Breaking News
Home / 2021 / ಏಪ್ರಿಲ್ (page 94)

Monthly Archives: ಏಪ್ರಿಲ್ 2021

ವಿವಿಧೆಡೆ ಯುವತಿ ಜತೆಗೆ ಸ್ಥಳ ಮಹಜರು

ಬೆಂಗಳೂರು: ಸಿ.ಡಿ. ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ ಯುವತಿಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿದೆ. ಜತೆಗೆ ಒಂದೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌ ನೀಡಲಿದೆ ಎಂದು ತಿಳಿದು ಬಂದಿದೆ. ಗುರುವಾರ ಬೆಳಗ್ಗೆ ತಮ್ಮ ಪರ ವಕೀಲರ ಜತೆ ಆಗಮಿಸಿದ ಸಂತ್ರಸ್ತೆಯನ್ನು ತನಿಖಾಧಿಕಾರಿ ಕವಿತಾ ನೇತೃತ್ವದ ತಂಡ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಆರ್‌.ಟಿ.ನಗರದ ಗಂಗಾನಗರದಲ್ಲಿರುವ ಪಿ.ಜಿ.ಗೆ ಕರೆದೊಯ್ದು 11 ಗಂಟೆಯಿಂದ ಮಧ್ಯಾಹ್ನ …

Read More »

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ: ದುಷ್ಕರ್ಮಿಗಳು ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ ಮಧು(30) ಹತ್ಯೆಯಾದ ವ್ಯಕ್ತಿ. ಮಧು ನಿನ್ನೆ (ಬುಧವಾರ ಮಾ .31 ) ರಾತ್ರಿ ಗುಂಡಾಪುರದ ಕೊಂಡೋತ್ಸವ ಕಾರ್ಯಕ್ರಮಕ್ಕೆ ತೆರಳಲು ಗ್ರಾಮದ ತನ್ನ ಸ್ನೇಹಿತರ ಜತೆ ಮಾತನಾಡುತ್ತ ನಿಂತಿದ್ದಾಗ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿ, ಬಳಿಕ ಆತನ ಕತ್ತಲ್ಲಿದ್ದ …

Read More »

1ರಿಂದ 9 ತರಗತಿ : ಮೇ ತಿಂಗಳಲ್ಲಿ ಬೇಸಗೆ ರಜೆ ಸಾಧ್ಯತೆ

ಬೆಂಗಳೂರು: ರಾಜ್ಯದ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ ಬೇಸಗೆ ರಜೆ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ. ಬಿಸಿಲಿನ ತಾಪಮಾನ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಪ್ರಿಲ್‌ ಅಂತ್ಯದೊಳಗೆ 9ನೇ ತರಗತಿ ವರೆಗಿನ ಎಲ್ಲ ವಿದ್ಯಾರ್ಥಿಗಳ ಪಠ್ಯಕ್ರಮ ಪೂರ್ಣಗೊಳಿಸಿ, ಮೌಲ್ಯಮಾಪನ ಪ್ರಕ್ರಿಯೆ ನಡೆಸಿ ರಜೆ ಘೋಷಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ವಿಳಂಬವಾಗಿ ಆರಂಭವಾಗಿದ್ದರಿಂದ ಬೇಸಗೆ ರಜೆ ಕಡಿತ ಮಾಡುವ ಬಗ್ಗೆ ಈ …

Read More »

ಅಂಬೇಡ್ಕರ್‌ ಜಯಂತಿ ಸಾಂಕೇತಿಕ ಆಚರಣೆಗೆ ಡಿ.ಸಿ ಸೂಚನೆ; ಪ್ರತಿಭಟನೆ

ಕಲಬುರ್ಗಿ: ಕೋವಿಡ್‌ ಹಾವಳಿ ಹೆಚ್ಚಿರುವ ಕಾರಣ ಅಂಬೇಡ್ಕರ್‌ ಜಯಂತಿಯನ್ನು ಸರಳವಾಗಿ ಆಚರಿಸಬೇಕು ಎಂಬ ಜಿಲ್ಲಾಧಿಕಾರಿ ಮನವಿಗೆ ವಿರೋಧ ವ್ಯಕ್ತಪಡಿಸಿದ ಕೆಲ ಸಂಘಟನೆಗಳವರು, ‘ಕೋವಿಡ್‌ ಬಂದು ಜೀವ ಹೋದರೂ ಚಿಂತೆಯಿಲ್ಲ. ಜಯಂತಿ ಆಚರಿಸದೇ ಬಿಡುವುದಿಲ್ಲ’ ಎಂದು ಪಟ್ಟು ಹಿಡಿದು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಏ. 5ರಂದು ಡಾ.ಬಾಬು ಜಗಜೀವನರಾಂ ಜಯಂತಿ ಹಾಗೂ 14ರಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತ್ಯುತ್ಸವ ಸಂಬಂಧ, ಜಿಲ್ಲಾಧಿಕಾರಿ ನೇತೃತ್ವದಲ್ಲಿ ಗುರುವಾರ ಇಲ್ಲಿ ವಿವಿಧ ಸಂಘಟನೆಗಳ ಸಭೆ …

