Breaking News
Home / 2021 / ಮೇ / 05 (page 2)

Daily Archives: ಮೇ 5, 2021

ಬೆಂಗಳೂರು: ಶೇ.55ಕ್ಕೆ ತಲುಪಿದ ಕೊರೊನಾ ಪಾಸಿಟಿವಿಟಿ ದರ, 3 ಲಕ್ಷ ಸಕ್ರಿಯ ಪ್ರಕರಣ

ಬೆಂಗಳೂರು, ಮೇ 05: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪಾಸಿಟಿವಿಟಿ ದರ ಶೇ.55ಕ್ಕೆ ತಳುಪಿದ್ದು, 3 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿರುವುದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಪ್ರತಿಯೊಬ್ಬರೂ ಕೊರೊನಾ ಪರೀಕ್ಷೆ ಮಾಡಿಸುತ್ತಿದ್ದು, ಪಾಸಿಟಿವಿಟಿ ದರ ಹೆಚ್ಚಾಗಿದೆ. ಸೋಮವಾರ ಪಾಸಿಟಿವಿಟಿ ಪ್ರಮಾಣ ಶೇ.55ಕ್ಕೆ ತಲುಪಿದೆ. ಮಂಗಳವಾರ ಕರ್ನಾಟಕದಲ್ಲಿ ಒಟ್ಟು 44,632 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಅದರಲ್ಲಿ ಬೆಂಗಳೂರಿನಲ್ಲಿ 20,850 ಕೊರೊನಾ ಸೋಂಕಿತರಿದ್ದಾರೆ ಎಂಬುದು ತಿಳಿದುಬಂದಿದೆ.   ಕಳೆದ 24 ಗಂಟೆಯಲ್ಲಿ ಗಂಟೆಯಲ್ಲಿ ಒಟ್ಟು 292 …

Read More »

ಚಾಮರಾಜನಗರ, ಮೈಸೂರು ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಕ್ಷಣಗಣನೆ?

ಚಾಮರಾಜನಗರ, ಮೇ 5: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ಮೈಸೂರು ಹಾಗೂ ಚಾಮರಾಜನಗರದ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡುವ ಕುರಿತು ತೀರ್ಮಾನ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಮಹತ್ವದ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜತೆ ಸುದೀರ್ಘ ಮಾತುಕತೆಯಲ್ಲಿ ತೊಡಗಿರುವ ಸಿಎಂ ಬಿ.ಎಸ್ ಯಡಿಯೂರಪ್ಪ, ಇಬ್ಬರೂ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಸಾಕಷ್ಟು ಒತ್ತಡ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ …

Read More »

ನಟಿ ಕಂಗನಾಗೆ ಮತ್ತೊಂದು ಶಾಕ್: ಟ್ವಿಟರ್​ ಬಳಿಕ ಫ್ಯಾಶನ್​ ಡಿಸೈನರ್​ಗಳಿಂದಲೂ ಬಹಿಷ್ಕಾರ..!

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಬಗ್ಗೆ ಸಾಲು ಸಾಲು ಟ್ವೀಟ್​ಗಳನ್ನ ಮಾಡಿದ ಕಂಗನಾ ರಣಾವತ್​​ ಖಾತೆಗೆ ಟ್ವಿಟರ್​ ಇಂಡಿಯಾ ಕೊಕ್​ ನೀಡಿದೆ.‌ ಟ್ವಿಟರ್​ ಮಾರ್ಗಸೂಚಿಗಳನ್ನ ಉಲ್ಲಂಘಿಸಿದ ಹಿನ್ನೆಲೆ ಕಂಗನಾ ರಣಾವತ್​​ರ ಟ್ವಿಟರ್​ ಖಾತೆಯನ್ನ ಶಾಶ್ವತವಾಗಿ ಅಮಾನತು ಮಾಡಲಾಗಿದೆ. ಕಂಗನಾ ರಣಾವತ್​ರನ್ನ ಟ್ವಿಟರ್​ ಬಹಿಷ್ಕರಿಸಿದ ಬೆನ್ನಲ್ಲೇ ಇದೀಗ ಭಾರತೀಯ ಫ್ಯಾಷನ್​ ಡಿಸೈನರ್​ಗಳೂ ಸಹ ಕಂಗನಾರನ್ನ ಬಹಿಷ್ಕರಿಸಿದ್ದಾರೆ. ಡಿಸೈನರ್​ ರಿಮಜಿನ್​ ದಾದು ಈ ಸಂಬಂಧ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ವೊಂದನ್ನ ಶೇರ್​ ಮಾಡಿದ್ದಾರೆ. ಒಳ್ಳೆಯ …

Read More »

ಹಾಲು ಖರೀದಿಸುವ ಸಮಯದಲ್ಲಿ ಮದ್ಯ ಕೊಳ್ಳಲು ಯಾರು ಬರಲ್ಲ.

