Breaking News
Home / 2021 / ಮೇ / 08

Daily Archives: ಮೇ 8, 2021

ಖಾನಾಪುರ ಪಟ್ಟಣದಲ್ಲಿ ಮಂಗಳವಾರದಿಂದ ಸಂಪೂರ್ಣ ಲಾಕ್ ಡೌನ್: ಕಿರಾಣಿ, ದಿನಸಿ ಸೇರಿದಂತೆ ಎಲ್ಲ ವ್ಯಾಪಾರ-ವ್ಯವಹಾರಗಳಿಗೂ ನಿರ್ಬಂಧ

ಖಾನಾಪುರ:  ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಕೋವಿಡ್ ಸೊಂಕನ್ನು ಹತ್ತಿಕ್ಕಲು ಪಟ್ಟಣದಲ್ಲಿ ಮಂಗಳವಾರ ಮೇ.೧೧ರಿಂದ ಶನಿವಾರದವರೆಗೆ ಐದು ದಿನಗಳ ಕಾಲ ಎಲ್ಲ ರೀತಿಯ ವ್ಯಾಪಾರ -ವಹಿವಾಟನ್ನು ನಿಷೇಧಿಸಿ ಖಡಕ್ ಲಾಕ್ ಡೌನ್ ಘೋಷಿಸಲಾಗಿದ್ದು, ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಸ್ಥಳೀಯ ಆಡಳಿತ ಕೈಗೊಂಡಿರುವ ಈ ಕ್ರಮಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕೆಂದು ಉಪವಿಭಾಗಾಧಿಕಾರಿ ಅಶೋಕ ತೇಲಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಪಟ್ಟಣದ ವಿವಿಧ ಜಾತಿ, …

Read More »

270 ಆಕ್ಸಿಜನ್‌ ಬೆಡ್‌ ಆರಂಭಕ್ಕೆ ಜಿಲ್ಲಾಡಳಿತ ಪ್ರಸ್ತಾವನೆ

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಏರಿಕೆಯಾಗುತ್ತಿರುವುದನ್ನು ಮನಗೊಂಡ ಜಿಲ್ಲಾಡಳಿತ ಸೋಂಕಿತರ ಚಿಕಿತ್ಸೆಗಾಗಿ 270 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆಗೆ ನಿರ್ಧರಿಸಿದೆ. ಇದಲ್ಲದೇ, ಕೋವಿಡ್‌ಗಾಗಿ ಸದ್ಯ ಕೊಪ್ಪಳ ಮೆಡಿಕಲ್‌ ಕಾಲೇಜಿನ 142 ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಮುಂದಾಗಿದ್ದು, ಬೆಡ್‌ಗಳ ಆರಂಭಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜಿಲ್ಲೆಯಲ್ಲಿ ಮೊದಲ ಅಲೆ ಹಾಗೂ ಎರಡನೆ ಅಲೆಯಲ್ಲಿ ಆರಂಭಿಕದಲ್ಲಿ ಸೋಂಕಿನ ಪ್ರಮಾಣ ಹೆಚ್ಚು ಇರಲಿಲ್ಲ. ಕ್ರಮೇಣ ಸೋಂಕಿನ ಆರ್ಭಟವು ಜೋರಾಗುತ್ತಿದ್ದು, ಅದರೊಟ್ಟಿಗೆ ಸಾವಿನ ಸಂಖ್ಯೆಯು ದಿನೇ …

Read More »

ಕೋವಿಡ್‌ ನಿರ್ವಹಣೆ: ಸರ್ಕಾರದ ವೈಫಲ್ಯಕ್ಕೆ ಖಂಡಿಸಿ ಆನ್‌ಲೈನ್‌ ಚಳವಳಿ

ವಿಜಯಪುರ: ಕೋವಿಡ್-19 ಎರಡನೇ ಅಲೆಯನ್ನು ತಡೆಗಟ್ಟುವಲ್ಲಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಜಿಲ್ಲಾ ಸಮಿತಿಯಿಂದ ಶನಿವಾರ ಆನ್‌ಲೈನ್‌ ಮೂಲಕ ಪ್ರತಿಭಟನೆ ನಡೆಸಲಾಯಿತು. ಕೋವಿಡ್‌ನಿಂದ ಹಳ್ಳಿ, ನಗರಗಳಲ್ಲಿ ಸಾಕಷ್ಟು ಜನರ ಸಾವು ನೋವುಗಳನ್ನು ಸಂಭವಿಸುತ್ತಿದ್ದರೂ ಜನರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಲುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿದರು. ರಾಜಧಾನಿ ಬೆಂಗಳೂರಿನಿಂದ ಹಿಡಿದು ತಾಲ್ಲೂಕು ಮಟ್ಟದವರೆಗೆ ಆಮ್ಲಜನಕ, ಹಾಸಿಗೆ, ಔಷಧ, ಅಂಬುಲೆನ್ಸ್‌, …

Read More »