Read More »

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು ಹಳೆಯ ದ್ವೇಷದ ಕಾರಣ ಗೋಕಾಕದಲ್ಲಿ‌ ಯುವಕನೊರ್ವನಿಗೆ ಚಾಕು ಇರಿತದಿಂದ ಗಂಬೀರ ಗಾಯಗೊಂಡ ಕಾರಣ ಸಂಬಂದಿಕರು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ವಿಶಾಲ ತಾಯಿ, ಸರೋಜಾ, ಮೇಸ್ತ್ರೀ ,23 ವರ್ಷದ, ಎಂಬ ಯುವಕನಿಗೆ ಗೋಕಾಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಹಳೆಯ ದ್ವೇಷದ ಕಾರಣ 5-6 ಜನ ದುಷ್ಕರಮಿಗಳು ಚಾಕು ಹಾಕಿದ್ದರಿಂದ ಸ್ಥಳದಲ್ಲಿದ ಸಂಬಂದಿಕರು ತಕ್ಷಣ ಗೋಕಾಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ

Read More »

ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಸಂತ್ರಸ್ತ ಯುವತಿ ವಾಸವಿದ್ದ ಪಿಜಿ ಕೇಂದ್ರದಲ್ಲಿ ಎಸ್​ಐಟಿ ಅಧಿಕಾರಿಗಳು ಮಹಜರು ಕಾರ್ಯ ನಡೆಸಿದ್ದಾರೆ. ಆಕೆಗೆ ಸಂಬಂಧಿಸಿದ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಪಿಜಿಯನ್ನು ಮಹಜರು ಮಾಡಲಾಗಿದ್ದು, ವಶಕ್ಕೆ ಪಡೆದ ಎಲ್ಲಾ ವಸ್ತುಗಳನ್ನೂ ಸೀಲ್​ ಮಾಡಿ ಎಫ್​​ಎಸ್​​ಎಲ್​ ಪ್ರಯೋಗಾಲಯಕ್ಕೆ ರವಾನಿಸುವುದಾಗಿ ತಿಳಿದುಬಂದಿದೆ. ಆ ಮೂಲಕ ಇಂದು ಬೆಳಗ್ಗೆಯಿಂದ ಸತತ …

Read More »

ಬಿಸಿಲಿಗೆ ಗೂಡಿನಿಂದೆದ್ದ ಹೆಜ್ಜೇನು; ಉಪಪ್ರಾಚಾರ್ಯ, ವಿದ್ಯಾರ್ಥಿಗಳು ಸೇರಿ 10 ಜನ ಆಸ್ಪತ್ರೆಗೆ ದಾಖಲು

ಬಾಗಲಕೋಟೆ: ಬೇಸಿಗೆಯ ಝಳ ಈಗಾಗಲೇ ಎಲ್ಲರನ್ನೂ ಕಂಗೆಡಿಸಲಾರಂಭಿಸಿದೆ. ದಿನೇ ದಿನೇ ಹೆಚ್ಚುತ್ತಿರುವ ಸೂರ್ಯನ ತಾಪಮಾನ ಮೈ ಸುಡುತ್ತಿದೆ. ಸೂರ್ಯನ ಶಾಖ ಮನುಷ್ಯ ಮಾತ್ರರಿಗಷ್ಟೇ ಅಲ್ಲದೇ ಪ್ರಾಣಿ, ಪಕ್ಷಿ, ಕೀಟ ಸಂಕುಲಗಳ ಮೇಲೂ ಪರಿಣಾಮ ಬೀರುತ್ತಿದೆ. ಬಾಗಲಕೋಟೆ ಜಿಲ್ಲೆಯ ಗಮಖಂಡಿಯಲ್ಲಿ ಬಿಸಿಲಿನ ತಾಪ ತಾಳಲಾರದೆ ಗೂಡಿನಿಂದ ಎದ್ದ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಜಮಖಂಡಿ ನಗರದ ಸರ್ಕಾರಿ ಪಿಬಿ ಪ್ರೌಢಶಾಲೆ ಬಳಿ ಘಟನೆ ನಡೆದಿದ್ದು ಉಪಪ್ರಾಚಾರ್ಯರು ಹಾಗೂ 9 …

