯ ವಸ್ತುಗಳು ಖರೀದಿಗೆ ಅವಕಾಶ ನೀಡಲಾಗಿದೆ. ಹೋಮ್ ಡಿಲಿವರಿಗೆ ಅವಕಾಶ, ಇ ಕಾಮರ್ಸ್ ಗೆ ಅವಕಾಶ ಕಲ್ಪಿಸಲಾಗಿದೆ. ಬಾರ್, ಪಬ್​ಗಳಲ್ಲಿ ಮದ್ಯ ಪಾರ್ಸಲ್ ಗೆ ಅವಕಾಶ ಇದೆ. ಹತ್ತು ಗಂಟೆಯ ಬಳಿಕ ಯಾವುದೇ ಅಂಗಡಿ ಓಪನ್ ಇರಲ್ಲ. …

Read More »

ಇಡೀ ದಿನ ಬಾರ್ ಓಪನ್ ಇರ್ತಾವೆ ಎಂದೇ ಹೇಳಲಾಗಿತ್ತು. ಆದ್ರೇ.. ಇಡೀ ದಿನ ಓಪನ್ ಇರೋದಿಲ್ಲ

ಬೆಂಗಳೂರು : ರಾಜ್ಯದಲ್ಲಿ ಇಂದು ರಾತ್ರಿ 9 ಗಂಟೆಯಿಂದ ಮೇ.12ರವರೆಗೆ ಕೊರೋನಾ ಕರ್ಪ್ಯೂ ಜಾರಿಗೊಳಿಸಿದೆ. ಕೊರೋನಾ ನಿಯಂತ್ರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಇದರ ಮಧ್ಯೆಯೂ ಮದ್ಯ ಸರಬರಾಜಿಗೆ ಸರ್ಕಾರ ಅವಕಾಶ ನೀಡಿತ್ತು. ಇಡೀ ದಿನ ಬಾರ್ ಓಪನ್ ಇರ್ತಾವೆ ಎಂದೇ ಹೇಳಲಾಗಿತ್ತು. ಆದ್ರೇ.. ಇಡೀ ದಿನ ಓಪನ್ ಇರೋದಿಲ್ಲ. ಅಗತ್ಯ ವಸ್ತು ಖರೀದಿಸೋದಕ್ಕೆ ನಿಗದಿಪಡಿಸಿರುವಂತೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅವಕಾಶವನ್ನು ನೀಡಲಾಗಿದೆ. ಈ ಮೂಲಕ ಮದ್ಯಪ್ರಿಯರಿಗೆ …

Read More »

ರಾಜ್ಯದಲ್ಲಿಂದು ಕೋವಿಡ್ ಮಹಾಸ್ಫೋಟ : 31830 ಹೊಸ ಪ್ರಕರಣ,180 ಜನ ಸಾವು

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ತೆರೆವಾದ ಬೆನ್ನಲ್ಲೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಕಳೆದ 24 ಗಂಟೆಗಳ( ಸೋಮವಾರ) ಅವಧಿಯಲ್ಲಿ ಬರೋಬ್ಬರಿ 31830 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಿತಿ ಮೀರಿ ಹೆಚ್ಚುತ್ತಿರುವ ಕೋವಿಡ್‍ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕಳೆದ ಶುಕ್ರವಾರ ರಾತ್ರಿಯಿಂದ ಸೋಮವಾರದ ಮುಂಜಾನೆ ವರೆಗೆ ವಾರಾಂತ್ಯದ ಕರ್ಫ್ಯೂ ವಿಧಿಸಲಾಗಿತ್ತು. ಇದರಿಂದ ಭಾನುವಾರ ದಾಖಲಾದ ಕೋವಿಡ್ ಪ್ರಕರಣಗಳಲ್ಲಿ ಇಳಿಮುಖ ಖಂಡಿತ್ತು. ಆದರೆ, ಸೋಮವಾರ …

Read More »

ಚುನಾವಣಾ ರ್‍ಯಾಲಿ, ಕುಂಭಮೇಳದಿಂದ ಕೊರೋನ ಹೆಚ್ಚಾಗಿಲ್ಲ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು, ಎ.27: ಚುನಾವಣೆ ರ್‍ಯಾಲಿ, ಕುಂಭಮೇಳ ಕೋವಿಡ್ ಸೋಂಕು ಹೆಚ್ಚಳ ವಾಗಲು ಕಾರಣವಲ್ಲ. ಚುನಾವಣಾ ರ್‍ಯಾಲಿ, ಕುಂಭಮೇಳದಿಂದ ಕೊರೋನ ಹೆಚ್ಚಾಗಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಘೋಷಣೆ ಮಾಡಿದ್ದು ಚುನಾವಣಾ ಆಯೋಗ. ಚುನಾವಣಾ ರ್‍ಯಾಲಿಯಲ್ಲಿ ಎಲ್ಲಾ ಪಕ್ಷದವರು ಭಾಗಿಯಾಗಿದ್ದಾರೆ. ಚುನಾವಣೆ ಇಲ್ಲದ ರಾಜ್ಯಗಳಲ್ಲೂ ಕೊರೋನ ಜಾಸ್ತಿಯಾಗಿದೆ. ಕುಂಭಮೇಳದಲ್ಲಿ ರಾಜ್ಯದ ಕೆಲವೇ ಮಂದಿ ಭಾಗವಹಿಸಿದ್ದು, ರ್‍ಯಾಲಿ, ಕುಂಭಮೇಳದಿಂದ ಕೊರೋನ ಹೆಚ್ಚಾಗಿದೆ ಎಂಬುದು …

