Breaking News
Home / 2021 / ಏಪ್ರಿಲ್ (page 96)

Monthly Archives: ಏಪ್ರಿಲ್ 2021

ಈಶ್ವರಪ್ಪ ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕಿತ್ತು: ರೇಣುಕಾಚಾರ್ಯ ಕಿಡಿ

ಬೆಂಗಳೂರು: ಕೆ.ಎಸ್. ಈಶ್ವರಪ್ಪನವರಂತಹ ಹಿರಿಯ ಸಚಿವರೇ ಮುಖ್ಯಮಂತ್ರಿಗಳ ವಿರುದ್ದ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ ಎಂದರೆ ಹೇಗೆ? ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಇದನ್ನು ಬಗೆ ಹರಿಸಿಕೊಳ್ಳಬೇಕಿತ್ತು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಉಪಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಸಚಿವರು ಹೀಗೆ ಮಾಡಿರುವುದರಿಂದ ಚುನಾವಣೆ ಮೇಲೆ ಪರಿಣಾಮ ಬೀರಲ್ವಾ? ಪಕ್ಷದ ಇಮೇಜ್ ಹಾಳಾಗೋದಿಲ್ವಾ ಎಂದು ಅಸ‌ಮಾಧಾನ ವ್ಯಕ್ತಪಡಿಸಿದ್ದಾರೆ. ನಾವು 60 ಮಂದಿ ಶಾಸಕರು ಮುಖ್ಯಮಂತ್ರಿಗಳನ್ನು …

Read More »

ಹಾಲು ಖರೀದಿಸಲು ಹೋದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಡೈರಿ ಮಾಲೀಕ..!

ಉತ್ತರಪ್ರದೇಶ : ಹಾಲು ಖರೀದಿ ಮಾಡಲು ಹೋದ 16 ವರ್ಷದ ಅಪ್ರಾಪ್ತ ಹುಡುಗಿಯ ಮೇಲೆ ಡೈರಿ ಮಾಲೀಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಬಾಲಕಿ ಆರೋಪ ಮಾಡಿದ್ದಾಳೆ. ಸಂತ್ರಸ್ತೆ ಹಾಲು ಖರೀದಿಸಲು ಹೋದಾಗ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ವೇಳೆ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದಾಳೆ. ಈ ಹಿನ್ನಲೆ ಗಾಬರೊಗೊಂಡ ಮಾಲೀಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಆಕೆಯನ್ನ ಬಿಟ್ಟು ಕಳುಹಿಸಿದ್ದಾನೆ ಎನ್ನಲಾಗಿದೆ. ಆದ್ರೆ ಬೆದರಿಕೆ ಹೆದರದ …

Read More »

ಹೋಟೆಲ್‌ ಉದ್ಯಮದಲ್ಲಿ ನಷ್ಟ ; ಆತ್ಮಹತ್ಯೆಗೆ ಶರಣಾದ ಮಾಲೀಕ

ವಿಜಯಪುರ: ಹೋಟೆಲ್‌ ಉದ್ಯಮದಲ್ಲಿ ನಷ್ಟ ಅನುಭವಿಸಿದ ಕಾರಣಕ್ಕೆ ಹೋಟೆಲ್ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತರನ್ನು ಗಣೇಶ್‌ (೪೦) ಎಂದು ಗುರುತಿಸಲಾಗಿದ್ದು ಮಂಗಳೂರು ಮೂಲದವರಾಗಿರುವ ಇವರು ಇಂಡಿಯಲ್ಲಿ ಹೋಟೆಲ್ ನಡೆಸುತ್ತಿದ್ದರು. 30 ಲಕ್ಷಕ್ಕೂ ಅಧಿಕ ಸಾಲ ಹೊಂದಿದ್ದ ಇವರು ಬಾಡಿಗೆ ಕಟ್ಟಡದಲ್ಲಿ ಹೋಟೆಲ್ ಮತ್ತು ಲಾಡ್ಜಿಂಗ್ ಆರಂಭಿಸಿದ್ದರು. ಕೋವಿಡ್ ಕಾರಣದಿಂದ ಹೋಟೆಲ್ ಉದ್ಯಮದ ಮೇಲೆ ಭಾರೀ ಹೊಡೆತ ಬಿದ್ದಿದ್ದರಿಂದ ಗಣೇಶ್ ಆರ್ಥಿಕ ಸಂಕಷ್ಟದಲ್ಲಿದ್ದರು ಎನ್ನಲಾಗಿದೆ. ಹೋಟೆಲ್ ನಡೆಸಲು ಪಡೆದ …

Read More »

ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಯುವತಿ ಸಹೋದರ

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿ ಸಹೋದರ ಮತ್ತೊಂದು ಬಾಂಬ್ ಸಿಡಿಸಿದ್ದು, ನಮ್ಮ ಬಳಿ 11 ಆಡಿಯೋ ಸಾಕ್ಷ್ಯಗಳಿವೆ. ಅದರಲ್ಲಿ ಎರಡನ್ನು ಮಾತ್ರ ಈಗಗಾಲೇ ಎಸ್ ಐಟಿ ಅಧಿಕಾರಿಗಳಿಗೆ ನೀಡಿದ್ದೇವೆ ಎಂದರು. ಇನ್ನುಳಿದ 9 ಆಡಿಯೋ ಸಾಕ್ಷ್ಯಗಳನ್ನು ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇವೆ. ಅದರಲ್ಲಿ ಡಿ.ಕೆ.ಶಿವಕುಮಾರ್ ಬಗ್ಗೆ ಪ್ರಸ್ತಾಪಿಸಿರುವುದೂ ಇದೆ. ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವಿದೆ ಎಂದು ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ …

Read More »

ಇಂದಿನಿಂದ ‘ಯುವರತ್ನ’ನ ಯುವಘರ್ಜನೆ ಶುರು

ಬೆಂಗಳೂರು: ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಇಂದು (ಏ.1) ಬಿಡುಗಡೆಯಾಗುತ್ತಿದೆ. 2019ರಲ್ಲಿ ಬಂದ ‘ನಟಸಾರ್ವಭೌಮ’ ನಂತರ ಪುನೀತ್ ಅಭಿನಯದ ಯಾವುದೇ ಚಿತ್ರ ಬಿಡುಗಡೆಯಾಗಿರಲಿಲ್ಲ. ಎರಡು ವರ್ಷಗಳ ನಂತರ ಅವರ ಚಿತ್ರವೊಂದು ಬಿಡುಗಡೆಯಾಗುತ್ತಿರುವುದರಿಂದ ಅಭಿಮಾನಿಗಳ ವಲಯದಲ್ಲಿ ಕುತೂಹಲ ಮತ್ತು ನಿರೀಕ್ಷೆಗಳು ಎರಡೂ ಹೆಚ್ಚಿವೆ. ‘ಯುವರತ್ನ’ ಚಿತ್ರವು ಕರ್ನಾಟಕದಲ್ಲಿ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಇನ್ನು ಆಂಧ್ರ ಮತ್ತು ತೆಲಂಗಾಣಗಳೆರೆಡೂ ಸೇರಿ 200 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದ್ದು, ಒಟ್ಟಾರೆ 600 ಚಿತ್ರಮಂದಿರಗಳಿಂದ ಪ್ರತಿದಿನ 2800ಕ್ಕೂ …

Read More »

ಎಪ್ರೀಲ್ 1: ಮೂರ್ಖರ ದಿನವಲ್ಲ, ಹೊಸತನದ ದಿನ

ಸಕಾಲಿಕ ಸಂತೋಷಕುಮಾರ್ ಮೆಹಂದಳೆ ಅಂದು 2004 ಏಪ್ರಿಲ್ 1. ಗೂಗಲ್ ಹೊಸ ಕೊಡುಗೆಯನ್ನು ಘೊಷಿಸಿತ್ತು. ಅದನ್ನು ‘ಜಗತ್ತಿನ ಅತಿ ದೊಡ್ಡ ಜೋಕ್’ ಎಂದೇ ಜಾಗತಿಕ ತಮಾಷೆಯಾಗಿ ದಾಖಲೆಯಾಗುವ ಮಟ್ಟಿಗೆ ಜನರು ಆಡಿಕೊಂಡಿದ್ದರು. ಗೂಗಲ್ ಗಿಗಾಬೈಟ್ ಸಾಮರ್ಥ್ಯದ ‘ಜೀ ಮೇಲ್’ ಎಂಬ ಅದ್ಭುತವನ್ನು ಘೊಷಿಸಿದ್ದು ಏಪ್ರಿಲ್ 1ರ ತಡರಾತ್ರಿ. ಮೊದಲ ಗಳಿಗೆಯಲ್ಲಿ ಅದನ್ನು ಟೀಕಿಸಿ, ಮಾಹಿತಿ ಹಂಚಿಕೊಂಡಿದ್ದು ಯಾಹೂ. ಜೊತೆಗೆ ಹಾಟ್​ವೆುೕಲ್ ಮತ್ತು ರಿಡಿಫ್​ನಲ್ಲಿ. ಕಾರಣ ಇವೆರಡೂ ಗ್ರಾಹಕರಿಗೆ ಕೊಡುತ್ತಿದ್ದುದು 2-4 …

Read More »