‘ಸಿಟಿ ಸ್ಕ್ಯಾನ್’ ಮಾಡಿಸುವ ರೋಗಿಗಳಿಗೆ ಬಿಗ್ ಶಾಕ್ : ‘ಸಿಟಿ ಸ್ಕ್ಯಾನಿಂಗ್’ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ಗೆ ರೂ.1,500 ದರ ನಿಗದಿ ಪಡಿಸಿದ್ದ ರಾಜ್ಯ ಸರ್ಕಾರ ಮತ್ತೊಂದು ಆದೇಶ ಹೊರಡಿಸಿದೆ. ಹೌದು, ಸಿಟಿ ಸ್ಕ್ಯಾನ್ ಮಾಡಿಸುವ ರೋಗಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಹೆಚ್ ಆರ್ ಸಿ ಸ್ಕ್ಯಾನ್ ರೇಟ್ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ನಿನ್ನೆ ಎಲ್ಲರಿಗೂ ಸಿಟಿ ಸ್ಕ್ಯಾನ್ ಗೆ 1,500 ರೂಪಾಯಿ ದರ ನಿಗದಿ ಮಾಡಿದ್ದ ಸರ್ಕಾರ ಇದೀಗ ಮತ್ತೊಂದು ಆದೇಶದಲ್ಲಿ ಬಿಪಿಎಲ್ ಕಾರ್ಡ್ …

Read More »

ಚಿಕ್ಕ-ಪುಟ್ಟ ಅಪರಾಧಗಳಿಗೆ ಬಂಧಿಸ್ಬೇಡಿ, ಜೈಲಿನಲ್ಲಿ ಜನದಟ್ಟಣೆ ಆಗ್ತಿದೆ : ಪೊಲೀಸರಿಗೆ ಸುಪ್ರೀಂ ಸೂಚನೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗ್ತಿವೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಆದೇಶ ಹೊರಡಿಸಿದೆ. ಆಗತ್ಯವಿದ್ದರೇ ಮಾತ್ರ ಬಂಧಿಸಿ ಎಂದು ಪೊಲೀಸರಿಗೆ ಸೂಚಿಸಿರುವ ಸುಪ್ರೀಂಕೋರ್ಟ್‌, ಅಗತ್ಯವಿಲ್ಲದಿದ್ರೆ 7 ವರ್ಷಕ್ಕಿಂತ ಕಡಿಮೆ ಶಿಕ್ಷೆ ಉಳ್ಳ ಅಪರಾಧಗಳಲ್ಲಿ ಆರೋಪಿಗಳನ್ನ ಬಂಧಿಸಬೇಡಿ. ಇನ್ನು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ರಚಿಸಿರುವ ಉನ್ನತ ಸಮಿತಿಗಳಿಗೆ ಸೋಂಕಿಗೆ ಒಳಪಡುವ ಅಪಾಯವಿರುವ ಕೈದಿಗಳನ್ನ ಗುರುತಿಸಿ ಎಂದಿದೆ. ಇನ್ನು …

Read More »

ಆಮ್ಲಜನಕ ಪೂರೈಕೆ, ಉಪಚುನಾವಣೆ ಮತ್ತು ಕೊವಿಡ್​ ನಿರ್ವಹಣೆ; ಬೊಮ್ಮಾಯಿ ಮತ್ತು ವಿಜಯೇಂದ್ರರಿಂದ ವರದಿ ಪಡೆದ ಅಮಿತ್ ಶಾ

ನಿನ್ನೆ ಮಧ್ಯಾಹ್ನ ಪಕ್ಷದ ರಾಷ್ಟ್ರೀಯ ನಾಯಕರ ಕರೆಯ ಮೇರೆಗೆ ದೆಹಲಿಗೆ ಹೋಗಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಎಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಗ, ಬಿಜೆಪಿ ರಾಜ್ಯ ಉಪಾಧ್ಯಕ್ಷ, ಬಿ.ವೈ. ವಿಜಯೇಂದ್ರ, ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಅಧಿಕೃತವಾಗಿ ಯಾವುದೇ ಹೇಳಿಕೆ ಸರಕಾರದಿಂದ ಬಂದಿಲ್ಲದಿದ್ದರೂ ಪಕ್ಷದ ಮೂಲಗಳ ಪ್ರಕಾರ ಕೇಂದ್ರದ ನಾಯಕರು ಮೂರ್ನಾಲ್ಕು …

Read More »

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬೇಗುದಿ : ಹೈಕಮಾಂಡ್ ಕಡೆ ಬೊಮ್ಮಾಯಿ ನಡೆ

ಬೆಂಗಳೂರು: ಕೊರೊನಾ ವೈರಸ್‌ ಎರಡನೇ ಅಲೆಯಿಂದಾಗಿ ರಾಜ್ಯದ ಜನರು ಆತಂಕಕ್ಕೆ ಸಿಲುಕಿದ್ದಾರೆ. ಈ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬೇಗುದಿಯೂ ಹೆಚ್ಚಾಗುತ್ತಿದ್ದು, ಎಲ್ಲ ಬೆಳವಣಿಗೆಗಳ ವಿವರಣೆ ನೀಡಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಬಿ.ವೈ ವಿಜಯೇಂದ್ರ ಅವರು ಹೈಕಮಾಂಡ್ ಭೇಟಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಆಕ್ಸಿಜನ್ ವಿಚಾರದಲ್ಲಿ ಸುಪ್ರೀಂಕೋರ್ಟ್ ನಲ್ಲಿ ಮುಖಭಂಗ, ಉಪ ಚುನಾವಣೆ ಫ‌ಲಿತಾಂಶ, ಚಾಮರಾಜನಗರ ದುರಂತ ಹಾಗೂ ಬೆಂಗಳೂರಿನಲ್ಲಿ ಬೆಡ್‌ ಬ್ಲಾಕಿಂಗ್ ಪ್ರಕರಣದ ಬಗ್ಗೆ …