Read More »

ಕರ್ನಾಟಕದಲ್ಲಿ ವಕೀಲಿ ವೃತ್ತಿ ನಡೆಸಲು ಜಗದೀಶ್ ಕುಮಾರ್​ ಹೆಸರನ್ನೇ ನೋಂದಾಯಿಸಿಲ್ಲ: ಬಾರ್​ ಕೌನ್ಸಿಲ್​ ಸ್ಪಷ್ಟನೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಡಿ ಸಂತ್ರಸ್ತೆಯ ಪರ ವಕಾಲತ್ತು ವಹಿಸಿರುವ ವಕೀಲ ಕೆ.ಎನ್.ಜಗದೀಶ್ ಕುಮಾರ್ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಕರ್ನಾಟಕದಲ್ಲಿ ವಕೀಲಿ ವೃತ್ತಿ ನಡೆಸಲು ಕೆ.ಎನ್.ಜಗದೀಶ್ ಕುಮಾರ್ ಹೆಸರನ್ನು ನೋಂದಾಯಿಸಿಯೇ ಇಲ್ಲ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ. ಈ ಕುರಿತು ವಕೀಲ ಎಸ್.ಬಸವರಾಜ್ ಎಂಬುವವರು ಕೇಳಿದ್ದ ಪ್ರಶ್ನೆಗೆ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಸ್ಪಷ್ಟನೆ ನೀಡಿದ್ದು, ಕೆ.ಎನ್.ಜಗದೀಶ್ ಕುಮಾರ್ ಕರ್ನಾಟಕದಲ್ಲಿ ವಕೀಲಿ ವೃತ್ತಿಗೆ …

Read More »

ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಐವರು ಶಾಸಕರಿಗೆ ಸಮನ್ಸ್ ಜಾರಿ

ಬೆಂಗಳೂರು: ಜೆಡಿಎಸ್ ತೊರೆಯಲು 5 ಕೋಟಿ ರೂಪಾಯಿ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಶ್ರೀನಿವಾಸ್ ಗೌಡ, ಡಿಸಿಎಂ ಅಶ್ವತ್ಥ ನಾರಾಯಣ, ಸಚಿವ ಯೋಗೇಶ್ವರ್, ಎಸ್.ಆರ್. ವಿಶ್ವನಾಥ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. ಜೆಡಿಎಸ್ ಪಕ್ಷ ತ್ಯಜಿಸಲೆಂದು ಬಿಜೆಪಿ ನಾಯಕರಿಂದ ಬರೋಬ್ಬರಿ 5 ಕೋಟಿ ರೂಪಾಯಿ ಆಮಿಷವೊಡ್ಡಲಾಗಿತ್ತು ಎಂದು ಆರೋಪಿಸಿ ಟಿ.ಜೆ. ಅಬ್ರಾಹಂ ಖಾಸಗಿ ದೂರು ದಾಖಲಿಸಿದ್ದರು. ಅಲ್ಲದೇ ಈ ಬಗ್ಗೆ ವಿಧಾನಸಭೆಯಲ್ಲಿಯೂ ಕೆ. ಶ್ರೀನಿವಾಸ್ …

Read More »

ಈಶ್ವರಪ್ಪ ರಾಜ್ಯಪಾಲರ ಅಂಗಳಕ್ಕೆ ಹೋಗಿದ್ದು ಸರಿಯಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಯಾವುದೇ ಅಸಮಾಧಾನ ಇದ್ದರೆ, ಅದನ್ನು ಸರ್ಕಾರದ ಒಳಗೇ ಬಗೆಹರಿಸಿಕೊಳ್ಳಬೇಕು. ರಾಜ್ಯಪಾಲರ ಅಂಗಳಕ್ಕೆ ಒಯ್ಯವುದು ಸರಿಯಲ್ಲ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿಯವರ ಭೇಟಿಯ ಬಳಿಕ ಅವರು ಮಾತನಾಡಿ, ನಮ್ಮದು ಶಿಸ್ತಿನ ಪಕ್ಷವಾಗಿದ್ದು, ಶಿಸ್ತಿನ ಉಲ್ಲಂಘನೆಯಾಗಬಾರದು ಎಂದು ತಿಳಿಸಿದರು. ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸರ್ಕಾರ ರಚನೆ ಆಗಿದೆ. ಅವರ ಮಾರ್ಗದರ್ಶನದಲ್ಲಿಯೇ ಕೆಲಸ ಮಾಡುತ್ತಿದ್ದೇವೆ. ಯಾವುದೇ …

Read More »