ಕೊಪ್ಪಳ: ಹಾಲು ಖರೀದಿಸುವ ಸಮಯದಲ್ಲಿ ಮದ್ಯ ಕೊಳ್ಳಲು ಯಾರು ಬರಲ್ಲ. ರಾಜ್ಯ ಸರ್ಕಾರ ಬಾರ್ ಗಳಿಗೆ ನೀಡಿರುವ ಸಮಯ ವ್ಯಾಪಾರಕ್ಕೆ ಸೂಕ್ತವಲ್ಲ ಎಂದು ಮದ್ಯದಂಗಡಿಗಳ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿರುವ ಸಮಯದಲ್ಲಿ ನಮಗೆ ವ್ಯಾಪಾರ ಸಹ ಆಗುತ್ತಿಲ್ಲ. ಸರ್ಕಾರಕ್ಕೆ ಆದಾಯವು ಬರಲ್ಲ. ಹೀಗಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಬಾರ್ ಗಳನ್ನು ಬಂದ್ ಮಾಡಿದ್ರೆ ಉತ್ತಮ ಎಂದು ಕೊಪ್ಪಳ ಬಾರ್ ಮಾಲೀಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತುಮಾತನಾಡಿರುವ ಮದ್ಯ ಮಾರಾಟಗಾರರು, …

Read More »

ರಾಜ್ಯದ ಆಮ್ಲಜನಕ ಬೇರೆಡೆ ಹಂಚಿಕೆಗೆ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿರುವ ಸಂದರ್ಭದಲ್ಲಿ ಇಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಪೂರ್ಣ ಪ್ರಮಾಣದಲ್ಲಿ ರಾಜ್ಯದಲ್ಲೇ ಬಳಸಿಕೊಳ್ಳಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿ ನಿತ್ಯವೂ 1,043 ಟನ್‌ ಆಮ್ಲಜನಕ ಉತ್ಪಾದನೆಯಾಗುತ್ತಿದೆ. ಅದರಲ್ಲಿ 865 ಟನ್‌ ರಾಜ್ಯಕ್ಕೆ ಹಂಚಿಕೆ ಮಾಡಿದ್ದು, 675 ಟನ್ ಮಾತ್ರ ಬಳಕೆಗೆ ಲಭ್ಯವಾಗುತ್ತಿದೆ ಎಂಬ ಮಾಹಿತಿಯುಳ್ಳ ವರದಿಯನ್ನು ‘ಪ್ರಜಾವಾಣಿ’ ಮಂಗಳವಾರ ಪ್ರಕಟಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಪತ್ರಿಕೆಯ ವರದಿಯ ತುಣುಕನ್ನು ಹಂಚಿಕೊಂಡಿರುವ …

Read More »

ಬಳ್ಳಾರಿ; ವಿಮ್ಸ್‌ನಲ್ಲಿ ಬೆಡ್ ಸಿಗದೇ ಆಸ್ಪತ್ರೆ ಮುಂದೆ ವ್ಯಕ್ತಿ ನರಳಾಟ

ವಿಜಯನಗರ, ಮೇ 04; ಬೆಂಗಳೂರು ನಗರದಲ್ಲಿ ಬೆಡ್ ಸಿಗದೇ ಕೋವಿಡ್ ಸೋಂಕಿತರು ಪರದಾಡುತ್ತಿದ್ದಾರೆ. ಬಳ್ಳಾರಿಯ ವಿಮ್ಸ್‌ನಲ್ಲಿಯೂ ಇಂತಹ ಪ್ರಕರಣ ಈಗ ಬೆಳಕಿಗೆ ಬಂದಿದೆ. ಬೆಡ್ ಸಿಗದೆ ಕೋವಿಡ್ ಸೋಂಕಿತ ನರಳಾಡಿದ ಘಟನೆ ಮಂಗಳವಾರ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಬಳ್ಳಾರಿಯಲ್ಲಿಯೂ ಬೆಡ್‌ನ ಕೊರತೆ ಶುರುವಾಗಿದೆಯೇ? ಎಂಬ ಅನುಮಾನ ಈಗ ಉಂಟಾಗಿದೆ. ಎರಡು ಗಂಟೆಯಿಂದ ಬೆಡ್ ಸಿಗದೆ ಕೋವಿಡ್ ಸೋಂಕಿತ ರೋಗಿ ಆಸ್ಪತ್ರೆಯ ಬಾಗಿಲ ಮುಂದೆ ಮಲಗಿ ನರಳಾಡಿದ್ದಾನೆ. ಮಗನಿಗೆ ಬೆಡ್‌ …

Read More »