Read More »

ಯಡಿಯೂರಪ್ಪರನ್ನು ಕುರ್ಚಿಯಿಂದ ಇಳಿಸಲು ಸದ್ದಿಲ್ಲದೇ ನಡೆಯುತ್ತಿದೆಯೇ ತಂತ್ರ ?!

ಬೆಂಗಳೂರು:ವಿನಾಶಕಾರಿ ಕೋವಿಡ್ -19 ಎರಡನೇ ತರಂಗದೊಂದಿಗೆ ಕರ್ನಾಟಕವು ಹಿಡಿತ ಸಾಧಿಸುತ್ತಿದ್ದಂತೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬದಲಿಸುವಲ್ಲಿ ಬಿಜೆಪಿ ದಾಳ ಉರುಳಿಸಿದೆ ಎಂಬ ಊಹಾಪೋಹಗಳು ಶುಕ್ರವಾರ ಹೆಚ್ಚಾಗಿದ್ದವು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಯಡಿಯೂರಪ್ಪ ಅವರ ಪುತ್ರ ಬಿಜೆ ವಿಜಯೇಂದ್ರ ಅವರು ಶುಕ್ರವಾರ ರಾತ್ರಿ ವಿಶೇಷ ವಿಮಾನದಲ್ಲಿ ನವದೆಹಲಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ …

Read More »

ಬಿಗ್ ಬಾಸ್ ನಾಳೆಗೆ ಕ್ಲೋಸ್! – ಇದು ಕೊರೊನಾ ಲಾಕ್‍ಡೌನ್ ಎಫೆಕ್ಟ್

ಬೆಂಗಳೂರು: ಬಿಗ್ ಬಾಸ್ ಸೀಸನ್ 8 ನಾಳೆಗೆ ಅಂತ್ಯವಾಗಲಿದೆ. ಈ ವಿಚಾರವನ್ನು ಬಿಗ್ ಬಾಸ್ ಪ್ರಸಾರವಾಗುವ ಕಲರ್ಸ್ ಕನ್ನಡ ಚಾನೆಲ್ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಖಚಿತಪಡಿಸಿದ್ದಾರೆ. ತಮ್ಮ ಫೇಸ್‍ಬುಕ್‍ನಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು ಯಾಕೆ ಈ ಶೋವನ್ನು ಅರ್ಧದಲ್ಲೇ ನಿಲ್ಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಪರಮೇಶ್ವರ್ ಗುಂಡ್ಕಲ್ ಹೇಳಿದ್ದೇನು..? ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು …

Read More »

ಪ್ರಾಣವಾಯು ರಥಕ್ಕೆ ಸಾರಥಿಗಳಿವರು.

ಬೆಂಗಳೂರು: ಇವರು ಕೊರೊನಾ 2ನೇ ಅಲೆಯ ನಡುವೆ ನೈಜ ಹೀರೋಗಳು. ನಿತ್ಯ ನೂರಾರು ಕಿ.ಮೀ. ದೂರದಿಂದ ಆಮ್ಲಜನಕವನ್ನು ಹೊತ್ತು ತರುತ್ತಾರೆ, ಆಸ್ಪತ್ರೆಗಳಿಗೆ ಹಂಚುತ್ತಾರೆ, ರೋಗಿಗಳ ಪಾಲಿಗೆ ಪ್ರಾಣವಾಯುವೇ ಆಗಿದ್ದಾರೆ. – ಕೋವಿಡ್ ಮುಂಚೂಣಿ ಸೇನಾನಿಗಳಾಗಿದ್ದರೂ ಎಲೆಮರೆಯ ಕಾಯಿಗಳಂತಿರುವ ಆಮ್ಲಜನಕ ಟ್ಯಾಂಕರ್‌ಗಳ ಚಾಲಕರ ಸುದ್ದಿ ಇದು. ಟ್ಯಾಂಕರ್‌ ಚಾಲನೆ ಸುಲಭವಲ್ಲ : ಆಮ್ಲಜನಕ ಟ್ಯಾಂಕರ್‌ಗಳನ್ನು ಇತರ ವಾಹನ ಗಳಂತೆ ಚಲಾಯಿಸುವಂತಿಲ್ಲ. ಆಮ್ಲಜನಕವು ದಹನ ಪೂರಕವಾಗಿರುವುದರಿಂದ ಅಪಾಯ. ಹಾಗಾಗಿ ಎಂಜಿನ್‌ ಬಿಸಿಯಾಗದಂತೆ ತಾಸಿಗೆ 50 …

Read More »