Breaking News
Home / 2021 / ಮೇ / 08 (page 4)

Daily Archives: ಮೇ 8, 2021

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಛೋಟಾ ರಾಜನ್ ಸಾವಿನ ಸುದ್ದಿ ಸುಳ್ಳು ಎಂದ ಏಮ್ಸ್ ಆಸ್ಪತ್ರೆ

ನವದೆಹಲಿ: ಭೂಗತ ಪಾತಕಿಯಾಗಿದ್ದ ಛೋಟಾ ರಾಜನ್ (62) ಕೋವಿಡ್​ ಸೋಂಕಿನಿಂದ ಶುಕ್ರವಾರ ಮೃತಪಟ್ಟಿದ್ದಾನೆ ಎಂಬ ಸುದ್ದಿಗಳನ್ನು ನವದೆಹಲಿಯ ಏಮ್ಸ್​ ಆಸ್ಪತ್ರೆ ಅಲ್ಲಗಳೆದಿದೆ. ರಾಜನ್​ ಇನ್ನೂ ಬದುಕಿದ್ದಾನೆ. ಅವನಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಏಮ್ಸ್​ ಮೂಲಗಳು ಖಚಿತಪಡಿಸಿರುವುದಾಗಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ. ರಾಜನ್ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಚರ್ಚೆ ನಡೆದು ಆತನ ಇನ್ನಿಲ್ಲ ಎಂಬ ಸಂದೇಶಗಳು ಹರಿದಾಡಿದ್ದವು. ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಛೋಟಾ ರಾಜನ್​ನ್ನು ಮುಂಬೈ …

Read More »

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸ್ಥಗಿತ – ಸಿಎಂ ಮನೆಗೆ ಸಂಸದ ಸಿದ್ದೇಶ್ವರ್ ಮುತ್ತಿಗೆ ಎಚ್ಚರಿಕೆ

ಬೆಂಗಳೂರು: ದೇಶದಲ್ಲಿ ಇಲ್ಲಿವರೆಗೆ 16 ಕೋಟಿ 49 ಲಕ್ಷದ 73 ಸಾವಿರದ 058 ಜನರಿಗೆ ವ್ಯಾಕ್ಸಿನೇಷನ್ ಆಗಿದೆ. ಆದರೆ ವ್ಯಾಕ್ಸಿನ್ ಕೊರತೆ ಹೆಚ್ಚಾಗ್ತಿದೆ. ಈ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡದಂತೆ ಆಸ್ಪತ್ರೆಗಳಿಗೆ ಬಿಬಿಎಂಪಿ ಆದೇಶಿಸಿದೆ. 2ನೇ ಡೋಸ್ ನೀಡೋವ್ರಿಗೆ ಅಗತ್ಯ ವ್ಯಾಕ್ಸಿನ್ ಕೊರತೆ ಆಗಬಹುದು. ಹಾಗಾಗಿ ಮುಂದಿನ ಆದೇಶದವರೆಗೂ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಕೊಡಬೇಡಿ ಅಂತ ಸೂಚಿಸಿದೆ. ವ್ಯಾಕ್ಸಿನ್ ಕೊರತೆ ಇದೆ ಅನ್ನೋದು ಗೊತ್ತಿದ್ದರೂ ಕೂಡ …

Read More »

ಬೆಡ್ ಬ್ಲಾಕ್ – 17 ಮಂದಿಯನ್ನು ತೆಗೆದು ಹಾಕಿದ್ದು ಯಾಕೆ? ಹೊಸ ಬದಲಾವಣೆ ಏನು? ಗೌರವ್ ಗುಪ್ತಾ ಹೇಳೋದು ಏನು?