Read More »

ಟೆಸ್ಟ್ , ಟ್ರ್ಯಾಕ್, ಟ್ರೀಟ್ ಮೂರನ್ನೂ ರಾಜ್ಯ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ: ಬಿಜೆಪಿ ಆಡಳಿತದ ವಿರುದ್ದ ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಕೊರೊನಾ ಲಾಕ್‌ಡೌನ್‌ ಕಾರಣದಿಂದಾಗಿ ಆತಂಕಕ್ಕೆ ಒಳಗಾದ ಹಲವಾರು ಕಾರ್ಮಿಕರು, ವಿದ್ಯಾರ್ಥಿಗಳು ತಮ್ಮ ಊರಿಗೆ ತೆರಳುತ್ತಿದ್ದಾರೆ. ಆದರೆ “ಸರ್ಕಾರ ಊರಿಗೆ ತೆರಳುವವರಿಗೆ ಬಸ್ ವ್ಯವಸ್ಥೆ ಜೊತೆಗೆ ಸೋಂಕು ಪರೀಕ್ಷೆ, ಐಸೋಲೇಶನ್ ನಿಯಮ ರೂಪಿಸಿಲ್ಲ. ಇದು ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ” ಎಂದು ಪ್ರತಿಪಕ್ಷ ಕಾಂಗ್ರೆಸ್‌ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದೆ. ಈ ಬಗ್ಗೆ ತನ್ನ ಅಧಿಕೃತ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಹಿಂದಿನ ಲಾಕ್‌ಡೌನ್‌ನಿಂದ ಗಾರ್ಮೆಂಟ್ಸ್ ಉದ್ಯಮ ಇನ್ನೂ ಹೊರಬಂದಿಲ್ಲ, …

Read More »

ಜನರ ಸಾವು, ನೋವು, ಸಂಕಟ, ಕಣ್ಣೀರಿಗೆ ರಾಜ್ಯ ಸರ್ಕಾರ ಕಾರಣ’

ಬೆಂಗಳೂರು: ‘ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ವರದಿಯನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷಿಸಿದ್ದು ಜನರ ಸಾವು, ನೋವು, ಸಂಕಟ, ಕಣ್ಣೀರಿಗೆ ಕಾರಣ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ತಮ್ಮ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದ ಬದಲಿಗೆ ಲಾಕ್‌ಡೌನ್ ಘೋಷಿಸಿ ದುಡಿಯುವ ವರ್ಗ ಮತ್ತು ಸಮುದಾಯಗಳನ್ನು ಹಸಿವಿಗೆ ದೂಡಿವೆ’ ಎಂದರು. ‘ಲಕ್ಷಾಂತರ ಮಂದಿ ಆರೋಗ್ಯ ಸವಲತ್ತು ಸಿಗದೆ …

Read More »

ಚುನಾವಣಾ ಫಲಿತಾಂಶ ದಿನದಂದು ರಾಜಕೀಯ ಪಕ್ಷಗಳ ವಿಜಯೋತ್ಸವ ನಿಷೇಧ : ಚುನಾವಣಾ ಆಯೋಗದಿಂದ ಮಹತ್ವದ ನಿರ್ಧಾರ

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ.2 ರ ಚುನಾವಣಾ ಫಲಿತಾಂಶ ದಿನದಂದು ರಾಜಕೀಯ ಪಕ್ಷಗಳ ವಿಜಯೋತ್ಸವಕ್ಕೆ ನಿಷೇಧ ಹೇರಿ ಚುನಾವಣಾ ಆಯೋಗ ಮಹತ್ವದ ನಿರ್ಧಾರ ಆದೇಶ ಹೊರಡಿಸಿದೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ವಿಜಯೋತ್ಸವಕ್ಕೆ ನಿಷೇಧ ಹೇರಿದ್ದು, ಚುನಾವಣೆ ಫಲಿತಾಂಶದ ಬಳಿಕ ವಿಜೇತ ಅಭ್ಯರ್ಥಿಯ ಜೊತೆಗೆ ಇಬ್ಬರಿಗಿಂತ ಹೆಚ್ಚು ಮಂದಿ …

Read More »