ಆಕ್ಸಿಜನ್ ಕೊರತೆಗೆ ಕಾರಣ ಯಾರು : ಪ್ರಧಾನಿಗಳೇ ನಮ್ಮ ಕರ್ನಾಟಕ ಅಂದ್ರೆ ಯಾಕಿಷ್ಟು ನಿರ್ಲಕ್ಷ್ಯ..?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಲಂಗು ಲಗಾಮು ಇಲ್ಲದೇ ಹುಚ್ಚು ಕುದುರೆಯಂತೆ ಓಡುತ್ತಿರುವ ಕೊರೊನಾಗೆ ಕಡಿವಾಣ ಹಾಕಲು ಹರಸಾಹಸಪಡುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಎದ್ದು ಕಾಣುತ್ತಿದ್ದು, ಆಮ್ಲಜಕನವಿಲ್ಲದೇ ನೂರಾರು ಮಂದಿ ಕೊನೆಯುಸಿರೆಳೆಯುತ್ತಿದ್ದಾರೆ. ಆಕ್ಸಿಜನ್ ಇದೆ ಎನ್ನುವ ಸರ್ಕಾರ ಈ ಸಮಸ್ಯೆಯನ್ನು ನೀಗಿಸಲು ನಾನಾ ಸರ್ಕಸ್ ನಡೆಸುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಉಂಟಾಗಲು ನರೇಂದ್ರ ಮೋದಿ ನೇತೃತ್ವದ …

Read More »

ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಕೇಂದ್ರಕ್ಕೆ ಗಡುವು ನೀಡಿದ ಹೈಕೋರ್ಟ್

ಬೆಂಗಳೂರು: ಆಕ್ಸಿಜನ್ ಕೊರತೆ ಎದುರಾಗಿ ಜನರು ಸಾಯುತ್ತಿದ್ದರೂ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆಯ ಪ್ರಮಾಣ ಹೆಚ್ಚಿಸದ ಕೇಂದ್ರ ಸರ್ಕಾರವನ್ನು ಹೈಕೋರ್ಟ್ ಮಂಗಳವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು. ಅಲ್ಲದೆ, ರಾಜ್ಯದ ಆಕ್ಸಿಜನ್ ಬಳಕೆಗೆ ವಿಧಿಸಿರುವ ಮಿತಿ ಮತ್ತು ಪೂರೈಕೆಯ ಪ್ರಮಾಣ ಹೆಚ್ಚಿಸುವ ಕುರಿತು ಬುಧವಾರ ಬೆಳಿಗ್ಗೆ 10 ಗಂಟೆಯೊಳಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡು ತಿಳಿಸದಿದ್ದರೆ ನ್ಯಾಯಾಲಯವೇ ಸೂಕ್ತ ಆದೇಶ ಹೊರಡಿಸಲಿಗೆ ಎಂದೂ ಎಚ್ಚರಿಸಿದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಜನ ಸಾಯುತ್ತಿದ್ದರೂ ಇನ್ನೂ …

Read More »

ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ : ಸಿದ್ದರಾಮಯ್ಯ ಗರಂ

ಬೆಂಗಳೂರು : ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು ಬಿಬಿಎಂಪಿಯ ಅಧಿಕಾರಿಗಳ ವಿರುದ್ಧವಲ್ಲ,‌ ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ,‌ ಸಚಿವರು ಮತ್ತು ಬಿಜೆಪಿ ಶಾಸಕರು‌, ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು …

Read More »

ಮೈಸೂರಿನಲ್ಲಿ ಅಕ್ರಮ ಆಕ್ಸಿಜನ್ ಸಿಲಿಂಡರ್ ಮಾರಾಟ ;ಓರ್ವನನ್ನು ಬಂಧಿಸಿದ ಸಿಸಿಬಿ ಪೊಲೀಸರು

ಮೈಸೂರು: ಕಾಳ ಸಂತೆಯಲ್ಲಿ ಆಕ್ಸಿಜನ್ ಸಿಲಿಂಡರನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ನಂಜನಗೂಡು ಸಮೀಪದ ಪೆಟ್ರೋಲ್ ಬಂಕ್ ಬಳಿ ದಾಖಲೆ ಇಲ್ಲದೆ, ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಧುಕುಮಾರ್(37) ಎಂಬ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂಜನಗೂಡು ತಾಲೂಕು ಹೊಸಕೋಟೆಯ ಮಧುಕುಮಾರ್ ಎನ್ನುವ ವ್ಯಕ್ತಿ ಅಕ್ರಮವಾಗಿ ಆಕ್ಸಿಜನ್ ಮಾರಾಟ ಮಾಡುತ್ತಿದ್ದ. ಆರೋಪಿ ಬಳಿ ಇದ್ದ ತುಂಬಿದ ಆಕ್ಸಿಜನ್ ಸಿಲಿಂಡರ್ ವಶಕ್ಕೆ ಪಡೆದಿರುವ …

Read More »