ಬೆಂಗಳೂರು:  ದಕ್ಷಿಣ ವಿಭಾಗದ ಕೋವಿಡ್ ವಾರ್ ರೂಂನಲ್ಲಿ ಒಂದೇ ಸಮುದಾಯದ 17 ಮಂದಿಯನ್ನು ತೆಗೆದು ಹಾಕಿದ್ದು ಯಾಕೆ ಎಂಬುದಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವಿವರಣೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಬಂದಿರುವ ಮಾಹಿತಿಗಳ ಪ್ರಕಾರ ಇವರನ್ನು ಕೆಲವು ದಿನದ ಹಿಂದೆಯೇ ಕೆಲಸದಿಂದ ತೆಗೆದು ಹಾಕಲಾಗಿದೆ. ಇವರು ಒಂದು ಸಂಸ್ಥೆಯ ಮೂಲಕ ಬಂದಿರುವ ವ್ಯಕ್ತಿಗಳು. ಕೋವಿಡ್ 19 ವಾರ್ ರೂಂನಲ್ಲಿರುವವರು ಎಲ್ಲ ತಾತ್ಕಾಲಿಕ ಗುತ್ತಿಗೆ ಸಿಬ್ಬಂದಿ …

Read More »

ಸಂಸದ ತೇಜಸ್ವಿ ವಿರುದ್ಧ ಕಂಪ್ಲೆಂಟ್ – ತನಿಖೆಗೆ ಆಗ್ರಹಿಸಿ ಕಾಂಗ್ರೆಸ್‍ನಿಂದಲೂ ದೂರು

ಬೆಂಗಳೂರು: ಸೌತ್ ಝೋನ್‍ನಲ್ಲಿ ಬೆಡ್‍ಬ್ಲಾಕ್ ದಂಧೆ ಪ್ರಕರಣದಲ್ಲಿ ಕೋಮು ವೈಷಮ್ಯ ಬಿತ್ತುವ ಯತ್ನ ಆರೋಪ ಕೇಳಿ ಬಂದಿದೆ. ಐಎಎಸ್ ಅಧಿಕಾರಿ ಮೇಲಿನ ದೌರ್ಜನ್ಯ, ಬೆಡ್‍ಗಳ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಿದ ತೇಜಸ್ವಿ ಸೂರ್ಯ ಹಾಗೂ ಸತೀಶ್ ರೆಡ್ಡಿ ವಿರುದ್ಧ ಪೊಲೀಸ್ ಆಯುಕ್ತರು, ಬಿಬಿಎಂಪಿ ಚೀಪ್ ಗೌರವ್ ಗುಪ್ತಾಗೆ ಕಾಂಗ್ರೆಸ್ ನಿಯೋಗ ದೂರು ಕೊಟ್ಟಿದೆ. ಇನ್ನೊಂದೆಡೆ ತೇಜಸ್ವಿ ಸೂರ್ಯ ವಿರುದ್ಧ ಎಫ್‍ಐಆರ್‍ಗೆ ಕೋರಿ ಜೆಡಿಎಸ್ ಸ್ಟೇಟ್ ಕಮಿಟಿ ಅಬ್ಸರ್ವರ್ ನಜ್ಮಾ ಜನೀರ್ …

Read More »

ಕೋವಿಡ್ ಲಸಿಕಾ ಅಭಿಯಾನ: ಸದ್ಯಕ್ಕೆ ಎರಡನೇ ಡೋಜ್ ಲಸಿಕೆ ಮಾತ್ರ ನೀಡಿಕೆ

ಬೆಳಗಾವಿ :  ಜಿಲ್ಲೆಯಲ್ಲಿ ಕೋವಿಡ್ 19 ರ ಕೋರೋನ  ಲಸಿಕ ಅಭಿಯಾನವು ಪ್ರಗತಿಯಲ್ಲಿದ್ದು, ಈಗಾಗಲೇ ಜಿಲ್ಲೆಯಲ್ಲಿ  6,24,485 ಫಲಾನುಭವಿಗಳಿಗೆ ಲಸಿಕೆಯನ್ನು ನೀಡಲಾಗಿರುತ್ತದೆ.  ಜಿಲ್ಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋ ವ್ಯಾಕ್ಸಿನ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಕೋವಿಶೀಲ್ಡ್ ಲಸಿಕೆ ಪಡೆದವರು ಎರಡನೇ ಡೋಜ್ ಅನ್ನು  ಮೊದಲ ಲಸಿಕೆ ಪಡೆದ 42 ದಿನಗಳ ನಂತರ ಪಡೆಯುವುದು. ಅದೇ ರೀತಿ ಕೋವ್ಯಾಕ್ಸಿನ್ ಲಸಿಕೆ ಪಡೆದವರು ಎರಡನೇ ಡೋಜನ್ನು 28 ದಿನಗಳ ನಂತರ ಪಡೆಯುವುದು. ಸದ್ಯಕ್ಕೆ  ಜಿಲ್ಲೆಯಲ್ಲಿ …