ರಾಜ್ಯ ಹೆದ್ದಾರಿ ಟೋಲ್ ದರ ಬದಲಾವಣೆ ಸದ್ಯಕ್ಕಿಲ್ಲ

ಬೆಂಗಳೂರು: ರಾಜ್ಯ ಹೆದ್ದಾರಿಗಳ ಟೋಲ್ ದರದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆಯಿಲ್ಲ. ಹೊಸ ಆರ್ಥಿಕ ವರ್ಷ ಮೊದಲ ದಿನದಿಂದ ಹೆಚ್ಚಿನ ಹೊರಬೀಳಲಿದೆ ಎಂದುಕೊಂಡವರಿಗೆ ತಾತ್ಕಾಲಿಕ ನಿರಾಳತೆ ದೊರೆತಿದೆ. ಒಪ್ಪಂದ ಕಾಲಮಿತಿ ಅನ್ವಯ ಕೆಲವು ಹೆದ್ದಾರಿಗಳ ಟೋಲ್ ದರ ಪರಿಷ್ಕರಣೆಗೆ ಪ್ರಸ್ತಾವನೆಗಳು ಲೋಕೋಪಯೋಗಿ ಇಲಾಖೆಗೆ ಸಲ್ಲಿಕೆಯಾಗಿದ್ದು, ಇನ್ನೂ ಪರಿಶೀಲನೆ ಹಂತದಲ್ಲಿದೆ. ಪ್ರಸ್ತಾವನೆ ಸಲ್ಲಿಸಿದ ಸಂಸ್ಥೆಗಳಿಗೆ ಕೆಲವೊಂದು ಸ್ಪಷ್ಟೀಕರಣ ಪತ್ರ ಬರೆಯಲಾಗಿದೆ. ಇದಾದ ಬಳಿಕ ಮತ್ತೊಮ್ಮೆ ಪರಾಮಶಿಸಿ ಪರಿಷ್ಕೃತ ಕೋರಿಕೆಯನ್ನು ಸರ್ಕಾರದ ಮುಂದಿಡಲಾಗುತ್ತದೆ. ಟೋಲ್ …

Read More »

ಬ್ಯಾಂಕ್ ಗ್ರಾಹಕರೇ ಗಮನಿಸಿ.! ಸಾಲು ಸಾಲು ರಜೆ ಸೇರಿ ಈ ತಿಂಗಳು ಬರೋಬ್ಬರಿ 15 ದಿನ ಬ್ಯಾಂಕ್ ಗಳು ಬಂದ್

ನವದೆಹಲಿ: ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 15 ದಿನ ಬ್ಯಾಂಕುಗಳಿಗೆ ರಜೆ ಇರುತ್ತದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರದ ರಜೆ ಸೇರಿದಂತೆ ದೇಶಾದ್ಯಂತ ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಏಪ್ರಿಲ್ ತಿಂಗಳಲ್ಲಿ 15 ದಿನ ರಜೆ ಇರುತ್ತದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರಜಾದಿನಗಳ ಕ್ಯಾಲೆಂಡರ್ ತಿಳಿಸಿದೆ. ಆದರೆ, ಈ ರಜೆಗಳು ಆಯಾ ಪ್ರದೇಶ ಮತ್ತು ರಾಜ್ಯಗಳಿಗೆ ಅನ್ವಯವಾಗುವಂತೆ ಬದಲಾವಣೆಗೆ ಒಳಪಟ್ಟಿರುತ್ತವೆ ಎಂದು ಹೇಳಲಾಗಿದೆ. …

Read More »

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತ: ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ: ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಣ್ಣ ಉಳಿತಾಯ ಯೋಜನೆಗಳ ಮೇಲೆ ಬಡ್ಡಿದರ ಕಡಿತ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ನಿನ್ನೆ ಪ್ರಕಟಿಸಿತ್ತು. ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಕಡಿತದಂತೆಯೇ 2021-22ನೇ ಆರ್ಥಿಕ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯಗಳ ಮೇಲೆ ಬಡ್ಡಿದರವನ್ನು ಶೇಕಡಾ …

Read More »

ಸಿ.ಡಿ. ಪ್ರಕರಣ: ವಿಡಿಯೊ ಚಿತ್ರೀಕರಿಸಿದ್ದು ನಾನೇ ಎಂದ ಯುವತಿ

ಬೆಂಗಳೂರು: ಸಿ.ಡಿ.ಯಲ್ಲಿರುವ ವಿಡಿಯೊ ಮೂಲದ ಬಗ್ಗೆ ಸಂತ್ರಸ್ತ ಯುವತಿ ತನಿಖಾಧಿಕಾರಿಗೆ ವಿವರ ನೀಡಿದ್ದಾರೆ. ತಾನೇ ವಿಡಿಯೊ ಚಿತ್ರೀಕರಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಬುಧವಾರ ತನಿಖಾಧಿಕಾರಿ ಎಂ.ಸಿ. ಕವಿತಾ ವಿಚಾರಣೆ ನೀಡಿದ್ದು, ‘ಸಿ.ಡಿ.ಯಲ್ಲಿರುವ ವಿಡಿಯೊ ಅಸಲಿ. ನನಗೆ ಕೆಲಸ ಕೊಡಿಸಲಾಗದು ಎಂದಿದ್ದ ರಮೇಶ ಜಾರಕಿಹೊಳಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿದ್ದರು. ಅದರಿಂದ ತುಂಬಾ ನೋವಾಗಿತ್ತು. ಅದಕ್ಕೆ ನಾನೇ, ಇಬ್ಬರು ಸೇರುವ ದೃಶ್ಯಗಳನ್ನು ಚಿತ್ರೀಕರಣ ಮಾಡಿಕೊಂಡಿದ್ದೆ. ಮೂಲ ದೃಶ್ಯವನ್ನೂ ನಿಮಗೆ ನೀಡುತ್ತೇನೆ’ ಎಂದು …

Read More »