Read More »

ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ೯.೫೩ ಕೋಟಿ ರೂ. ನಿವ್ವಳ ಲಾಭಾಂಶ ಗಳಿಸಿದೆ: ಅಮಿತ್ ಕೋರೆ

ಮಾಂಜರಿ – ಸಹಕಾರಿ ರಂಗದಲ್ಲಿ ರಾಜ್ಯಾದ್ಯಂತ ಸುಮಾರು ೪೨ ಶಾಖೆಗಳ ಮುಖಾಂತರ, ಮಾಜಿ ರಾಜ್ಯಸಭಾ ಸದಸ್ಯ ಮತ್ತು ಕೆ.ಎಲ್.ಇ. ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಇವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ೯.೫೩ ಕೋಟಿ ರೂ. ನಿವ್ವಳ ಲಾಭಾಂಶ ಗಳಿಸಿದೆ ಎಂದು ಸಂಸ್ಥೆಯ ಆಮಂತ್ರಿತ ನಿರ್ದೆಶಕರಾದ ಹಾಗೂ ಚಿದಾನಂದ ಬಸವಪ್ರಭು ಕೋರೆ ಸಹಕಾರಿ …

Read More »

ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಬೇಸಿಗೆ ರಜೆಯಲ್ಲೂ ಪಡಿತರ ವಿತರಣೆ!

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೂ ಬಿಸಿಯೂಟದ ಬದಲಿಗೆ ಆಹಾರ ಧಾನ್ಯವನ್ನೇ ನೀಡಲಾಗುತ್ತಿದ್ದು, ಬೇಸಿಗೆ ರಜೆಯಲ್ಲೂ ಬಿಸಿಯೂಟದ ಬದಲು ಪಡಿತರ ನೀಡಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಿ ಬೇಸಿಗೆ ರಜೆ ಪ್ರಕಟಿಸಿದೆ. …

Read More »

ವಿಟಿಯು ವಿದ್ಯಾರ್ಥಿಗಳೇ ಗಮನಿಸಿ : ಮೇ.10 ರಿಂದ ಆನ್ ಲೈನ್ ಕ್ಲಾಸ್

ಬೆಂಗಳೂರು : ಮೇ. 10 ರಿಂದ ಪ್ರಸಕ್ತ ಸಾಲಿನ ಎಂಜಿನಿಯರಿಂಗ್ ಎರಡನೇ ಸೆಮಿಸ್ಟರ್ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಆನ್ ಲೈನ್ ತರಗತಿಗಳು ಆರಂಭವಾಗಲಿವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಕಟಿಸಿದೆ. ವಿಟಿಯು ಎಂ.ಟೆಕ್, ಎಂಬಿಎ, ಎಂಸಿಎ, ಎಂ.ಆರ್ಕ್ ಮೊದಲಾದ ಸ್ನಾತಕೋತ್ತರ ಪದವಿಯ ಎರಡನೇ ಸೆಮಿಸ್ಟರ್ ಆನ್ ಲೈನ್ ತರಗತಿಗಳು ಮೇ. 10 ರಿಂದ ಆರಂಭವಾಗಲಿವೆ. ಬಿ.ಇ, ಬಿ.ಟೆಕ್, ಬಿ.ಪ್ಲಾನ್, ಬಿ.ಆರ್ಕ್ ಪದವಿ ಕೋರ್ಸ್ ಗಳ ಆನ್ ಲೈನ್ ತರಗತಿ …

Read More »